Homeಮುಖಪುಟದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಉತ್ಸುಕರಾಗಿ ಹೀಗೆ ಸರ್ಕಾರಿ ಶಾಲೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಂಡಿರುವುದುರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಕಳೆದ ವರ್ಷ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವುದನ್ನು ಪೋಷಕರಿಗೆ ಮರುಪಾವತಿ ಮಾಡಲು ಆದೇಶಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಆ ಶುಲ್ಕವನ್ನು ಈ ವರ್ಷದ ದಾಖಲಾತಿ ಮಾಡಿಕೊಳ್ಳುವಾಗ ಸರಿದೂಗಿಸುವುದಾಗಿ ಘೋಷಿಸಿವೆ. ಇದರಿಂದ ಹಲವಾರು ಪೋಷಕರು ಸಂತಸಗೊಂಡಿದ್ದು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದೆಹಲಿ ಯಲ್ಲಿ ನಾಲ್ಕು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಖಾಸಗಿ ಶಾಲೆಗಳನ್ನು ಹಿಂದಿಕ್ಕಿರುವ ಈ ಶಾಲೆಗಳು ವಿಶ್ವಮಟ್ಟದಲ್ಲಿ ಶ್ಲಾಘನೆಗೆ ಒಳಗಾಗಿವೆ. ಅಲ್ಲಿನ ವಿದ್ಯಾರ್ಥಿಗಳು ನಾಲ್ಕು ವರ್ಷಗಳಲ್ಲಿ ತಮ್ಮ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ದೇಶಕ್ಕೆ ಮಾದರಿಯಾಗಿವೆ. ಈ ಕಾರಣದಿಂದ ಬಹಳಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಗಿಬೀಳುತ್ತಿದ್ದಾರೆ.

ದೆಹಲಿ ಶಾಲೆಗಳ ವಿಶೇಷವೇನು?

ಸಂತಸದಾಯಕ ಕಲಿಕೆ: 
ದೆಹಲಿಯ ಶಿಕ್ಷಕರನ್ನು ವಿದೇಶಗಳಿಗೂ ಕಳಿಸಿ ತರಬೇತಿ ನೀಡಲಾಗಿದೆ. ಪಠ್ಯಕ್ರಮವನ್ನು ಸುಧಾರಿಸಲಾಗಿದೆ. ಇದರಿಂದ ಮಕ್ಕಳು ಉತ್ಸಾಹದಿಂದ ಕಲಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಹಾರ, ಕರ್ನಾಟಕದಿಂದಲೂ ದೆಹಲಿಗೆ ಪ್ರತಿನಿಧಿಗಳನ್ನು ಕಳಿಸಿ ಅಧ್ಯಯನ ಮಾಡಲು ಹಲವು ರಾಜ್ಯಗಳು ಉತ್ಸಾಹಕರಾಗಿದ್ದಾರೆ.

ಗುಣಮಟ್ಟದ ಮೂಲಭೂತ ಸೌಲಭ್ಯಗಳು : ಶಾಲೆಗಳಲ್ಲಿ ಸ್ಮಾರ್ಟ್ ತರಗತಿ, ವಿದ್ಯುನ್ಮಾನ ಬಿಳಿ ಫಲಕ, ಆಧುನಿಕ ಕುರ್ಚಿ-ಬೆಂಚು, ಆಧುನಿಕ ಪ್ರಯೋಗಶಾಲೆ, ಸಿಸಿಟಿವಿ ಕಣ್ಗಾವಲು, ಅಂತರ್ರಾಷ್ಟ್ರೀಯ ಮಟ್ಟದ ಆಟದ ಮೈದಾನ, ಪಠ್ಯೇತರ ಚಟುವಟಿಕೆಗೆ ವಿಶೇಷ ಕೊಠಡಿಗಳು, ಪುಸ್ತಕಾಲಯ, ಈಜುಕೊಳ, ಆಡಿಯೋ-ವೀಡಿಯೋ ವ್ಯವಸ್ಥೆಯುಳ್ಳ ಸಭಾಂಗಣ, ಇವೆಲ್ಲವೂ ಇದೆ ಎಂದರೆ ಆಶ್ಚರ್ಯವಲ್ಲವೇ? ಇವೆಲ್ಲದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ನರ್ಸರಿ (ಶಿಶುವಿಹಾರ), ಪ್ರತಿ ತಿಂಗಳು ಮತ್ತು ವಾರ್ಷಿಕ ಶಿಕ್ಷಕ-ಪೋಷಕರ ಸಭೆಗಳು, ಬೇಸಿಗೆ ಶಿಬಿರ, ಹಿಂದುಳಿದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರವನ್ನೂ ನಡೆಸಲಾಗುತ್ತಿದೆ. ಸರಕಾರಿ ಶಾಲೆಯ ಮಕ್ಕಳು ಇಂದು ತಮ್ಮ ಶಾಲೆಯನ್ನು ಅತ್ಯಂತ ಹೆಮ್ಮೆಯಿಂದ ಬೇರೆ ಮಕ್ಕಳಿಗೆ ತೋರಿಸುತ್ತಾರೆ. ಶಿಕ್ಷಕರಿಗೆ ಸಂಬಳವನ್ನು ಹೆಚ್ಚು ಮಾಡಲಾಗಿದೆ. ಇದರಿಂದ ಶಾಲೆಗಳು ಹೊಸ ಸ್ವರೂಪವನ್ನು ಪಡೆದಿದ್ದು ಪೋಷಕರನ್ನು ಆಕರ್ಷಿಸುತ್ತಿವೆ.

ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು:

ಇತ್ತೀಚೆಗೆ ಪ್ರಕಟಗೊಂಡ ಸಿಬಿಎಸ್‍ಇ ಶಾಲೆಯ 12ನೆಯ ತರಗತಿ (ದ್ವಿತೀಯ ಪಿಯು) ಫಲಿತಾಂಶವು ಸ್ಪಷ್ಟವಾಗಿ ಇದನ್ನು ತೋರಿಸುತ್ತಿದೆ. ಈ ವರ್ಷ ದೆಹಲಿ ಸರಕಾರಿ ಶಾಲೆಯ ಉತ್ತೀರ್ಣ ಫಲಿತಾಂಶ 94.24% ಆಗಿದ್ದು, ರಾಜ್ಯದ ಎಲ್ಲಾ ಶಾಲೆಗಳ ಒಟ್ಟಾರೆ ಫಲಿತಾಂಶ 91.87% ಆಗಿರುತ್ತದೆ. ಸರಕಾರಿ ಶಾಲೆಗೆ ಹೋಲಿಸಿದರೆ ಖಾಸಗಿ ಶಾಲೆಗಳ ಫಲಿತಾಂಶ ಮಾತ್ರ 82.59% ಇರುತ್ತದೆ. ಸರಕಾರಿ ಶಾಲೆಗಳ ಫಲಿತಾಂಶ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಉತ್ತಮಗೊಳ್ಳುತ್ತಾ ಬಂದಿದ್ದು, 2016ರಲ್ಲಿ 85.9%, 2017ರಲ್ಲಿ 88.2%, 2018ರಲ್ಲಿ 90.6% ರಿಂದ 2019ರಲ್ಲಿ 94.24%ಕ್ಕೆ ಏರಿರುವುದರ ಜೊತೆಗೆ ಇದು ಸರಕಾರಿ ಶಾಲೆಗಳ ಅತ್ಯಂತ ಹೆಚ್ಚಿನ ದಾಖಲೆಯ ಫಲಿತಾಂಶವಾಗಿದೆ

ಇದರ ಹಿಂದೆ ಸರಕಾರದ ಯೋಚನೆ, ಯೋಜನೆ ಮತ್ತು ಎಲ್ಲಾ ಪಾಲುದಾರರ ಪರಿಶ್ರಮವೂ ಇದೆ. ದೇಶದಲ್ಲಿ ಸಾರ್ವಜನಿಕ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಅನುದಾನ ತನ್ನ ವಾರ್ಷಿಕ ವೆಚ್ಚದ 26% ದೆಹಲಿ ಸರಕಾರ ತನ್ನ ಮುಂಗಡಪತ್ರದಲ್ಲಿ ನೀಡುತ್ತಿದೆ. ಬೇರೆ ಯಾವ ರಾಜ್ಯವೂ ಇಷ್ಟು ಹೆಚ್ಚಿನ ಹಣ ಸಾರ್ವಜನಿಕ ಶಿಕ್ಷಣಕ್ಕೆ ವಿನಿಯೋಗಿಸುತ್ತಿಲ್ಲ. ಭಾರತ ಸರಕಾರ ತನ್ನ ವಾರ್ಷಿಕ ಮುಂಗಡಪತ್ರದ 3% ಸಹ ಶಿಕ್ಷಣಕ್ಕೆ ಖರ್ಚು ಮಾಡುತ್ತಿಲ್ಲ. ಕರ್ನಾಟಕ (ಮತ್ತು ಇತರ ರಾಜ್ಯಗಳು) ಸಾವಿರಾರು ಸರಕಾರಿ ಕನ್ನಡ ಶಾಲೆಗಳನ್ನು ಪ್ರತಿ ವರ್ಷ ಮುಚ್ಚುತ್ತಿದ್ದರೆ ದೆಹಲಿ ಮಾತ್ರ ಹೊಸ ಶಾಲೆಗಳನ್ನು ತೆರೆಯುತ್ತಿದೆ.

ಉಳಿದ ರಾಜ್ಯಗಳು ಇದನ್ನು ಅನುಸರಿಸಬೇಕಿದೆ

ಕೇರಳ ರಾಜ್ಯ ಹೊರತುಪಡಿಸಿ ಉಳಿದೆಲ್ಲೆಡೆ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿತವಾಗುವಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ. ಇದು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ದುಪ್ಪಟ್ಟು ಶುಲ್ಕ ಕಟ್ಟುವ ಅನಿವಾರ್ಯತೆಗೆ ಸಿಕ್ಕಿಬೀಳುತ್ತಿದ್ದಾರೆ. ದೆಹಲಿ ಮಾದರಿಯನ್ನು ಉಳಿದ ರಾಜ್ಯಗಳು ಅಳವಡಿಸಿಕೊಂಡಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ. ಕರ್ನಾಟಕದ ಪಕ್ಷೇತರ ಶಾಸಕರೊಬ್ಬರು ಶಿಕ್ಷಣ ಸಚಿವರಾದ ಕೂಡಲೇ ದೆಹಲಿ ಮಾದರಿ ಜಾರಿಗೆ ತರುವುದಾಗಿ ಘೋಷಿಸಿದರು. ಕೆಲವೇ ದಿನಗಳಲ್ಲಿ ರಾಜಿನಾಮೆ ಕೊಟ್ಟು ಮುಂಬೈಗೆ ಹಾರಿರುವುದು ದುರಂತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...