Homeಮುಖಪುಟದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಇತರ ಗ್ರಾಹಕರಿಗೆ ತೊಂದರೆ ಉಂಟಾಗುತ್ತದೆ ಎಂದು ಗಾಲಿಕುರ್ಚಿ ಬಳಸುವ ಅಂಗವಿಕಲೆಯಾಗಿರುವ ನನಗೆ ಜನಪ್ರಿಯ ರೆಸ್ಟೋರೆಂಟ್‌ ಒಂದು ಪ್ರವೇಶ ನಿರಾಕರಿಸಿದೆ ಎಂದು ಯುವತಿ ಆರೋಪಿಸಿರುವ ಘಟನೆ ದೆಹಲಿಯ ಗುರ್ಗಾಂವ್‌ನಲ್ಲಿ ನಡೆದಿದೆ.

ತನ್ನ ಆತ್ಮೀಯ ಸ್ನೇಹಿತ ಮತ್ತು ಅವರ ಕುಟುಂಬದೊಂದಿಗೆ ಗುರ್ಗಾಂವ್‌ನ ಜನಪ್ರಿಯ ರೆಸ್ಟೋರೆಂಟ್‌ ರಾಸ್ತಾಗೆ ತೆರಳಿದ್ದು, ಗಾಲಿಕುರ್ಚಿಗೆ ಒಳಗೆ ಹೋಗಲು ಅನುಮತಿಯಿಲ್ಲ ಎಂದು ತನಗೆ ಪ್ರವೇಶ ನಿರಾಕರಿಸಿದೆ ಎಂದು ಯುವತಿ ಸೃಷ್ಟಿ ಪಾಂಡೆ ತಮ್ಮ ಟ್ವಿಟರ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

“ಗಾಲಿಕುರ್ಚಿ ಒಳಗೆ ಹೋಗಲು ಸಮಸ್ಯೆಯಾಗಬಹುದು ಎಂದು ಹೇಳುತ್ತಿದ್ದಾರೆ ಎಂದು ನಾವು ಭಾವಿಸಿದ್ದೇವು. ಆದರೆ ಸಮಸ್ಯೆ ಅದಾಗಿರಲಿಲ್ಲ. ನಾವು ಮ್ಯಾನೆಜ್ ಮಾಡಿಕೊಳ್ಳುತ್ತೇವೆ, ನಮಗೆ ಟೇಬಲ್ ರಿಸರ್ವ ಮಾಡಿ ಎಂದು ಅವರಿಗೆ ಹೇಳಿದೆವು. ಆದರೆ, ಮುಂದೆ ಅವರು ಹೇಳಿದ ಮಾತು ನಮ್ಮೆಲ್ಲರನ್ನೂ ಕೆಲಕಾಲ ಬೆಚ್ಚಿಬೀಳುವಂತೆ ಮಾಡಿತು” ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

“ಒಳಗೆ ಬೇರೆ ಗ್ರಾಹಕರು ತೊಂದರೆಗೊಳಗಾಗುತ್ತಾರೆ ಎಂದು ಅವರು ನನ್ನ ಕಡೆಗೆ ತೋರಿಸುತ್ತಾ ನಮಗೆ ಹೇಳಿದರು. ಜೊತೆಗೆ ತುಂಬಾ ಸುಲಭವಾಗಿ ನಮಗೆ ಪ್ರವೇಶವನ್ನು ನಿರಾಕರಿಸಿದ ಅವರು, ಹೊರಗೆ ಟೇಬಲ್ ನೀಡುತ್ತೇವೆ ಎಂದು ಸಿಬ್ಬಂದಿ ತಿಳಿಸಿದರು. ಆದರೆ, ಹೊರಗಡೆ ಟೇಬಲ್ ಸರಿಯಿರಲಿಲ್ಲ. ನನ್ನ ದೇಹವು ದುರ್ಬಲವಾಗಿರುವ ಕಾರಣ ಹೆಚ್ಚು ಕಾಲ ಶೀತದಲ್ಲಿ ಕುಳಿತುಕೊಳ್ಳಲು ಸಾಧ್ಯವಿರಲಿಲ್ಲ” ಎಂದು ಸೃಷ್ಟಿ ಪಾಂಡೆ ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನನಗೆ ಘಟನೆಯಿಂದ ತುಂಬಾ ನೋವಾಗಿದೆ ಎಂಬುದನ್ನು ತಮ್ಮ ಟ್ವೀಟ್‌ಗಳಲ್ಲಿ ಸೃಷ್ಟಿ ಪಾಂಡೆ ವ್ಯಕ್ತಪಡಿಸಿದ್ದರು. ಹೀಗೆ ಒಬ್ಬ ಅಂಕವಿಕಲ ಯುವತಿಗೆ ಅಪಮಾನ ಮಾಡಿದರ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಷ್ಟ್ರ ಪ್ರಶಸ್ತಿ ವಿಜೇತ ಫಿಲ್ಮಂ ಮೇಕರ್‌ ವಿನೋದ್ ಕಪ್ರಿ, ನಟಿ, ನಿದೇಶಕಿ ಪೂಜಾ ಭಟ್, ಪತ್ರಕರ್ತೆ ನವಿಕಾ ಕುಮಾರ್‌ ಸೇರಿದಂತೆ ಹಲವು ಮಂದಿ ಘಟನೆಯನ್ನು ಖಂಡಿಸಿದ್ದಾರೆ.

ಈ ಬೆನ್ನಲ್ಲೇ ರಾಸ್ತಾ ರೆಸ್ಟೋರೆಂಟ್ ಮ್ಯಾನೇಜ್‌ಮೆಂಟ್ ಘಟನೆಗೆ ಕ್ಷಮೆಯಾಚಿಸಿದೆ. ಜೊತೆಗೆ ತಮ್ಮ ಸಿಬ್ಬಂದಿಗೆ ಸೂಕ್ಷ್ಮತೆ ಮತ್ತು ಸಹಾನುಭೂತಿಯನ್ನು ಹೆಚ್ಚಿಸುವಂತಹ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ರಾಸ್ತಾದ ಸಂಸ್ಥಾಪಕ-ಪಾಲುದಾರ ಗೌಮ್ತೇಶ್ ಸಿಂಗ್ ಯುವತಿಯ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ್ದಾರೆ. “ನಾನು ಘಟನೆಯನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದೇನೆ. ನೀವು ಅನುಭವಿಸಿದ ಕೆಟ್ಟ ಅನುಭವಕ್ಕಾಗಿ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಸದಸ್ಯರಲ್ಲಿ ಯಾರಾದರೂ ತಪ್ಪು ಮಾಡಿರುವುದು ಕಂಡುಬಂದರೆ, ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಘಟನೆ ಬಗ್ಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಗುರ್ಗಾಂವ್ ಪೊಲೀಸರ ಟ್ವಿಟರ್ ಖಾತೆಯು ಮುಂದಿನ ಕ್ರಮಕ್ಕಾಗಿ ಅವರ ಸಂಪರ್ಕ ವಿವರಗಳನ್ನು ನೀಡುವಂತೆ ಕೋರಿದೆ.

ಕಳೆದ ವರ್ಷ, ದೆಹಲಿಯ ಅತ್ಯಾಧುನಿಕ ರೆಸ್ಟೋರೆಂಟ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿ ಸೀರೆ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ್ದ ಆರೋಪ ಕೇಳಿ ಬಂದಿತ್ತು. ಆದರೆ, ಮಹಿಳೆ ಸರ್ವರ್‌ನ ಮೇಲೆ ಹಲ್ಲೆ ನಡೆಸಿದ್ದರಿಂದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿತ್ತು, ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ ಎಂದು ರೆಸ್ಟೋರೆಂಟ್ ನಂತರ ಸ್ಪಷ್ಟಪಡಿಸಿತ್ತು.


ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...