Homeಮುಖಪುಟ‘ಸುಲ್ಲಿ ಡೀಲ್ಸ್' ಸೃಷ್ಟಿಕರ್ತ ಎನ್ನಲಾಗಿರುವ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು

‘ಸುಲ್ಲಿ ಡೀಲ್ಸ್’ ಸೃಷ್ಟಿಕರ್ತ ಎನ್ನಲಾಗಿರುವ ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

‘ಸುಲ್ಲಿ ಡೀಲ್ಸ್’ ಎಂಬ ಅಪ್ಲಿಕೇಶನ್‌ನ ಸೃಷ್ಟಿಕರ್ತ ಎಂದು ಹೇಳಲಾದ ಮಧ್ಯಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಇಂಧೋರ್‌ನಲ್ಲಿ ಭಾನುವಾರ ಬಂಧಿಸಿದ್ದಾರೆ. “ಸುಲ್ಲಿ ಡೀಲ್ಸ್” ಆಪ್ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ.

26 ವರ್ಷದ ಆರೋಪಿ ಓಂಕಾರೇಶ್ವರ್ ಠಾಕೂರ್ ರನ್ನು ಮಧ್ಯಪ್ರದೇಶದ ಇಂದೋರ್‌ನಲ್ಲಿ ದೆಹಲಿ ಪೊಲೀಸರ IFSO ಘಟಕ ಬಂಧಿಸಿದೆ. ಕಳೆದ ವರ್ಷ ಬಿಡುಗಡೆಯಾದ ಈ ಆ್ಯಪ್‌ನಲ್ಲಿ ಅನುಮತಿಯಿಲ್ಲದೆ ನೂರಾರು ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ‘ಹರಾಜಿಗೆ’ ಪಟ್ಟಿ ಮಾಡಲಾಗಿತ್ತು.

‘ಸುಲ್ಲಿ ಡೀಲ್ಸ್’ ಮತ್ತು ಇತ್ತೀಚೆಗೆ ರಚಿಸಲಾದ ‘ಬುಲ್ಲಿ ಬಾಯಿ’ ಅಪ್ಲಿಕೇಶನ್‌ಗಳಲ್ಲಿ ಮುಸ್ಲಿಂ ಮಹಿಳೆಯರ ಒಪ್ಪಿಗೆಯಿಲ್ಲದೆ ಅವರ ಫೋಟೋಗಳನ್ನು ಅಪ್‌ಲೋಡ್ ಮಾಡಿ, ಹರಾಜಿಗಿಡಲಾಗಿದೆ. ಜೊತೆಗೆ ಮಹಿಳೆಯರ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಲಾಗಿದೆ.

ಈ ಎರಡೂ ಅಪ್ಲಿಕೇಶನ್‌ಗಳು ಕದ್ದ ಫೋಟೋಗಳನ್ನು ಹರಾಜು ಮಾಡಲು ಹೋಸ್ಟಿಂಗ್ ಪ್ಲಾಟ್‌ಫಾರ್ಮ್ ‘ಗಿಟ್‌ಹಬ್’ ಎಂಬ ವೇದಿಕೆಯನ್ನು ಬಳಸಿಕೊಂಡಿವೆ.

ಇದನ್ನೂ ಓದಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

“ಓಂ ಠಾಕೂರ್ ಅವರನ್ನು ಇಂದೋರ್‌ನಿಂದ ಬಂಧಿಸಲಾಗಿದೆ. ಸುಲ್ಲಿ ಡೀಲ್ ಆ್ಯಪ್ ಪ್ರಕರಣದ ಹಿಂದಿನ ಪ್ರಮುಖ ಸೂತ್ರಧಾರ ಈತ” ಎಂದು ದೆಹಲಿ ಪೊಲೀಸ್ ವಿಶೇಷ ಘಟಕ ಇಂಟಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಘಟಕದ ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ.

’ಬಂಧಿತ ಆರೋಪಿ ಠಾಕೂರ್, ಇಂದೋರ್‌ನ ಐಪಿಎಸ್ ಅಕಾಡೆಮಿಯಲ್ಲಿ ಬಿಸಿಎ ವ್ಯಾಸಂಗ ಮಾಡಿದ್ದಾರೆ ಮತ್ತು ನ್ಯೂಯಾರ್ಕ್ ಸಿಟಿ ಟೌನ್‌ಶಿಪ್‌ನ ನಿವಾಸಿ. ಈತ ಗಿಟ್‌ಹಬ್‌ನಲ್ಲಿ ‘ಸುಲ್ಲಿ ಡೀಲ್ಸ್’ ಕೋಡ್ ಅನ್ನು ಸೃಷ್ಟಿಸಿದ್ದಾರೆ ಬಳಿಕ ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 2020 ರಲ್ಲಿ, ಠಾಕೂರ್ ಟ್ವಿಟರ್ ಹ್ಯಾಂಡಲ್ ‘ಗಂಗೆಸಿಯಾನ್’ ಅನ್ನು ಬಳಸಿಕೊಂಡು ‘ಟ್ರೇಡ್ ಮಹಾಸಭಾ’ ಎಂಬ ಗುಂಪನ್ನು ಸೇರಿಕೊಂಡಿದ್ದಾರೆ. ಆ ಗುಂಪಿನಲ್ಲಿ ಮುಸ್ಲಿಂ ಮಹಿಳೆಯರನ್ನು ಟ್ರೋಲ್ ಮಾಡುವುದು ಹೇಗೆ ಎಂದು ಗುಂಪಿನ ಸದಸ್ಯರು ಆಗಾಗ್ಗೆ ಚರ್ಚಿಸುತ್ತಿದ್ದರು. ‘ಸುಲ್ಲಿ ಡೀಲ್ಸ್’ ಎಂಬ ಅಪ್ಲಿಕೇಶನ್ ಅನ್ನು ರಚಿಸಿದ ನಂತರ, ಈ ಟ್ವಿಟರ್ ಗುಂಪಿನ ಸದಸ್ಯರು, ಪ್ರಮುಖ ವ್ಯಕ್ತಿಗಳು ಸೇರಿದಂತೆ ಹಲವು ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಬುಲ್ಲಿ ಬಾಯಿ’ ಆ್ಯಪ್ ಸೃಷ್ಟಿಕರ್ತ ನಿರಾಜ್ ಬಿಷ್ಣೋಯ್ ಅವರಿಂದ ವಿಚಾರಣೆಯ ಸಮಯದಲ್ಲಿ ಪಡೆದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸುಲಿ ಡೀಲ್ಸ್ ಸೃಷ್ಟಿಕರ್ತ ಎನ್ನಲಾಗಿರುವ ಓಂಕಾರೇಶ್ವರ ಠಾಕೂರ್ ಅವರನ್ನು ಗುರುತಿಸಿ ಬಂಧಿಸಿದ್ದಾರೆ.


ಇದನ್ನೂ ಓದಿ: ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....