Homeಮುಖಪುಟ'ಕಾಣೆಯಾದವರ' ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

- Advertisement -
- Advertisement -

ನ್ಯಾಯಾಂಗದ ಬಂಧುಗಳ ಹಲವು ಪ್ರಯತ್ನಗಳ ಬಳಿಕವೂ ದೆಹಲಿ ಪೊಲೀಸರ ದೌರ್ಜನ್ಯ ಮತ್ತು ಶೋಷಣೆ ಮುಂದುವರೆದಿದೆ. ಮುಗ್ದ ಜನ/ರೈತರ ಮೇಲೆ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ ಮತ್ತು ನೂರಾರು ಜನರನ್ನು ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯನ್ನು ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸದೆ ಕಾನೂನು ಬಾಹಿರವಾಗಿ ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಆಲ್‌ ಇಂಡಿಯಾ ಲೀಗಲ್‌ ಫ್ರಟರ್ನಿಟಿ ಫಾರ್‌ ಫಾರ್ಮರ್ಸ್‌ ವೇದಿಕೆ ಹೇಳಿಕೆ ನೀಡಿದೆ.

ರೈತರ ಪರವಾಗಿ ಯಾರೇ ದನಿ ಎತ್ತಿದರೂ ಅವರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ. ಇದಕ್ಕೆ ಅಂತಾರಾಷ್ಟ್ರೀಯ ವ್ಯಕ್ತಿಗಳು ಹೊರತಾಗಿಲ್ಲ. ಈ ಬೆಳವಣಿಗೆ ದೇಶದ ಪ್ರಜಾಸತ್ತಾತ್ಮಕ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ವೇದಿಕೆಯ ವಕೀಲರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ತಮ್ಮ ಈ ಕಾನೂನು ಬಾಹಿರ ನಡೆಗಳಿಂದ ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತಿವೆ. ಹಾಗಾಗಿ ವಕೀಲ ಬಂಧುಗಳು ಬಹಿರಂಗವಾಗಿ ರೈತರ ಬೆಂಬಲಕ್ಕೆ ನಿಂತಿದ್ದಾರೆ. ಫೆ. 8ರಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ಪೊಲೀಸ್‌ ಕೇಂದ್ರ ಕಚೇರಿಯ ಎದುರು ಧರಣಿ ನಡೆಸಲು ತೀರ್ಮಾನಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಧರಣಿಯಲ್ಲಿ ದೇಶದ ಎಲ್ಲ ವಕೀಲ ಸಂಘಟನೆಗಳು ಪಾಲ್ಗೊಳ್ಳಬೇಕು ಮತ್ತು ಭಾರತದ ರೈತರೊಂದಿಗೆ ನಿಂತು ಒಗ್ಗಟ್ಟು ಪ್ರದರ್ಶಿಸಬೇಕು. ಅಷ್ಟೇ ಅಲ್ಲ, ರೈತರ ಹೋರಾಟದ ವಿಷಯದಲ್ಲಿ ಸತ್ಯ ಪಕ್ಷಪಾತಿಗಳಾಗಿ ಮಾಡಿದ ಮುಕ್ತ ಹಾಗೂ ನಿರ್ಭೀತ ಪತ್ರಕರ್ತರಿಗೂ ಬೆಂಬಲ ಸೂಚಿಸಬೇಕು ಎಂದು ಕರೆ ನೀಡಿದೆ.

ಆಲ್‌ ಇಂಡಿಯಾ ಲೀಗಲ್‌ ಫ್ರಟರ್ನಿಟಿ ಫಾರ್ಮರ್ಸ್‌ನ ಸದಸ್ಯರ ಸಂಪರ್ಕ ಸಂಖ್ಯೆಗಳು ಹೀಗಿವೆ: 98158140429, 9815518528, 7015610207


ಇದನ್ನೂ ಓದಿ: ರೈತ ಹೋರಾಟ: ನಾಳೆಯ ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...