Homeಮುಖಪುಟದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

- Advertisement -
- Advertisement -

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ.

ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ ಎಂದು ಆರೋಪಿಸಿ ಕ್ಯಾಂಪೇನ್ ಅಗೈನೆಸ್ಟ್ ಸ್ಟೇಟ್ ರಿಪ್ರೆಷನ್ (ಸಿಎಎಸ್‌ಆರ್‌) ತುರ್ತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ಪೊಲೀಸರು ಅಪಹರಿಸಿರುವ 10 ಜನರಲ್ಲಿ ಇಬ್ಬರು ಕಾರ್ಮಿಕ ಹಕ್ಕುಗಳ ಹೋರಾಟಗಾರರು, ಇಬ್ಬರು ಬಲವಂತದ ಸ್ಥಳಾಂತರ ವಿರೋಧಿ ಹೋರಾಟಗಾರರು ಮತ್ತು ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರಸ್ತುತ ಇವರೆಲ್ಲ ಎಲ್ಲಿದ್ದಾರೆ ಎಂಬ ಮಾಹಿತಿಯಿಲ್ಲ ಎಂದು ಸಿಎಎಸ್‌ಆರ್‌ ಹೇಳಿದೆ.

ಮಾರ್ಚ್ 12ರಿಂದ ಹೋರಾಟಗಾರರ ಅಪಹರಣ ಶುರುವಾಗಿದೆ. ಮೊದಲು ದೆಹಲಿ ವಿಶ್ವವಿದ್ಯಾಲಯದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಇಲಾಕಿಯಾ ಮತ್ತು ಕಾರ್ಮಿಕ ಹಕ್ಕುಗಳ ಹೋರಾಟಗಾರ ಶಿವಕುಮಾರ್ ಅವರನ್ನು ಸಿವಿಲ್ ಡ್ರೆಸ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಕರೆದೊಯ್ದಿದ್ದಾರೆ. ಇವರಿಬ್ಬರು ‘ಸಾಮ್ರಾಜ್ಯಶಾಹಿ ವಿರೋಧಿ ಸಪ್ತಾಹ’ದ ಚಟುವಟಿಕೆಗಳ ಬಗ್ಗೆ ಚರ್ಚಿಸಲು ದಯಾಳ್ ಸಿಂಗ್ ಕಾಲೇಜಿನ ಅಧ್ಯಾಪಕ ಸಚಿನ್ ಎನ್ ಅವರನ್ನು ಭೇಟಿ ಮಾಡಲು ಹೋಗಿದ್ದರು ಎಂದು ಸಿಎಎಸ್‌ಆರ್‌ ತಿಳಿಸಿದೆ.

ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಮಾರ್ಚ್ 12ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ದೆಹಲಿಯ ಜೆಎಲ್‌ಎನ್ ಮೆಟ್ರೋ ನಿಲ್ದಾಣದ ಸಮೀಪ, ಸಿವಿಲ್ ಡ್ರೆಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ವಿಐಪಿ ಲೈಟ್‌ಗಳಿದ್ದ ಸ್ಕಾರ್ಪಿಯೋ ವಾಹನಕ್ಕೆ ಇಲಾಕಿಯಾರನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಈ ವೇಳೆಗೆ ಕುಮಾರ್ ಅವರನ್ನು ವಾಹನದೊಳಗೆ ಕೂರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಇಲಾಕಿಯಾರ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಅವರಿಬ್ಬರೂ ತಮ್ಮ ಕುಟುಂಬದವರನ್ನಾಗಲಿ ಅಥವಾ ಸಹೋದ್ಯೋಗಿಗಳನ್ನಾಗಲಿ ಸಂಪರ್ಕಿಸಿಲ್ಲ ಎಂದು ಸಿಎಎಸ್‌ಆರ್‌ ವಿವರಿಸಿದೆ.

ಮಾರ್ಚ್ 13ರಂದು ಮತ್ತಷ್ಟು ಜನರನ್ನು ಬಂಧಿಸಲಾಗಿದೆ. ಮಜ್ದೂರ್ ಅಧಿಕಾರ್ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಹೋರಾಟಗಾರ ಮಂಜೀತ್ ಅವರು ಮನೆಗೆ ಹಿಂದಿರುಗುವಾಗ ನಾಪತ್ತೆಯಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ಬಿಡುಗಡೆಗೆ ಒತ್ತಾಯಿಸಿ ಸಿಎಎಸ್‌ಆರ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು ಎಂದಿದೆ.

ಮಾರ್ಚ್ 13ರಂದು ಸಂಜೆ ಸುಮಾರು 8:00 ಗಂಟೆಗೆ ವಿಜಯನಗರದಲ್ಲಿರುವ ಬಿಎಸ್‌ಸಿಇಎಂ ವಿದ್ಯಾರ್ಥಿ ಸಂಘಟನೆಯ ಕಚೇರಿಯಿಂದ ದೆಹಲಿ ಪೊಲೀಸರು ಇನ್ನೂ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಬಿಎಸ್‌ಸಿಇಎಂ ಸಂಘಟನೆಯ ಅಕ್ಷಯ್, ದೃಷ್ಟಿ, ರುದ್ರ, ಕಿರಣ್ ಮತ್ತು ಗೌರವ್ ವಶಕ್ಕೆ ಪಡೆದವರಲ್ಲಿ ಸೇರಿದ್ದಾರೆ. ಇವರೊಂದಿಗೆ ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣ ವಿರೋಧಿ ವೇದಿಕೆಯ (ಎಫ್‌ಎಸಿಎಎಂ) ಬಾದಲ್ ಮತ್ತು ಎಹ್ತೆಮಾಮ್ ಅವರನ್ನು ಸಹ ಕರೆದೊಯ್ಯಲಾಗಿದೆ.

ಕಳೆದ ವರ್ಷದ ಕೊನೆಯಲ್ಲಿ ದೆಹಲಿಯ ತೀವ್ರ ವಾಯು ಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯ ನಂತರ, ಈಗ ನಾಪತ್ತೆಯಾದವರಲ್ಲಿ ಕೆಲವರಾದ ಇಲಾಕಿಯಾ, ಕಿರಣ್ ಮತ್ತು ಅಕ್ಷಯ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳು ಕಳೆದಿದ್ದರು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ ಎಂದು ಸಿಎಎಸ್‌ಆರ್ ಹೇಳಿದೆ.

ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಎಹ್ತೆಮಾಮ್, ರುದ್ರ, ಬಾದಲ್ ಮತ್ತು ಗೌರವ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಅಪಹರಿಸಿ, ಒಂದು ವಾರಕ್ಕೂ ಹೆಚ್ಚು ಕಾಲ ಚಿತ್ರಹಿಂಸೆ ನೀಡಿತ್ತು ಎಂಬ ಆರೋಪವಿದೆ. ಪ್ರಜಾಸತ್ತಾತ್ಮಕ ಧ್ವನಿಗಳನ್ನು ಹತ್ತಿಕ್ಕಲು ನಡೆಸುತ್ತಿರುವ ವ್ಯವಸ್ಥಿತ ಸಂಚು ಎಂದು ಸಂಘಟನೆಯು ಈ ಘಟನೆಯನ್ನು ಪರಿಗಣಿಸಿದೆ.

ಸಿಎಎಸ್ಆರ್ ನಾಪತ್ತೆಯಾದ ವ್ಯಕ್ತಿಗಳ ವಿರುದ್ಧ ಈ ಹಿಂದೆ ನಡೆದ ಪೊಲೀಸ್ ಕ್ರಮಗಳು ಮತ್ತು ಅವರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳ ಆತಂಕಕಾರಿ ಇತಿಹಾಸವನ್ನು ಎತ್ತಿ ತೋರಿಸಿದೆ.

ಸಿಂಘು ಬಾರ್ಡರ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟಗಾರ್ತಿ ನೌದೀಪ್ ಕೌರ್ ಅವರೊಂದಿಗೆ ಬಂಧಿತರಾಗಿದ್ದ ಶಿವಕುಮಾರ್ ಅವರು, ಈ ಹಿಂದೆ ಕಸ್ಟಡಿಯಲ್ಲಿ ತೀವ್ರವಾದ ದೈಹಿಕ ಹಿಂಸೆಯನ್ನು ಅನುಭವಿಸಿದ್ದರು ಎಂಬುವುದಾಗಿ ವರದಿಯಾಗಿದೆ ಎಂದು ಸಿಎಎಸ್‌ಆರ್ ಹೇಳಿದೆ.

ಹೋರಾಟಗಾರರ ನಾಪತ್ತೆ ಕುರಿತು ಅಧಿಕಾರಿಗಳ ಮೇಲೆ ಹೊಣೆ ಹೊರಿಸಬೇಕು ಎಂದು ಸಿಎಎಸ್ಆರ್ ಒತ್ತಾಯಿಸಿದೆ. ಹತ್ತಾರು ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ಸಿವಿಲ್ ಸೊಸೈಟಿ ಸಂಘಟನೆಗಳನ್ನು ಪ್ರತಿನಿಧಿಸುವ ಈ ಒಕ್ಕೂಟವು, ನಾಪತ್ತೆಯಾಗಿರುವ ಎಲ್ಲಾ ಹತ್ತು ವ್ಯಕ್ತಿಗಳ ಇರುವಿಕೆಯ ಬಗ್ಗೆ ತಕ್ಷಣವೇ ಮಾಹಿತಿ ಬಹಿರಂಗಪಡಿಸಬೇಕೆಂದು ಪಟ್ಟು ಹಿಡಿದಿದೆ.

ಇದಲ್ಲದೆ, ಈ ಮಾನವ ಹಕ್ಕುಗಳ ಗುಂಪು ಬಂಧಿತರ ದೈಹಿಕ ಸುರಕ್ಷತೆಯ ಬಗ್ಗೆ ದೃಢವಾದ ಭರವಸೆ, ತಕ್ಷಣದ ಕಾನೂನು ನೆರವು ಮತ್ತು ಅವರ ಕುಟುಂಬಗಳೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸುತ್ತಿದೆ.

ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರ ವಿಶೇಷ ಘಟಕದ ಅಧಿಕಾರಿಗಳು 10 ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ವಿವಿಧ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ವಕೀಲ ಶಾರುಖ್ ಆಲಂ ಅವರು ಶನಿವಾರ (ಮಾ.14) ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ನಾಳೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಗ್ರಿಕಾ ರಾಜೋರಾ ಅವರ ಪರವಾಗಿ ವಕೀಲೆ ದೀಕ್ಷಾ ದ್ವಿವೇದಿ ಅವರು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಾರೆ, ಅರ್ಜಿಯಲ್ಲಿ ಸಗ್ರಿಕಾ ಅವರ ಸಹೋದರಿ ಲಕ್ಷಿತಾ ರಾಜೋರಾ ಅವರು, ತನ್ಮ ಸಹೋದರಿಯನ್ನು ತಕ್ಷಣ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಬಳಿಯ ವಿಜಯ್ ನಗರ ಪ್ರದೇಶದಿಂದ ಮಾರ್ಚ್ 13ರ ಸಂಜೆಯಿಂದ 22 ವರ್ಷದ ಸಗ್ರಿಕಾ ಕಾಣೆಯಾಗಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ಪ್ರಕಾರ, ಸಗ್ರಿಕಾ ಮಾರ್ಚ್ 13ರ ಸಂಜೆ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿಯ ವಿಜಯ್ ನಗರದಲ್ಲಿರುವ ವಿದ್ಯಾರ್ಥಿ ಸಂಘಟನೆಯ ಕಚೇರಿಗೆ ಹೋಗಿದ್ದರು. ನಂತರ ರಾತ್ರಿ 8 ಗಂಟೆಯಿಂದ ಅವರು ನಾಪತ್ತೆಯಾಗಿದ್ದಾರೆ ಮತ್ತು ಅವರ ಫೋನ್ ಸ್ವಿಚ್ ಆಫ್ ಆಗಿದೆ.

ಅದೇ ಸಮಯದಲ್ಲಿ ಅದೇ ಕಚೇರಿಯಲ್ಲಿದ್ದ ಇತರ ಹಲವಾರು ವ್ಯಕ್ತಿಗಳು ಕೂಡ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಸಹೋದರಿಯನ್ನು ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಅಕ್ರಮವಾಗಿ ಕರೆದೊಯ್ದಿರಬಹುದು ಎಂಬ ಗಂಭೀರ ಮತ್ತು ಆಧಾರಪೂರ್ಣ ಆತಂಕವನ್ನು ರಾಜೋರಾ ವ್ಯಕ್ತಪಡಿಸಿದ್ದಾರೆ ಎಂದು livelaw.in ಹೇಳಿದೆ.

ಗೌರವಯುತವಾದ ಬಂಧನ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸದೆ, ಎಂಟು ತಿಂಗಳ ಹಿಂದೆ ಇದೇ ದೆಹಲಿ ಪೊಲೀಸರ ವಿಶೇಷ ಘಟಕ ಸಗ್ರಿಕಾ ಮತ್ತು ಅವರ ಸಹೋದ್ಯೋಗಿಗಳನ್ನು ಒಂದು ವಾರಕ್ಕೂ ಹೆಚ್ಚು ಕಾಲ ಕಾನೂನುಬಾಹಿರ ಬಂಧನದಲ್ಲಿಟ್ಟು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...