Homeಮುಖಪುಟ‘ಸುಲ್ಲಿ ಡೀಲ್ಸ್' ಸೃಷ್ಟಿಕರ್ತ ಎನ್ನಲಾಗಿರುವ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು

‘ಸುಲ್ಲಿ ಡೀಲ್ಸ್’ ಸೃಷ್ಟಿಕರ್ತ ಎನ್ನಲಾಗಿರುವ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

‘ಸುಲ್ಲಿ ಡೀಲ್ಸ್’ ಎಂಬ ಅಪ್ಲಿಕೇಶನ್‌ನ ಸೃಷ್ಟಿಕರ್ತ ಎಂದು ಹೇಳಲಾದ ಮಧ್ಯಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಇಂಧೋರ್‌ನಲ್ಲಿ ಭಾನುವಾರ ಬಂಧಿಸಿದ್ದಾರೆ. “ಸುಲ್ಲಿ ಡೀಲ್ಸ್” ಆಪ್ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ.

26 ವರ್ಷದ ಆರೋಪಿ ಓಂಕಾರೇಶ್ವರ್ ಠಾಕೂರ್ ರನ್ನು ಮಧ್ಯಪ್ರದೇಶದ ಇಂದೋರ್‌ನಲ್ಲಿ ದೆಹಲಿ ಪೊಲೀಸರ IFSO ಘಟಕ ಬಂಧಿಸಿದೆ. ಕಳೆದ ವರ್ಷ ಬಿಡುಗಡೆಯಾದ ಈ ಆ್ಯಪ್‌ನಲ್ಲಿ ಅನುಮತಿಯಿಲ್ಲದೆ ನೂರಾರು ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ‘ಹರಾಜಿಗೆ’ ಪಟ್ಟಿ ಮಾಡಲಾಗಿತ್ತು.

‘ಸುಲ್ಲಿ ಡೀಲ್ಸ್’ ಮತ್ತು ಇತ್ತೀಚೆಗೆ ರಚಿಸಲಾದ ‘ಬುಲ್ಲಿ ಬಾಯಿ’ ಅಪ್ಲಿಕೇಶನ್‌ಗಳಲ್ಲಿ ಮುಸ್ಲಿಂ ಮಹಿಳೆಯರ ಒಪ್ಪಿಗೆಯಿಲ್ಲದೆ ಅವರ ಫೋಟೋಗಳನ್ನು ಅಪ್‌ಲೋಡ್ ಮಾಡಿ, ಹರಾಜಿಗಿಡಲಾಗಿದೆ. ಜೊತೆಗೆ ಮಹಿಳೆಯರ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಲಾಗಿದೆ.

ಈ ಎರಡೂ ಅಪ್ಲಿಕೇಶನ್‌ಗಳು ಕದ್ದ ಫೋಟೋಗಳನ್ನು ಹರಾಜು ಮಾಡಲು ಹೋಸ್ಟಿಂಗ್ ಪ್ಲಾಟ್‌ಫಾರ್ಮ್ ‘ಗಿಟ್‌ಹಬ್’ ಎಂಬ ವೇದಿಕೆಯನ್ನು ಬಳಸಿಕೊಂಡಿವೆ.

ಇದನ್ನೂ ಓದಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

“ಓಂ ಠಾಕೂರ್ ಅವರನ್ನು ಇಂದೋರ್‌ನಿಂದ ಬಂಧಿಸಲಾಗಿದೆ. ಸುಲ್ಲಿ ಡೀಲ್ ಆ್ಯಪ್ ಪ್ರಕರಣದ ಹಿಂದಿನ ಪ್ರಮುಖ ಸೂತ್ರಧಾರ ಈತ” ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಇಂಟಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಘಟಕದ ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ.

’ಬಂಧಿತ ಆರೋಪಿ ಠಾಕೂರ್, ಇಂದೋರ್‌ನ ಐಪಿಎಸ್ ಅಕಾಡೆಮಿಯಲ್ಲಿ ಬಿಸಿಎ ವ್ಯಾಸಂಗ ಮಾಡಿದ್ದಾರೆ ಮತ್ತು ನ್ಯೂಯಾರ್ಕ್ ಸಿಟಿ ಟೌನ್‌ಶಿಪ್‌ನ ನಿವಾಸಿ. ಈತ ಗಿಟ್‌ಹಬ್‌ನಲ್ಲಿ ‘ಸುಲ್ಲಿ ಡೀಲ್ಸ್’ ಕೋಡ್ ಅನ್ನು ಸೃಷ್ಟಿಸಿದ್ದಾರೆ ಬಳಿಕ ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 2020 ರಲ್ಲಿ, ಠಾಕೂರ್ ಟ್ವಿಟರ್ ಹ್ಯಾಂಡಲ್ ‘ಗಂಗೆಸಿಯಾನ್’ ಅನ್ನು ಬಳಸಿಕೊಂಡು ‘ಟ್ರೇಡ್ ಮಹಾಸಭಾ’ ಎಂಬ ಗುಂಪನ್ನು ಸೇರಿಕೊಂಡಿದ್ದಾರೆ. ಆ ಗುಂಪಿನಲ್ಲಿ ಮುಸ್ಲಿಂ ಮಹಿಳೆಯರನ್ನು ಟ್ರೋಲ್ ಮಾಡುವುದು ಹೇಗೆ ಎಂದು ಗುಂಪಿನ ಸದಸ್ಯರು ಆಗಾಗ್ಗೆ ಚರ್ಚಿಸುತ್ತಿದ್ದರು. ‘ಸುಲ್ಲಿ ಡೀಲ್ಸ್’ ಎಂಬ ಅಪ್ಲಿಕೇಶನ್ ಅನ್ನು ರಚಿಸಿದ ನಂತರ, ಈ ಟ್ವಿಟರ್ ಗುಂಪಿನ ಸದಸ್ಯರು, ಪ್ರಮುಖ ವ್ಯಕ್ತಿಗಳು ಸೇರಿದಂತೆ ಹಲವು ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಬುಲ್ಲಿ ಬಾಯಿ’ ಆ್ಯಪ್ ಸೃಷ್ಟಿಕರ್ತ ನಿರಾಜ್ ಬಿಷ್ಣೋಯ್ ಅವರಿಂದ ವಿಚಾರಣೆಯ ಸಮಯದಲ್ಲಿ ಪಡೆದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸುಲಿ ಡೀಲ್ಸ್ ಸೃಷ್ಟಿಕರ್ತ ಎನ್ನಲಾಗಿರುವ ಓಂಕಾರೇಶ್ವರ ಠಾಕೂರ್ ಅವರನ್ನು ಗುರುತಿಸಿ ಬಂಧಿಸಿದ್ದಾರೆ.


ಇದನ್ನೂ ಓದಿ: ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...