Homeಮುಖಪುಟದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಉತ್ಸುಕರಾಗಿ ಹೀಗೆ ಸರ್ಕಾರಿ ಶಾಲೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಂಡಿರುವುದುರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಕಳೆದ ವರ್ಷ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವುದನ್ನು ಪೋಷಕರಿಗೆ ಮರುಪಾವತಿ ಮಾಡಲು ಆದೇಶಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಆ ಶುಲ್ಕವನ್ನು ಈ ವರ್ಷದ ದಾಖಲಾತಿ ಮಾಡಿಕೊಳ್ಳುವಾಗ ಸರಿದೂಗಿಸುವುದಾಗಿ ಘೋಷಿಸಿವೆ. ಇದರಿಂದ ಹಲವಾರು ಪೋಷಕರು ಸಂತಸಗೊಂಡಿದ್ದು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದೆಹಲಿ ಯಲ್ಲಿ ನಾಲ್ಕು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಖಾಸಗಿ ಶಾಲೆಗಳನ್ನು ಹಿಂದಿಕ್ಕಿರುವ ಈ ಶಾಲೆಗಳು ವಿಶ್ವಮಟ್ಟದಲ್ಲಿ ಶ್ಲಾಘನೆಗೆ ಒಳಗಾಗಿವೆ. ಅಲ್ಲಿನ ವಿದ್ಯಾರ್ಥಿಗಳು ನಾಲ್ಕು ವರ್ಷಗಳಲ್ಲಿ ತಮ್ಮ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ದೇಶಕ್ಕೆ ಮಾದರಿಯಾಗಿವೆ. ಈ ಕಾರಣದಿಂದ ಬಹಳಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಗಿಬೀಳುತ್ತಿದ್ದಾರೆ.

ದೆಹಲಿ ಶಾಲೆಗಳ ವಿಶೇಷವೇನು?

ಸಂತಸದಾಯಕ ಕಲಿಕೆ: 
ದೆಹಲಿಯ ಶಿಕ್ಷಕರನ್ನು ವಿದೇಶಗಳಿಗೂ ಕಳಿಸಿ ತರಬೇತಿ ನೀಡಲಾಗಿದೆ. ಪಠ್ಯಕ್ರಮವನ್ನು ಸುಧಾರಿಸಲಾಗಿದೆ. ಇದರಿಂದ ಮಕ್ಕಳು ಉತ್ಸಾಹದಿಂದ ಕಲಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಹಾರ, ಕರ್ನಾಟಕದಿಂದಲೂ ದೆಹಲಿಗೆ ಪ್ರತಿನಿಧಿಗಳನ್ನು ಕಳಿಸಿ ಅಧ್ಯಯನ ಮಾಡಲು ಹಲವು ರಾಜ್ಯಗಳು ಉತ್ಸಾಹಕರಾಗಿದ್ದಾರೆ.

ಗುಣಮಟ್ಟದ ಮೂಲಭೂತ ಸೌಲಭ್ಯಗಳು : ಶಾಲೆಗಳಲ್ಲಿ ಸ್ಮಾರ್ಟ್ ತರಗತಿ, ವಿದ್ಯುನ್ಮಾನ ಬಿಳಿ ಫಲಕ, ಆಧುನಿಕ ಕುರ್ಚಿ-ಬೆಂಚು, ಆಧುನಿಕ ಪ್ರಯೋಗಶಾಲೆ, ಸಿಸಿಟಿವಿ ಕಣ್ಗಾವಲು, ಅಂತರ್ರಾಷ್ಟ್ರೀಯ ಮಟ್ಟದ ಆಟದ ಮೈದಾನ, ಪಠ್ಯೇತರ ಚಟುವಟಿಕೆಗೆ ವಿಶೇಷ ಕೊಠಡಿಗಳು, ಪುಸ್ತಕಾಲಯ, ಈಜುಕೊಳ, ಆಡಿಯೋ-ವೀಡಿಯೋ ವ್ಯವಸ್ಥೆಯುಳ್ಳ ಸಭಾಂಗಣ, ಇವೆಲ್ಲವೂ ಇದೆ ಎಂದರೆ ಆಶ್ಚರ್ಯವಲ್ಲವೇ? ಇವೆಲ್ಲದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ನರ್ಸರಿ (ಶಿಶುವಿಹಾರ), ಪ್ರತಿ ತಿಂಗಳು ಮತ್ತು ವಾರ್ಷಿಕ ಶಿಕ್ಷಕ-ಪೋಷಕರ ಸಭೆಗಳು, ಬೇಸಿಗೆ ಶಿಬಿರ, ಹಿಂದುಳಿದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರವನ್ನೂ ನಡೆಸಲಾಗುತ್ತಿದೆ. ಸರಕಾರಿ ಶಾಲೆಯ ಮಕ್ಕಳು ಇಂದು ತಮ್ಮ ಶಾಲೆಯನ್ನು ಅತ್ಯಂತ ಹೆಮ್ಮೆಯಿಂದ ಬೇರೆ ಮಕ್ಕಳಿಗೆ ತೋರಿಸುತ್ತಾರೆ. ಶಿಕ್ಷಕರಿಗೆ ಸಂಬಳವನ್ನು ಹೆಚ್ಚು ಮಾಡಲಾಗಿದೆ. ಇದರಿಂದ ಶಾಲೆಗಳು ಹೊಸ ಸ್ವರೂಪವನ್ನು ಪಡೆದಿದ್ದು ಪೋಷಕರನ್ನು ಆಕರ್ಷಿಸುತ್ತಿವೆ.

ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು:

ಇತ್ತೀಚೆಗೆ ಪ್ರಕಟಗೊಂಡ ಸಿಬಿಎಸ್‍ಇ ಶಾಲೆಯ 12ನೆಯ ತರಗತಿ (ದ್ವಿತೀಯ ಪಿಯು) ಫಲಿತಾಂಶವು ಸ್ಪಷ್ಟವಾಗಿ ಇದನ್ನು ತೋರಿಸುತ್ತಿದೆ. ಈ ವರ್ಷ ದೆಹಲಿ ಸರಕಾರಿ ಶಾಲೆಯ ಉತ್ತೀರ್ಣ ಫಲಿತಾಂಶ 94.24% ಆಗಿದ್ದು, ರಾಜ್ಯದ ಎಲ್ಲಾ ಶಾಲೆಗಳ ಒಟ್ಟಾರೆ ಫಲಿತಾಂಶ 91.87% ಆಗಿರುತ್ತದೆ. ಸರಕಾರಿ ಶಾಲೆಗೆ ಹೋಲಿಸಿದರೆ ಖಾಸಗಿ ಶಾಲೆಗಳ ಫಲಿತಾಂಶ ಮಾತ್ರ 82.59% ಇರುತ್ತದೆ. ಸರಕಾರಿ ಶಾಲೆಗಳ ಫಲಿತಾಂಶ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಉತ್ತಮಗೊಳ್ಳುತ್ತಾ ಬಂದಿದ್ದು, 2016ರಲ್ಲಿ 85.9%, 2017ರಲ್ಲಿ 88.2%, 2018ರಲ್ಲಿ 90.6% ರಿಂದ 2019ರಲ್ಲಿ 94.24%ಕ್ಕೆ ಏರಿರುವುದರ ಜೊತೆಗೆ ಇದು ಸರಕಾರಿ ಶಾಲೆಗಳ ಅತ್ಯಂತ ಹೆಚ್ಚಿನ ದಾಖಲೆಯ ಫಲಿತಾಂಶವಾಗಿದೆ

ಇದರ ಹಿಂದೆ ಸರಕಾರದ ಯೋಚನೆ, ಯೋಜನೆ ಮತ್ತು ಎಲ್ಲಾ ಪಾಲುದಾರರ ಪರಿಶ್ರಮವೂ ಇದೆ. ದೇಶದಲ್ಲಿ ಸಾರ್ವಜನಿಕ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಅನುದಾನ ತನ್ನ ವಾರ್ಷಿಕ ವೆಚ್ಚದ 26% ದೆಹಲಿ ಸರಕಾರ ತನ್ನ ಮುಂಗಡಪತ್ರದಲ್ಲಿ ನೀಡುತ್ತಿದೆ. ಬೇರೆ ಯಾವ ರಾಜ್ಯವೂ ಇಷ್ಟು ಹೆಚ್ಚಿನ ಹಣ ಸಾರ್ವಜನಿಕ ಶಿಕ್ಷಣಕ್ಕೆ ವಿನಿಯೋಗಿಸುತ್ತಿಲ್ಲ. ಭಾರತ ಸರಕಾರ ತನ್ನ ವಾರ್ಷಿಕ ಮುಂಗಡಪತ್ರದ 3% ಸಹ ಶಿಕ್ಷಣಕ್ಕೆ ಖರ್ಚು ಮಾಡುತ್ತಿಲ್ಲ. ಕರ್ನಾಟಕ (ಮತ್ತು ಇತರ ರಾಜ್ಯಗಳು) ಸಾವಿರಾರು ಸರಕಾರಿ ಕನ್ನಡ ಶಾಲೆಗಳನ್ನು ಪ್ರತಿ ವರ್ಷ ಮುಚ್ಚುತ್ತಿದ್ದರೆ ದೆಹಲಿ ಮಾತ್ರ ಹೊಸ ಶಾಲೆಗಳನ್ನು ತೆರೆಯುತ್ತಿದೆ.

ಉಳಿದ ರಾಜ್ಯಗಳು ಇದನ್ನು ಅನುಸರಿಸಬೇಕಿದೆ

ಕೇರಳ ರಾಜ್ಯ ಹೊರತುಪಡಿಸಿ ಉಳಿದೆಲ್ಲೆಡೆ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿತವಾಗುವಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ. ಇದು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ದುಪ್ಪಟ್ಟು ಶುಲ್ಕ ಕಟ್ಟುವ ಅನಿವಾರ್ಯತೆಗೆ ಸಿಕ್ಕಿಬೀಳುತ್ತಿದ್ದಾರೆ. ದೆಹಲಿ ಮಾದರಿಯನ್ನು ಉಳಿದ ರಾಜ್ಯಗಳು ಅಳವಡಿಸಿಕೊಂಡಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ. ಕರ್ನಾಟಕದ ಪಕ್ಷೇತರ ಶಾಸಕರೊಬ್ಬರು ಶಿಕ್ಷಣ ಸಚಿವರಾದ ಕೂಡಲೇ ದೆಹಲಿ ಮಾದರಿ ಜಾರಿಗೆ ತರುವುದಾಗಿ ಘೋಷಿಸಿದರು. ಕೆಲವೇ ದಿನಗಳಲ್ಲಿ ರಾಜಿನಾಮೆ ಕೊಟ್ಟು ಮುಂಬೈಗೆ ಹಾರಿರುವುದು ದುರಂತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...