Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯ ಇಸ್ಲಾಮಿಯ ಘಟನೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಇದೆ. ಸಿಎಎ, ಎನ್.ಆರ್.ಸಿ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಪ್ರಕರಣದ ವಿವಿಧ ಸಿಸಿಟಿವಿ ವಿಡಿಯೋಗಳು ಬಹಿರಂಗಗೊಳ್ಳುತ್ತಿವೆ. ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿಡಿಯೋಗಳು ಬಿಡುಗಡೆಗೊಂಡಿದ್ದು ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಜಾಮಿಯ

ಜಾಮಿಯ ಮಿಲಿಯ ವಿವಿಯ ಲೈಬ್ರರಿಗೆ ನುಗ್ಗಿ ಪೊಲೀಸರ ದೌರ್ಜನ್ಯ.. ಮೊದಲನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಲೈಬ್ರರಿಗೆ ಬರುತ್ತಿರುವ ದೃಶ್ಯಗಳಿರುವ 30 ಸೆಕೆಂಡಿನ ವಿಡಿಯೋ ವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಇದನ್ನು ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿ ವಿದ್ಯಾರ್ಥಿಗಳು ಲೈಬ್ರರಿಗೆ ಓದಲು ಬರುವ ಪರಿ ಇದು ಎಂದು ವ್ಯಂಗ್ಯ ಮಾಡಿತ್ತು. ಅಷ್ಟೇ ಅಲ್ಲ ಮಾಸ್ಕ್ ಧರಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಿದ್ಯಾರ್ಥಿಗಳು ಲೈಬ್ರರಿಗೆ ಬಂದು ಪುಸ್ತಕ ತೆಗೆದು ಓದುತ್ತಿದ್ದಾರೆ. ಅವರೆಲ್ಲ ಅಮಾಯಕರು. ಅವರಿಗೆ ಪೊಲೀಸರು ಸರಿಯಾದ ಉಪಚಾರವನ್ನೇ ಮಾಡಿದ್ದಾರೆ ಎಂದು ಗೇಲಿ ಮಾಡಿತ್ತು. ಈ ದೃಶ್ಯಾವಳಿ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ದೃಶ್ಯಾವಳಿಗೆ ಪ್ರತಿಯಾಗಿ ಮತ್ತೊಂದು ದಶ್ಯದ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಇದು ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡತೊಡಗಿದೆ. ಈ ದೃಶ್ಯದಲ್ಲಿ ಪೊಲೀಸರು ಲೈಬ್ರರಿ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿದ್ದಾರೆ. ತಾವು ವಿದ್ಯಾರ್ಥಿಗಳನ್ನು ಥಳಿಸುವುದು ಸಿಸಿ ಟಿವಿಗಳಲ್ಲಿ ದಾಖಲಾಗುತ್ತಿದೆ ಎಂಬುದು ಗೊತ್ತಾದ ಮೇಲೆ ಪೊಲೀಸರು ಸಿಸಿಟಿವಿಗಳನ್ನು ಹುಡುಕಿಹುಡುಕಿ ಲಾಠಿಗಳಿಂದ ನಾಶಪಡಿಸುತ್ತಿದ್ದಾರೆ. ಸಿಸಿಟಿವಿಗಳನ್ನು ಹುಡುಕುವ ಮತ್ತು ನಾಶಪಡಿಸುವ ದೃಶ್ಯಗಳು ಸೆರೆಯಾಗಿವೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿರುವುದು ಮತ್ತು ಸಾಕ್ಷ್ಯ ನಾಶಪಡಿಸುತ್ತಿರುವುದಕ್ಕ ಟ್ವಿಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಗಳಿಂದ ಥಳಿಸಿದ ನಂತರ ಸಿಸಿಟಿವಿಗಳನ್ನು ನಾಶಪಡಿಸುವ ಅಗತ್ಯವೇನಿತ್ತು? ಪೊಲೀಸರು ತಾವು ತಪ್ಪು ಮಾಡಿಲ್ಲದಿದ್ದರೆ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದು ಏಕೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪ್ರಶ್ನೆ ಮಾಡಿದ್ದಾರೆ.

ಜಾಮಿಯ

ದೆಹಲಿ ಪೊಲೀಸರಿಂದ ಜಾಮಿಯ ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ದಾಳಿ: ಎರಡನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ಮಿಲ್ಲಿಯಾ ಇಸ್ಲಾಮಿಯ ಆಡಳಿತ ಸಮಿತಿ ಕೂಡ ಡಿಸೆಂಬರ್ 15ರಂದು ಪೊಲೀಸರು ನಡೆಸಿದ ಬರ್ಬರ ದಾಳಿಯ ವಿಡಿಯೋಗಳನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದೆ. ಸಜಾಉಲ್ ಹಕ್, ಸಿಸಿಟಿವಿ ನಾಶ ಪಡಿಸಿರುವ ಪೊಲೀಸರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರೇ ಹೀಗೆ ಸಾಕ್ಷ್ಯ ನಾಶಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ಲೈಬ್ರರಿ ಪ್ರವೇಶಿಸಿದ್ದನ್ನು ಮೊದಲು ನಿರಾಕರಿಸಿದ್ದರು. ಆದರೆ ಸಿಸಿಟಿವಿ ವಿಡಿಯೋಗಳು ಹರಿದಾಡಿದ ನಂತರ ಭಾನುವಾರ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಹೌದು ಲೈಬ್ರಿಗೆ ಹೋಗಿದ್ದೆವು. ಆದರೆ ಈಗ ಬಿಡುಗಡೆ ಮಾಡಿರುವ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಾಮಿಯ ಪ್ರಕರಣದ ಸಂಬಂಧ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜಾಮಿಯಾ ವಿವಿ ಲೈಬ್ರರಿಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೇಂದ್ರದ ಅಧೀನದಲ್ಲಿ ಬರುವ ಪೊಲೀಸ್ ಇಲಾಖೆ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಗೂಂಡಾಗಳಂತೆ ವರ್ತಿಸಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಲಾಯಕ್ ಕೇಂದ್ರ ಸರ್ಕಾರ; ನಾಲಾಯಕ್ ದೆಹಲಿ ಪೋಲಿಸ್. ಇಂಥವರಿಂದ ಇಂಥಹ ಕೆಲಸಗಳೇ ಆಗೋದು.

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...