Homeಮುಖಪುಟದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಇತರ ಗ್ರಾಹಕರಿಗೆ ತೊಂದರೆ ಉಂಟಾಗುತ್ತದೆ ಎಂದು ಗಾಲಿಕುರ್ಚಿ ಬಳಸುವ ಅಂಗವಿಕಲೆಯಾಗಿರುವ ನನಗೆ ಜನಪ್ರಿಯ ರೆಸ್ಟೋರೆಂಟ್‌ ಒಂದು ಪ್ರವೇಶ ನಿರಾಕರಿಸಿದೆ ಎಂದು ಯುವತಿ ಆರೋಪಿಸಿರುವ ಘಟನೆ ದೆಹಲಿಯ ಗುರ್ಗಾಂವ್‌ನಲ್ಲಿ ನಡೆದಿದೆ.

ತನ್ನ ಆತ್ಮೀಯ ಸ್ನೇಹಿತ ಮತ್ತು ಅವರ ಕುಟುಂಬದೊಂದಿಗೆ ಗುರ್ಗಾಂವ್‌ನ ಜನಪ್ರಿಯ ರೆಸ್ಟೋರೆಂಟ್‌ ರಾಸ್ತಾಗೆ ತೆರಳಿದ್ದು, ಗಾಲಿಕುರ್ಚಿಗೆ ಒಳಗೆ ಹೋಗಲು ಅನುಮತಿಯಿಲ್ಲ ಎಂದು ತನಗೆ ಪ್ರವೇಶ ನಿರಾಕರಿಸಿದೆ ಎಂದು ಯುವತಿ ಸೃಷ್ಟಿ ಪಾಂಡೆ ತಮ್ಮ ಟ್ವಿಟರ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

“ಗಾಲಿಕುರ್ಚಿ ಒಳಗೆ ಹೋಗಲು ಸಮಸ್ಯೆಯಾಗಬಹುದು ಎಂದು ಹೇಳುತ್ತಿದ್ದಾರೆ ಎಂದು ನಾವು ಭಾವಿಸಿದ್ದೇವು. ಆದರೆ ಸಮಸ್ಯೆ ಅದಾಗಿರಲಿಲ್ಲ. ನಾವು ಮ್ಯಾನೆಜ್ ಮಾಡಿಕೊಳ್ಳುತ್ತೇವೆ, ನಮಗೆ ಟೇಬಲ್ ರಿಸರ್ವ ಮಾಡಿ ಎಂದು ಅವರಿಗೆ ಹೇಳಿದೆವು. ಆದರೆ, ಮುಂದೆ ಅವರು ಹೇಳಿದ ಮಾತು ನಮ್ಮೆಲ್ಲರನ್ನೂ ಕೆಲಕಾಲ ಬೆಚ್ಚಿಬೀಳುವಂತೆ ಮಾಡಿತು” ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

“ಒಳಗೆ ಬೇರೆ ಗ್ರಾಹಕರು ತೊಂದರೆಗೊಳಗಾಗುತ್ತಾರೆ ಎಂದು ಅವರು ನನ್ನ ಕಡೆಗೆ ತೋರಿಸುತ್ತಾ ನಮಗೆ ಹೇಳಿದರು. ಜೊತೆಗೆ ತುಂಬಾ ಸುಲಭವಾಗಿ ನಮಗೆ ಪ್ರವೇಶವನ್ನು ನಿರಾಕರಿಸಿದ ಅವರು, ಹೊರಗೆ ಟೇಬಲ್ ನೀಡುತ್ತೇವೆ ಎಂದು ಸಿಬ್ಬಂದಿ ತಿಳಿಸಿದರು. ಆದರೆ, ಹೊರಗಡೆ ಟೇಬಲ್ ಸರಿಯಿರಲಿಲ್ಲ. ನನ್ನ ದೇಹವು ದುರ್ಬಲವಾಗಿರುವ ಕಾರಣ ಹೆಚ್ಚು ಕಾಲ ಶೀತದಲ್ಲಿ ಕುಳಿತುಕೊಳ್ಳಲು ಸಾಧ್ಯವಿರಲಿಲ್ಲ” ಎಂದು ಸೃಷ್ಟಿ ಪಾಂಡೆ ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನನಗೆ ಘಟನೆಯಿಂದ ತುಂಬಾ ನೋವಾಗಿದೆ ಎಂಬುದನ್ನು ತಮ್ಮ ಟ್ವೀಟ್‌ಗಳಲ್ಲಿ ಸೃಷ್ಟಿ ಪಾಂಡೆ ವ್ಯಕ್ತಪಡಿಸಿದ್ದರು. ಹೀಗೆ ಒಬ್ಬ ಅಂಕವಿಕಲ ಯುವತಿಗೆ ಅಪಮಾನ ಮಾಡಿದರ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಷ್ಟ್ರ ಪ್ರಶಸ್ತಿ ವಿಜೇತ ಫಿಲ್ಮಂ ಮೇಕರ್‌ ವಿನೋದ್ ಕಪ್ರಿ, ನಟಿ, ನಿದೇಶಕಿ ಪೂಜಾ ಭಟ್, ಪತ್ರಕರ್ತೆ ನವಿಕಾ ಕುಮಾರ್‌ ಸೇರಿದಂತೆ ಹಲವು ಮಂದಿ ಘಟನೆಯನ್ನು ಖಂಡಿಸಿದ್ದಾರೆ.

ಈ ಬೆನ್ನಲ್ಲೇ ರಾಸ್ತಾ ರೆಸ್ಟೋರೆಂಟ್ ಮ್ಯಾನೇಜ್‌ಮೆಂಟ್ ಘಟನೆಗೆ ಕ್ಷಮೆಯಾಚಿಸಿದೆ. ಜೊತೆಗೆ ತಮ್ಮ ಸಿಬ್ಬಂದಿಗೆ ಸೂಕ್ಷ್ಮತೆ ಮತ್ತು ಸಹಾನುಭೂತಿಯನ್ನು ಹೆಚ್ಚಿಸುವಂತಹ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ರಾಸ್ತಾದ ಸಂಸ್ಥಾಪಕ-ಪಾಲುದಾರ ಗೌಮ್ತೇಶ್ ಸಿಂಗ್ ಯುವತಿಯ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ್ದಾರೆ. “ನಾನು ಘಟನೆಯನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದೇನೆ. ನೀವು ಅನುಭವಿಸಿದ ಕೆಟ್ಟ ಅನುಭವಕ್ಕಾಗಿ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಸದಸ್ಯರಲ್ಲಿ ಯಾರಾದರೂ ತಪ್ಪು ಮಾಡಿರುವುದು ಕಂಡುಬಂದರೆ, ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಘಟನೆ ಬಗ್ಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಗುರ್ಗಾಂವ್ ಪೊಲೀಸರ ಟ್ವಿಟರ್ ಖಾತೆಯು ಮುಂದಿನ ಕ್ರಮಕ್ಕಾಗಿ ಅವರ ಸಂಪರ್ಕ ವಿವರಗಳನ್ನು ನೀಡುವಂತೆ ಕೋರಿದೆ.

ಕಳೆದ ವರ್ಷ, ದೆಹಲಿಯ ಅತ್ಯಾಧುನಿಕ ರೆಸ್ಟೋರೆಂಟ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿ ಸೀರೆ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ್ದ ಆರೋಪ ಕೇಳಿ ಬಂದಿತ್ತು. ಆದರೆ, ಮಹಿಳೆ ಸರ್ವರ್‌ನ ಮೇಲೆ ಹಲ್ಲೆ ನಡೆಸಿದ್ದರಿಂದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿತ್ತು, ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ ಎಂದು ರೆಸ್ಟೋರೆಂಟ್ ನಂತರ ಸ್ಪಷ್ಟಪಡಿಸಿತ್ತು.


ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...