Homeಮುಖಪುಟಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

ಜಾಮಿಯಾ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯ: ವಿಡಿಯೋಗಳಿಂದ ಬಯಲು

- Advertisement -
- Advertisement -

ದೆಹಲಿಯ ಜಾಮಿಯಾ ಮಿಲಿಯ ಇಸ್ಲಾಮಿಯ ಘಟನೆ ವಿಚಿತ್ರ ತಿರುವು ಪಡೆದುಕೊಳ್ಳುತ್ತಲೇ ಇದೆ. ಸಿಎಎ, ಎನ್.ಆರ್.ಸಿ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿತ್ತು. ಇದೀಗ ಈ ಪ್ರಕರಣದ ವಿವಿಧ ಸಿಸಿಟಿವಿ ವಿಡಿಯೋಗಳು ಬಹಿರಂಗಗೊಳ್ಳುತ್ತಿವೆ. ಬಿಜೆಪಿ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ಅದಕ್ಕೆ ಪ್ರತಿಯಾಗಿ ವಿಡಿಯೋಗಳು ಬಿಡುಗಡೆಗೊಂಡಿದ್ದು ಪೊಲೀಸರು ವಿದ್ಯಾರ್ಥಿಗಳ ಮೇಲೆ ನಡೆಸಿರುವ ದೌರ್ಜನ್ಯಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಜಾಮಿಯ

ಜಾಮಿಯ ಮಿಲಿಯ ವಿವಿಯ ಲೈಬ್ರರಿಗೆ ನುಗ್ಗಿ ಪೊಲೀಸರ ದೌರ್ಜನ್ಯ.. ಮೊದಲನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಲೈಬ್ರರಿಗೆ ಬರುತ್ತಿರುವ ದೃಶ್ಯಗಳಿರುವ 30 ಸೆಕೆಂಡಿನ ವಿಡಿಯೋ ವನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಇದನ್ನು ಕರ್ನಾಟಕ ಬಿಜೆಪಿ ತನ್ನ ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡಿ ವಿದ್ಯಾರ್ಥಿಗಳು ಲೈಬ್ರರಿಗೆ ಓದಲು ಬರುವ ಪರಿ ಇದು ಎಂದು ವ್ಯಂಗ್ಯ ಮಾಡಿತ್ತು. ಅಷ್ಟೇ ಅಲ್ಲ ಮಾಸ್ಕ್ ಧರಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ವಿದ್ಯಾರ್ಥಿಗಳು ಲೈಬ್ರರಿಗೆ ಬಂದು ಪುಸ್ತಕ ತೆಗೆದು ಓದುತ್ತಿದ್ದಾರೆ. ಅವರೆಲ್ಲ ಅಮಾಯಕರು. ಅವರಿಗೆ ಪೊಲೀಸರು ಸರಿಯಾದ ಉಪಚಾರವನ್ನೇ ಮಾಡಿದ್ದಾರೆ ಎಂದು ಗೇಲಿ ಮಾಡಿತ್ತು. ಈ ದೃಶ್ಯಾವಳಿ ಟ್ವಿಟ್ಟರ್, ಫೇಸ್ ಬುಕ್ ನಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಿಜೆಪಿ ಬಿಡುಗಡೆ ಮಾಡಿರುವ ದೃಶ್ಯಾವಳಿಗೆ ಪ್ರತಿಯಾಗಿ ಮತ್ತೊಂದು ದಶ್ಯದ ತುಣುಕೊಂದನ್ನು ಬಿಡುಗಡೆ ಮಾಡಲಾಗಿದೆ. ಇದು ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡತೊಡಗಿದೆ. ಈ ದೃಶ್ಯದಲ್ಲಿ ಪೊಲೀಸರು ಲೈಬ್ರರಿ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಮನಬಂದಂತೆ ಥಳಿಸುತ್ತಿದ್ದಾರೆ. ತಾವು ವಿದ್ಯಾರ್ಥಿಗಳನ್ನು ಥಳಿಸುವುದು ಸಿಸಿ ಟಿವಿಗಳಲ್ಲಿ ದಾಖಲಾಗುತ್ತಿದೆ ಎಂಬುದು ಗೊತ್ತಾದ ಮೇಲೆ ಪೊಲೀಸರು ಸಿಸಿಟಿವಿಗಳನ್ನು ಹುಡುಕಿಹುಡುಕಿ ಲಾಠಿಗಳಿಂದ ನಾಶಪಡಿಸುತ್ತಿದ್ದಾರೆ. ಸಿಸಿಟಿವಿಗಳನ್ನು ಹುಡುಕುವ ಮತ್ತು ನಾಶಪಡಿಸುವ ದೃಶ್ಯಗಳು ಸೆರೆಯಾಗಿವೆ.

ವಿದ್ಯಾರ್ಥಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿರುವುದು ಮತ್ತು ಸಾಕ್ಷ್ಯ ನಾಶಪಡಿಸುತ್ತಿರುವುದಕ್ಕ ಟ್ವಿಟ್ಟಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿಗಳಿಂದ ಥಳಿಸಿದ ನಂತರ ಸಿಸಿಟಿವಿಗಳನ್ನು ನಾಶಪಡಿಸುವ ಅಗತ್ಯವೇನಿತ್ತು? ಪೊಲೀಸರು ತಾವು ತಪ್ಪು ಮಾಡಿಲ್ಲದಿದ್ದರೆ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದು ಏಕೆ ಎಂದು ಖ್ಯಾತ ಯೂಟ್ಯೂಬರ್‌ ಧೃವ್‌ ರಾಠೀ ಪ್ರಶ್ನೆ ಮಾಡಿದ್ದಾರೆ.

ಜಾಮಿಯ

ದೆಹಲಿ ಪೊಲೀಸರಿಂದ ಜಾಮಿಯ ವಿದ್ಯಾರ್ಥಿಗಳ ಮೇಲೆ ಪೈಶಾಚಿಕ ದಾಳಿ: ಎರಡನೇ ವಿಡಿಯೋ

Posted by Naanu Gauri on Monday, February 17, 2020

ಜಾಮಿಯ ಮಿಲ್ಲಿಯಾ ಇಸ್ಲಾಮಿಯ ಆಡಳಿತ ಸಮಿತಿ ಕೂಡ ಡಿಸೆಂಬರ್ 15ರಂದು ಪೊಲೀಸರು ನಡೆಸಿದ ಬರ್ಬರ ದಾಳಿಯ ವಿಡಿಯೋಗಳನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಅಪ್ ಲೋಡ್ ಮಾಡಿದೆ. ಸಜಾಉಲ್ ಹಕ್, ಸಿಸಿಟಿವಿ ನಾಶ ಪಡಿಸಿರುವ ಪೊಲೀಸರ ವಿರುದ್ಧ ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಪೊಲೀಸರೇ ಹೀಗೆ ಸಾಕ್ಷ್ಯ ನಾಶಪಡಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಪೊಲೀಸರು ಜಾಮಿಯ ಮಿಲ್ಲಿಯಾ ಇಸ್ಲಾಮಿಯಾ ಲೈಬ್ರರಿ ಪ್ರವೇಶಿಸಿದ್ದನ್ನು ಮೊದಲು ನಿರಾಕರಿಸಿದ್ದರು. ಆದರೆ ಸಿಸಿಟಿವಿ ವಿಡಿಯೋಗಳು ಹರಿದಾಡಿದ ನಂತರ ಭಾನುವಾರ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸರು ಹೌದು ಲೈಬ್ರಿಗೆ ಹೋಗಿದ್ದೆವು. ಆದರೆ ಈಗ ಬಿಡುಗಡೆ ಮಾಡಿರುವ ದೃಶ್ಯಗಳನ್ನು ಎಡಿಟ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಾಮಿಯ ಪ್ರಕರಣದ ಸಂಬಂಧ ಕೇಂದ್ರ ಮತ್ತು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಜಾಮಿಯಾ ವಿವಿ ಲೈಬ್ರರಿಯಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸರು ನಡೆಸಿದ ದೌರ್ಜನ್ಯದ ವಿರುದ್ದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕೇಂದ್ರದ ಅಧೀನದಲ್ಲಿ ಬರುವ ಪೊಲೀಸ್ ಇಲಾಖೆ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದೆ. ಜನರನ್ನು ರಕ್ಷಿಸಬೇಕಾದ ಪೊಲೀಸರು ಗೂಂಡಾಗಳಂತೆ ವರ್ತಿಸಿರುವುದು ಸಮಂಜಸವಲ್ಲ ಎಂಬ ಮಾತುಗಳು ಕೇಳಿಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಾಲಾಯಕ್ ಕೇಂದ್ರ ಸರ್ಕಾರ; ನಾಲಾಯಕ್ ದೆಹಲಿ ಪೋಲಿಸ್. ಇಂಥವರಿಂದ ಇಂಥಹ ಕೆಲಸಗಳೇ ಆಗೋದು.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...