Homeಚಳವಳಿನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

- Advertisement -
- Advertisement -

ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತರು ನಡೆಸುತ್ತಿರುವ ಐತಿಹಾಸಿಕ ’ದೆಹಲಿ ಚಲೋ’ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದ್ದು ಕೇಂದ್ರ ಸರ್ಕಾರದ ಷರತ್ತುಬದ್ದ ಮಾತುಕತೆಯನ್ನು ತಿರಸ್ಕರಿಸಿದ್ದಾರೆ. ಪ್ರತಿಭಟನೆಯನ್ನು ಬುರಾರಿಯ ನಿರಂಕಾರಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಬೇಕು ಎಂದು ಕೇಳಿಕೊಂಡಿದ್ದ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿರುವ ರೈತರು, ಅದೊಂದು ಕ್ರೀಡಾಂಗಣವಲ್ಲ, ತೆರೆದ ಬಂಧಿಖಾನೆಯೆಂದು ನಮಗೆ ತಿಳಿದೆ ಎಂದಿದ್ದಾರೆ.

ರೈತರ ಈ ಚಳವಳಿಯಲ್ಲಿ ಕರ್ನಾಟಕದ ಪ್ರತಿನಿಧಿಗಳು ಕೂಡಾ ಭಾಗವಹಿಸಿದ್ದು, ಕರ್ನಾಟಕ ಜನಶಕ್ತಿ ಸಂಘಟನೆಯ “ಶಿವಕುಮಾರ್ ಎಸ್ ಗುಳಘಟ್ಟ” ಹೋರಾಟದ ಬಗೆಗಿನ ತಮ್ಮ ಸಾಕ್ಷಾತ್ ಅನುಭವವನ್ನು ಬರೆದಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

’ನಡೆದಷ್ಟು ಟ್ರಾಕ್ಟರ್‌ಗಳ ಸಾಲು’

ಕಳೆದ  3-4 ದಿನಗಳಿಂದ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳನ್ನು ವಿರೋಧಿಸಿ ದೆಹಲಿಗೆ ಹಲವು ರಾಜ್ಯಗಳಿಂದ ರೈತ ಹೋರಾಟಗಾರರು, ಜನಪರ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಬಂದು ಸೇರುತ್ತಿದ್ದಾರೆ. ಅದರೆ ದೆಹಲಿಯೊಳಗಡೆ ದೆಹಲಿ ಪೋಲಿಸರು ರೈತರನ್ನೂ ರೈತ ಹೋರಾಟಗಾರರನ್ನೂ ಪ್ರವೇಶಿಸಲು ಬಿಡುತ್ತಿಲ್ಲ. ಆದ ಕಾರಣ ಜನರು ರಸ್ತೆಯಲ್ಲೆ ಪ್ರತಿಭಟನೆ ನಿರತರಾಗಿದ್ದಾರೆ. ಅದೂ ದೆಹಲಿ ಒಳಗೆ ಬರುವ ಐದು ಕಡೆ ಹೆದ್ದಾರಿಯಲ್ಲೂ ಕೂಡ ಜನರು ರಸ್ತೆಯಲ್ಲೆ ಪ್ರತಿಭಟನೆಯ ಕೂಗು ಮೊಳಗಿಸುತ್ತಿದ್ದಾರೆ. ಅದೂ ಕೂಡ ದೊಡ್ಡ ಪ್ರಮಾಣದಲ್ಲಿ!

ರಸ್ತೆಯಲ್ಲೆ ಅಡುಗೆ ಮಾಡಿಕೊಂಡು ಅಲ್ಲೆ ಮಲಗಿಕೊಂಡು ಕಳೆದ ನಾಲ್ಕು ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ.

ನಾವೂ ಕೂಡ ಈ ಹೋರಾಟದ ಭಾಗವಾಗಿ ಇದೇ ತಿಂಗಳು 22 ರಂದು ಬೆಂಗಳೂರಿನಿಂದ ಹೊರಟು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನಗಳಲ್ಲಿ ಪ್ರಚಾರ, ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನೂ ನಡೆಸಿ 27 ರ ಮಧ್ಯರಾತ್ರಿ ದೆಹಲಿಯ ನಿರಂಕಾರಿ ಮೈದಾನವನ್ನೂ ತಲುಪಿದೆವು. ಪ್ರತಿಭಟನೆಗೆ ಇಲ್ಲಿ ಅವಕಾಶ ಮಾಡಿಕೊಡಲಾಗಿದೆ. ಇಲ್ಲಿ ಬರುವ ಪ್ರತಿಭಟನಾಕಾರರಿಗೆ ಆಹಾರ, ಔಷಧ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿಯ ಸಿಂಗೂ ಬಾರ್ಡರ್‌ನಲ್ಲಿ ದೊಡ್ಡಪ್ರಮಾಣದಲ್ಲಿ ಅಂದರೆ ಕನಿಷ್ಠ 60-80 ಸಾವಿರ ಜನರು ಟ್ರಾಕ್ಟರ್‌ಗಳ ಮೂಲಕ ಜಮಾಯಿಸಿದ್ದಾರೆ. ಅದೂ ಯಾವ ಪ್ರಮಾಣದಲ್ಲಿ ಅಂದರೆ ಸುಮಾರು ಆರು ಕಿ.ಮೀ ತನಕ ಟ್ರಾಕ್ಟರ್‌ಗಳು! ಕನಿಷ್ಠವೆಂದರೂ ಐದು ಸಾವಿರಕ್ಕೂ ಹೆಚ್ವು ಟ್ರಾಕ್ಟರ್‌ಗಳು ಉದ್ದಕ್ಕೂ ರಸ್ತೆಯ ಎರಡು ಬದಿಗಳಲ್ಲೂ ನಿಂತಿವೆ. ಅಲ್ಲೆ ರೈತರು ಒಂದೊಂದು ಕಡೆ ಪ್ರತಿಭಟನೆ, ಧರಣಿ, ಮಾತುಕತೆ, ಹೋರಾಟದ ಹಾಡುಗಳು, ಈ ಮೂರು ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ.

ಅಲ್ಲೇ ವೈದ್ಯರುಗಳು ಆರೋಗ್ಯ ತಪಾಸಣೆಯನ್ನೂ ಮಾಡಿ ಔಷಧೋಪಾಚಾರಗಳ ವ್ಯವಸ್ಥೆಯನ್ನು ಸಹಾ ಮಾಡುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರ ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಗಳು ನಡೆಸುತ್ತಿವೆ. ಆದರೆ ಇದು ರೈತ ಕುಲದ ಅಳಿವು ಉಳಿವಿನ ಪ್ರಶ್ನೆಯಾಗಿರುವ ಕಾರಣ ಅದೂ ಅಷ್ಟು ಸುಲಭವಾಗಿ ಚಳುವಳಿಯನ್ನೂ ಹತ್ತಿಕ್ಕಲು ಸಾದ್ಯವಿಲ್ಲ.

ಸದ್ಯದ ಮಟ್ಟಿಗೆ ಈ ಚಳುವಳಿಯ ಸಂದರ್ಭದಲ್ಲಿ ಗಮನಿಸಬೇಕಾದ ಹಾಗೂ ಮನನ ಮಾಡಿಕೊಳ್ಳಲೇಬೇಕಾದ ಅಂಶವೆಂದರೆ ಹೆಣ್ಣುಮಕ್ಕಳು, ರೈತ ಮಹಿಳೆಯರು ಕಾಣದಿರುವುದು ದೊಡ್ಡ ದುರಂತವೇ ಸರಿ. ಪುರುಷನಷ್ಟೆ ಸರಿ ಸಮನಾಗಿ ಹೊಲಗದ್ದೆಗಳಲ್ಲಿ ದುಡಿಯುವ ಮಹಿಳೆಯರನ್ನೂ ಚಳುವಳಿಗಳಿಗೆ ಕರೆತರುವಲ್ಲಿ ವಿಫಲವಾಗಿರುವ ರೈತ ಚಳುವಳಿಗಳಿಗೆ ಬಹುಶಃ ಭವಿಷ್ಯ ಇಲ್ಲವೇನೋ ಎಂದು ನನ್ನ ಅಭಿಪ್ರಾಯ. ಯಾಕೆಂದರೆ ಹೆಣ್ಣುಮಕ್ಕಳನ್ನೂ, ಮಹಿಳೆಯರನ್ನೂ ಹೊರತಾದ ಯಾವುದೇ ಚಳುವಳಿ ದೀರ್ಘಕಾಲ ಉಳಿದು ಬೆಳೆಯದು.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...