ದೆಹಲಿಯ ಜಂತರ್ ಮಂತರ್ನಲ್ಲಿ ಕೆಲ ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, ಬುಧವಾರ ರಾತ್ರಿ ದೆಹಲಿ ಪೊಲೀಸ್ ಸಿಬ್ಬಂದಿ, ಅವರ ಮೇಲೆ ಹಲ್ಲೆ ನಡೆಸಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಬುಧವಾರ ತಡರಾತ್ರಿ ಪಾನಮತ್ತ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಡಚುವ ಹಾಸಿಗೆಗಳನ್ನು ತರಲು ಬಯಸಿದಾಗ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.
ಹಲವು ಕುಸ್ತಿಪಟುಗಳ ತಲೆಗೆ ಪೆಟ್ಟಾಗಿದ್ದು ಇಬ್ಬರಿಗೆ ಗಾಯಗಳಾಗಿವೆ. ಒಬ್ಬ ವ್ಯಕ್ತಿ ಪ್ರಜ್ಞೆ ತಪ್ಪಿ ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಪೊಲೀಸರ ಪ್ರಕಾರ, ”ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆಗಳೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತಲುಪಿದರು. ಪೊಲೀಸರು ಮಧ್ಯಪ್ರವೇಶಿಸಿದಾಗ, ಸಣ್ಣ ವಾಗ್ವಾದ ನಡೆಯಿತು, ನಂತರ ಎಎಪಿ ನಾಯಕ ಮತ್ತು ಇತರ ಇಬ್ಬರನ್ನು ಬಂಧಿಸಲಾಯಿತು” ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಕೆಲವು ಪ್ರತಿಭಟನಾಕಾರರು ಪೊಲೀಸ್ ಸಿಬ್ಬಂದಿ ಕುಡಿದ ಅಮಲಿನಲ್ಲಿ ಕುಸ್ತಿಪಟುಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
VIDEO | Ruckus between protesting wrestlers and Delhi Police at Jantar Mantar. More details are awaited. pic.twitter.com/AIS5zgH4My
— Press Trust of India (@PTI_News) May 3, 2023
”ಕುಡಿದ ಪೋಲೀಸ್ ಧರೆಮೇಂದ್ರ, ವಿನೇಶ್ ಫೋಗಟ್ ಅವರನ್ನು ನಿಂದಿಸಿ ನಮ್ಮೊಂದಿಗೆ ಜಗಳವಾಡಿದರು” ಎಂದು ಮಾಜಿ ಕುಸ್ತಿಪಟು ರಾಜ್ವೀರ್ ಹೇಳಿದರು.
ಒಲಿಂಪಿಯನ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಗೀತಾ ಫೋಗಟ್ ಅವರು, ”ತಮ್ಮ ಕಿರಿಯ ಸಹೋದರ ದುಶ್ಯಂತ್ ಫೋಗಟ್ ಅವರ ತಲೆ ಒಡೆದಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕುಸ್ತಿಪಟುಗಳ #MeToo ಪ್ರತಿಭಟನೆಯನ್ನು ಹತ್ತಿಕ್ಕಲು ಅನುರಾಗ್ ಠಾಕೂರ್ ಯತ್ನ; ಸ್ಪೋಟಕ ಮಾಹಿತಿ ಬಿಚ್ಚಿಟ್ಟ ವಿನೇಶ್ ಫೋಗಟ್
ಏಷ್ಯನ್ ಮತ್ತು ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಅವರು, ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ”ಅವರು ಈ ರೀತಿಯಲ್ಲಿ ನಡೆಸಿಕೊಳ್ಳಬೇಕಾದ ಅಪರಾಧ ನಾವೇನೂ ಮಾಡಿಲ್ಲ ಎಂದು ಹೇಳಿದರು. ”ನೀವು ನಮ್ಮನ್ನು ಕೊಲ್ಲಲು ಬಯಸಿದರೆ, ನಮ್ಮನ್ನು ಕೊಲ್ಲಬಹುದು” ಎಂದು ಫೋಗಟ್ ಅಳುತ್ತಾ ಹೇಳಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದೆ.
ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಅವರು ಎನ್ಡಿಟಿವಿಯೊಂದಿಗೆ ಮಾತನಾಡುತ್ತಾ, ”ನಾನು ಗೆದ್ದ ಎಲ್ಲಾ ಪದಕಗಳನ್ನು ಸರ್ಕಾರವು ಹಿಂದಕ್ಕೆ ತೆಗೆದುಕೊಳ್ಳುವಂತೆ ನಾನು ವಿನಂತಿಸುತ್ತೇನೆ” ಎಂದು ಹೇಳಿದರು.
VIDEO | "The way they have made us suffer, I would not want any athlete to win a medal for the country," says wrestler Vinesh Phogat. pic.twitter.com/EpSk6dc3ZL
— Press Trust of India (@PTI_News) May 3, 2023
ಘರ್ಷಣೆಯ ನಂತರ, ಪ್ರತಿಭಟನಾ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಮತ್ತು ಇಡೀ ಪ್ರದೇಶವನ್ನು ಬ್ಯಾರಿಕೇಡ್ಗಳನ್ನು ಹಾಕಲಾಗಿದೆ, ಪ್ರತಿಭಟನಾ ನಿರತ ಕುಸ್ತಿಪಟುಗಳ ಬಳಿಗೆ ಮಾಧ್ಯಮದ ಸಿಬ್ಬಂದಿಗೆ ತೆರಳಲು ಅವಕಾಶ ನೀಡಲಿಲ್ಲ.
ತಡರಾತ್ರಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹೂಡಾ, ದೆಹಲಿ ಪೊಲೀಸರು ತನ್ನನ್ನು ಬಂಧಿಸಿ ವಸಂತ ವಿಹಾರ್ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾರೆ.
ಭಾರತದ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಭಾರತದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆರು ಬಾರಿ ಸಂಸದರಾಗಿರುವ ಅವರು ತಮ್ಮ ವಿರುದ್ಧದ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.
ಸಿಂಗ್ ವಿರುದ್ಧ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯನ್ನು ಭಾರತದ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಡಬ್ಲ್ಯುಎಫ್ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿರುದ್ಧ ಏಸ್ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ, ಸಾಕ್ಷಿ ಮಲ್ಲಿಖ್ ಮತ್ತು ಇತರ ಉನ್ನತ ಗ್ರಾಪ್ಲರ್ಗಳು ಪ್ರತಿಭಟನೆ ನಡೆಸುತ್ತಿದ್ದರು ಮತ್ತು ಅವರು ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಒತ್ತಾಯಿಸುತ್ತಿದ್ದಾರೆ.
ಪೊಲೀಸರು ಮತ್ತು ಕುಸ್ತಿಪಟುಗಳ ನಡುವಿನ ಘರ್ಷಣೆಯ ನಂತರ, ಕಾಂಗ್ರೆಸ್ ನಾಯಕ ದೀಪೇಂದರ್ ಹೂಡಾ ಮತ್ತು ಎಎಪಿ ನಾಯಕ ಸೋಮನಾಥ್ ಭಾರ್ತಿ ಸೇರಿದಂತೆ ಕುಸ್ತಿಪಟುಗಳ ಹಲವಾರು ಬೆಂಬಲಿಗರನ್ನು ಬಂಧಿಸಲಾಯಿತು.
ಈ ಬಗ್ಗೆ ಮಾತನಾಡಿರುವ ದೆಹಲಿ ಡಿಸಿಪಿ ಪ್ರಣವ್ ತಾಯಲ್, ”ಕುಸ್ತಿಪಟುಗಳ ಬೆಂಬಲಿಗರು ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಇದನ್ನು ನಮ್ಮ ಪೊಲೀಸರು ತಡೆದ ನಂತರ ಗೊಂದಲಕ್ಕೆ ಕಾರಣವಾಯಿತು” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
”ಜಂತರ್ ಮಂತರ್ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರಲಾಯಿತು. ಯಾವುದೇ ಅನುಮತಿ ಇಲ್ಲದ ಕಾರಣ ನಾವು ಅದಕ್ಕೆ ಅವಕಾಶ ನೀಡಲಿಲ್ಲ, ಆದ್ದರಿಂದ ಪ್ರತಿಭಟನಾ ನಿರತ ಕುಸ್ತಿಪಟುಗಳ ಕೆಲವು ಬೆಂಬಲಿಗರು ಟ್ರಕ್ನಿಂದ ಹಾಸಿಗೆಗಳನ್ನು ತೆಗೆದುಕೊಡುಬರಲು ಪ್ರಯತ್ನಿಸಿದರು ಮತ್ತು ಇದು ವಾಗ್ವಾದಕ್ಕೆ ಕಾರಣವಾಯಿತು” ಎಂದು ಅವರು ಹೇಳಿದ್ದಾರೆ.
Shameless and inhuman.
Ruthless and undemocratic.
The wrestlers are asking for basic respect.
The ruling party in power does not care for ordinary hard working people any more. To them people are just there to be used purely for their privelege and pelf. Power has gone to their head. It is a casteist mind. Disrespecting women is the Sanskar of the current dispensation in power
They think they are always going to be in power and that the 85% will remain their slaves.
The sooner this Government is removed from power better for the society and the world at large.
The more the oppression the stronger the rebellion.