Homeಮುಖಪುಟದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಉತ್ಸುಕರಾಗಿ ಹೀಗೆ ಸರ್ಕಾರಿ ಶಾಲೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಂಡಿರುವುದುರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಕಳೆದ ವರ್ಷ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವುದನ್ನು ಪೋಷಕರಿಗೆ ಮರುಪಾವತಿ ಮಾಡಲು ಆದೇಶಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಆ ಶುಲ್ಕವನ್ನು ಈ ವರ್ಷದ ದಾಖಲಾತಿ ಮಾಡಿಕೊಳ್ಳುವಾಗ ಸರಿದೂಗಿಸುವುದಾಗಿ ಘೋಷಿಸಿವೆ. ಇದರಿಂದ ಹಲವಾರು ಪೋಷಕರು ಸಂತಸಗೊಂಡಿದ್ದು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದೆಹಲಿ ಯಲ್ಲಿ ನಾಲ್ಕು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಖಾಸಗಿ ಶಾಲೆಗಳನ್ನು ಹಿಂದಿಕ್ಕಿರುವ ಈ ಶಾಲೆಗಳು ವಿಶ್ವಮಟ್ಟದಲ್ಲಿ ಶ್ಲಾಘನೆಗೆ ಒಳಗಾಗಿವೆ. ಅಲ್ಲಿನ ವಿದ್ಯಾರ್ಥಿಗಳು ನಾಲ್ಕು ವರ್ಷಗಳಲ್ಲಿ ತಮ್ಮ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ದೇಶಕ್ಕೆ ಮಾದರಿಯಾಗಿವೆ. ಈ ಕಾರಣದಿಂದ ಬಹಳಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಗಿಬೀಳುತ್ತಿದ್ದಾರೆ.

ದೆಹಲಿ ಶಾಲೆಗಳ ವಿಶೇಷವೇನು?

ಸಂತಸದಾಯಕ ಕಲಿಕೆ: 
ದೆಹಲಿಯ ಶಿಕ್ಷಕರನ್ನು ವಿದೇಶಗಳಿಗೂ ಕಳಿಸಿ ತರಬೇತಿ ನೀಡಲಾಗಿದೆ. ಪಠ್ಯಕ್ರಮವನ್ನು ಸುಧಾರಿಸಲಾಗಿದೆ. ಇದರಿಂದ ಮಕ್ಕಳು ಉತ್ಸಾಹದಿಂದ ಕಲಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಹಾರ, ಕರ್ನಾಟಕದಿಂದಲೂ ದೆಹಲಿಗೆ ಪ್ರತಿನಿಧಿಗಳನ್ನು ಕಳಿಸಿ ಅಧ್ಯಯನ ಮಾಡಲು ಹಲವು ರಾಜ್ಯಗಳು ಉತ್ಸಾಹಕರಾಗಿದ್ದಾರೆ.

ಗುಣಮಟ್ಟದ ಮೂಲಭೂತ ಸೌಲಭ್ಯಗಳು : ಶಾಲೆಗಳಲ್ಲಿ ಸ್ಮಾರ್ಟ್ ತರಗತಿ, ವಿದ್ಯುನ್ಮಾನ ಬಿಳಿ ಫಲಕ, ಆಧುನಿಕ ಕುರ್ಚಿ-ಬೆಂಚು, ಆಧುನಿಕ ಪ್ರಯೋಗಶಾಲೆ, ಸಿಸಿಟಿವಿ ಕಣ್ಗಾವಲು, ಅಂತರ್ರಾಷ್ಟ್ರೀಯ ಮಟ್ಟದ ಆಟದ ಮೈದಾನ, ಪಠ್ಯೇತರ ಚಟುವಟಿಕೆಗೆ ವಿಶೇಷ ಕೊಠಡಿಗಳು, ಪುಸ್ತಕಾಲಯ, ಈಜುಕೊಳ, ಆಡಿಯೋ-ವೀಡಿಯೋ ವ್ಯವಸ್ಥೆಯುಳ್ಳ ಸಭಾಂಗಣ, ಇವೆಲ್ಲವೂ ಇದೆ ಎಂದರೆ ಆಶ್ಚರ್ಯವಲ್ಲವೇ? ಇವೆಲ್ಲದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ನರ್ಸರಿ (ಶಿಶುವಿಹಾರ), ಪ್ರತಿ ತಿಂಗಳು ಮತ್ತು ವಾರ್ಷಿಕ ಶಿಕ್ಷಕ-ಪೋಷಕರ ಸಭೆಗಳು, ಬೇಸಿಗೆ ಶಿಬಿರ, ಹಿಂದುಳಿದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರವನ್ನೂ ನಡೆಸಲಾಗುತ್ತಿದೆ. ಸರಕಾರಿ ಶಾಲೆಯ ಮಕ್ಕಳು ಇಂದು ತಮ್ಮ ಶಾಲೆಯನ್ನು ಅತ್ಯಂತ ಹೆಮ್ಮೆಯಿಂದ ಬೇರೆ ಮಕ್ಕಳಿಗೆ ತೋರಿಸುತ್ತಾರೆ. ಶಿಕ್ಷಕರಿಗೆ ಸಂಬಳವನ್ನು ಹೆಚ್ಚು ಮಾಡಲಾಗಿದೆ. ಇದರಿಂದ ಶಾಲೆಗಳು ಹೊಸ ಸ್ವರೂಪವನ್ನು ಪಡೆದಿದ್ದು ಪೋಷಕರನ್ನು ಆಕರ್ಷಿಸುತ್ತಿವೆ.

ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು:

ಇತ್ತೀಚೆಗೆ ಪ್ರಕಟಗೊಂಡ ಸಿಬಿಎಸ್‍ಇ ಶಾಲೆಯ 12ನೆಯ ತರಗತಿ (ದ್ವಿತೀಯ ಪಿಯು) ಫಲಿತಾಂಶವು ಸ್ಪಷ್ಟವಾಗಿ ಇದನ್ನು ತೋರಿಸುತ್ತಿದೆ. ಈ ವರ್ಷ ದೆಹಲಿ ಸರಕಾರಿ ಶಾಲೆಯ ಉತ್ತೀರ್ಣ ಫಲಿತಾಂಶ 94.24% ಆಗಿದ್ದು, ರಾಜ್ಯದ ಎಲ್ಲಾ ಶಾಲೆಗಳ ಒಟ್ಟಾರೆ ಫಲಿತಾಂಶ 91.87% ಆಗಿರುತ್ತದೆ. ಸರಕಾರಿ ಶಾಲೆಗೆ ಹೋಲಿಸಿದರೆ ಖಾಸಗಿ ಶಾಲೆಗಳ ಫಲಿತಾಂಶ ಮಾತ್ರ 82.59% ಇರುತ್ತದೆ. ಸರಕಾರಿ ಶಾಲೆಗಳ ಫಲಿತಾಂಶ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಉತ್ತಮಗೊಳ್ಳುತ್ತಾ ಬಂದಿದ್ದು, 2016ರಲ್ಲಿ 85.9%, 2017ರಲ್ಲಿ 88.2%, 2018ರಲ್ಲಿ 90.6% ರಿಂದ 2019ರಲ್ಲಿ 94.24%ಕ್ಕೆ ಏರಿರುವುದರ ಜೊತೆಗೆ ಇದು ಸರಕಾರಿ ಶಾಲೆಗಳ ಅತ್ಯಂತ ಹೆಚ್ಚಿನ ದಾಖಲೆಯ ಫಲಿತಾಂಶವಾಗಿದೆ

ಇದರ ಹಿಂದೆ ಸರಕಾರದ ಯೋಚನೆ, ಯೋಜನೆ ಮತ್ತು ಎಲ್ಲಾ ಪಾಲುದಾರರ ಪರಿಶ್ರಮವೂ ಇದೆ. ದೇಶದಲ್ಲಿ ಸಾರ್ವಜನಿಕ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಅನುದಾನ ತನ್ನ ವಾರ್ಷಿಕ ವೆಚ್ಚದ 26% ದೆಹಲಿ ಸರಕಾರ ತನ್ನ ಮುಂಗಡಪತ್ರದಲ್ಲಿ ನೀಡುತ್ತಿದೆ. ಬೇರೆ ಯಾವ ರಾಜ್ಯವೂ ಇಷ್ಟು ಹೆಚ್ಚಿನ ಹಣ ಸಾರ್ವಜನಿಕ ಶಿಕ್ಷಣಕ್ಕೆ ವಿನಿಯೋಗಿಸುತ್ತಿಲ್ಲ. ಭಾರತ ಸರಕಾರ ತನ್ನ ವಾರ್ಷಿಕ ಮುಂಗಡಪತ್ರದ 3% ಸಹ ಶಿಕ್ಷಣಕ್ಕೆ ಖರ್ಚು ಮಾಡುತ್ತಿಲ್ಲ. ಕರ್ನಾಟಕ (ಮತ್ತು ಇತರ ರಾಜ್ಯಗಳು) ಸಾವಿರಾರು ಸರಕಾರಿ ಕನ್ನಡ ಶಾಲೆಗಳನ್ನು ಪ್ರತಿ ವರ್ಷ ಮುಚ್ಚುತ್ತಿದ್ದರೆ ದೆಹಲಿ ಮಾತ್ರ ಹೊಸ ಶಾಲೆಗಳನ್ನು ತೆರೆಯುತ್ತಿದೆ.

ಉಳಿದ ರಾಜ್ಯಗಳು ಇದನ್ನು ಅನುಸರಿಸಬೇಕಿದೆ

ಕೇರಳ ರಾಜ್ಯ ಹೊರತುಪಡಿಸಿ ಉಳಿದೆಲ್ಲೆಡೆ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿತವಾಗುವಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ. ಇದು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ದುಪ್ಪಟ್ಟು ಶುಲ್ಕ ಕಟ್ಟುವ ಅನಿವಾರ್ಯತೆಗೆ ಸಿಕ್ಕಿಬೀಳುತ್ತಿದ್ದಾರೆ. ದೆಹಲಿ ಮಾದರಿಯನ್ನು ಉಳಿದ ರಾಜ್ಯಗಳು ಅಳವಡಿಸಿಕೊಂಡಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ. ಕರ್ನಾಟಕದ ಪಕ್ಷೇತರ ಶಾಸಕರೊಬ್ಬರು ಶಿಕ್ಷಣ ಸಚಿವರಾದ ಕೂಡಲೇ ದೆಹಲಿ ಮಾದರಿ ಜಾರಿಗೆ ತರುವುದಾಗಿ ಘೋಷಿಸಿದರು. ಕೆಲವೇ ದಿನಗಳಲ್ಲಿ ರಾಜಿನಾಮೆ ಕೊಟ್ಟು ಮುಂಬೈಗೆ ಹಾರಿರುವುದು ದುರಂತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...