Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯ ಇಸ್ಲಾಮಿಯ ಘಟನೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಇದೆ. ಸಿಎಎ, ಎನ್.ಆರ್.ಸಿ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಪ್ರಕರಣದ ವಿವಿಧ ಸಿಸಿಟಿವಿ ವಿಡಿಯೋಗಳು ಬಹಿರಂಗಗೊಳ್ಳುತ್ತಿವೆ. ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿಡಿಯೋಗಳು ಬಿಡುಗಡೆಗೊಂಡಿದ್ದು ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಜಾಮಿಯ

ಜಾಮಿಯ ಮಿಲಿಯ ವಿವಿಯ ಲೈಬ್ರರಿಗೆ ನುಗ್ಗಿ ಪೊಲೀಸರ ದೌರ್ಜನ್ಯ.. ಮೊದಲನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಲೈಬ್ರರಿಗೆ ಬರುತ್ತಿರುವ ದೃಶ್ಯಗಳಿರುವ 30 ಸೆಕೆಂಡಿನ ವಿಡಿಯೋ ವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಇದನ್ನು ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿ ವಿದ್ಯಾರ್ಥಿಗಳು ಲೈಬ್ರರಿಗೆ ಓದಲು ಬರುವ ಪರಿ ಇದು ಎಂದು ವ್ಯಂಗ್ಯ ಮಾಡಿತ್ತು. ಅಷ್ಟೇ ಅಲ್ಲ ಮಾಸ್ಕ್ ಧರಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಿದ್ಯಾರ್ಥಿಗಳು ಲೈಬ್ರರಿಗೆ ಬಂದು ಪುಸ್ತಕ ತೆಗೆದು ಓದುತ್ತಿದ್ದಾರೆ. ಅವರೆಲ್ಲ ಅಮಾಯಕರು. ಅವರಿಗೆ ಪೊಲೀಸರು ಸರಿಯಾದ ಉಪಚಾರವನ್ನೇ ಮಾಡಿದ್ದಾರೆ ಎಂದು ಗೇಲಿ ಮಾಡಿತ್ತು. ಈ ದೃಶ್ಯಾವಳಿ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ದೃಶ್ಯಾವಳಿಗೆ ಪ್ರತಿಯಾಗಿ ಮತ್ತೊಂದು ದಶ್ಯದ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಇದು ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡತೊಡಗಿದೆ. ಈ ದೃಶ್ಯದಲ್ಲಿ ಪೊಲೀಸರು ಲೈಬ್ರರಿ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿದ್ದಾರೆ. ತಾವು ವಿದ್ಯಾರ್ಥಿಗಳನ್ನು ಥಳಿಸುವುದು ಸಿಸಿ ಟಿವಿಗಳಲ್ಲಿ ದಾಖಲಾಗುತ್ತಿದೆ ಎಂಬುದು ಗೊತ್ತಾದ ಮೇಲೆ ಪೊಲೀಸರು ಸಿಸಿಟಿವಿಗಳನ್ನು ಹುಡುಕಿಹುಡುಕಿ ಲಾಠಿಗಳಿಂದ ನಾಶಪಡಿಸುತ್ತಿದ್ದಾರೆ. ಸಿಸಿಟಿವಿಗಳನ್ನು ಹುಡುಕುವ ಮತ್ತು ನಾಶಪಡಿಸುವ ದೃಶ್ಯಗಳು ಸೆರೆಯಾಗಿವೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿರುವುದು ಮತ್ತು ಸಾಕ್ಷ್ಯ ನಾಶಪಡಿಸುತ್ತಿರುವುದಕ್ಕ ಟ್ವಿಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಗಳಿಂದ ಥಳಿಸಿದ ನಂತರ ಸಿಸಿಟಿವಿಗಳನ್ನು ನಾಶಪಡಿಸುವ ಅಗತ್ಯವೇನಿತ್ತು? ಪೊಲೀಸರು ತಾವು ತಪ್ಪು ಮಾಡಿಲ್ಲದಿದ್ದರೆ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದು ಏಕೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪ್ರಶ್ನೆ ಮಾಡಿದ್ದಾರೆ.

ಜಾಮಿಯ

ದೆಹಲಿ ಪೊಲೀಸರಿಂದ ಜಾಮಿಯ ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ದಾಳಿ: ಎರಡನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ಮಿಲ್ಲಿಯಾ ಇಸ್ಲಾಮಿಯ ಆಡಳಿತ ಸಮಿತಿ ಕೂಡ ಡಿಸೆಂಬರ್ 15ರಂದು ಪೊಲೀಸರು ನಡೆಸಿದ ಬರ್ಬರ ದಾಳಿಯ ವಿಡಿಯೋಗಳನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದೆ. ಸಜಾಉಲ್ ಹಕ್, ಸಿಸಿಟಿವಿ ನಾಶ ಪಡಿಸಿರುವ ಪೊಲೀಸರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರೇ ಹೀಗೆ ಸಾಕ್ಷ್ಯ ನಾಶಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ಲೈಬ್ರರಿ ಪ್ರವೇಶಿಸಿದ್ದನ್ನು ಮೊದಲು ನಿರಾಕರಿಸಿದ್ದರು. ಆದರೆ ಸಿಸಿಟಿವಿ ವಿಡಿಯೋಗಳು ಹರಿದಾಡಿದ ನಂತರ ಭಾನುವಾರ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಹೌದು ಲೈಬ್ರಿಗೆ ಹೋಗಿದ್ದೆವು. ಆದರೆ ಈಗ ಬಿಡುಗಡೆ ಮಾಡಿರುವ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಾಮಿಯ ಪ್ರಕರಣದ ಸಂಬಂಧ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜಾಮಿಯಾ ವಿವಿ ಲೈಬ್ರರಿಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೇಂದ್ರದ ಅಧೀನದಲ್ಲಿ ಬರುವ ಪೊಲೀಸ್ ಇಲಾಖೆ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಗೂಂಡಾಗಳಂತೆ ವರ್ತಿಸಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಲಾಯಕ್ ಕೇಂದ್ರ ಸರ್ಕಾರ; ನಾಲಾಯಕ್ ದೆಹಲಿ ಪೋಲಿಸ್. ಇಂಥವರಿಂದ ಇಂಥಹ ಕೆಲಸಗಳೇ ಆಗೋದು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...