Homeಕರೋನಾ ತಲ್ಲಣದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ನಡುವೆ ಆಕ್ಸಿಜನ್ ಸಮರ ಅರಂಭವಾಗಿದೆ. ನಿನ್ನೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಕ್ಸಿಜನ್ ಆಡಿಟ್ ಸಮಿತಿ ಸಲ್ಲಿಸಿದ್ದ ಮಧ್ಯಂತರ ವರದಿಯ ಆಧಾರದಲ್ಲಿ ಬಿಜೆಪಿ ನಾಯಕರು ಕೇಜ್ರಿವಾಲ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಕೇಜ್ರಿವಾಲ್ ಸರ್ಕಾರ ಆಕ್ಸಿಜನ್ ಬಳಕೆಯಿಂದ ದೇಶದಲ್ಲಿ ಅನೇಕ ಜನರು ಆಮ್ಲಜನಕದ ಕೊರತೆಯಿಂದ ಮೃತಪಡುವಂತಾಯಿತು ಎಂದು ಪ್ರಚಾರಾಂದೋಲನ ನಡೆಸಿದ್ದರು. ಆದರೆ ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎಂದು ಹೇಳಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಿಟ್ ಕಮಿಟಿಯ ಮುಖ್ಯಸ್ಥರಾಗಿರುವ ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕರಾದ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

“ದೆಹಲಿ ಸರ್ಕಾರ ಅಗತ್ಯಕ್ಕಿಂತ 4 ಪಟ್ಟು ಹೆಚ್ಚು ಪ್ರಮಾಣದ ಆಕ್ಸಿಜನ್‌ಗೆ ಬೇಡಿಕೆ ಇಟ್ಟಿತ್ತು ಎಂದು ಹೇಳಲು ಸಾಧ್ಯವಿಲ್ಲ. ಈಗ ಮಧ್ಯಂತರ ವರದಿಯನ್ನಷ್ಟೇ ನೀಡಲಾಗಿದೆ. ಪೈನಲ್ ಆಡಿಟ್ ನಂತರವಷ್ಟೇ ಈ ಕುರಿತು ಹೇಳಲು ಸಾಧ್ಯ. ಕೊರೋನಾ ಎರಡನೇ ಅಲೆಯನ್ನು ಸಾಧಾರಣ ದಿನಗಳಿಗೆ ಹೋಲಿಸಿ ಲೆಕ್ಕ ಹಾಕಿದರೆ ಈ ಅಂದಾಜು ಸಿಗುತ್ತದೆ. ಕೊರೋನಾ ಸಂದರ್ಭದಲ್ಲಿ ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದರು. ಸಮಗ್ರವಾದ ತನಿಖೆಯಿಂದ ಮಾತ್ರ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿನ ದೆಹಲಿಯ ಆಕ್ಸಿಜನ್ ಬೇಡಿಕೆಯ ಪ್ರಮಾಣ ತಿಳಿದುಬರಲಿದೆ. ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇರುವಾಗ ಈ ವಿಚಾರವನ್ನು ಚರ್ಚಿಸುವದು ಸರಿಯಲ್ಲ” ಎಂದು ಡಾ. ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ  5 ಜನ ಸದಸ್ಯರ ತನಿಖಾ ಸಮಿತಿಯಲ್ಲಿ ಬಿರುಕು ಮೂಡಿದ್ದು ಸಮಿತಿ ಸದಸ್ಯಾರಾದ  ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್‌ ಭಲ್ಲಾ ಮತ್ತು ಮ್ಯಾಕ್ಸ್ ಹೆಲ್ತ್‌ ಕೇರ್ ನಿರ್ದೇಶಕ ಸಂದೀಪ್ ಬುಧಿರಾಜ ಅವರು ಮಧ್ಯಂತರ ವರದಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಪರಿಗಣಿಸಲಾಗಿಲ್ಲ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಸದಸ್ಯರು ಭಿನ್ನಮತದ ಕಾರಣದಿಂದ ಸಮಿತಿಯ ಅನೇಕ ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್ ಭಲ್ಲಾ ಅವರು ತಮ್ಮ ಆಕ್ಷೇಪದ ಟಿಪ್ಪಣಿಯಲ್ಲಿ ಕೇಂದ್ರ ಸರ್ಕಾರದ ಅಧೀನ ಅಧಿಕಾರಿಗಳಾಗಿರುವ ಇಬ್ಬರು ಸದಸ್ಯರು ಉಪಸಮಿತಿಯ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸುವ ಮೊದಲು ಇತರ ಸದಸ್ಯರ ಗಮನಕ್ಕೆ ತರಲಾಗಿಲ್ಲ. ವರದಿಯು ಅತ್ಯಂತ ಉತ್ಪೇಕ್ಷೆಯಿಂದ ಕೂಡಿದ್ದು ಪಾರದರ್ಶಕತೆಯ ಕೊರತೆ ಇದೆ ಎಂದು ತನಿಖಾ ಸಮಿತಿಯ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಒಮ್ಮತದ ಅಭಿಪ್ರಾಯಕ್ಕೆ ಬರದೇ ಇರುವುದು ಅತ್ಯಂತ ಬೇಸರ ಮತ್ತು ಅಘಾತಕಾರಿಯಾದ ವಿಷಯವಾಗಿದೆ. ಸಮಿತಿಯು ನಿಜವಾದ ಆಡಿಟ್‌ಅನ್ನು ನಡೆಸದೇ ಬಿಡುಬೀಸಾದ ತೀರ್ಮಾನಕ್ಕೆ ಬಂದಿದೆ” ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಗೆ ತನ್ನ ಆಕ್ಷೇಪವನ್ನು ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಕ್ಸಿಜನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, “ನೀವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೊಡಗಿದ್ದಾಗ ನಾನಿಲ್ಲಿ ಹಗಲೂ ರಾತ್ರಿ ಆಕ್ಸಿಜನ್ ಹೊಂದಿಸಲು ಕಷ್ಟಪಡುತ್ತಿದ್ದೆ. 2 ಕೋಟಿ ದೆಹಲಿ ನಿವಾಸಿಗಳ ಉಸಿರಿಗಾಗಿ ಹೋರಾಡಿದ್ದೇ ನನ್ನ ಅಪರಾಧ” ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಆಡಿಟ್ ರಿಪೋರ್ಟ್ ಎಂಬುದು ಇಲ್ಲ. ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಈ ವರದಿಗೆ ಸಹಿ ಮಾಡಿಲ್ಲ. ಬಿಜೆಪಿ ತನ್ನ ಕೇಂದ್ರ ಕಚೇರಿಯಲ್ಲಿ ತಯಾರಾದ ನಕಲಿ ರಿಪೋರ್ಟ್ ಅನ್ನು ಹಂಚುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ.

ದೆಹಲಿ ಸರ್ಕಾರ ಮತ್ತು ಕೆಂದ್ರ ಸರ್ಕಾರದ ನಡುವಿನ ರಾಜಕೀಯ ಕಿತ್ತಾಟ ಮತ್ತೊಂದು ಹಂತವನ್ನು ತಲುಪಿದ್ದು ಆಕ್ಸಿಜನ್ ವಿಚಾರದಲ್ಲಿ ಆಮ್‌ ಆದ್ಮಿ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ನಿನ್ನೆ ದೇಶಾದ್ಯಂತ ಸುದ್ದಿಯಾದ ಆಕ್ಸಿಜನ್ ವರದಿ ಕೂಡ ದೆಹಲಿ ಬಿಜೆಪಿ ಮೂಲಗಳಿಂದಲೇ ಹೊರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಮತ್ತು ದೆಹಲಿಯ ನಡುವಿನ ಆಕ್ಸಿಜನ್ ಗಲಾಟೆ ಸದ್ಯಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕವಷ್ಟೆ ಸತ್ಯಾಸತ್ಯತೆಗಳು ಹೊರ ಬೀಳಲಿದೆ.


ಇದನ್ನೂ ಓದಿ : ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...