Homeಮುಖಪುಟದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಉತ್ಸುಕರಾಗಿ ಹೀಗೆ ಸರ್ಕಾರಿ ಶಾಲೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಂಡಿರುವುದುರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಕಳೆದ ವರ್ಷ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವುದನ್ನು ಪೋಷಕರಿಗೆ ಮರುಪಾವತಿ ಮಾಡಲು ಆದೇಶಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಆ ಶುಲ್ಕವನ್ನು ಈ ವರ್ಷದ ದಾಖಲಾತಿ ಮಾಡಿಕೊಳ್ಳುವಾಗ ಸರಿದೂಗಿಸುವುದಾಗಿ ಘೋಷಿಸಿವೆ. ಇದರಿಂದ ಹಲವಾರು ಪೋಷಕರು ಸಂತಸಗೊಂಡಿದ್ದು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದೆಹಲಿ ಯಲ್ಲಿ ನಾಲ್ಕು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಖಾಸಗಿ ಶಾಲೆಗಳನ್ನು ಹಿಂದಿಕ್ಕಿರುವ ಈ ಶಾಲೆಗಳು ವಿಶ್ವಮಟ್ಟದಲ್ಲಿ ಶ್ಲಾಘನೆಗೆ ಒಳಗಾಗಿವೆ. ಅಲ್ಲಿನ ವಿದ್ಯಾರ್ಥಿಗಳು ನಾಲ್ಕು ವರ್ಷಗಳಲ್ಲಿ ತಮ್ಮ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ದೇಶಕ್ಕೆ ಮಾದರಿಯಾಗಿವೆ. ಈ ಕಾರಣದಿಂದ ಬಹಳಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಗಿಬೀಳುತ್ತಿದ್ದಾರೆ.

ದೆಹಲಿ ಶಾಲೆಗಳ ವಿಶೇಷವೇನು?

ಸಂತಸದಾಯಕ ಕಲಿಕೆ: 
ದೆಹಲಿಯ ಶಿಕ್ಷಕರನ್ನು ವಿದೇಶಗಳಿಗೂ ಕಳಿಸಿ ತರಬೇತಿ ನೀಡಲಾಗಿದೆ. ಪಠ್ಯಕ್ರಮವನ್ನು ಸುಧಾರಿಸಲಾಗಿದೆ. ಇದರಿಂದ ಮಕ್ಕಳು ಉತ್ಸಾಹದಿಂದ ಕಲಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಹಾರ, ಕರ್ನಾಟಕದಿಂದಲೂ ದೆಹಲಿಗೆ ಪ್ರತಿನಿಧಿಗಳನ್ನು ಕಳಿಸಿ ಅಧ್ಯಯನ ಮಾಡಲು ಹಲವು ರಾಜ್ಯಗಳು ಉತ್ಸಾಹಕರಾಗಿದ್ದಾರೆ.

ಗುಣಮಟ್ಟದ ಮೂಲಭೂತ ಸೌಲಭ್ಯಗಳು : ಶಾಲೆಗಳಲ್ಲಿ ಸ್ಮಾರ್ಟ್ ತರಗತಿ, ವಿದ್ಯುನ್ಮಾನ ಬಿಳಿ ಫಲಕ, ಆಧುನಿಕ ಕುರ್ಚಿ-ಬೆಂಚು, ಆಧುನಿಕ ಪ್ರಯೋಗಶಾಲೆ, ಸಿಸಿಟಿವಿ ಕಣ್ಗಾವಲು, ಅಂತರ್ರಾಷ್ಟ್ರೀಯ ಮಟ್ಟದ ಆಟದ ಮೈದಾನ, ಪಠ್ಯೇತರ ಚಟುವಟಿಕೆಗೆ ವಿಶೇಷ ಕೊಠಡಿಗಳು, ಪುಸ್ತಕಾಲಯ, ಈಜುಕೊಳ, ಆಡಿಯೋ-ವೀಡಿಯೋ ವ್ಯವಸ್ಥೆಯುಳ್ಳ ಸಭಾಂಗಣ, ಇವೆಲ್ಲವೂ ಇದೆ ಎಂದರೆ ಆಶ್ಚರ್ಯವಲ್ಲವೇ? ಇವೆಲ್ಲದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ನರ್ಸರಿ (ಶಿಶುವಿಹಾರ), ಪ್ರತಿ ತಿಂಗಳು ಮತ್ತು ವಾರ್ಷಿಕ ಶಿಕ್ಷಕ-ಪೋಷಕರ ಸಭೆಗಳು, ಬೇಸಿಗೆ ಶಿಬಿರ, ಹಿಂದುಳಿದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರವನ್ನೂ ನಡೆಸಲಾಗುತ್ತಿದೆ. ಸರಕಾರಿ ಶಾಲೆಯ ಮಕ್ಕಳು ಇಂದು ತಮ್ಮ ಶಾಲೆಯನ್ನು ಅತ್ಯಂತ ಹೆಮ್ಮೆಯಿಂದ ಬೇರೆ ಮಕ್ಕಳಿಗೆ ತೋರಿಸುತ್ತಾರೆ. ಶಿಕ್ಷಕರಿಗೆ ಸಂಬಳವನ್ನು ಹೆಚ್ಚು ಮಾಡಲಾಗಿದೆ. ಇದರಿಂದ ಶಾಲೆಗಳು ಹೊಸ ಸ್ವರೂಪವನ್ನು ಪಡೆದಿದ್ದು ಪೋಷಕರನ್ನು ಆಕರ್ಷಿಸುತ್ತಿವೆ.

ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು:

ಇತ್ತೀಚೆಗೆ ಪ್ರಕಟಗೊಂಡ ಸಿಬಿಎಸ್‍ಇ ಶಾಲೆಯ 12ನೆಯ ತರಗತಿ (ದ್ವಿತೀಯ ಪಿಯು) ಫಲಿತಾಂಶವು ಸ್ಪಷ್ಟವಾಗಿ ಇದನ್ನು ತೋರಿಸುತ್ತಿದೆ. ಈ ವರ್ಷ ದೆಹಲಿ ಸರಕಾರಿ ಶಾಲೆಯ ಉತ್ತೀರ್ಣ ಫಲಿತಾಂಶ 94.24% ಆಗಿದ್ದು, ರಾಜ್ಯದ ಎಲ್ಲಾ ಶಾಲೆಗಳ ಒಟ್ಟಾರೆ ಫಲಿತಾಂಶ 91.87% ಆಗಿರುತ್ತದೆ. ಸರಕಾರಿ ಶಾಲೆಗೆ ಹೋಲಿಸಿದರೆ ಖಾಸಗಿ ಶಾಲೆಗಳ ಫಲಿತಾಂಶ ಮಾತ್ರ 82.59% ಇರುತ್ತದೆ. ಸರಕಾರಿ ಶಾಲೆಗಳ ಫಲಿತಾಂಶ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಉತ್ತಮಗೊಳ್ಳುತ್ತಾ ಬಂದಿದ್ದು, 2016ರಲ್ಲಿ 85.9%, 2017ರಲ್ಲಿ 88.2%, 2018ರಲ್ಲಿ 90.6% ರಿಂದ 2019ರಲ್ಲಿ 94.24%ಕ್ಕೆ ಏರಿರುವುದರ ಜೊತೆಗೆ ಇದು ಸರಕಾರಿ ಶಾಲೆಗಳ ಅತ್ಯಂತ ಹೆಚ್ಚಿನ ದಾಖಲೆಯ ಫಲಿತಾಂಶವಾಗಿದೆ

ಇದರ ಹಿಂದೆ ಸರಕಾರದ ಯೋಚನೆ, ಯೋಜನೆ ಮತ್ತು ಎಲ್ಲಾ ಪಾಲುದಾರರ ಪರಿಶ್ರಮವೂ ಇದೆ. ದೇಶದಲ್ಲಿ ಸಾರ್ವಜನಿಕ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಅನುದಾನ ತನ್ನ ವಾರ್ಷಿಕ ವೆಚ್ಚದ 26% ದೆಹಲಿ ಸರಕಾರ ತನ್ನ ಮುಂಗಡಪತ್ರದಲ್ಲಿ ನೀಡುತ್ತಿದೆ. ಬೇರೆ ಯಾವ ರಾಜ್ಯವೂ ಇಷ್ಟು ಹೆಚ್ಚಿನ ಹಣ ಸಾರ್ವಜನಿಕ ಶಿಕ್ಷಣಕ್ಕೆ ವಿನಿಯೋಗಿಸುತ್ತಿಲ್ಲ. ಭಾರತ ಸರಕಾರ ತನ್ನ ವಾರ್ಷಿಕ ಮುಂಗಡಪತ್ರದ 3% ಸಹ ಶಿಕ್ಷಣಕ್ಕೆ ಖರ್ಚು ಮಾಡುತ್ತಿಲ್ಲ. ಕರ್ನಾಟಕ (ಮತ್ತು ಇತರ ರಾಜ್ಯಗಳು) ಸಾವಿರಾರು ಸರಕಾರಿ ಕನ್ನಡ ಶಾಲೆಗಳನ್ನು ಪ್ರತಿ ವರ್ಷ ಮುಚ್ಚುತ್ತಿದ್ದರೆ ದೆಹಲಿ ಮಾತ್ರ ಹೊಸ ಶಾಲೆಗಳನ್ನು ತೆರೆಯುತ್ತಿದೆ.

ಉಳಿದ ರಾಜ್ಯಗಳು ಇದನ್ನು ಅನುಸರಿಸಬೇಕಿದೆ

ಕೇರಳ ರಾಜ್ಯ ಹೊರತುಪಡಿಸಿ ಉಳಿದೆಲ್ಲೆಡೆ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿತವಾಗುವಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ. ಇದು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ದುಪ್ಪಟ್ಟು ಶುಲ್ಕ ಕಟ್ಟುವ ಅನಿವಾರ್ಯತೆಗೆ ಸಿಕ್ಕಿಬೀಳುತ್ತಿದ್ದಾರೆ. ದೆಹಲಿ ಮಾದರಿಯನ್ನು ಉಳಿದ ರಾಜ್ಯಗಳು ಅಳವಡಿಸಿಕೊಂಡಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ. ಕರ್ನಾಟಕದ ಪಕ್ಷೇತರ ಶಾಸಕರೊಬ್ಬರು ಶಿಕ್ಷಣ ಸಚಿವರಾದ ಕೂಡಲೇ ದೆಹಲಿ ಮಾದರಿ ಜಾರಿಗೆ ತರುವುದಾಗಿ ಘೋಷಿಸಿದರು. ಕೆಲವೇ ದಿನಗಳಲ್ಲಿ ರಾಜಿನಾಮೆ ಕೊಟ್ಟು ಮುಂಬೈಗೆ ಹಾರಿರುವುದು ದುರಂತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...