Homeಮುಖಪುಟದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

- Advertisement -
- Advertisement -

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ.

ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ ಎಂದು ಆರೋಪಿಸಿ ಕ್ಯಾಂಪೇನ್ ಅಗೈನೆಸ್ಟ್ ಸ್ಟೇಟ್ ರಿಪ್ರೆಷನ್ (ಸಿಎಎಸ್‌ಆರ್‌) ತುರ್ತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ಪೊಲೀಸರು ಅಪಹರಿಸಿರುವ 10 ಜನರಲ್ಲಿ ಇಬ್ಬರು ಕಾರ್ಮಿಕ ಹಕ್ಕುಗಳ ಹೋರಾಟಗಾರರು, ಇಬ್ಬರು ಬಲವಂತದ ಸ್ಥಳಾಂತರ ವಿರೋಧಿ ಹೋರಾಟಗಾರರು ಮತ್ತು ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರಸ್ತುತ ಇವರೆಲ್ಲ ಎಲ್ಲಿದ್ದಾರೆ ಎಂಬ ಮಾಹಿತಿಯಿಲ್ಲ ಎಂದು ಸಿಎಎಸ್‌ಆರ್‌ ಹೇಳಿದೆ.

ಮಾರ್ಚ್ 12ರಿಂದ ಹೋರಾಟಗಾರರ ಅಪಹರಣ ಶುರುವಾಗಿದೆ. ಮೊದಲು ದೆಹಲಿ ವಿಶ್ವವಿದ್ಯಾಲಯದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಇಲಾಕಿಯಾ ಮತ್ತು ಕಾರ್ಮಿಕ ಹಕ್ಕುಗಳ ಹೋರಾಟಗಾರ ಶಿವಕುಮಾರ್ ಅವರನ್ನು ಸಿವಿಲ್ ಡ್ರೆಸ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಕರೆದೊಯ್ದಿದ್ದಾರೆ. ಇವರಿಬ್ಬರು ‘ಸಾಮ್ರಾಜ್ಯಶಾಹಿ ವಿರೋಧಿ ಸಪ್ತಾಹ’ದ ಚಟುವಟಿಕೆಗಳ ಬಗ್ಗೆ ಚರ್ಚಿಸಲು ದಯಾಳ್ ಸಿಂಗ್ ಕಾಲೇಜಿನ ಅಧ್ಯಾಪಕ ಸಚಿನ್ ಎನ್ ಅವರನ್ನು ಭೇಟಿ ಮಾಡಲು ಹೋಗಿದ್ದರು ಎಂದು ಸಿಎಎಸ್‌ಆರ್‌ ತಿಳಿಸಿದೆ.

ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಮಾರ್ಚ್ 12ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ದೆಹಲಿಯ ಜೆಎಲ್‌ಎನ್ ಮೆಟ್ರೋ ನಿಲ್ದಾಣದ ಸಮೀಪ, ಸಿವಿಲ್ ಡ್ರೆಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ವಿಐಪಿ ಲೈಟ್‌ಗಳಿದ್ದ ಸ್ಕಾರ್ಪಿಯೋ ವಾಹನಕ್ಕೆ ಇಲಾಕಿಯಾರನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಈ ವೇಳೆಗೆ ಕುಮಾರ್ ಅವರನ್ನು ವಾಹನದೊಳಗೆ ಕೂರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಇಲಾಕಿಯಾರ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಅವರಿಬ್ಬರೂ ತಮ್ಮ ಕುಟುಂಬದವರನ್ನಾಗಲಿ ಅಥವಾ ಸಹೋದ್ಯೋಗಿಗಳನ್ನಾಗಲಿ ಸಂಪರ್ಕಿಸಿಲ್ಲ ಎಂದು ಸಿಎಎಸ್‌ಆರ್‌ ವಿವರಿಸಿದೆ.

ಮಾರ್ಚ್ 13ರಂದು ಮತ್ತಷ್ಟು ಜನರನ್ನು ಬಂಧಿಸಲಾಗಿದೆ. ಮಜ್ದೂರ್ ಅಧಿಕಾರ್ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಹೋರಾಟಗಾರ ಮಂಜೀತ್ ಅವರು ಮನೆಗೆ ಹಿಂದಿರುಗುವಾಗ ನಾಪತ್ತೆಯಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ಬಿಡುಗಡೆಗೆ ಒತ್ತಾಯಿಸಿ ಸಿಎಎಸ್‌ಆರ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು ಎಂದಿದೆ.

ಮಾರ್ಚ್ 13ರಂದು ಸಂಜೆ ಸುಮಾರು 8:00 ಗಂಟೆಗೆ ವಿಜಯನಗರದಲ್ಲಿರುವ ಬಿಎಸ್‌ಸಿಇಎಂ ವಿದ್ಯಾರ್ಥಿ ಸಂಘಟನೆಯ ಕಚೇರಿಯಿಂದ ದೆಹಲಿ ಪೊಲೀಸರು ಇನ್ನೂ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಬಿಎಸ್‌ಸಿಇಎಂ ಸಂಘಟನೆಯ ಅಕ್ಷಯ್, ದೃಷ್ಟಿ, ರುದ್ರ, ಕಿರಣ್ ಮತ್ತು ಗೌರವ್ ವಶಕ್ಕೆ ಪಡೆದವರಲ್ಲಿ ಸೇರಿದ್ದಾರೆ. ಇವರೊಂದಿಗೆ ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣ ವಿರೋಧಿ ವೇದಿಕೆಯ (ಎಫ್‌ಎಸಿಎಎಂ) ಬಾದಲ್ ಮತ್ತು ಎಹ್ತೆಮಾಮ್ ಅವರನ್ನು ಸಹ ಕರೆದೊಯ್ಯಲಾಗಿದೆ.

ಕಳೆದ ವರ್ಷದ ಕೊನೆಯಲ್ಲಿ ದೆಹಲಿಯ ತೀವ್ರ ವಾಯು ಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯ ನಂತರ, ಈಗ ನಾಪತ್ತೆಯಾದವರಲ್ಲಿ ಕೆಲವರಾದ ಇಲಾಕಿಯಾ, ಕಿರಣ್ ಮತ್ತು ಅಕ್ಷಯ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳು ಕಳೆದಿದ್ದರು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ ಎಂದು ಸಿಎಎಸ್‌ಆರ್ ಹೇಳಿದೆ.

ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಎಹ್ತೆಮಾಮ್, ರುದ್ರ, ಬಾದಲ್ ಮತ್ತು ಗೌರವ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಅಪಹರಿಸಿ, ಒಂದು ವಾರಕ್ಕೂ ಹೆಚ್ಚು ಕಾಲ ಚಿತ್ರಹಿಂಸೆ ನೀಡಿತ್ತು ಎಂಬ ಆರೋಪವಿದೆ. ಪ್ರಜಾಸತ್ತಾತ್ಮಕ ಧ್ವನಿಗಳನ್ನು ಹತ್ತಿಕ್ಕಲು ನಡೆಸುತ್ತಿರುವ ವ್ಯವಸ್ಥಿತ ಸಂಚು ಎಂದು ಸಂಘಟನೆಯು ಈ ಘಟನೆಯನ್ನು ಪರಿಗಣಿಸಿದೆ.

ಸಿಎಎಸ್ಆರ್ ನಾಪತ್ತೆಯಾದ ವ್ಯಕ್ತಿಗಳ ವಿರುದ್ಧ ಈ ಹಿಂದೆ ನಡೆದ ಪೊಲೀಸ್ ಕ್ರಮಗಳು ಮತ್ತು ಅವರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳ ಆತಂಕಕಾರಿ ಇತಿಹಾಸವನ್ನು ಎತ್ತಿ ತೋರಿಸಿದೆ.

ಸಿಂಘು ಬಾರ್ಡರ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟಗಾರ್ತಿ ನೌದೀಪ್ ಕೌರ್ ಅವರೊಂದಿಗೆ ಬಂಧಿತರಾಗಿದ್ದ ಶಿವಕುಮಾರ್ ಅವರು, ಈ ಹಿಂದೆ ಕಸ್ಟಡಿಯಲ್ಲಿ ತೀವ್ರವಾದ ದೈಹಿಕ ಹಿಂಸೆಯನ್ನು ಅನುಭವಿಸಿದ್ದರು ಎಂಬುವುದಾಗಿ ವರದಿಯಾಗಿದೆ ಎಂದು ಸಿಎಎಸ್‌ಆರ್ ಹೇಳಿದೆ.

ಹೋರಾಟಗಾರರ ನಾಪತ್ತೆ ಕುರಿತು ಅಧಿಕಾರಿಗಳ ಮೇಲೆ ಹೊಣೆ ಹೊರಿಸಬೇಕು ಎಂದು ಸಿಎಎಸ್ಆರ್ ಒತ್ತಾಯಿಸಿದೆ. ಹತ್ತಾರು ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ಸಿವಿಲ್ ಸೊಸೈಟಿ ಸಂಘಟನೆಗಳನ್ನು ಪ್ರತಿನಿಧಿಸುವ ಈ ಒಕ್ಕೂಟವು, ನಾಪತ್ತೆಯಾಗಿರುವ ಎಲ್ಲಾ ಹತ್ತು ವ್ಯಕ್ತಿಗಳ ಇರುವಿಕೆಯ ಬಗ್ಗೆ ತಕ್ಷಣವೇ ಮಾಹಿತಿ ಬಹಿರಂಗಪಡಿಸಬೇಕೆಂದು ಪಟ್ಟು ಹಿಡಿದಿದೆ.

ಇದಲ್ಲದೆ, ಈ ಮಾನವ ಹಕ್ಕುಗಳ ಗುಂಪು ಬಂಧಿತರ ದೈಹಿಕ ಸುರಕ್ಷತೆಯ ಬಗ್ಗೆ ದೃಢವಾದ ಭರವಸೆ, ತಕ್ಷಣದ ಕಾನೂನು ನೆರವು ಮತ್ತು ಅವರ ಕುಟುಂಬಗಳೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸುತ್ತಿದೆ.

ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರ ವಿಶೇಷ ಘಟಕದ ಅಧಿಕಾರಿಗಳು 10 ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ವಿವಿಧ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ವಕೀಲ ಶಾರುಖ್ ಆಲಂ ಅವರು ಶನಿವಾರ (ಮಾ.14) ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ನಾಳೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಗ್ರಿಕಾ ರಾಜೋರಾ ಅವರ ಪರವಾಗಿ ವಕೀಲೆ ದೀಕ್ಷಾ ದ್ವಿವೇದಿ ಅವರು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಾರೆ, ಅರ್ಜಿಯಲ್ಲಿ ಸಗ್ರಿಕಾ ಅವರ ಸಹೋದರಿ ಲಕ್ಷಿತಾ ರಾಜೋರಾ ಅವರು, ತನ್ಮ ಸಹೋದರಿಯನ್ನು ತಕ್ಷಣ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಬಳಿಯ ವಿಜಯ್ ನಗರ ಪ್ರದೇಶದಿಂದ ಮಾರ್ಚ್ 13ರ ಸಂಜೆಯಿಂದ 22 ವರ್ಷದ ಸಗ್ರಿಕಾ ಕಾಣೆಯಾಗಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ಪ್ರಕಾರ, ಸಗ್ರಿಕಾ ಮಾರ್ಚ್ 13ರ ಸಂಜೆ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿಯ ವಿಜಯ್ ನಗರದಲ್ಲಿರುವ ವಿದ್ಯಾರ್ಥಿ ಸಂಘಟನೆಯ ಕಚೇರಿಗೆ ಹೋಗಿದ್ದರು. ನಂತರ ರಾತ್ರಿ 8 ಗಂಟೆಯಿಂದ ಅವರು ನಾಪತ್ತೆಯಾಗಿದ್ದಾರೆ ಮತ್ತು ಅವರ ಫೋನ್ ಸ್ವಿಚ್ ಆಫ್ ಆಗಿದೆ.

ಅದೇ ಸಮಯದಲ್ಲಿ ಅದೇ ಕಚೇರಿಯಲ್ಲಿದ್ದ ಇತರ ಹಲವಾರು ವ್ಯಕ್ತಿಗಳು ಕೂಡ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಸಹೋದರಿಯನ್ನು ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಅಕ್ರಮವಾಗಿ ಕರೆದೊಯ್ದಿರಬಹುದು ಎಂಬ ಗಂಭೀರ ಮತ್ತು ಆಧಾರಪೂರ್ಣ ಆತಂಕವನ್ನು ರಾಜೋರಾ ವ್ಯಕ್ತಪಡಿಸಿದ್ದಾರೆ ಎಂದು livelaw.in ಹೇಳಿದೆ.

ಗೌರವಯುತವಾದ ಬಂಧನ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸದೆ, ಎಂಟು ತಿಂಗಳ ಹಿಂದೆ ಇದೇ ದೆಹಲಿ ಪೊಲೀಸರ ವಿಶೇಷ ಘಟಕ ಸಗ್ರಿಕಾ ಮತ್ತು ಅವರ ಸಹೋದ್ಯೋಗಿಗಳನ್ನು ಒಂದು ವಾರಕ್ಕೂ ಹೆಚ್ಚು ಕಾಲ ಕಾನೂನುಬಾಹಿರ ಬಂಧನದಲ್ಲಿಟ್ಟು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...