Homeಚಳವಳಿನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

- Advertisement -
- Advertisement -

ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಐತಿಹಾಸಿಕ ’ದೆಹಲಿ ಚಲೋ’ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ತಿರಸ್ಕರಿಸಿದ್ದಾರೆ. ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿರುವ ರೈತರು, ಅದೊಂದು ಕ್ರೀಡಾಂಗಣವಲ್ಲ, ತೆರೆದ ಬಂಧಿಖಾನೆಯೆಂದು ನಮಗೆ ತಿಳಿದೆ ಎಂದಿದ್ದಾರೆ.

ರೈತರ ಈ ಚಳವಳಿಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಕೂಡಾ ಭಾಗವಹಿಸಿದ್ದು, ಕರ್ನಾಟಕ ಜನಶಕ್ತಿ ಸಂಘಟನೆಯ “ಶಿವಕುಮಾರ್ ಎಸ್ ಗುಳಘಟ್ಟ” ಹೋರಾಟದ ಬಗೆಗಿನ ತಮ್ಮ ಸಾಕ್ಷಾತ್ ಅನುಭವವನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

’ನಡೆದಷ್ಟು ಟ್ರಾಕ್ಟರ್‌ಗಳ ಸಾಲು’

ಕಳೆದ  3-4 ದಿನಗಳಿಂದ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಗೆ ಹಲವು ರಾಜ್ಯಗಳಿಂದ ರೈತ ಹೋರಾಟಗಾರರು, ಜನಪರ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಬಂದು ಸೇರುತ್ತಿದ್ದಾರೆ. ಅದರೆ ದೆಹಲಿಯೊಳಗಡೆ ದೆಹಲಿ ಪೋಲಿಸರು ರೈತರನ್ನೂ ರೈತ ಹೋರಾಟಗಾರರನ್ನೂ ಪ್ರವೇಶಿಸಲು ಬಿಡುತ್ತಿಲ್ಲ. ಆದ ಕಾರಣ ಜನರು ರಸ್ತೆಯಲ್ಲೆ ಪ್ರತಿಭಟನೆ ನಿರತರಾಗಿದ್ದಾರೆ. ಅದೂ ದೆಹಲಿ ಒಳಗೆ ಬರುವ ಐದು ಕಡೆ ಹೆದ್ದಾರಿಯಲ್ಲೂ ಕೂಡ ಜನರು ರಸ್ತೆಯಲ್ಲೆ ಪ್ರತಿಭಟನೆಯ ಕೂಗು ಮೊಳಗಿಸುತ್ತಿದ್ದಾರೆ. ಅದೂ ಕೂಡ ದೊಡ್ಡ ಪ್ರಮಾಣದಲ್ಲಿ!

ರಸ್ತೆಯಲ್ಲೆ ಅಡುಗೆ ಮಾಡಿಕೊಂಡು ಅಲ್ಲೆ ಮಲಗಿಕೊಂಡು ಕಳೆದ ನಾಲ್ಕು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ.

ನಾವೂ ಕೂಡ ಈ ಹೋರಾಟದ ಭಾಗವಾಗಿ ಇದೇ ತಿಂಗಳು 22 ರಂದು ಬೆಂಗಳೂರಿನಿಂದ ಹೊರಟು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಪ್ರಚಾರ, ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನೂ ನಡೆಸಿ 27 ರ ಮಧ್ಯರಾತ್ರಿ ದೆಹಲಿಯ ನಿರಂಕಾರಿ ಮೈದಾನವನ್ನೂ ತಲುಪಿದೆವು. ಪ್ರತಿಭಟನೆಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಬರುವ ಪ್ರತಿಭಟನಾಕಾರರಿಗೆ ಆಹಾರ, ಔಷಧ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿಯ ಸಿಂಗೂ ಬಾರ್ಡರ್‌ನಲ್ಲಿ ದೊಡ್ಡಪ್ರಮಾಣದಲ್ಲಿ ಅಂದರೆ ಕನಿಷ್ಠ 60-80 ಸಾವಿರ ಜನರು ಟ್ರಾಕ್ಟರ್‌ಗಳ ಮೂಲಕ ಜಮಾಯಿಸಿದ್ದಾರೆ. ಅದೂ ಯಾವ ಪ್ರಮಾಣದಲ್ಲಿ ಅಂದರೆ ಸುಮಾರು ಆರು ಕಿ.ಮೀ ತನಕ ಟ್ರಾಕ್ಟರ್‌ಗಳು! ಕನಿಷ್ಠವೆಂದರೂ ಐದು ಸಾವಿರಕ್ಕೂ ಹೆಚ್ವು ಟ್ರಾಕ್ಟರ್‌ಗಳು ಉದ್ದಕ್ಕೂ ರಸ್ತೆಯ ಎರಡು ಬದಿಗಳಲ್ಲೂ ನಿಂತಿವೆ. ಅಲ್ಲೆ ರೈತರು ಒಂದೊಂದು ಕಡೆ ಪ್ರತಿಭಟನೆ, ಧರಣಿ, ಮಾತುಕತೆ, ಹೋರಾಟದ ಹಾಡುಗಳು, ಈ ಮೂರು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಅಲ್ಲೇ ವೈದ್ಯರುಗಳು ಆರೋಗ್ಯ ತಪಾಸಣೆಯನ್ನೂ ಮಾಡಿ ಔಷಧೋಪಾಚಾರಗಳ ವ್ಯವಸ್ಥೆಯನ್ನು ಸಹಾ ಮಾಡುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಗಳು ನಡೆಸುತ್ತಿವೆ. ಆದರೆ ಇದು ರೈತ ಕುಲದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕಾರಣ ಅದೂ ಅಷ್ಟು ಸುಲಭವಾಗಿ ಚಳುವಳಿಯನ್ನೂ ಹತ್ತಿಕ್ಕಲು ಸಾದ್ಯವಿಲ್ಲ.

ಸದ್ಯದ ಮಟ್ಟಿಗೆ ಈ ಚಳುವಳಿಯ ಸಂದರ್ಭದಲ್ಲಿ ಗಮನಿಸಬೇಕಾದ ಹಾಗೂ ಮನನ ಮಾಡಿಕೊಳ್ಳಲೇಬೇಕಾದ ಅಂಶವೆಂದರೆ ಹೆಣ್ಣುಮಕ್ಕಳು, ರೈತ ಮಹಿಳೆಯರು ಕಾಣದಿರುವುದು ದೊಡ್ಡ ದುರಂತವೇ ಸರಿ. ಪುರುಷನಷ್ಟೆ ಸರಿ ಸಮನಾಗಿ ಹೊಲಗದ್ದೆಗಳಲ್ಲಿ ದುಡಿಯುವ ಮಹಿಳೆಯರನ್ನೂ ಚಳುವಳಿಗಳಿಗೆ ಕರೆತರುವಲ್ಲಿ ವಿಫಲವಾಗಿರುವ ರೈತ ಚಳುವಳಿಗಳಿಗೆ ಬಹುಶಃ ಭವಿಷ್ಯ ಇಲ್ಲವೇನೋ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಹೆಣ್ಣುಮಕ್ಕಳನ್ನೂ, ಮಹಿಳೆಯರನ್ನೂ ಹೊರತಾದ ಯಾವುದೇ ಚಳುವಳಿ ದೀರ್ಘಕಾಲ ಉಳಿದು ಬೆಳೆಯದು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...