Homeಮುಖಪುಟಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: 'ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು' ಎಂದು ಕಣ್ಣೀರಿಟ್ಟ...

ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರ ಹಲ್ಲೆ: ‘ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ಕೊಲ್ಲಬಹುದು’ ಎಂದು ಕಣ್ಣೀರಿಟ್ಟ ವಿನೇಶ್ ಫೋಗಟ್

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಕೆಲ ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಬುಧವಾರ ರಾತ್ರಿ ದೆಹಲಿ ಪೊಲೀಸ್ ಸಿಬ್ಬಂದಿ, ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಬುಧವಾರ ತಡರಾತ್ರಿ ಪಾನಮತ್ತ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಡಚುವ ಹಾಸಿಗೆಗಳನ್ನು ತರಲು ಬಯಸಿದಾಗ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

ಹಲವು ಕುಸ್ತಿಪಟುಗಳ ತಲೆಗೆ ಪೆಟ್ಟಾಗಿದ್ದು ಇಬ್ಬರಿಗೆ ಗಾಯಗಳಾಗಿವೆ. ಒಬ್ಬ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರ ಪ್ರಕಾರ, ”ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆಗಳೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತಲುಪಿದರು. ಪೊಲೀಸರು ಮಧ್ಯಪ್ರವೇಶಿಸಿದಾಗ, ಸಣ್ಣ ವಾಗ್ವಾದ ನಡೆಯಿತು, ನಂತರ ಎಎಪಿ ನಾಯಕ ಮತ್ತು ಇತರ ಇಬ್ಬರನ್ನು ಬಂಧಿಸಲಾಯಿತು” ಎಂದು ಪೊಲೀಸರು ತಿಳಿಸಿದ್ದಾರೆ.

ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಕೆಲವು ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಕುಡಿದ ಅಮಲಿನಲ್ಲಿ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

”ಕುಡಿದ ಪೋಲೀಸ್ ಧರೆಮೇಂದ್ರ, ವಿನೇಶ್ ಫೋಗಟ್ ಅವರನ್ನು ನಿಂದಿಸಿ ನಮ್ಮೊಂದಿಗೆ ಜಗಳವಾಡಿದರು” ಎಂದು ಮಾಜಿ ಕುಸ್ತಿಪಟು ರಾಜ್‌ವೀರ್ ಹೇಳಿದರು.

ಒಲಿಂಪಿಯನ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಗೀತಾ ಫೋಗಟ್ ಅವರು, ”ತಮ್ಮ ಕಿರಿಯ ಸಹೋದರ ದುಶ್ಯಂತ್ ಫೋಗಟ್ ಅವರ ತಲೆ ಒಡೆದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಸ್ತಿಪಟುಗಳ #MeToo ಪ್ರತಿಭಟನೆಯನ್ನು ಹತ್ತಿಕ್ಕಲು ಅನುರಾಗ್ ಠಾಕೂರ್ ಯತ್ನ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ವಿನೇಶ್ ಫೋಗಟ್

ಏಷ್ಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಅವರು, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ”ಅವರು ಈ ರೀತಿಯಲ್ಲಿ ನಡೆಸಿಕೊಳ್ಳಬೇಕಾದ ಅಪರಾಧ ನಾವೇನೂ ಮಾಡಿಲ್ಲ ಎಂದು ಹೇಳಿದರು. ”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಬಹುದು” ಎಂದು ಫೋಗಟ್ ಅಳುತ್ತಾ ಹೇಳಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.

ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಅವರು ಎನ್‌ಡಿಟಿವಿಯೊಂದಿಗೆ ಮಾತನಾಡುತ್ತಾ, ”ನಾನು ಗೆದ್ದ ಎಲ್ಲಾ ಪದಕಗಳನ್ನು ಸರ್ಕಾರವು ಹಿಂದಕ್ಕೆ ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಹೇಳಿದರು.

ಘರ್ಷಣೆಯ ನಂತರ, ಪ್ರತಿಭಟನಾ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಮತ್ತು ಇಡೀ ಪ್ರದೇಶವನ್ನು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ, ಪ್ರತಿಭಟನಾ ನಿರತ ಕುಸ್ತಿಪಟುಗಳ ಬಳಿಗೆ ಮಾಧ್ಯಮದ ಸಿಬ್ಬಂದಿಗೆ ತೆರಳಲು ಅವಕಾಶ ನೀಡಲಿಲ್ಲ.

ತಡರಾತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹೂಡಾ, ದೆಹಲಿ ಪೊಲೀಸರು ತನ್ನನ್ನು ಬಂಧಿಸಿ ವಸಂತ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಭಾರತದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರು ಬಾರಿ ಸಂಸದರಾಗಿರುವ ಅವರು ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.

ಸಿಂಗ್ ವಿರುದ್ಧ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ಭಾರತದ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಏಸ್ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲ್ಲಿಖ್ ಮತ್ತು ಇತರ ಉನ್ನತ ಗ್ರಾಪ್ಲರ್‌ಗಳು ಪ್ರತಿಭಟನೆ ನಡೆಸುತ್ತಿದ್ದರು ಮತ್ತು ಅವರು ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ.

ಪೊಲೀಸರು ಮತ್ತು ಕುಸ್ತಿಪಟುಗಳ ನಡುವಿನ ಘರ್ಷಣೆಯ ನಂತರ, ಕಾಂಗ್ರೆಸ್ ನಾಯಕ ದೀಪೇಂದರ್ ಹೂಡಾ ಮತ್ತು ಎಎಪಿ ನಾಯಕ ಸೋಮನಾಥ್ ಭಾರ್ತಿ ಸೇರಿದಂತೆ ಕುಸ್ತಿಪಟುಗಳ ಹಲವಾರು ಬೆಂಬಲಿಗರನ್ನು ಬಂಧಿಸಲಾಯಿತು.

ಈ ಬಗ್ಗೆ ಮಾತನಾಡಿರುವ ದೆಹಲಿ ಡಿಸಿಪಿ ಪ್ರಣವ್ ತಾಯಲ್, ”ಕುಸ್ತಿಪಟುಗಳ ಬೆಂಬಲಿಗರು ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಇದನ್ನು ನಮ್ಮ ಪೊಲೀಸರು ತಡೆದ ನಂತರ ಗೊಂದಲಕ್ಕೆ ಕಾರಣವಾಯಿತು” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

”ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರಲಾಯಿತು. ಯಾವುದೇ ಅನುಮತಿ ಇಲ್ಲದ ಕಾರಣ ನಾವು ಅದಕ್ಕೆ ಅವಕಾಶ ನೀಡಲಿಲ್ಲ, ಆದ್ದರಿಂದ ಪ್ರತಿಭಟನಾ ನಿರತ ಕುಸ್ತಿಪಟುಗಳ ಕೆಲವು ಬೆಂಬಲಿಗರು ಟ್ರಕ್‌ನಿಂದ ಹಾಸಿಗೆಗಳನ್ನು ತೆಗೆದುಕೊಡುಬರಲು ಪ್ರಯತ್ನಿಸಿದರು ಮತ್ತು ಇದು ವಾಗ್ವಾದಕ್ಕೆ ಕಾರಣವಾಯಿತು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Shameless and inhuman.
    Ruthless and undemocratic.
    The wrestlers are asking for basic respect.
    The ruling party in power does not care for ordinary hard working people any more. To them people are just there to be used purely for their privelege and pelf. Power has gone to their head. It is a casteist mind. Disrespecting women is the Sanskar of the current dispensation in power
    They think they are always going to be in power and that the 85% will remain their slaves.
    The sooner this Government is removed from power better for the society and the world at large.
    The more the oppression the stronger the rebellion.

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...