Homeಮುಖಪುಟದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಇತರ ಗ್ರಾಹಕರಿಗೆ ತೊಂದರೆ ಉಂಟಾಗುತ್ತದೆ ಎಂದು ಗಾಲಿಕುರ್ಚಿ ಬಳಸುವ ಅಂಗವಿಕಲೆಯಾಗಿರುವ ನನಗೆ ಜನಪ್ರಿಯ ರೆಸ್ಟೋರೆಂಟ್‌ ಒಂದು ಪ್ರವೇಶ ನಿರಾಕರಿಸಿದೆ ಎಂದು ಯುವತಿ ಆರೋಪಿಸಿರುವ ಘಟನೆ ದೆಹಲಿಯ ಗುರ್ಗಾಂವ್‌ನಲ್ಲಿ ನಡೆದಿದೆ.

ತನ್ನ ಆತ್ಮೀಯ ಸ್ನೇಹಿತ ಮತ್ತು ಅವರ ಕುಟುಂಬದೊಂದಿಗೆ ಗುರ್ಗಾಂವ್‌ನ ಜನಪ್ರಿಯ ರೆಸ್ಟೋರೆಂಟ್‌ ರಾಸ್ತಾಗೆ ತೆರಳಿದ್ದು, ಗಾಲಿಕುರ್ಚಿಗೆ ಒಳಗೆ ಹೋಗಲು ಅನುಮತಿಯಿಲ್ಲ ಎಂದು ತನಗೆ ಪ್ರವೇಶ ನಿರಾಕರಿಸಿದೆ ಎಂದು ಯುವತಿ ಸೃಷ್ಟಿ ಪಾಂಡೆ ತಮ್ಮ ಟ್ವಿಟರ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

“ಗಾಲಿಕುರ್ಚಿ ಒಳಗೆ ಹೋಗಲು ಸಮಸ್ಯೆಯಾಗಬಹುದು ಎಂದು ಹೇಳುತ್ತಿದ್ದಾರೆ ಎಂದು ನಾವು ಭಾವಿಸಿದ್ದೇವು. ಆದರೆ ಸಮಸ್ಯೆ ಅದಾಗಿರಲಿಲ್ಲ. ನಾವು ಮ್ಯಾನೆಜ್ ಮಾಡಿಕೊಳ್ಳುತ್ತೇವೆ, ನಮಗೆ ಟೇಬಲ್ ರಿಸರ್ವ ಮಾಡಿ ಎಂದು ಅವರಿಗೆ ಹೇಳಿದೆವು. ಆದರೆ, ಮುಂದೆ ಅವರು ಹೇಳಿದ ಮಾತು ನಮ್ಮೆಲ್ಲರನ್ನೂ ಕೆಲಕಾಲ ಬೆಚ್ಚಿಬೀಳುವಂತೆ ಮಾಡಿತು” ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

“ಒಳಗೆ ಬೇರೆ ಗ್ರಾಹಕರು ತೊಂದರೆಗೊಳಗಾಗುತ್ತಾರೆ ಎಂದು ಅವರು ನನ್ನ ಕಡೆಗೆ ತೋರಿಸುತ್ತಾ ನಮಗೆ ಹೇಳಿದರು. ಜೊತೆಗೆ ತುಂಬಾ ಸುಲಭವಾಗಿ ನಮಗೆ ಪ್ರವೇಶವನ್ನು ನಿರಾಕರಿಸಿದ ಅವರು, ಹೊರಗೆ ಟೇಬಲ್ ನೀಡುತ್ತೇವೆ ಎಂದು ಸಿಬ್ಬಂದಿ ತಿಳಿಸಿದರು. ಆದರೆ, ಹೊರಗಡೆ ಟೇಬಲ್ ಸರಿಯಿರಲಿಲ್ಲ. ನನ್ನ ದೇಹವು ದುರ್ಬಲವಾಗಿರುವ ಕಾರಣ ಹೆಚ್ಚು ಕಾಲ ಶೀತದಲ್ಲಿ ಕುಳಿತುಕೊಳ್ಳಲು ಸಾಧ್ಯವಿರಲಿಲ್ಲ” ಎಂದು ಸೃಷ್ಟಿ ಪಾಂಡೆ ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನನಗೆ ಘಟನೆಯಿಂದ ತುಂಬಾ ನೋವಾಗಿದೆ ಎಂಬುದನ್ನು ತಮ್ಮ ಟ್ವೀಟ್‌ಗಳಲ್ಲಿ ಸೃಷ್ಟಿ ಪಾಂಡೆ ವ್ಯಕ್ತಪಡಿಸಿದ್ದರು. ಹೀಗೆ ಒಬ್ಬ ಅಂಕವಿಕಲ ಯುವತಿಗೆ ಅಪಮಾನ ಮಾಡಿದರ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಷ್ಟ್ರ ಪ್ರಶಸ್ತಿ ವಿಜೇತ ಫಿಲ್ಮಂ ಮೇಕರ್‌ ವಿನೋದ್ ಕಪ್ರಿ, ನಟಿ, ನಿದೇಶಕಿ ಪೂಜಾ ಭಟ್, ಪತ್ರಕರ್ತೆ ನವಿಕಾ ಕುಮಾರ್‌ ಸೇರಿದಂತೆ ಹಲವು ಮಂದಿ ಘಟನೆಯನ್ನು ಖಂಡಿಸಿದ್ದಾರೆ.

ಈ ಬೆನ್ನಲ್ಲೇ ರಾಸ್ತಾ ರೆಸ್ಟೋರೆಂಟ್ ಮ್ಯಾನೇಜ್‌ಮೆಂಟ್ ಘಟನೆಗೆ ಕ್ಷಮೆಯಾಚಿಸಿದೆ. ಜೊತೆಗೆ ತಮ್ಮ ಸಿಬ್ಬಂದಿಗೆ ಸೂಕ್ಷ್ಮತೆ ಮತ್ತು ಸಹಾನುಭೂತಿಯನ್ನು ಹೆಚ್ಚಿಸುವಂತಹ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ರಾಸ್ತಾದ ಸಂಸ್ಥಾಪಕ-ಪಾಲುದಾರ ಗೌಮ್ತೇಶ್ ಸಿಂಗ್ ಯುವತಿಯ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ್ದಾರೆ. “ನಾನು ಘಟನೆಯನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದೇನೆ. ನೀವು ಅನುಭವಿಸಿದ ಕೆಟ್ಟ ಅನುಭವಕ್ಕಾಗಿ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಸದಸ್ಯರಲ್ಲಿ ಯಾರಾದರೂ ತಪ್ಪು ಮಾಡಿರುವುದು ಕಂಡುಬಂದರೆ, ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಘಟನೆ ಬಗ್ಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಗುರ್ಗಾಂವ್ ಪೊಲೀಸರ ಟ್ವಿಟರ್ ಖಾತೆಯು ಮುಂದಿನ ಕ್ರಮಕ್ಕಾಗಿ ಅವರ ಸಂಪರ್ಕ ವಿವರಗಳನ್ನು ನೀಡುವಂತೆ ಕೋರಿದೆ.

ಕಳೆದ ವರ್ಷ, ದೆಹಲಿಯ ಅತ್ಯಾಧುನಿಕ ರೆಸ್ಟೋರೆಂಟ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿ ಸೀರೆ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ್ದ ಆರೋಪ ಕೇಳಿ ಬಂದಿತ್ತು. ಆದರೆ, ಮಹಿಳೆ ಸರ್ವರ್‌ನ ಮೇಲೆ ಹಲ್ಲೆ ನಡೆಸಿದ್ದರಿಂದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿತ್ತು, ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ ಎಂದು ರೆಸ್ಟೋರೆಂಟ್ ನಂತರ ಸ್ಪಷ್ಟಪಡಿಸಿತ್ತು.


ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...