Homeಮುಖಪುಟದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಉತ್ಸುಕರಾಗಿ ಹೀಗೆ ಸರ್ಕಾರಿ ಶಾಲೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಂಡಿರುವುದುರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಕಳೆದ ವರ್ಷ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವುದನ್ನು ಪೋಷಕರಿಗೆ ಮರುಪಾವತಿ ಮಾಡಲು ಆದೇಶಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಆ ಶುಲ್ಕವನ್ನು ಈ ವರ್ಷದ ದಾಖಲಾತಿ ಮಾಡಿಕೊಳ್ಳುವಾಗ ಸರಿದೂಗಿಸುವುದಾಗಿ ಘೋಷಿಸಿವೆ. ಇದರಿಂದ ಹಲವಾರು ಪೋಷಕರು ಸಂತಸಗೊಂಡಿದ್ದು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದೆಹಲಿ ಯಲ್ಲಿ ನಾಲ್ಕು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಖಾಸಗಿ ಶಾಲೆಗಳನ್ನು ಹಿಂದಿಕ್ಕಿರುವ ಈ ಶಾಲೆಗಳು ವಿಶ್ವಮಟ್ಟದಲ್ಲಿ ಶ್ಲಾಘನೆಗೆ ಒಳಗಾಗಿವೆ. ಅಲ್ಲಿನ ವಿದ್ಯಾರ್ಥಿಗಳು ನಾಲ್ಕು ವರ್ಷಗಳಲ್ಲಿ ತಮ್ಮ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ದೇಶಕ್ಕೆ ಮಾದರಿಯಾಗಿವೆ. ಈ ಕಾರಣದಿಂದ ಬಹಳಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಗಿಬೀಳುತ್ತಿದ್ದಾರೆ.

ದೆಹಲಿ ಶಾಲೆಗಳ ವಿಶೇಷವೇನು?

ಸಂತಸದಾಯಕ ಕಲಿಕೆ: 
ದೆಹಲಿಯ ಶಿಕ್ಷಕರನ್ನು ವಿದೇಶಗಳಿಗೂ ಕಳಿಸಿ ತರಬೇತಿ ನೀಡಲಾಗಿದೆ. ಪಠ್ಯಕ್ರಮವನ್ನು ಸುಧಾರಿಸಲಾಗಿದೆ. ಇದರಿಂದ ಮಕ್ಕಳು ಉತ್ಸಾಹದಿಂದ ಕಲಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಹಾರ, ಕರ್ನಾಟಕದಿಂದಲೂ ದೆಹಲಿಗೆ ಪ್ರತಿನಿಧಿಗಳನ್ನು ಕಳಿಸಿ ಅಧ್ಯಯನ ಮಾಡಲು ಹಲವು ರಾಜ್ಯಗಳು ಉತ್ಸಾಹಕರಾಗಿದ್ದಾರೆ.

ಗುಣಮಟ್ಟದ ಮೂಲಭೂತ ಸೌಲಭ್ಯಗಳು : ಶಾಲೆಗಳಲ್ಲಿ ಸ್ಮಾರ್ಟ್ ತರಗತಿ, ವಿದ್ಯುನ್ಮಾನ ಬಿಳಿ ಫಲಕ, ಆಧುನಿಕ ಕುರ್ಚಿ-ಬೆಂಚು, ಆಧುನಿಕ ಪ್ರಯೋಗಶಾಲೆ, ಸಿಸಿಟಿವಿ ಕಣ್ಗಾವಲು, ಅಂತರ್ರಾಷ್ಟ್ರೀಯ ಮಟ್ಟದ ಆಟದ ಮೈದಾನ, ಪಠ್ಯೇತರ ಚಟುವಟಿಕೆಗೆ ವಿಶೇಷ ಕೊಠಡಿಗಳು, ಪುಸ್ತಕಾಲಯ, ಈಜುಕೊಳ, ಆಡಿಯೋ-ವೀಡಿಯೋ ವ್ಯವಸ್ಥೆಯುಳ್ಳ ಸಭಾಂಗಣ, ಇವೆಲ್ಲವೂ ಇದೆ ಎಂದರೆ ಆಶ್ಚರ್ಯವಲ್ಲವೇ? ಇವೆಲ್ಲದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ನರ್ಸರಿ (ಶಿಶುವಿಹಾರ), ಪ್ರತಿ ತಿಂಗಳು ಮತ್ತು ವಾರ್ಷಿಕ ಶಿಕ್ಷಕ-ಪೋಷಕರ ಸಭೆಗಳು, ಬೇಸಿಗೆ ಶಿಬಿರ, ಹಿಂದುಳಿದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರವನ್ನೂ ನಡೆಸಲಾಗುತ್ತಿದೆ. ಸರಕಾರಿ ಶಾಲೆಯ ಮಕ್ಕಳು ಇಂದು ತಮ್ಮ ಶಾಲೆಯನ್ನು ಅತ್ಯಂತ ಹೆಮ್ಮೆಯಿಂದ ಬೇರೆ ಮಕ್ಕಳಿಗೆ ತೋರಿಸುತ್ತಾರೆ. ಶಿಕ್ಷಕರಿಗೆ ಸಂಬಳವನ್ನು ಹೆಚ್ಚು ಮಾಡಲಾಗಿದೆ. ಇದರಿಂದ ಶಾಲೆಗಳು ಹೊಸ ಸ್ವರೂಪವನ್ನು ಪಡೆದಿದ್ದು ಪೋಷಕರನ್ನು ಆಕರ್ಷಿಸುತ್ತಿವೆ.

ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು:

ಇತ್ತೀಚೆಗೆ ಪ್ರಕಟಗೊಂಡ ಸಿಬಿಎಸ್‍ಇ ಶಾಲೆಯ 12ನೆಯ ತರಗತಿ (ದ್ವಿತೀಯ ಪಿಯು) ಫಲಿತಾಂಶವು ಸ್ಪಷ್ಟವಾಗಿ ಇದನ್ನು ತೋರಿಸುತ್ತಿದೆ. ಈ ವರ್ಷ ದೆಹಲಿ ಸರಕಾರಿ ಶಾಲೆಯ ಉತ್ತೀರ್ಣ ಫಲಿತಾಂಶ 94.24% ಆಗಿದ್ದು, ರಾಜ್ಯದ ಎಲ್ಲಾ ಶಾಲೆಗಳ ಒಟ್ಟಾರೆ ಫಲಿತಾಂಶ 91.87% ಆಗಿರುತ್ತದೆ. ಸರಕಾರಿ ಶಾಲೆಗೆ ಹೋಲಿಸಿದರೆ ಖಾಸಗಿ ಶಾಲೆಗಳ ಫಲಿತಾಂಶ ಮಾತ್ರ 82.59% ಇರುತ್ತದೆ. ಸರಕಾರಿ ಶಾಲೆಗಳ ಫಲಿತಾಂಶ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಉತ್ತಮಗೊಳ್ಳುತ್ತಾ ಬಂದಿದ್ದು, 2016ರಲ್ಲಿ 85.9%, 2017ರಲ್ಲಿ 88.2%, 2018ರಲ್ಲಿ 90.6% ರಿಂದ 2019ರಲ್ಲಿ 94.24%ಕ್ಕೆ ಏರಿರುವುದರ ಜೊತೆಗೆ ಇದು ಸರಕಾರಿ ಶಾಲೆಗಳ ಅತ್ಯಂತ ಹೆಚ್ಚಿನ ದಾಖಲೆಯ ಫಲಿತಾಂಶವಾಗಿದೆ

ಇದರ ಹಿಂದೆ ಸರಕಾರದ ಯೋಚನೆ, ಯೋಜನೆ ಮತ್ತು ಎಲ್ಲಾ ಪಾಲುದಾರರ ಪರಿಶ್ರಮವೂ ಇದೆ. ದೇಶದಲ್ಲಿ ಸಾರ್ವಜನಿಕ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಅನುದಾನ ತನ್ನ ವಾರ್ಷಿಕ ವೆಚ್ಚದ 26% ದೆಹಲಿ ಸರಕಾರ ತನ್ನ ಮುಂಗಡಪತ್ರದಲ್ಲಿ ನೀಡುತ್ತಿದೆ. ಬೇರೆ ಯಾವ ರಾಜ್ಯವೂ ಇಷ್ಟು ಹೆಚ್ಚಿನ ಹಣ ಸಾರ್ವಜನಿಕ ಶಿಕ್ಷಣಕ್ಕೆ ವಿನಿಯೋಗಿಸುತ್ತಿಲ್ಲ. ಭಾರತ ಸರಕಾರ ತನ್ನ ವಾರ್ಷಿಕ ಮುಂಗಡಪತ್ರದ 3% ಸಹ ಶಿಕ್ಷಣಕ್ಕೆ ಖರ್ಚು ಮಾಡುತ್ತಿಲ್ಲ. ಕರ್ನಾಟಕ (ಮತ್ತು ಇತರ ರಾಜ್ಯಗಳು) ಸಾವಿರಾರು ಸರಕಾರಿ ಕನ್ನಡ ಶಾಲೆಗಳನ್ನು ಪ್ರತಿ ವರ್ಷ ಮುಚ್ಚುತ್ತಿದ್ದರೆ ದೆಹಲಿ ಮಾತ್ರ ಹೊಸ ಶಾಲೆಗಳನ್ನು ತೆರೆಯುತ್ತಿದೆ.

ಉಳಿದ ರಾಜ್ಯಗಳು ಇದನ್ನು ಅನುಸರಿಸಬೇಕಿದೆ

ಕೇರಳ ರಾಜ್ಯ ಹೊರತುಪಡಿಸಿ ಉಳಿದೆಲ್ಲೆಡೆ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿತವಾಗುವಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ. ಇದು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ದುಪ್ಪಟ್ಟು ಶುಲ್ಕ ಕಟ್ಟುವ ಅನಿವಾರ್ಯತೆಗೆ ಸಿಕ್ಕಿಬೀಳುತ್ತಿದ್ದಾರೆ. ದೆಹಲಿ ಮಾದರಿಯನ್ನು ಉಳಿದ ರಾಜ್ಯಗಳು ಅಳವಡಿಸಿಕೊಂಡಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ. ಕರ್ನಾಟಕದ ಪಕ್ಷೇತರ ಶಾಸಕರೊಬ್ಬರು ಶಿಕ್ಷಣ ಸಚಿವರಾದ ಕೂಡಲೇ ದೆಹಲಿ ಮಾದರಿ ಜಾರಿಗೆ ತರುವುದಾಗಿ ಘೋಷಿಸಿದರು. ಕೆಲವೇ ದಿನಗಳಲ್ಲಿ ರಾಜಿನಾಮೆ ಕೊಟ್ಟು ಮುಂಬೈಗೆ ಹಾರಿರುವುದು ದುರಂತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...