Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯ ಇಸ್ಲಾಮಿಯ ಘಟನೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಇದೆ. ಸಿಎಎ, ಎನ್.ಆರ್.ಸಿ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಪ್ರಕರಣದ ವಿವಿಧ ಸಿಸಿಟಿವಿ ವಿಡಿಯೋಗಳು ಬಹಿರಂಗಗೊಳ್ಳುತ್ತಿವೆ. ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿಡಿಯೋಗಳು ಬಿಡುಗಡೆಗೊಂಡಿದ್ದು ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಜಾಮಿಯ

ಜಾಮಿಯ ಮಿಲಿಯ ವಿವಿಯ ಲೈಬ್ರರಿಗೆ ನುಗ್ಗಿ ಪೊಲೀಸರ ದೌರ್ಜನ್ಯ.. ಮೊದಲನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಲೈಬ್ರರಿಗೆ ಬರುತ್ತಿರುವ ದೃಶ್ಯಗಳಿರುವ 30 ಸೆಕೆಂಡಿನ ವಿಡಿಯೋ ವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಇದನ್ನು ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿ ವಿದ್ಯಾರ್ಥಿಗಳು ಲೈಬ್ರರಿಗೆ ಓದಲು ಬರುವ ಪರಿ ಇದು ಎಂದು ವ್ಯಂಗ್ಯ ಮಾಡಿತ್ತು. ಅಷ್ಟೇ ಅಲ್ಲ ಮಾಸ್ಕ್ ಧರಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಿದ್ಯಾರ್ಥಿಗಳು ಲೈಬ್ರರಿಗೆ ಬಂದು ಪುಸ್ತಕ ತೆಗೆದು ಓದುತ್ತಿದ್ದಾರೆ. ಅವರೆಲ್ಲ ಅಮಾಯಕರು. ಅವರಿಗೆ ಪೊಲೀಸರು ಸರಿಯಾದ ಉಪಚಾರವನ್ನೇ ಮಾಡಿದ್ದಾರೆ ಎಂದು ಗೇಲಿ ಮಾಡಿತ್ತು. ಈ ದೃಶ್ಯಾವಳಿ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ದೃಶ್ಯಾವಳಿಗೆ ಪ್ರತಿಯಾಗಿ ಮತ್ತೊಂದು ದಶ್ಯದ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಇದು ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡತೊಡಗಿದೆ. ಈ ದೃಶ್ಯದಲ್ಲಿ ಪೊಲೀಸರು ಲೈಬ್ರರಿ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿದ್ದಾರೆ. ತಾವು ವಿದ್ಯಾರ್ಥಿಗಳನ್ನು ಥಳಿಸುವುದು ಸಿಸಿ ಟಿವಿಗಳಲ್ಲಿ ದಾಖಲಾಗುತ್ತಿದೆ ಎಂಬುದು ಗೊತ್ತಾದ ಮೇಲೆ ಪೊಲೀಸರು ಸಿಸಿಟಿವಿಗಳನ್ನು ಹುಡುಕಿಹುಡುಕಿ ಲಾಠಿಗಳಿಂದ ನಾಶಪಡಿಸುತ್ತಿದ್ದಾರೆ. ಸಿಸಿಟಿವಿಗಳನ್ನು ಹುಡುಕುವ ಮತ್ತು ನಾಶಪಡಿಸುವ ದೃಶ್ಯಗಳು ಸೆರೆಯಾಗಿವೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿರುವುದು ಮತ್ತು ಸಾಕ್ಷ್ಯ ನಾಶಪಡಿಸುತ್ತಿರುವುದಕ್ಕ ಟ್ವಿಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಗಳಿಂದ ಥಳಿಸಿದ ನಂತರ ಸಿಸಿಟಿವಿಗಳನ್ನು ನಾಶಪಡಿಸುವ ಅಗತ್ಯವೇನಿತ್ತು? ಪೊಲೀಸರು ತಾವು ತಪ್ಪು ಮಾಡಿಲ್ಲದಿದ್ದರೆ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದು ಏಕೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪ್ರಶ್ನೆ ಮಾಡಿದ್ದಾರೆ.

ಜಾಮಿಯ

ದೆಹಲಿ ಪೊಲೀಸರಿಂದ ಜಾಮಿಯ ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ದಾಳಿ: ಎರಡನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ಮಿಲ್ಲಿಯಾ ಇಸ್ಲಾಮಿಯ ಆಡಳಿತ ಸಮಿತಿ ಕೂಡ ಡಿಸೆಂಬರ್ 15ರಂದು ಪೊಲೀಸರು ನಡೆಸಿದ ಬರ್ಬರ ದಾಳಿಯ ವಿಡಿಯೋಗಳನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದೆ. ಸಜಾಉಲ್ ಹಕ್, ಸಿಸಿಟಿವಿ ನಾಶ ಪಡಿಸಿರುವ ಪೊಲೀಸರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರೇ ಹೀಗೆ ಸಾಕ್ಷ್ಯ ನಾಶಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ಲೈಬ್ರರಿ ಪ್ರವೇಶಿಸಿದ್ದನ್ನು ಮೊದಲು ನಿರಾಕರಿಸಿದ್ದರು. ಆದರೆ ಸಿಸಿಟಿವಿ ವಿಡಿಯೋಗಳು ಹರಿದಾಡಿದ ನಂತರ ಭಾನುವಾರ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಹೌದು ಲೈಬ್ರಿಗೆ ಹೋಗಿದ್ದೆವು. ಆದರೆ ಈಗ ಬಿಡುಗಡೆ ಮಾಡಿರುವ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಾಮಿಯ ಪ್ರಕರಣದ ಸಂಬಂಧ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜಾಮಿಯಾ ವಿವಿ ಲೈಬ್ರರಿಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೇಂದ್ರದ ಅಧೀನದಲ್ಲಿ ಬರುವ ಪೊಲೀಸ್ ಇಲಾಖೆ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಗೂಂಡಾಗಳಂತೆ ವರ್ತಿಸಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಲಾಯಕ್ ಕೇಂದ್ರ ಸರ್ಕಾರ; ನಾಲಾಯಕ್ ದೆಹಲಿ ಪೋಲಿಸ್. ಇಂಥವರಿಂದ ಇಂಥಹ ಕೆಲಸಗಳೇ ಆಗೋದು.

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...