Homeಮುಖಪುಟದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

ದೆಹಲಿ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಮುತ್ತಿಗೆ ಹಾಕಿದ್ದು ಯಾಕೆ ಗೊತ್ತೆ? ವಿಡಿಯೋ ನೋಡಿ

- Advertisement -
- Advertisement -

ದೆಹಲಿಯ ಸರ್ಕಾರಿ ಶಾಲೆಗಳ ಮುಂದೆ ಪೋಷಕರು ಹಿಂಡು ಹಿಂಡಾಗಿ ಸೇರುತ್ತಿದ್ದಾರೆ. ಕಾರ್ ಬೈಕುಗಳಲ್ಲಿ ಬೆಳಗಿನ ಜಾಗವೇ ಬಂದು ಕ್ಯೂ ಹಚ್ಚುತ್ತಿದ್ದಾರೆ. ಏಕೆಂದು ಆಶ್ಚರ್ಯವಾಗುತ್ತಿದೆಯೇ? ಮತ್ಯಾಕೂ ಅಲ್ಲ. 2019-20ನೇ ಸಾಲಿನ ದಾಖಲಾತಿ ಆರಂಭವಾಗಿದ್ದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಉತ್ಸುಕರಾಗಿ ಹೀಗೆ ಸರ್ಕಾರಿ ಶಾಲೆಗಳ ಮುಂದೆ ಜಮಾಯಿಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲ ಖಾಸಗಿ ಶಾಲೆಗಳಲ್ಲಿ ಹೆಚ್ಚುವರಿ ಶುಲ್ಕ ತೆಗೆದುಕೊಂಡಿರುವುದುರ ವಿರುದ್ಧ ದೆಹಲಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇದರಿಂದಾಗಿ ಕಳೆದ ವರ್ಷ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವುದನ್ನು ಪೋಷಕರಿಗೆ ಮರುಪಾವತಿ ಮಾಡಲು ಆದೇಶಿಸಿದೆ. ಹಾಗಾಗಿ ಖಾಸಗಿ ಶಾಲೆಗಳು ಆ ಶುಲ್ಕವನ್ನು ಈ ವರ್ಷದ ದಾಖಲಾತಿ ಮಾಡಿಕೊಳ್ಳುವಾಗ ಸರಿದೂಗಿಸುವುದಾಗಿ ಘೋಷಿಸಿವೆ. ಇದರಿಂದ ಹಲವಾರು ಪೋಷಕರು ಸಂತಸಗೊಂಡಿದ್ದು ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ದೆಹಲಿ ಯಲ್ಲಿ ನಾಲ್ಕು ವರ್ಷದ ಹಿಂದೆ ಆಮ್ ಆದ್ಮಿ ಪಕ್ಷ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿಯಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಿವೆ. ಖಾಸಗಿ ಶಾಲೆಗಳನ್ನು ಹಿಂದಿಕ್ಕಿರುವ ಈ ಶಾಲೆಗಳು ವಿಶ್ವಮಟ್ಟದಲ್ಲಿ ಶ್ಲಾಘನೆಗೆ ಒಳಗಾಗಿವೆ. ಅಲ್ಲಿನ ವಿದ್ಯಾರ್ಥಿಗಳು ನಾಲ್ಕು ವರ್ಷಗಳಲ್ಲಿ ತಮ್ಮ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು ದೇಶಕ್ಕೆ ಮಾದರಿಯಾಗಿವೆ. ಈ ಕಾರಣದಿಂದ ಬಹಳಷ್ಟು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಂದ ಬಿಡಿಸಿ ಸರ್ಕಾರಿ ಶಾಲೆಗಳಿಗೆ ಸೇರಿಸಲು ಮುಗಿಬೀಳುತ್ತಿದ್ದಾರೆ.

ದೆಹಲಿ ಶಾಲೆಗಳ ವಿಶೇಷವೇನು?

ಸಂತಸದಾಯಕ ಕಲಿಕೆ: 
ದೆಹಲಿಯ ಶಿಕ್ಷಕರನ್ನು ವಿದೇಶಗಳಿಗೂ ಕಳಿಸಿ ತರಬೇತಿ ನೀಡಲಾಗಿದೆ. ಪಠ್ಯಕ್ರಮವನ್ನು ಸುಧಾರಿಸಲಾಗಿದೆ. ಇದರಿಂದ ಮಕ್ಕಳು ಉತ್ಸಾಹದಿಂದ ಕಲಿಯುತ್ತಿದ್ದಾರೆ ಎಂದು ಹೇಳಲಾಗಿದೆ. ಬಿಹಾರ, ಕರ್ನಾಟಕದಿಂದಲೂ ದೆಹಲಿಗೆ ಪ್ರತಿನಿಧಿಗಳನ್ನು ಕಳಿಸಿ ಅಧ್ಯಯನ ಮಾಡಲು ಹಲವು ರಾಜ್ಯಗಳು ಉತ್ಸಾಹಕರಾಗಿದ್ದಾರೆ.

ಗುಣಮಟ್ಟದ ಮೂಲಭೂತ ಸೌಲಭ್ಯಗಳು : ಶಾಲೆಗಳಲ್ಲಿ ಸ್ಮಾರ್ಟ್ ತರಗತಿ, ವಿದ್ಯುನ್ಮಾನ ಬಿಳಿ ಫಲಕ, ಆಧುನಿಕ ಕುರ್ಚಿ-ಬೆಂಚು, ಆಧುನಿಕ ಪ್ರಯೋಗಶಾಲೆ, ಸಿಸಿಟಿವಿ ಕಣ್ಗಾವಲು, ಅಂತರ್ರಾಷ್ಟ್ರೀಯ ಮಟ್ಟದ ಆಟದ ಮೈದಾನ, ಪಠ್ಯೇತರ ಚಟುವಟಿಕೆಗೆ ವಿಶೇಷ ಕೊಠಡಿಗಳು, ಪುಸ್ತಕಾಲಯ, ಈಜುಕೊಳ, ಆಡಿಯೋ-ವೀಡಿಯೋ ವ್ಯವಸ್ಥೆಯುಳ್ಳ ಸಭಾಂಗಣ, ಇವೆಲ್ಲವೂ ಇದೆ ಎಂದರೆ ಆಶ್ಚರ್ಯವಲ್ಲವೇ? ಇವೆಲ್ಲದರ ಜೊತೆಗೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ನರ್ಸರಿ (ಶಿಶುವಿಹಾರ), ಪ್ರತಿ ತಿಂಗಳು ಮತ್ತು ವಾರ್ಷಿಕ ಶಿಕ್ಷಕ-ಪೋಷಕರ ಸಭೆಗಳು, ಬೇಸಿಗೆ ಶಿಬಿರ, ಹಿಂದುಳಿದ ಮಕ್ಕಳಿಗೆ ವಿಶೇಷ ಕಲಿಕಾ ಶಿಬಿರವನ್ನೂ ನಡೆಸಲಾಗುತ್ತಿದೆ. ಸರಕಾರಿ ಶಾಲೆಯ ಮಕ್ಕಳು ಇಂದು ತಮ್ಮ ಶಾಲೆಯನ್ನು ಅತ್ಯಂತ ಹೆಮ್ಮೆಯಿಂದ ಬೇರೆ ಮಕ್ಕಳಿಗೆ ತೋರಿಸುತ್ತಾರೆ. ಶಿಕ್ಷಕರಿಗೆ ಸಂಬಳವನ್ನು ಹೆಚ್ಚು ಮಾಡಲಾಗಿದೆ. ಇದರಿಂದ ಶಾಲೆಗಳು ಹೊಸ ಸ್ವರೂಪವನ್ನು ಪಡೆದಿದ್ದು ಪೋಷಕರನ್ನು ಆಕರ್ಷಿಸುತ್ತಿವೆ.

ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ ಸರ್ಕಾರಿ ಶಾಲೆಗಳು:

ಇತ್ತೀಚೆಗೆ ಪ್ರಕಟಗೊಂಡ ಸಿಬಿಎಸ್‍ಇ ಶಾಲೆಯ 12ನೆಯ ತರಗತಿ (ದ್ವಿತೀಯ ಪಿಯು) ಫಲಿತಾಂಶವು ಸ್ಪಷ್ಟವಾಗಿ ಇದನ್ನು ತೋರಿಸುತ್ತಿದೆ. ಈ ವರ್ಷ ದೆಹಲಿ ಸರಕಾರಿ ಶಾಲೆಯ ಉತ್ತೀರ್ಣ ಫಲಿತಾಂಶ 94.24% ಆಗಿದ್ದು, ರಾಜ್ಯದ ಎಲ್ಲಾ ಶಾಲೆಗಳ ಒಟ್ಟಾರೆ ಫಲಿತಾಂಶ 91.87% ಆಗಿರುತ್ತದೆ. ಸರಕಾರಿ ಶಾಲೆಗೆ ಹೋಲಿಸಿದರೆ ಖಾಸಗಿ ಶಾಲೆಗಳ ಫಲಿತಾಂಶ ಮಾತ್ರ 82.59% ಇರುತ್ತದೆ. ಸರಕಾರಿ ಶಾಲೆಗಳ ಫಲಿತಾಂಶ ಕಳೆದ ನಾಲ್ಕು ವರ್ಷದಿಂದ ಸತತವಾಗಿ ಉತ್ತಮಗೊಳ್ಳುತ್ತಾ ಬಂದಿದ್ದು, 2016ರಲ್ಲಿ 85.9%, 2017ರಲ್ಲಿ 88.2%, 2018ರಲ್ಲಿ 90.6% ರಿಂದ 2019ರಲ್ಲಿ 94.24%ಕ್ಕೆ ಏರಿರುವುದರ ಜೊತೆಗೆ ಇದು ಸರಕಾರಿ ಶಾಲೆಗಳ ಅತ್ಯಂತ ಹೆಚ್ಚಿನ ದಾಖಲೆಯ ಫಲಿತಾಂಶವಾಗಿದೆ

ಇದರ ಹಿಂದೆ ಸರಕಾರದ ಯೋಚನೆ, ಯೋಜನೆ ಮತ್ತು ಎಲ್ಲಾ ಪಾಲುದಾರರ ಪರಿಶ್ರಮವೂ ಇದೆ. ದೇಶದಲ್ಲಿ ಸಾರ್ವಜನಿಕ ಶಿಕ್ಷಣಕ್ಕೆ ಅತ್ಯಂತ ಹೆಚ್ಚಿನ ಅನುದಾನ ತನ್ನ ವಾರ್ಷಿಕ ವೆಚ್ಚದ 26% ದೆಹಲಿ ಸರಕಾರ ತನ್ನ ಮುಂಗಡಪತ್ರದಲ್ಲಿ ನೀಡುತ್ತಿದೆ. ಬೇರೆ ಯಾವ ರಾಜ್ಯವೂ ಇಷ್ಟು ಹೆಚ್ಚಿನ ಹಣ ಸಾರ್ವಜನಿಕ ಶಿಕ್ಷಣಕ್ಕೆ ವಿನಿಯೋಗಿಸುತ್ತಿಲ್ಲ. ಭಾರತ ಸರಕಾರ ತನ್ನ ವಾರ್ಷಿಕ ಮುಂಗಡಪತ್ರದ 3% ಸಹ ಶಿಕ್ಷಣಕ್ಕೆ ಖರ್ಚು ಮಾಡುತ್ತಿಲ್ಲ. ಕರ್ನಾಟಕ (ಮತ್ತು ಇತರ ರಾಜ್ಯಗಳು) ಸಾವಿರಾರು ಸರಕಾರಿ ಕನ್ನಡ ಶಾಲೆಗಳನ್ನು ಪ್ರತಿ ವರ್ಷ ಮುಚ್ಚುತ್ತಿದ್ದರೆ ದೆಹಲಿ ಮಾತ್ರ ಹೊಸ ಶಾಲೆಗಳನ್ನು ತೆರೆಯುತ್ತಿದೆ.

ಉಳಿದ ರಾಜ್ಯಗಳು ಇದನ್ನು ಅನುಸರಿಸಬೇಕಿದೆ

ಕೇರಳ ರಾಜ್ಯ ಹೊರತುಪಡಿಸಿ ಉಳಿದೆಲ್ಲೆಡೆ ಸಾರ್ವಜನಿಕ ಶಿಕ್ಷಣದ ಗುಣಮಟ್ಟ ದಿನೇ ದಿನೇ ಕುಸಿತವಾಗುವಂತೆ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ. ಇದು ಪೋಷಕರು ಅನಿವಾರ್ಯವಾಗಿ ಖಾಸಗಿ ಶಾಲೆಗಳ ದುಪ್ಪಟ್ಟು ಶುಲ್ಕ ಕಟ್ಟುವ ಅನಿವಾರ್ಯತೆಗೆ ಸಿಕ್ಕಿಬೀಳುತ್ತಿದ್ದಾರೆ. ದೆಹಲಿ ಮಾದರಿಯನ್ನು ಉಳಿದ ರಾಜ್ಯಗಳು ಅಳವಡಿಸಿಕೊಂಡಲ್ಲಿ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದಾಗಿದೆ. ಕರ್ನಾಟಕದ ಪಕ್ಷೇತರ ಶಾಸಕರೊಬ್ಬರು ಶಿಕ್ಷಣ ಸಚಿವರಾದ ಕೂಡಲೇ ದೆಹಲಿ ಮಾದರಿ ಜಾರಿಗೆ ತರುವುದಾಗಿ ಘೋಷಿಸಿದರು. ಕೆಲವೇ ದಿನಗಳಲ್ಲಿ ರಾಜಿನಾಮೆ ಕೊಟ್ಟು ಮುಂಬೈಗೆ ಹಾರಿರುವುದು ದುರಂತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...