Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯ ಇಸ್ಲಾಮಿಯ ಘಟನೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಇದೆ. ಸಿಎಎ, ಎನ್.ಆರ್.ಸಿ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಪ್ರಕರಣದ ವಿವಿಧ ಸಿಸಿಟಿವಿ ವಿಡಿಯೋಗಳು ಬಹಿರಂಗಗೊಳ್ಳುತ್ತಿವೆ. ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿಡಿಯೋಗಳು ಬಿಡುಗಡೆಗೊಂಡಿದ್ದು ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಜಾಮಿಯ

ಜಾಮಿಯ ಮಿಲಿಯ ವಿವಿಯ ಲೈಬ್ರರಿಗೆ ನುಗ್ಗಿ ಪೊಲೀಸರ ದೌರ್ಜನ್ಯ.. ಮೊದಲನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಲೈಬ್ರರಿಗೆ ಬರುತ್ತಿರುವ ದೃಶ್ಯಗಳಿರುವ 30 ಸೆಕೆಂಡಿನ ವಿಡಿಯೋ ವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಇದನ್ನು ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿ ವಿದ್ಯಾರ್ಥಿಗಳು ಲೈಬ್ರರಿಗೆ ಓದಲು ಬರುವ ಪರಿ ಇದು ಎಂದು ವ್ಯಂಗ್ಯ ಮಾಡಿತ್ತು. ಅಷ್ಟೇ ಅಲ್ಲ ಮಾಸ್ಕ್ ಧರಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಿದ್ಯಾರ್ಥಿಗಳು ಲೈಬ್ರರಿಗೆ ಬಂದು ಪುಸ್ತಕ ತೆಗೆದು ಓದುತ್ತಿದ್ದಾರೆ. ಅವರೆಲ್ಲ ಅಮಾಯಕರು. ಅವರಿಗೆ ಪೊಲೀಸರು ಸರಿಯಾದ ಉಪಚಾರವನ್ನೇ ಮಾಡಿದ್ದಾರೆ ಎಂದು ಗೇಲಿ ಮಾಡಿತ್ತು. ಈ ದೃಶ್ಯಾವಳಿ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ದೃಶ್ಯಾವಳಿಗೆ ಪ್ರತಿಯಾಗಿ ಮತ್ತೊಂದು ದಶ್ಯದ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಇದು ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡತೊಡಗಿದೆ. ಈ ದೃಶ್ಯದಲ್ಲಿ ಪೊಲೀಸರು ಲೈಬ್ರರಿ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿದ್ದಾರೆ. ತಾವು ವಿದ್ಯಾರ್ಥಿಗಳನ್ನು ಥಳಿಸುವುದು ಸಿಸಿ ಟಿವಿಗಳಲ್ಲಿ ದಾಖಲಾಗುತ್ತಿದೆ ಎಂಬುದು ಗೊತ್ತಾದ ಮೇಲೆ ಪೊಲೀಸರು ಸಿಸಿಟಿವಿಗಳನ್ನು ಹುಡುಕಿಹುಡುಕಿ ಲಾಠಿಗಳಿಂದ ನಾಶಪಡಿಸುತ್ತಿದ್ದಾರೆ. ಸಿಸಿಟಿವಿಗಳನ್ನು ಹುಡುಕುವ ಮತ್ತು ನಾಶಪಡಿಸುವ ದೃಶ್ಯಗಳು ಸೆರೆಯಾಗಿವೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿರುವುದು ಮತ್ತು ಸಾಕ್ಷ್ಯ ನಾಶಪಡಿಸುತ್ತಿರುವುದಕ್ಕ ಟ್ವಿಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಗಳಿಂದ ಥಳಿಸಿದ ನಂತರ ಸಿಸಿಟಿವಿಗಳನ್ನು ನಾಶಪಡಿಸುವ ಅಗತ್ಯವೇನಿತ್ತು? ಪೊಲೀಸರು ತಾವು ತಪ್ಪು ಮಾಡಿಲ್ಲದಿದ್ದರೆ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದು ಏಕೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪ್ರಶ್ನೆ ಮಾಡಿದ್ದಾರೆ.

ಜಾಮಿಯ

ದೆಹಲಿ ಪೊಲೀಸರಿಂದ ಜಾಮಿಯ ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ದಾಳಿ: ಎರಡನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ಮಿಲ್ಲಿಯಾ ಇಸ್ಲಾಮಿಯ ಆಡಳಿತ ಸಮಿತಿ ಕೂಡ ಡಿಸೆಂಬರ್ 15ರಂದು ಪೊಲೀಸರು ನಡೆಸಿದ ಬರ್ಬರ ದಾಳಿಯ ವಿಡಿಯೋಗಳನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದೆ. ಸಜಾಉಲ್ ಹಕ್, ಸಿಸಿಟಿವಿ ನಾಶ ಪಡಿಸಿರುವ ಪೊಲೀಸರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರೇ ಹೀಗೆ ಸಾಕ್ಷ್ಯ ನಾಶಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ಲೈಬ್ರರಿ ಪ್ರವೇಶಿಸಿದ್ದನ್ನು ಮೊದಲು ನಿರಾಕರಿಸಿದ್ದರು. ಆದರೆ ಸಿಸಿಟಿವಿ ವಿಡಿಯೋಗಳು ಹರಿದಾಡಿದ ನಂತರ ಭಾನುವಾರ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಹೌದು ಲೈಬ್ರಿಗೆ ಹೋಗಿದ್ದೆವು. ಆದರೆ ಈಗ ಬಿಡುಗಡೆ ಮಾಡಿರುವ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಾಮಿಯ ಪ್ರಕರಣದ ಸಂಬಂಧ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜಾಮಿಯಾ ವಿವಿ ಲೈಬ್ರರಿಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೇಂದ್ರದ ಅಧೀನದಲ್ಲಿ ಬರುವ ಪೊಲೀಸ್ ಇಲಾಖೆ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಗೂಂಡಾಗಳಂತೆ ವರ್ತಿಸಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಲಾಯಕ್ ಕೇಂದ್ರ ಸರ್ಕಾರ; ನಾಲಾಯಕ್ ದೆಹಲಿ ಪೋಲಿಸ್. ಇಂಥವರಿಂದ ಇಂಥಹ ಕೆಲಸಗಳೇ ಆಗೋದು.

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...