Homeಮುಖಪುಟದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

- Advertisement -
- Advertisement -

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ.

ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ ಎಂದು ಆರೋಪಿಸಿ ಕ್ಯಾಂಪೇನ್ ಅಗೈನೆಸ್ಟ್ ಸ್ಟೇಟ್ ರಿಪ್ರೆಷನ್ (ಸಿಎಎಸ್‌ಆರ್‌) ತುರ್ತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ.

ಪೊಲೀಸರು ಅಪಹರಿಸಿರುವ 10 ಜನರಲ್ಲಿ ಇಬ್ಬರು ಕಾರ್ಮಿಕ ಹಕ್ಕುಗಳ ಹೋರಾಟಗಾರರು, ಇಬ್ಬರು ಬಲವಂತದ ಸ್ಥಳಾಂತರ ವಿರೋಧಿ ಹೋರಾಟಗಾರರು ಮತ್ತು ಆರು ಮಂದಿ ವಿದ್ಯಾರ್ಥಿಗಳು ಸೇರಿದ್ದಾರೆ. ಪ್ರಸ್ತುತ ಇವರೆಲ್ಲ ಎಲ್ಲಿದ್ದಾರೆ ಎಂಬ ಮಾಹಿತಿಯಿಲ್ಲ ಎಂದು ಸಿಎಎಸ್‌ಆರ್‌ ಹೇಳಿದೆ.

ಮಾರ್ಚ್ 12ರಿಂದ ಹೋರಾಟಗಾರರ ಅಪಹರಣ ಶುರುವಾಗಿದೆ. ಮೊದಲು ದೆಹಲಿ ವಿಶ್ವವಿದ್ಯಾಲಯದ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಇಲಾಕಿಯಾ ಮತ್ತು ಕಾರ್ಮಿಕ ಹಕ್ಕುಗಳ ಹೋರಾಟಗಾರ ಶಿವಕುಮಾರ್ ಅವರನ್ನು ಸಿವಿಲ್ ಡ್ರೆಸ್‌ನಲ್ಲಿದ್ದ ಅಪರಿಚಿತ ವ್ಯಕ್ತಿಗಳು ಕರೆದೊಯ್ದಿದ್ದಾರೆ. ಇವರಿಬ್ಬರು ‘ಸಾಮ್ರಾಜ್ಯಶಾಹಿ ವಿರೋಧಿ ಸಪ್ತಾಹ’ದ ಚಟುವಟಿಕೆಗಳ ಬಗ್ಗೆ ಚರ್ಚಿಸಲು ದಯಾಳ್ ಸಿಂಗ್ ಕಾಲೇಜಿನ ಅಧ್ಯಾಪಕ ಸಚಿನ್ ಎನ್ ಅವರನ್ನು ಭೇಟಿ ಮಾಡಲು ಹೋಗಿದ್ದರು ಎಂದು ಸಿಎಎಸ್‌ಆರ್‌ ತಿಳಿಸಿದೆ.

ಸ್ಥಳೀಯ ವ್ಯಾಪಾರಿಗಳ ಪ್ರಕಾರ, ಮಾರ್ಚ್ 12ರಂದು ಮಧ್ಯಾಹ್ನ ಸುಮಾರು 1:00 ಗಂಟೆಗೆ ದೆಹಲಿಯ ಜೆಎಲ್‌ಎನ್ ಮೆಟ್ರೋ ನಿಲ್ದಾಣದ ಸಮೀಪ, ಸಿವಿಲ್ ಡ್ರೆಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯೊಬ್ಬರು ವಿಐಪಿ ಲೈಟ್‌ಗಳಿದ್ದ ಸ್ಕಾರ್ಪಿಯೋ ವಾಹನಕ್ಕೆ ಇಲಾಕಿಯಾರನ್ನು ಬಲವಂತವಾಗಿ ಎಳೆದೊಯ್ದಿದ್ದಾರೆ. ಈ ವೇಳೆಗೆ ಕುಮಾರ್ ಅವರನ್ನು ವಾಹನದೊಳಗೆ ಕೂರಿಸಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮಧ್ಯಾಹ್ನ 1:30 ರ ಸುಮಾರಿಗೆ ಇಲಾಕಿಯಾರ ಫೋನ್ ಸ್ವಿಚ್ ಆಫ್ ಆಗಿದ್ದು, ಅಂದಿನಿಂದ ಅವರಿಬ್ಬರೂ ತಮ್ಮ ಕುಟುಂಬದವರನ್ನಾಗಲಿ ಅಥವಾ ಸಹೋದ್ಯೋಗಿಗಳನ್ನಾಗಲಿ ಸಂಪರ್ಕಿಸಿಲ್ಲ ಎಂದು ಸಿಎಎಸ್‌ಆರ್‌ ವಿವರಿಸಿದೆ.

ಮಾರ್ಚ್ 13ರಂದು ಮತ್ತಷ್ಟು ಜನರನ್ನು ಬಂಧಿಸಲಾಗಿದೆ. ಮಜ್ದೂರ್ ಅಧಿಕಾರ್ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಹೋರಾಟಗಾರ ಮಂಜೀತ್ ಅವರು ಮನೆಗೆ ಹಿಂದಿರುಗುವಾಗ ನಾಪತ್ತೆಯಾಗಿದ್ದಾರೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ವಕೀಲ ಸುರೇಂದ್ರ ಗಾಡ್ಲಿಂಗ್ ಅವರ ಬಿಡುಗಡೆಗೆ ಒತ್ತಾಯಿಸಿ ಸಿಎಎಸ್‌ಆರ್‌ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಿದ್ದರು ಎಂದಿದೆ.

ಮಾರ್ಚ್ 13ರಂದು ಸಂಜೆ ಸುಮಾರು 8:00 ಗಂಟೆಗೆ ವಿಜಯನಗರದಲ್ಲಿರುವ ಬಿಎಸ್‌ಸಿಇಎಂ ವಿದ್ಯಾರ್ಥಿ ಸಂಘಟನೆಯ ಕಚೇರಿಯಿಂದ ದೆಹಲಿ ಪೊಲೀಸರು ಇನ್ನೂ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ. ಬಿಎಸ್‌ಸಿಇಎಂ ಸಂಘಟನೆಯ ಅಕ್ಷಯ್, ದೃಷ್ಟಿ, ರುದ್ರ, ಕಿರಣ್ ಮತ್ತು ಗೌರವ್ ವಶಕ್ಕೆ ಪಡೆದವರಲ್ಲಿ ಸೇರಿದ್ದಾರೆ. ಇವರೊಂದಿಗೆ ಕಾರ್ಪೊರೇಟೀಕರಣ ಮತ್ತು ಮಿಲಿಟರೀಕರಣ ವಿರೋಧಿ ವೇದಿಕೆಯ (ಎಫ್‌ಎಸಿಎಎಂ) ಬಾದಲ್ ಮತ್ತು ಎಹ್ತೆಮಾಮ್ ಅವರನ್ನು ಸಹ ಕರೆದೊಯ್ಯಲಾಗಿದೆ.

ಕಳೆದ ವರ್ಷದ ಕೊನೆಯಲ್ಲಿ ದೆಹಲಿಯ ತೀವ್ರ ವಾಯು ಮಾಲಿನ್ಯದ ವಿರುದ್ಧ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯ ನಂತರ, ಈಗ ನಾಪತ್ತೆಯಾದವರಲ್ಲಿ ಕೆಲವರಾದ ಇಲಾಕಿಯಾ, ಕಿರಣ್ ಮತ್ತು ಅಕ್ಷಯ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳು ಕಳೆದಿದ್ದರು ಎಂಬುವುದು ಇಲ್ಲಿ ಗಮನಾರ್ಹ ಸಂಗತಿ ಎಂದು ಸಿಎಎಸ್‌ಆರ್ ಹೇಳಿದೆ.

ಕೇವಲ ಎಂಟು ತಿಂಗಳ ಹಿಂದೆಯಷ್ಟೇ ಎಹ್ತೆಮಾಮ್, ರುದ್ರ, ಬಾದಲ್ ಮತ್ತು ಗೌರವ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕವು ಅಪಹರಿಸಿ, ಒಂದು ವಾರಕ್ಕೂ ಹೆಚ್ಚು ಕಾಲ ಚಿತ್ರಹಿಂಸೆ ನೀಡಿತ್ತು ಎಂಬ ಆರೋಪವಿದೆ. ಪ್ರಜಾಸತ್ತಾತ್ಮಕ ಧ್ವನಿಗಳನ್ನು ಹತ್ತಿಕ್ಕಲು ನಡೆಸುತ್ತಿರುವ ವ್ಯವಸ್ಥಿತ ಸಂಚು ಎಂದು ಸಂಘಟನೆಯು ಈ ಘಟನೆಯನ್ನು ಪರಿಗಣಿಸಿದೆ.

ಸಿಎಎಸ್ಆರ್ ನಾಪತ್ತೆಯಾದ ವ್ಯಕ್ತಿಗಳ ವಿರುದ್ಧ ಈ ಹಿಂದೆ ನಡೆದ ಪೊಲೀಸ್ ಕ್ರಮಗಳು ಮತ್ತು ಅವರ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯಗಳ ಆತಂಕಕಾರಿ ಇತಿಹಾಸವನ್ನು ಎತ್ತಿ ತೋರಿಸಿದೆ.

ಸಿಂಘು ಬಾರ್ಡರ್ ರೈತ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟಗಾರ್ತಿ ನೌದೀಪ್ ಕೌರ್ ಅವರೊಂದಿಗೆ ಬಂಧಿತರಾಗಿದ್ದ ಶಿವಕುಮಾರ್ ಅವರು, ಈ ಹಿಂದೆ ಕಸ್ಟಡಿಯಲ್ಲಿ ತೀವ್ರವಾದ ದೈಹಿಕ ಹಿಂಸೆಯನ್ನು ಅನುಭವಿಸಿದ್ದರು ಎಂಬುವುದಾಗಿ ವರದಿಯಾಗಿದೆ ಎಂದು ಸಿಎಎಸ್‌ಆರ್ ಹೇಳಿದೆ.

ಹೋರಾಟಗಾರರ ನಾಪತ್ತೆ ಕುರಿತು ಅಧಿಕಾರಿಗಳ ಮೇಲೆ ಹೊಣೆ ಹೊರಿಸಬೇಕು ಎಂದು ಸಿಎಎಸ್ಆರ್ ಒತ್ತಾಯಿಸಿದೆ. ಹತ್ತಾರು ಕಾರ್ಮಿಕ ಸಂಘಟನೆಗಳು, ವಿದ್ಯಾರ್ಥಿ ಗುಂಪುಗಳು ಮತ್ತು ಸಿವಿಲ್ ಸೊಸೈಟಿ ಸಂಘಟನೆಗಳನ್ನು ಪ್ರತಿನಿಧಿಸುವ ಈ ಒಕ್ಕೂಟವು, ನಾಪತ್ತೆಯಾಗಿರುವ ಎಲ್ಲಾ ಹತ್ತು ವ್ಯಕ್ತಿಗಳ ಇರುವಿಕೆಯ ಬಗ್ಗೆ ತಕ್ಷಣವೇ ಮಾಹಿತಿ ಬಹಿರಂಗಪಡಿಸಬೇಕೆಂದು ಪಟ್ಟು ಹಿಡಿದಿದೆ.

ಇದಲ್ಲದೆ, ಈ ಮಾನವ ಹಕ್ಕುಗಳ ಗುಂಪು ಬಂಧಿತರ ದೈಹಿಕ ಸುರಕ್ಷತೆಯ ಬಗ್ಗೆ ದೃಢವಾದ ಭರವಸೆ, ತಕ್ಷಣದ ಕಾನೂನು ನೆರವು ಮತ್ತು ಅವರ ಕುಟುಂಬಗಳೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸುತ್ತಿದೆ.

ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ದೆಹಲಿ ಪೊಲೀಸರ ವಿಶೇಷ ಘಟಕದ ಅಧಿಕಾರಿಗಳು 10 ಹೋರಾಟಗಾರರನ್ನು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ವಿವಿಧ ಹೇಬಿಯಸ್ ಕಾರ್ಪಸ್ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು livelaw.in ವರದಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತೇಜಸ್ ಕರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ವಕೀಲ ಶಾರುಖ್ ಆಲಂ ಅವರು ಶನಿವಾರ (ಮಾ.14) ಈ ವಿಷಯವನ್ನು ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ನಾಳೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಸಗ್ರಿಕಾ ರಾಜೋರಾ ಅವರ ಪರವಾಗಿ ವಕೀಲೆ ದೀಕ್ಷಾ ದ್ವಿವೇದಿ ಅವರು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸಲ್ಲಿಸಿದ್ದಾರೆ, ಅರ್ಜಿಯಲ್ಲಿ ಸಗ್ರಿಕಾ ಅವರ ಸಹೋದರಿ ಲಕ್ಷಿತಾ ರಾಜೋರಾ ಅವರು, ತನ್ಮ ಸಹೋದರಿಯನ್ನು ತಕ್ಷಣ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸರ್ಕಾರ ಮತ್ತು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಬಳಿಯ ವಿಜಯ್ ನಗರ ಪ್ರದೇಶದಿಂದ ಮಾರ್ಚ್ 13ರ ಸಂಜೆಯಿಂದ 22 ವರ್ಷದ ಸಗ್ರಿಕಾ ಕಾಣೆಯಾಗಿದ್ದಾರೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಅರ್ಜಿಯ ಪ್ರಕಾರ, ಸಗ್ರಿಕಾ ಮಾರ್ಚ್ 13ರ ಸಂಜೆ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್ ಬಳಿಯ ವಿಜಯ್ ನಗರದಲ್ಲಿರುವ ವಿದ್ಯಾರ್ಥಿ ಸಂಘಟನೆಯ ಕಚೇರಿಗೆ ಹೋಗಿದ್ದರು. ನಂತರ ರಾತ್ರಿ 8 ಗಂಟೆಯಿಂದ ಅವರು ನಾಪತ್ತೆಯಾಗಿದ್ದಾರೆ ಮತ್ತು ಅವರ ಫೋನ್ ಸ್ವಿಚ್ ಆಫ್ ಆಗಿದೆ.

ಅದೇ ಸಮಯದಲ್ಲಿ ಅದೇ ಕಚೇರಿಯಲ್ಲಿದ್ದ ಇತರ ಹಲವಾರು ವ್ಯಕ್ತಿಗಳು ಕೂಡ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ತನ್ನ ಸಹೋದರಿಯನ್ನು ದೆಹಲಿ ಪೊಲೀಸ್ ವಿಶೇಷ ದಳದ ಅಧಿಕಾರಿಗಳು ಅಕ್ರಮವಾಗಿ ಕರೆದೊಯ್ದಿರಬಹುದು ಎಂಬ ಗಂಭೀರ ಮತ್ತು ಆಧಾರಪೂರ್ಣ ಆತಂಕವನ್ನು ರಾಜೋರಾ ವ್ಯಕ್ತಪಡಿಸಿದ್ದಾರೆ ಎಂದು livelaw.in ಹೇಳಿದೆ.

ಗೌರವಯುತವಾದ ಬಂಧನ ಅಥವಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸದೆ, ಎಂಟು ತಿಂಗಳ ಹಿಂದೆ ಇದೇ ದೆಹಲಿ ಪೊಲೀಸರ ವಿಶೇಷ ಘಟಕ ಸಗ್ರಿಕಾ ಮತ್ತು ಅವರ ಸಹೋದ್ಯೋಗಿಗಳನ್ನು ಒಂದು ವಾರಕ್ಕೂ ಹೆಚ್ಚು ಕಾಲ ಕಾನೂನುಬಾಹಿರ ಬಂಧನದಲ್ಲಿಟ್ಟು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿತ್ತು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...