Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯ ಇಸ್ಲಾಮಿಯ ಘಟನೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಇದೆ. ಸಿಎಎ, ಎನ್.ಆರ್.ಸಿ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಪ್ರಕರಣದ ವಿವಿಧ ಸಿಸಿಟಿವಿ ವಿಡಿಯೋಗಳು ಬಹಿರಂಗಗೊಳ್ಳುತ್ತಿವೆ. ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿಡಿಯೋಗಳು ಬಿಡುಗಡೆಗೊಂಡಿದ್ದು ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಜಾಮಿಯ

ಜಾಮಿಯ ಮಿಲಿಯ ವಿವಿಯ ಲೈಬ್ರರಿಗೆ ನುಗ್ಗಿ ಪೊಲೀಸರ ದೌರ್ಜನ್ಯ.. ಮೊದಲನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಲೈಬ್ರರಿಗೆ ಬರುತ್ತಿರುವ ದೃಶ್ಯಗಳಿರುವ 30 ಸೆಕೆಂಡಿನ ವಿಡಿಯೋ ವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಇದನ್ನು ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿ ವಿದ್ಯಾರ್ಥಿಗಳು ಲೈಬ್ರರಿಗೆ ಓದಲು ಬರುವ ಪರಿ ಇದು ಎಂದು ವ್ಯಂಗ್ಯ ಮಾಡಿತ್ತು. ಅಷ್ಟೇ ಅಲ್ಲ ಮಾಸ್ಕ್ ಧರಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಿದ್ಯಾರ್ಥಿಗಳು ಲೈಬ್ರರಿಗೆ ಬಂದು ಪುಸ್ತಕ ತೆಗೆದು ಓದುತ್ತಿದ್ದಾರೆ. ಅವರೆಲ್ಲ ಅಮಾಯಕರು. ಅವರಿಗೆ ಪೊಲೀಸರು ಸರಿಯಾದ ಉಪಚಾರವನ್ನೇ ಮಾಡಿದ್ದಾರೆ ಎಂದು ಗೇಲಿ ಮಾಡಿತ್ತು. ಈ ದೃಶ್ಯಾವಳಿ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ದೃಶ್ಯಾವಳಿಗೆ ಪ್ರತಿಯಾಗಿ ಮತ್ತೊಂದು ದಶ್ಯದ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಇದು ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡತೊಡಗಿದೆ. ಈ ದೃಶ್ಯದಲ್ಲಿ ಪೊಲೀಸರು ಲೈಬ್ರರಿ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿದ್ದಾರೆ. ತಾವು ವಿದ್ಯಾರ್ಥಿಗಳನ್ನು ಥಳಿಸುವುದು ಸಿಸಿ ಟಿವಿಗಳಲ್ಲಿ ದಾಖಲಾಗುತ್ತಿದೆ ಎಂಬುದು ಗೊತ್ತಾದ ಮೇಲೆ ಪೊಲೀಸರು ಸಿಸಿಟಿವಿಗಳನ್ನು ಹುಡುಕಿಹುಡುಕಿ ಲಾಠಿಗಳಿಂದ ನಾಶಪಡಿಸುತ್ತಿದ್ದಾರೆ. ಸಿಸಿಟಿವಿಗಳನ್ನು ಹುಡುಕುವ ಮತ್ತು ನಾಶಪಡಿಸುವ ದೃಶ್ಯಗಳು ಸೆರೆಯಾಗಿವೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿರುವುದು ಮತ್ತು ಸಾಕ್ಷ್ಯ ನಾಶಪಡಿಸುತ್ತಿರುವುದಕ್ಕ ಟ್ವಿಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಗಳಿಂದ ಥಳಿಸಿದ ನಂತರ ಸಿಸಿಟಿವಿಗಳನ್ನು ನಾಶಪಡಿಸುವ ಅಗತ್ಯವೇನಿತ್ತು? ಪೊಲೀಸರು ತಾವು ತಪ್ಪು ಮಾಡಿಲ್ಲದಿದ್ದರೆ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದು ಏಕೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪ್ರಶ್ನೆ ಮಾಡಿದ್ದಾರೆ.

ಜಾಮಿಯ

ದೆಹಲಿ ಪೊಲೀಸರಿಂದ ಜಾಮಿಯ ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ದಾಳಿ: ಎರಡನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ಮಿಲ್ಲಿಯಾ ಇಸ್ಲಾಮಿಯ ಆಡಳಿತ ಸಮಿತಿ ಕೂಡ ಡಿಸೆಂಬರ್ 15ರಂದು ಪೊಲೀಸರು ನಡೆಸಿದ ಬರ್ಬರ ದಾಳಿಯ ವಿಡಿಯೋಗಳನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದೆ. ಸಜಾಉಲ್ ಹಕ್, ಸಿಸಿಟಿವಿ ನಾಶ ಪಡಿಸಿರುವ ಪೊಲೀಸರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರೇ ಹೀಗೆ ಸಾಕ್ಷ್ಯ ನಾಶಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ಲೈಬ್ರರಿ ಪ್ರವೇಶಿಸಿದ್ದನ್ನು ಮೊದಲು ನಿರಾಕರಿಸಿದ್ದರು. ಆದರೆ ಸಿಸಿಟಿವಿ ವಿಡಿಯೋಗಳು ಹರಿದಾಡಿದ ನಂತರ ಭಾನುವಾರ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಹೌದು ಲೈಬ್ರಿಗೆ ಹೋಗಿದ್ದೆವು. ಆದರೆ ಈಗ ಬಿಡುಗಡೆ ಮಾಡಿರುವ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಾಮಿಯ ಪ್ರಕರಣದ ಸಂಬಂಧ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜಾಮಿಯಾ ವಿವಿ ಲೈಬ್ರರಿಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೇಂದ್ರದ ಅಧೀನದಲ್ಲಿ ಬರುವ ಪೊಲೀಸ್ ಇಲಾಖೆ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಗೂಂಡಾಗಳಂತೆ ವರ್ತಿಸಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಲಾಯಕ್ ಕೇಂದ್ರ ಸರ್ಕಾರ; ನಾಲಾಯಕ್ ದೆಹಲಿ ಪೋಲಿಸ್. ಇಂಥವರಿಂದ ಇಂಥಹ ಕೆಲಸಗಳೇ ಆಗೋದು.

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...