Homeಮುಖಪುಟದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

- Advertisement -
- Advertisement -

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ.

ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ ಎಂದು ಆರೋಪಿಸಿ ಕ್ಯಾಂಪೇನ್ ಅಗೈನೆಸ್ಟ್ ಸ್ಟೇಟ್ ರಿಪ್ರೆಷನ್ (ಸಿಎಎಸ್‌ಆರ್‌) ತುರ್ತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ಪೊಲೀಸರು ಅಪಹರಿಸಿರುವ 10 ಜನರಲ್ಲಿ ಇಬ್ಬರು ಕಾರ್ಮಿಕ ಹಕ್ಕುಗಳ ಹೋರಾಟಗಾರರು, ಇಬ್ಬರು ಬಲವಂತದ ಸ್ಥಳಾಂತರ ವಿರೋಧಿ ಹೋರಾಟಗಾರರು ಮತ್ತು ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರಸ್ತುತ ಇವರೆಲ್ಲ ಎಲ್ಲಿದ್ದಾರೆ ಎಂಬ ಮಾಹಿತಿಯಿಲ್ಲ ಎಂದು ಸಿಎಎಸ್‌ಆರ್‌ ಹೇಳಿದೆ.

ಮಾರ್ಚ್ 12ರಿಂದ ಹೋರಾಟಗಾರರ ಅಪಹರಣ ಶುರುವಾಗಿದೆ. ಮೊದಲು ದೆಹಲಿ ವಿಶ್ವವಿದ್ಯಾಲಯದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಇಲಾಕಿಯಾ ಮತ್ತು ಕಾರ್ಮಿಕ ಹಕ್ಕುಗಳ ಹೋರಾಟಗಾರ ಶಿವಕುಮಾರ್ ಅವರನ್ನು ಸಿವಿಲ್ ಡ್ರೆಸ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಕರೆದೊಯ್ದಿದ್ದಾರೆ. ಇವರಿಬ್ಬರು ‘ಸಾಮ್ರಾಜ್ಯಶಾಹಿ ವಿರೋಧಿ ಸಪ್ತಾಹ’ದ ಚಟುವಟಿಕೆಗಳ ಬಗ್ಗೆ ಚರ್ಚಿಸಲು ದಯಾಳ್ ಸಿಂಗ್ ಕಾಲೇಜಿನ ಅಧ್ಯಾಪಕ ಸಚಿನ್ ಎನ್ ಅವರನ್ನು ಭೇಟಿ ಮಾಡಲು ಹೋಗಿದ್ದರು ಎಂದು ಸಿಎಎಸ್‌ಆರ್‌ ತಿಳಿಸಿದೆ.

ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಮಾರ್ಚ್ 12ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ದೆಹಲಿಯ ಜೆಎಲ್‌ಎನ್ ಮೆಟ್ರೋ ನಿಲ್ದಾಣದ ಸಮೀಪ, ಸಿವಿಲ್ ಡ್ರೆಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ವಿಐಪಿ ಲೈಟ್‌ಗಳಿದ್ದ ಸ್ಕಾರ್ಪಿಯೋ ವಾಹನಕ್ಕೆ ಇಲಾಕಿಯಾರನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಈ ವೇಳೆಗೆ ಕುಮಾರ್ ಅವರನ್ನು ವಾಹನದೊಳಗೆ ಕೂರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಇಲಾಕಿಯಾರ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಅವರಿಬ್ಬರೂ ತಮ್ಮ ಕುಟುಂಬದವರನ್ನಾಗಲಿ ಅಥವಾ ಸಹೋದ್ಯೋಗಿಗಳನ್ನಾಗಲಿ ಸಂಪರ್ಕಿಸಿಲ್ಲ ಎಂದು ಸಿಎಎಸ್‌ಆರ್‌ ವಿವರಿಸಿದೆ.

ಮಾರ್ಚ್ 13ರಂದು ಮತ್ತಷ್ಟು ಜನರನ್ನು ಬಂಧಿಸಲಾಗಿದೆ. ಮಜ್ದೂರ್ ಅಧಿಕಾರ್ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಹೋರಾಟಗಾರ ಮಂಜೀತ್ ಅವರು ಮನೆಗೆ ಹಿಂದಿರುಗುವಾಗ ನಾಪತ್ತೆಯಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ಬಿಡುಗಡೆಗೆ ಒತ್ತಾಯಿಸಿ ಸಿಎಎಸ್‌ಆರ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು ಎಂದಿದೆ.

ಮಾರ್ಚ್ 13ರಂದು ಸಂಜೆ ಸುಮಾರು 8:00 ಗಂಟೆಗೆ ವಿಜಯನಗರದಲ್ಲಿರುವ ಬಿಎಸ್‌ಸಿಇಎಂ ವಿದ್ಯಾರ್ಥಿ ಸಂಘಟನೆಯ ಕಚೇರಿಯಿಂದ ದೆಹಲಿ ಪೊಲೀಸರು ಇನ್ನೂ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಬಿಎಸ್‌ಸಿಇಎಂ ಸಂಘಟನೆಯ ಅಕ್ಷಯ್, ದೃಷ್ಟಿ, ರುದ್ರ, ಕಿರಣ್ ಮತ್ತು ಗೌರವ್ ವಶಕ್ಕೆ ಪಡೆದವರಲ್ಲಿ ಸೇರಿದ್ದಾರೆ. ಇವರೊಂದಿಗೆ ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣ ವಿರೋಧಿ ವೇದಿಕೆಯ (ಎಫ್‌ಎಸಿಎಎಂ) ಬಾದಲ್ ಮತ್ತು ಎಹ್ತೆಮಾಮ್ ಅವರನ್ನು ಸಹ ಕರೆದೊಯ್ಯಲಾಗಿದೆ.

ಕಳೆದ ವರ್ಷದ ಕೊನೆಯಲ್ಲಿ ದೆಹಲಿಯ ತೀವ್ರ ವಾಯು ಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯ ನಂತರ, ಈಗ ನಾಪತ್ತೆಯಾದವರಲ್ಲಿ ಕೆಲವರಾದ ಇಲಾಕಿಯಾ, ಕಿರಣ್ ಮತ್ತು ಅಕ್ಷಯ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳು ಕಳೆದಿದ್ದರು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ ಎಂದು ಸಿಎಎಸ್‌ಆರ್ ಹೇಳಿದೆ.

ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಎಹ್ತೆಮಾಮ್, ರುದ್ರ, ಬಾದಲ್ ಮತ್ತು ಗೌರವ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಅಪಹರಿಸಿ, ಒಂದು ವಾರಕ್ಕೂ ಹೆಚ್ಚು ಕಾಲ ಚಿತ್ರಹಿಂಸೆ ನೀಡಿತ್ತು ಎಂಬ ಆರೋಪವಿದೆ. ಪ್ರಜಾಸತ್ತಾತ್ಮಕ ಧ್ವನಿಗಳನ್ನು ಹತ್ತಿಕ್ಕಲು ನಡೆಸುತ್ತಿರುವ ವ್ಯವಸ್ಥಿತ ಸಂಚು ಎಂದು ಸಂಘಟನೆಯು ಈ ಘಟನೆಯನ್ನು ಪರಿಗಣಿಸಿದೆ.

ಸಿಎಎಸ್ಆರ್ ನಾಪತ್ತೆಯಾದ ವ್ಯಕ್ತಿಗಳ ವಿರುದ್ಧ ಈ ಹಿಂದೆ ನಡೆದ ಪೊಲೀಸ್ ಕ್ರಮಗಳು ಮತ್ತು ಅವರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳ ಆತಂಕಕಾರಿ ಇತಿಹಾಸವನ್ನು ಎತ್ತಿ ತೋರಿಸಿದೆ.

ಸಿಂಘು ಬಾರ್ಡರ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟಗಾರ್ತಿ ನೌದೀಪ್ ಕೌರ್ ಅವರೊಂದಿಗೆ ಬಂಧಿತರಾಗಿದ್ದ ಶಿವಕುಮಾರ್ ಅವರು, ಈ ಹಿಂದೆ ಕಸ್ಟಡಿಯಲ್ಲಿ ತೀವ್ರವಾದ ದೈಹಿಕ ಹಿಂಸೆಯನ್ನು ಅನುಭವಿಸಿದ್ದರು ಎಂಬುವುದಾಗಿ ವರದಿಯಾಗಿದೆ ಎಂದು ಸಿಎಎಸ್‌ಆರ್ ಹೇಳಿದೆ.

ಹೋರಾಟಗಾರರ ನಾಪತ್ತೆ ಕುರಿತು ಅಧಿಕಾರಿಗಳ ಮೇಲೆ ಹೊಣೆ ಹೊರಿಸಬೇಕು ಎಂದು ಸಿಎಎಸ್ಆರ್ ಒತ್ತಾಯಿಸಿದೆ. ಹತ್ತಾರು ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ಸಿವಿಲ್ ಸೊಸೈಟಿ ಸಂಘಟನೆಗಳನ್ನು ಪ್ರತಿನಿಧಿಸುವ ಈ ಒಕ್ಕೂಟವು, ನಾಪತ್ತೆಯಾಗಿರುವ ಎಲ್ಲಾ ಹತ್ತು ವ್ಯಕ್ತಿಗಳ ಇರುವಿಕೆಯ ಬಗ್ಗೆ ತಕ್ಷಣವೇ ಮಾಹಿತಿ ಬಹಿರಂಗಪಡಿಸಬೇಕೆಂದು ಪಟ್ಟು ಹಿಡಿದಿದೆ.

ಇದಲ್ಲದೆ, ಈ ಮಾನವ ಹಕ್ಕುಗಳ ಗುಂಪು ಬಂಧಿತರ ದೈಹಿಕ ಸುರಕ್ಷತೆಯ ಬಗ್ಗೆ ದೃಢವಾದ ಭರವಸೆ, ತಕ್ಷಣದ ಕಾನೂನು ನೆರವು ಮತ್ತು ಅವರ ಕುಟುಂಬಗಳೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸುತ್ತಿದೆ.

ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರ ವಿಶೇಷ ಘಟಕದ ಅಧಿಕಾರಿಗಳು 10 ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ವಿವಿಧ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ವಕೀಲ ಶಾರುಖ್ ಆಲಂ ಅವರು ಶನಿವಾರ (ಮಾ.14) ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ನಾಳೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಗ್ರಿಕಾ ರಾಜೋರಾ ಅವರ ಪರವಾಗಿ ವಕೀಲೆ ದೀಕ್ಷಾ ದ್ವಿವೇದಿ ಅವರು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಾರೆ, ಅರ್ಜಿಯಲ್ಲಿ ಸಗ್ರಿಕಾ ಅವರ ಸಹೋದರಿ ಲಕ್ಷಿತಾ ರಾಜೋರಾ ಅವರು, ತನ್ಮ ಸಹೋದರಿಯನ್ನು ತಕ್ಷಣ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಬಳಿಯ ವಿಜಯ್ ನಗರ ಪ್ರದೇಶದಿಂದ ಮಾರ್ಚ್ 13ರ ಸಂಜೆಯಿಂದ 22 ವರ್ಷದ ಸಗ್ರಿಕಾ ಕಾಣೆಯಾಗಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ಪ್ರಕಾರ, ಸಗ್ರಿಕಾ ಮಾರ್ಚ್ 13ರ ಸಂಜೆ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿಯ ವಿಜಯ್ ನಗರದಲ್ಲಿರುವ ವಿದ್ಯಾರ್ಥಿ ಸಂಘಟನೆಯ ಕಚೇರಿಗೆ ಹೋಗಿದ್ದರು. ನಂತರ ರಾತ್ರಿ 8 ಗಂಟೆಯಿಂದ ಅವರು ನಾಪತ್ತೆಯಾಗಿದ್ದಾರೆ ಮತ್ತು ಅವರ ಫೋನ್ ಸ್ವಿಚ್ ಆಫ್ ಆಗಿದೆ.

ಅದೇ ಸಮಯದಲ್ಲಿ ಅದೇ ಕಚೇರಿಯಲ್ಲಿದ್ದ ಇತರ ಹಲವಾರು ವ್ಯಕ್ತಿಗಳು ಕೂಡ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಸಹೋದರಿಯನ್ನು ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಅಕ್ರಮವಾಗಿ ಕರೆದೊಯ್ದಿರಬಹುದು ಎಂಬ ಗಂಭೀರ ಮತ್ತು ಆಧಾರಪೂರ್ಣ ಆತಂಕವನ್ನು ರಾಜೋರಾ ವ್ಯಕ್ತಪಡಿಸಿದ್ದಾರೆ ಎಂದು livelaw.in ಹೇಳಿದೆ.

ಗೌರವಯುತವಾದ ಬಂಧನ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸದೆ, ಎಂಟು ತಿಂಗಳ ಹಿಂದೆ ಇದೇ ದೆಹಲಿ ಪೊಲೀಸರ ವಿಶೇಷ ಘಟಕ ಸಗ್ರಿಕಾ ಮತ್ತು ಅವರ ಸಹೋದ್ಯೋಗಿಗಳನ್ನು ಒಂದು ವಾರಕ್ಕೂ ಹೆಚ್ಚು ಕಾಲ ಕಾನೂನುಬಾಹಿರ ಬಂಧನದಲ್ಲಿಟ್ಟು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...