Homeಮುಖಪುಟದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

- Advertisement -
- Advertisement -

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ.

ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ ಎಂದು ಆರೋಪಿಸಿ ಕ್ಯಾಂಪೇನ್ ಅಗೈನೆಸ್ಟ್ ಸ್ಟೇಟ್ ರಿಪ್ರೆಷನ್ (ಸಿಎಎಸ್‌ಆರ್‌) ತುರ್ತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ಪೊಲೀಸರು ಅಪಹರಿಸಿರುವ 10 ಜನರಲ್ಲಿ ಇಬ್ಬರು ಕಾರ್ಮಿಕ ಹಕ್ಕುಗಳ ಹೋರಾಟಗಾರರು, ಇಬ್ಬರು ಬಲವಂತದ ಸ್ಥಳಾಂತರ ವಿರೋಧಿ ಹೋರಾಟಗಾರರು ಮತ್ತು ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರಸ್ತುತ ಇವರೆಲ್ಲ ಎಲ್ಲಿದ್ದಾರೆ ಎಂಬ ಮಾಹಿತಿಯಿಲ್ಲ ಎಂದು ಸಿಎಎಸ್‌ಆರ್‌ ಹೇಳಿದೆ.

ಮಾರ್ಚ್ 12ರಿಂದ ಹೋರಾಟಗಾರರ ಅಪಹರಣ ಶುರುವಾಗಿದೆ. ಮೊದಲು ದೆಹಲಿ ವಿಶ್ವವಿದ್ಯಾಲಯದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಇಲಾಕಿಯಾ ಮತ್ತು ಕಾರ್ಮಿಕ ಹಕ್ಕುಗಳ ಹೋರಾಟಗಾರ ಶಿವಕುಮಾರ್ ಅವರನ್ನು ಸಿವಿಲ್ ಡ್ರೆಸ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಕರೆದೊಯ್ದಿದ್ದಾರೆ. ಇವರಿಬ್ಬರು ‘ಸಾಮ್ರಾಜ್ಯಶಾಹಿ ವಿರೋಧಿ ಸಪ್ತಾಹ’ದ ಚಟುವಟಿಕೆಗಳ ಬಗ್ಗೆ ಚರ್ಚಿಸಲು ದಯಾಳ್ ಸಿಂಗ್ ಕಾಲೇಜಿನ ಅಧ್ಯಾಪಕ ಸಚಿನ್ ಎನ್ ಅವರನ್ನು ಭೇಟಿ ಮಾಡಲು ಹೋಗಿದ್ದರು ಎಂದು ಸಿಎಎಸ್‌ಆರ್‌ ತಿಳಿಸಿದೆ.

ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಮಾರ್ಚ್ 12ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ದೆಹಲಿಯ ಜೆಎಲ್‌ಎನ್ ಮೆಟ್ರೋ ನಿಲ್ದಾಣದ ಸಮೀಪ, ಸಿವಿಲ್ ಡ್ರೆಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ವಿಐಪಿ ಲೈಟ್‌ಗಳಿದ್ದ ಸ್ಕಾರ್ಪಿಯೋ ವಾಹನಕ್ಕೆ ಇಲಾಕಿಯಾರನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಈ ವೇಳೆಗೆ ಕುಮಾರ್ ಅವರನ್ನು ವಾಹನದೊಳಗೆ ಕೂರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಇಲಾಕಿಯಾರ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಅವರಿಬ್ಬರೂ ತಮ್ಮ ಕುಟುಂಬದವರನ್ನಾಗಲಿ ಅಥವಾ ಸಹೋದ್ಯೋಗಿಗಳನ್ನಾಗಲಿ ಸಂಪರ್ಕಿಸಿಲ್ಲ ಎಂದು ಸಿಎಎಸ್‌ಆರ್‌ ವಿವರಿಸಿದೆ.

ಮಾರ್ಚ್ 13ರಂದು ಮತ್ತಷ್ಟು ಜನರನ್ನು ಬಂಧಿಸಲಾಗಿದೆ. ಮಜ್ದೂರ್ ಅಧಿಕಾರ್ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಹೋರಾಟಗಾರ ಮಂಜೀತ್ ಅವರು ಮನೆಗೆ ಹಿಂದಿರುಗುವಾಗ ನಾಪತ್ತೆಯಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ಬಿಡುಗಡೆಗೆ ಒತ್ತಾಯಿಸಿ ಸಿಎಎಸ್‌ಆರ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು ಎಂದಿದೆ.

ಮಾರ್ಚ್ 13ರಂದು ಸಂಜೆ ಸುಮಾರು 8:00 ಗಂಟೆಗೆ ವಿಜಯನಗರದಲ್ಲಿರುವ ಬಿಎಸ್‌ಸಿಇಎಂ ವಿದ್ಯಾರ್ಥಿ ಸಂಘಟನೆಯ ಕಚೇರಿಯಿಂದ ದೆಹಲಿ ಪೊಲೀಸರು ಇನ್ನೂ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಬಿಎಸ್‌ಸಿಇಎಂ ಸಂಘಟನೆಯ ಅಕ್ಷಯ್, ದೃಷ್ಟಿ, ರುದ್ರ, ಕಿರಣ್ ಮತ್ತು ಗೌರವ್ ವಶಕ್ಕೆ ಪಡೆದವರಲ್ಲಿ ಸೇರಿದ್ದಾರೆ. ಇವರೊಂದಿಗೆ ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣ ವಿರೋಧಿ ವೇದಿಕೆಯ (ಎಫ್‌ಎಸಿಎಎಂ) ಬಾದಲ್ ಮತ್ತು ಎಹ್ತೆಮಾಮ್ ಅವರನ್ನು ಸಹ ಕರೆದೊಯ್ಯಲಾಗಿದೆ.

ಕಳೆದ ವರ್ಷದ ಕೊನೆಯಲ್ಲಿ ದೆಹಲಿಯ ತೀವ್ರ ವಾಯು ಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯ ನಂತರ, ಈಗ ನಾಪತ್ತೆಯಾದವರಲ್ಲಿ ಕೆಲವರಾದ ಇಲಾಕಿಯಾ, ಕಿರಣ್ ಮತ್ತು ಅಕ್ಷಯ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳು ಕಳೆದಿದ್ದರು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ ಎಂದು ಸಿಎಎಸ್‌ಆರ್ ಹೇಳಿದೆ.

ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಎಹ್ತೆಮಾಮ್, ರುದ್ರ, ಬಾದಲ್ ಮತ್ತು ಗೌರವ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಅಪಹರಿಸಿ, ಒಂದು ವಾರಕ್ಕೂ ಹೆಚ್ಚು ಕಾಲ ಚಿತ್ರಹಿಂಸೆ ನೀಡಿತ್ತು ಎಂಬ ಆರೋಪವಿದೆ. ಪ್ರಜಾಸತ್ತಾತ್ಮಕ ಧ್ವನಿಗಳನ್ನು ಹತ್ತಿಕ್ಕಲು ನಡೆಸುತ್ತಿರುವ ವ್ಯವಸ್ಥಿತ ಸಂಚು ಎಂದು ಸಂಘಟನೆಯು ಈ ಘಟನೆಯನ್ನು ಪರಿಗಣಿಸಿದೆ.

ಸಿಎಎಸ್ಆರ್ ನಾಪತ್ತೆಯಾದ ವ್ಯಕ್ತಿಗಳ ವಿರುದ್ಧ ಈ ಹಿಂದೆ ನಡೆದ ಪೊಲೀಸ್ ಕ್ರಮಗಳು ಮತ್ತು ಅವರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳ ಆತಂಕಕಾರಿ ಇತಿಹಾಸವನ್ನು ಎತ್ತಿ ತೋರಿಸಿದೆ.

ಸಿಂಘು ಬಾರ್ಡರ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟಗಾರ್ತಿ ನೌದೀಪ್ ಕೌರ್ ಅವರೊಂದಿಗೆ ಬಂಧಿತರಾಗಿದ್ದ ಶಿವಕುಮಾರ್ ಅವರು, ಈ ಹಿಂದೆ ಕಸ್ಟಡಿಯಲ್ಲಿ ತೀವ್ರವಾದ ದೈಹಿಕ ಹಿಂಸೆಯನ್ನು ಅನುಭವಿಸಿದ್ದರು ಎಂಬುವುದಾಗಿ ವರದಿಯಾಗಿದೆ ಎಂದು ಸಿಎಎಸ್‌ಆರ್ ಹೇಳಿದೆ.

ಹೋರಾಟಗಾರರ ನಾಪತ್ತೆ ಕುರಿತು ಅಧಿಕಾರಿಗಳ ಮೇಲೆ ಹೊಣೆ ಹೊರಿಸಬೇಕು ಎಂದು ಸಿಎಎಸ್ಆರ್ ಒತ್ತಾಯಿಸಿದೆ. ಹತ್ತಾರು ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ಸಿವಿಲ್ ಸೊಸೈಟಿ ಸಂಘಟನೆಗಳನ್ನು ಪ್ರತಿನಿಧಿಸುವ ಈ ಒಕ್ಕೂಟವು, ನಾಪತ್ತೆಯಾಗಿರುವ ಎಲ್ಲಾ ಹತ್ತು ವ್ಯಕ್ತಿಗಳ ಇರುವಿಕೆಯ ಬಗ್ಗೆ ತಕ್ಷಣವೇ ಮಾಹಿತಿ ಬಹಿರಂಗಪಡಿಸಬೇಕೆಂದು ಪಟ್ಟು ಹಿಡಿದಿದೆ.

ಇದಲ್ಲದೆ, ಈ ಮಾನವ ಹಕ್ಕುಗಳ ಗುಂಪು ಬಂಧಿತರ ದೈಹಿಕ ಸುರಕ್ಷತೆಯ ಬಗ್ಗೆ ದೃಢವಾದ ಭರವಸೆ, ತಕ್ಷಣದ ಕಾನೂನು ನೆರವು ಮತ್ತು ಅವರ ಕುಟುಂಬಗಳೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸುತ್ತಿದೆ.

ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರ ವಿಶೇಷ ಘಟಕದ ಅಧಿಕಾರಿಗಳು 10 ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ವಿವಿಧ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ವಕೀಲ ಶಾರುಖ್ ಆಲಂ ಅವರು ಶನಿವಾರ (ಮಾ.14) ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ನಾಳೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಗ್ರಿಕಾ ರಾಜೋರಾ ಅವರ ಪರವಾಗಿ ವಕೀಲೆ ದೀಕ್ಷಾ ದ್ವಿವೇದಿ ಅವರು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಾರೆ, ಅರ್ಜಿಯಲ್ಲಿ ಸಗ್ರಿಕಾ ಅವರ ಸಹೋದರಿ ಲಕ್ಷಿತಾ ರಾಜೋರಾ ಅವರು, ತನ್ಮ ಸಹೋದರಿಯನ್ನು ತಕ್ಷಣ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಬಳಿಯ ವಿಜಯ್ ನಗರ ಪ್ರದೇಶದಿಂದ ಮಾರ್ಚ್ 13ರ ಸಂಜೆಯಿಂದ 22 ವರ್ಷದ ಸಗ್ರಿಕಾ ಕಾಣೆಯಾಗಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ಪ್ರಕಾರ, ಸಗ್ರಿಕಾ ಮಾರ್ಚ್ 13ರ ಸಂಜೆ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿಯ ವಿಜಯ್ ನಗರದಲ್ಲಿರುವ ವಿದ್ಯಾರ್ಥಿ ಸಂಘಟನೆಯ ಕಚೇರಿಗೆ ಹೋಗಿದ್ದರು. ನಂತರ ರಾತ್ರಿ 8 ಗಂಟೆಯಿಂದ ಅವರು ನಾಪತ್ತೆಯಾಗಿದ್ದಾರೆ ಮತ್ತು ಅವರ ಫೋನ್ ಸ್ವಿಚ್ ಆಫ್ ಆಗಿದೆ.

ಅದೇ ಸಮಯದಲ್ಲಿ ಅದೇ ಕಚೇರಿಯಲ್ಲಿದ್ದ ಇತರ ಹಲವಾರು ವ್ಯಕ್ತಿಗಳು ಕೂಡ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಸಹೋದರಿಯನ್ನು ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಅಕ್ರಮವಾಗಿ ಕರೆದೊಯ್ದಿರಬಹುದು ಎಂಬ ಗಂಭೀರ ಮತ್ತು ಆಧಾರಪೂರ್ಣ ಆತಂಕವನ್ನು ರಾಜೋರಾ ವ್ಯಕ್ತಪಡಿಸಿದ್ದಾರೆ ಎಂದು livelaw.in ಹೇಳಿದೆ.

ಗೌರವಯುತವಾದ ಬಂಧನ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸದೆ, ಎಂಟು ತಿಂಗಳ ಹಿಂದೆ ಇದೇ ದೆಹಲಿ ಪೊಲೀಸರ ವಿಶೇಷ ಘಟಕ ಸಗ್ರಿಕಾ ಮತ್ತು ಅವರ ಸಹೋದ್ಯೋಗಿಗಳನ್ನು ಒಂದು ವಾರಕ್ಕೂ ಹೆಚ್ಚು ಕಾಲ ಕಾನೂನುಬಾಹಿರ ಬಂಧನದಲ್ಲಿಟ್ಟು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...