Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯ ಇಸ್ಲಾಮಿಯ ಘಟನೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಇದೆ. ಸಿಎಎ, ಎನ್.ಆರ್.ಸಿ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಪ್ರಕರಣದ ವಿವಿಧ ಸಿಸಿಟಿವಿ ವಿಡಿಯೋಗಳು ಬಹಿರಂಗಗೊಳ್ಳುತ್ತಿವೆ. ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿಡಿಯೋಗಳು ಬಿಡುಗಡೆಗೊಂಡಿದ್ದು ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಜಾಮಿಯ

ಜಾಮಿಯ ಮಿಲಿಯ ವಿವಿಯ ಲೈಬ್ರರಿಗೆ ನುಗ್ಗಿ ಪೊಲೀಸರ ದೌರ್ಜನ್ಯ.. ಮೊದಲನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಲೈಬ್ರರಿಗೆ ಬರುತ್ತಿರುವ ದೃಶ್ಯಗಳಿರುವ 30 ಸೆಕೆಂಡಿನ ವಿಡಿಯೋ ವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಇದನ್ನು ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿ ವಿದ್ಯಾರ್ಥಿಗಳು ಲೈಬ್ರರಿಗೆ ಓದಲು ಬರುವ ಪರಿ ಇದು ಎಂದು ವ್ಯಂಗ್ಯ ಮಾಡಿತ್ತು. ಅಷ್ಟೇ ಅಲ್ಲ ಮಾಸ್ಕ್ ಧರಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಿದ್ಯಾರ್ಥಿಗಳು ಲೈಬ್ರರಿಗೆ ಬಂದು ಪುಸ್ತಕ ತೆಗೆದು ಓದುತ್ತಿದ್ದಾರೆ. ಅವರೆಲ್ಲ ಅಮಾಯಕರು. ಅವರಿಗೆ ಪೊಲೀಸರು ಸರಿಯಾದ ಉಪಚಾರವನ್ನೇ ಮಾಡಿದ್ದಾರೆ ಎಂದು ಗೇಲಿ ಮಾಡಿತ್ತು. ಈ ದೃಶ್ಯಾವಳಿ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ದೃಶ್ಯಾವಳಿಗೆ ಪ್ರತಿಯಾಗಿ ಮತ್ತೊಂದು ದಶ್ಯದ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಇದು ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡತೊಡಗಿದೆ. ಈ ದೃಶ್ಯದಲ್ಲಿ ಪೊಲೀಸರು ಲೈಬ್ರರಿ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿದ್ದಾರೆ. ತಾವು ವಿದ್ಯಾರ್ಥಿಗಳನ್ನು ಥಳಿಸುವುದು ಸಿಸಿ ಟಿವಿಗಳಲ್ಲಿ ದಾಖಲಾಗುತ್ತಿದೆ ಎಂಬುದು ಗೊತ್ತಾದ ಮೇಲೆ ಪೊಲೀಸರು ಸಿಸಿಟಿವಿಗಳನ್ನು ಹುಡುಕಿಹುಡುಕಿ ಲಾಠಿಗಳಿಂದ ನಾಶಪಡಿಸುತ್ತಿದ್ದಾರೆ. ಸಿಸಿಟಿವಿಗಳನ್ನು ಹುಡುಕುವ ಮತ್ತು ನಾಶಪಡಿಸುವ ದೃಶ್ಯಗಳು ಸೆರೆಯಾಗಿವೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿರುವುದು ಮತ್ತು ಸಾಕ್ಷ್ಯ ನಾಶಪಡಿಸುತ್ತಿರುವುದಕ್ಕ ಟ್ವಿಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಗಳಿಂದ ಥಳಿಸಿದ ನಂತರ ಸಿಸಿಟಿವಿಗಳನ್ನು ನಾಶಪಡಿಸುವ ಅಗತ್ಯವೇನಿತ್ತು? ಪೊಲೀಸರು ತಾವು ತಪ್ಪು ಮಾಡಿಲ್ಲದಿದ್ದರೆ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದು ಏಕೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪ್ರಶ್ನೆ ಮಾಡಿದ್ದಾರೆ.

ಜಾಮಿಯ

ದೆಹಲಿ ಪೊಲೀಸರಿಂದ ಜಾಮಿಯ ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ದಾಳಿ: ಎರಡನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ಮಿಲ್ಲಿಯಾ ಇಸ್ಲಾಮಿಯ ಆಡಳಿತ ಸಮಿತಿ ಕೂಡ ಡಿಸೆಂಬರ್ 15ರಂದು ಪೊಲೀಸರು ನಡೆಸಿದ ಬರ್ಬರ ದಾಳಿಯ ವಿಡಿಯೋಗಳನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದೆ. ಸಜಾಉಲ್ ಹಕ್, ಸಿಸಿಟಿವಿ ನಾಶ ಪಡಿಸಿರುವ ಪೊಲೀಸರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರೇ ಹೀಗೆ ಸಾಕ್ಷ್ಯ ನಾಶಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ಲೈಬ್ರರಿ ಪ್ರವೇಶಿಸಿದ್ದನ್ನು ಮೊದಲು ನಿರಾಕರಿಸಿದ್ದರು. ಆದರೆ ಸಿಸಿಟಿವಿ ವಿಡಿಯೋಗಳು ಹರಿದಾಡಿದ ನಂತರ ಭಾನುವಾರ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಹೌದು ಲೈಬ್ರಿಗೆ ಹೋಗಿದ್ದೆವು. ಆದರೆ ಈಗ ಬಿಡುಗಡೆ ಮಾಡಿರುವ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಾಮಿಯ ಪ್ರಕರಣದ ಸಂಬಂಧ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜಾಮಿಯಾ ವಿವಿ ಲೈಬ್ರರಿಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೇಂದ್ರದ ಅಧೀನದಲ್ಲಿ ಬರುವ ಪೊಲೀಸ್ ಇಲಾಖೆ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಗೂಂಡಾಗಳಂತೆ ವರ್ತಿಸಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಲಾಯಕ್ ಕೇಂದ್ರ ಸರ್ಕಾರ; ನಾಲಾಯಕ್ ದೆಹಲಿ ಪೋಲಿಸ್. ಇಂಥವರಿಂದ ಇಂಥಹ ಕೆಲಸಗಳೇ ಆಗೋದು.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...