HomeಮುಖಪುಟICMR ಡೇಟಾ ಸೋರಿಕೆ ಪ್ರಕರಣ: ನಾಲ್ವರ ಬಂಧನ

ICMR ಡೇಟಾ ಸೋರಿಕೆ ಪ್ರಕರಣ: ನಾಲ್ವರ ಬಂಧನ

- Advertisement -
- Advertisement -

ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಅರ್) ನ ಡೇಟಾ ಬ್ಯಾಂಕ್‌ನಿಂದ 81 ಕೋಟಿ ಭಾರತೀಯರ ವೈಯಕ್ತಿಕ ಮಾಹಿತಿಯನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟಕ್ಕೆ ಇಡಲಾಗಿದೆ.

ಈ ಪ್ರಕರಣ ನಡೆದು ಎರಡು ತಿಂಗಳ ಬಳಿಕ ಮೂರು ರಾಜ್ಯಗಳಲ್ಲಿ ನಾಲ್ವರನ್ನು ಸೋಮವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಮಾಹಿತಿ ಲಭ್ಯವಾಗಬೇಕಿದೆ.

ಐಸಿಎಂಆರ್ ಮಾತ್ರವಲ್ಲದೆ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ಮತ್ತು ಗಣಕೀಕೃತ ರಾಷ್ಟ್ರೀಯ ಗುರುತಿನ ಚೀಟಿ (ಸಿಎನ್‌ಐಸಿ) ಡೇಟಾವನ್ನು ಕೂಡ ಕದ್ದಿರುವುದಾಗಿ ಬಂಧಿತರು ವಿಚಾರಣೆ ವೇಳೆ ಹೇಳಿದ್ದಾಗಿ ತಿಳಿದು ಬಂದಿದೆ.

ಆಧಾರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ಮಾಹಿತಿಗಳನ್ನು ಒಳಗೊಂಡ ಮಹತ್ವದ ಡೇಟಾವನ್ನು ಡಾರ್ಕ್ ವೆಬ್ ನಲ್ಲಿ ಮಾರಾಟಕ್ಕಿಟ್ಟಿರುವುದು ಕಳೆದ ಅಕ್ಟೋಬರ್‌ನಲ್ಲಿ ಪೊಲೀಸರ ಗಮನಕ್ಕೆ ಬಂದಿತ್ತು.

ಎಕ್ಸ್ ಹ್ಯಾಂಡಲ್ ಒಂದರಲ್ಲಿ ಡೇಟಾವನ್ನು ಬಹಿರಂಗವಾಗಿ ಮಾರಾಟಕ್ಕೆ ಇಡಲಾಗಿತ್ತು. ಕೋವಿಡ್ ಸಮಯದಲ್ಲಿ ಐಸಿಎಂಆರ್ ಮತ್ತು ಇತರ ಸಂಸ್ಥೆಗಳ ಡೇಟಾ ಬ್ಯಾಂಕ್‌ನಿಂದ ಆರೋಪಿಗಳು ಡೇಟಾ ಕದ್ದಿದ್ದಾರೆ ಎನ್ನಲಾಗಿದೆ. ಈ ಕುರಿತು ಸೈಬರ್ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಶೀಘ್ರ ತನಿಖೆಗೆ ಆಗ್ರಹಿಸಿದ್ದರು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, “ಐಸಿಎಂಆರ್ ಡೇಟಾ ಲೀಕ್ ಆಗಿರೋದು ನಿಜ. ಆದರೆ, ಮಾರಾಟವಾಗಿಲ್ಲ” ಎಂದಿದ್ದರು.

ದೆಹಲಿ ಪೊಲೀಸರು ಈ ಕುರಿತು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಇದೀಗ ಮೂವರನ್ನು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣ ಮತ್ತೊಂದು ಮಜಲು ಪ್ರವೇಶಿಸಿದೆ.

ಐಸಿಎಂಆರ್ ಡೇಟಾ ಮಾರಾಟಕ್ಕಿಟ್ಟ ವಿಚಾರ ಬೆಳಕಿಗೆ ಬಂದಾಗ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಸಾಕೇತ್ ಗೋಖಲೆ ಈ ಕುರಿತು ಕೇಂದ್ರದಿಂದ ಮಾಹಿತಿ ಕೇಳಿದ್ದರು. ಆಗ ಕೇಂದ್ರ ಸರ್ಕಾರ ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದಿತ್ತು.

ಆದರೆ, ನಿನ್ನೆ ಆರೋಪಿಗಳ ಬಂಧನವಾಗುತ್ತಿದ್ದಂತೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಧಾರ್ ಮಾಹಿತಿಯ ಭದ್ರತೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ತಪ್ಪು ಮಾಹಿತಿ ನೀಡಿದೆ ಎಂದು ಆರೋಪಿಸಿದ್ದಾರೆ.

“ಮೋದಿ ಸರ್ಕಾರವು ಸಂಸತ್ತಿನಲ್ಲಿ ನನ್ನ ಪ್ರಶ್ನೆಗೆ ಉತ್ತರಿಸಿದ್ದು, ಆಧಾರ್ ಭದ್ರತೆ ವಿಚಾರದಲ್ಲಿ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ. ಆದರೆ, ಇದೀಗ ಐಸಿಎಂಆರ್ ಡೇಟಾಬೇಸ್‌ನಿಂದ ಡಾರ್ಕ್ ವೆಬ್‌ನಲ್ಲಿ ಭಾರತೀಯರ ಆಧಾರ್ ಮತ್ತು ಪಾಸ್‌ಪೋರ್ಟ್ ವಿವರಗಳನ್ನು ಸೋರಿಕೆ ಮಾಡಿದ್ದಕ್ಕಾಗಿ 4 ಜನರನ್ನು ಬಂಧಿಸಲಾಗಿದೆ. ನಿಮ್ಮ ಸಚಿವಾಲಯ ಸಂಸತ್ತಿನಲ್ಲಿ ಏಕೆ ಸುಳ್ಳು ಹೇಳುತ್ತಿದೆ? ರಾಜೀವ್ ಚಂದ್ರಶೇಖರ್ ಅವರೆ ನೀವು ಏನು ಮರೆಮಾಡುತ್ತಿದ್ದೀರಿ” ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಏನೇ ಆದರೂ, ಕೋಟ್ಯಾಂತರ ಭಾರತೀಯರ ವೈಯಕ್ತಿಕ ಮಾಹಿತಿಯನ್ನು ಖಾಸಗಿ ವ್ಯಕ್ತಿಗಳು ಡಾರ್ಕ್ ವೆಬ್ ನಲ್ಲಿ ಬಹಿರಂಗವಾಗಿ ಮಾರಾಟಕ್ಕಿಟ್ಟಿರುವುದು ಸರ್ಕಾರದ ವೈಫಲ್ಯವಲ್ಲದೆ ಇನ್ನೇನಲ್ಲ.

ಇದು ದೇಶದ ಉನ್ನತ ಸಂಸ್ಥೆಯೊಂದರ ಸೈಬರ್ ಸುರಕ್ಷತೆಯ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅಲ್ಲದೆ ಖಾಸಗಿ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಸರ್ಕಾರಿ ಸಾರ್ವಜನಿಕ ಸಂಸ್ಥೆಗಳ ನಿರ್ವಹಣೆಯ ಹೊಣೆ ಕೊಟ್ಟರೆ ಆಗುವ ಅನಾಹುತಕ್ಕೆ ಉದಾಹರಣೆಯಾಗಿದೆ.

ಜನರು ಸರ್ಕಾರವನ್ನು ನಂಬಿ ನೀಡುವ ವೈಯಕ್ತಿಕ ಮಾಹಿತಿಯನ್ನು ಸಿಕ್ಕ ಸಿಕ್ಕವರಿಗೆ ಲಭ್ಯವಾಗುವಂತೆ ಮಾಡಿರುವ ಬೇಜವಬ್ದಾರಿಯ ನಡೆಯ ಪರಿಣಾಮವಾಗಿದೆ.

ದೇಶದ ಹೆಚ್ಚಿನ ಮುಗ್ದ ಜನರಿಗೆ ಇಂತಹ ಪ್ರಕರಣಗಳ ಬಗ್ಗೆ ಮಾಹಿತಿಯೇ ಇಲ್ಲ. ಇದ್ದರೂ ಅವರು ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲದಲ್ಲ. ಏಕೆಂದರೆ ಈ ಪ್ರಕರಣ ಸಾಮಾನ್ಯ ಜನರಿಗೆ ಅರ್ಥವಾಗುವಂತದ್ದಲ್ಲ.

ಇದನ್ನೂ ಓದಿ: ಆಧಾರ್ ಭದ್ರತೆ ಕುರಿತು ಕೇಂದ್ರ ಸರ್ಕಾರದಿಂದ ತಪ್ಪು ಮಾಹಿತಿ: ಟಿಎಂಸಿ ಸಂಸದ ಸಾಕೇತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...