Homeಕರೋನಾ ತಲ್ಲಣದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ನಡುವೆ ಆಕ್ಸಿಜನ್ ಸಮರ ಅರಂಭವಾಗಿದೆ. ನಿನ್ನೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಕ್ಸಿಜನ್ ಆಡಿಟ್ ಸಮಿತಿ ಸಲ್ಲಿಸಿದ್ದ ಮಧ್ಯಂತರ ವರದಿಯ ಆಧಾರದಲ್ಲಿ ಬಿಜೆಪಿ ನಾಯಕರು ಕೇಜ್ರಿವಾಲ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಕೇಜ್ರಿವಾಲ್ ಸರ್ಕಾರ ಆಕ್ಸಿಜನ್ ಬಳಕೆಯಿಂದ ದೇಶದಲ್ಲಿ ಅನೇಕ ಜನರು ಆಮ್ಲಜನಕದ ಕೊರತೆಯಿಂದ ಮೃತಪಡುವಂತಾಯಿತು ಎಂದು ಪ್ರಚಾರಾಂದೋಲನ ನಡೆಸಿದ್ದರು. ಆದರೆ ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎಂದು ಹೇಳಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಿಟ್ ಕಮಿಟಿಯ ಮುಖ್ಯಸ್ಥರಾಗಿರುವ ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕರಾದ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

“ದೆಹಲಿ ಸರ್ಕಾರ ಅಗತ್ಯಕ್ಕಿಂತ 4 ಪಟ್ಟು ಹೆಚ್ಚು ಪ್ರಮಾಣದ ಆಕ್ಸಿಜನ್‌ಗೆ ಬೇಡಿಕೆ ಇಟ್ಟಿತ್ತು ಎಂದು ಹೇಳಲು ಸಾಧ್ಯವಿಲ್ಲ. ಈಗ ಮಧ್ಯಂತರ ವರದಿಯನ್ನಷ್ಟೇ ನೀಡಲಾಗಿದೆ. ಪೈನಲ್ ಆಡಿಟ್ ನಂತರವಷ್ಟೇ ಈ ಕುರಿತು ಹೇಳಲು ಸಾಧ್ಯ. ಕೊರೋನಾ ಎರಡನೇ ಅಲೆಯನ್ನು ಸಾಧಾರಣ ದಿನಗಳಿಗೆ ಹೋಲಿಸಿ ಲೆಕ್ಕ ಹಾಕಿದರೆ ಈ ಅಂದಾಜು ಸಿಗುತ್ತದೆ. ಕೊರೋನಾ ಸಂದರ್ಭದಲ್ಲಿ ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದರು. ಸಮಗ್ರವಾದ ತನಿಖೆಯಿಂದ ಮಾತ್ರ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿನ ದೆಹಲಿಯ ಆಕ್ಸಿಜನ್ ಬೇಡಿಕೆಯ ಪ್ರಮಾಣ ತಿಳಿದುಬರಲಿದೆ. ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇರುವಾಗ ಈ ವಿಚಾರವನ್ನು ಚರ್ಚಿಸುವದು ಸರಿಯಲ್ಲ” ಎಂದು ಡಾ. ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ  5 ಜನ ಸದಸ್ಯರ ತನಿಖಾ ಸಮಿತಿಯಲ್ಲಿ ಬಿರುಕು ಮೂಡಿದ್ದು ಸಮಿತಿ ಸದಸ್ಯಾರಾದ  ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್‌ ಭಲ್ಲಾ ಮತ್ತು ಮ್ಯಾಕ್ಸ್ ಹೆಲ್ತ್‌ ಕೇರ್ ನಿರ್ದೇಶಕ ಸಂದೀಪ್ ಬುಧಿರಾಜ ಅವರು ಮಧ್ಯಂತರ ವರದಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಪರಿಗಣಿಸಲಾಗಿಲ್ಲ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಸದಸ್ಯರು ಭಿನ್ನಮತದ ಕಾರಣದಿಂದ ಸಮಿತಿಯ ಅನೇಕ ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್ ಭಲ್ಲಾ ಅವರು ತಮ್ಮ ಆಕ್ಷೇಪದ ಟಿಪ್ಪಣಿಯಲ್ಲಿ ಕೇಂದ್ರ ಸರ್ಕಾರದ ಅಧೀನ ಅಧಿಕಾರಿಗಳಾಗಿರುವ ಇಬ್ಬರು ಸದಸ್ಯರು ಉಪಸಮಿತಿಯ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸುವ ಮೊದಲು ಇತರ ಸದಸ್ಯರ ಗಮನಕ್ಕೆ ತರಲಾಗಿಲ್ಲ. ವರದಿಯು ಅತ್ಯಂತ ಉತ್ಪೇಕ್ಷೆಯಿಂದ ಕೂಡಿದ್ದು ಪಾರದರ್ಶಕತೆಯ ಕೊರತೆ ಇದೆ ಎಂದು ತನಿಖಾ ಸಮಿತಿಯ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಒಮ್ಮತದ ಅಭಿಪ್ರಾಯಕ್ಕೆ ಬರದೇ ಇರುವುದು ಅತ್ಯಂತ ಬೇಸರ ಮತ್ತು ಅಘಾತಕಾರಿಯಾದ ವಿಷಯವಾಗಿದೆ. ಸಮಿತಿಯು ನಿಜವಾದ ಆಡಿಟ್‌ಅನ್ನು ನಡೆಸದೇ ಬಿಡುಬೀಸಾದ ತೀರ್ಮಾನಕ್ಕೆ ಬಂದಿದೆ” ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಗೆ ತನ್ನ ಆಕ್ಷೇಪವನ್ನು ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಕ್ಸಿಜನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, “ನೀವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೊಡಗಿದ್ದಾಗ ನಾನಿಲ್ಲಿ ಹಗಲೂ ರಾತ್ರಿ ಆಕ್ಸಿಜನ್ ಹೊಂದಿಸಲು ಕಷ್ಟಪಡುತ್ತಿದ್ದೆ. 2 ಕೋಟಿ ದೆಹಲಿ ನಿವಾಸಿಗಳ ಉಸಿರಿಗಾಗಿ ಹೋರಾಡಿದ್ದೇ ನನ್ನ ಅಪರಾಧ” ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಆಡಿಟ್ ರಿಪೋರ್ಟ್ ಎಂಬುದು ಇಲ್ಲ. ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಈ ವರದಿಗೆ ಸಹಿ ಮಾಡಿಲ್ಲ. ಬಿಜೆಪಿ ತನ್ನ ಕೇಂದ್ರ ಕಚೇರಿಯಲ್ಲಿ ತಯಾರಾದ ನಕಲಿ ರಿಪೋರ್ಟ್ ಅನ್ನು ಹಂಚುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ.

ದೆಹಲಿ ಸರ್ಕಾರ ಮತ್ತು ಕೆಂದ್ರ ಸರ್ಕಾರದ ನಡುವಿನ ರಾಜಕೀಯ ಕಿತ್ತಾಟ ಮತ್ತೊಂದು ಹಂತವನ್ನು ತಲುಪಿದ್ದು ಆಕ್ಸಿಜನ್ ವಿಚಾರದಲ್ಲಿ ಆಮ್‌ ಆದ್ಮಿ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ನಿನ್ನೆ ದೇಶಾದ್ಯಂತ ಸುದ್ದಿಯಾದ ಆಕ್ಸಿಜನ್ ವರದಿ ಕೂಡ ದೆಹಲಿ ಬಿಜೆಪಿ ಮೂಲಗಳಿಂದಲೇ ಹೊರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಮತ್ತು ದೆಹಲಿಯ ನಡುವಿನ ಆಕ್ಸಿಜನ್ ಗಲಾಟೆ ಸದ್ಯಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕವಷ್ಟೆ ಸತ್ಯಾಸತ್ಯತೆಗಳು ಹೊರ ಬೀಳಲಿದೆ.


ಇದನ್ನೂ ಓದಿ : ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...