Homeಮುಖಪುಟ'ಕಾಣೆಯಾದವರ' ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

- Advertisement -
- Advertisement -

ನ್ಯಾಯಾಂಗದ ಬಂಧುಗಳ ಹಲವು ಪ್ರಯತ್ನಗಳ ಬಳಿಕವೂ ದೆಹಲಿ ಪೊಲೀಸರ ದೌರ್ಜನ್ಯ ಮತ್ತು ಶೋಷಣೆ ಮುಂದುವರೆದಿದೆ. ಮುಗ್ದ ಜನ/ರೈತರ ಮೇಲೆ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ ಮತ್ತು ನೂರಾರು ಜನರನ್ನು ಸುಪ್ರೀಂ ಕೋರ್ಟ್‌ ಮಾರ್ಗಸೂಚಿಯನ್ನು ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸದೆ ಕಾನೂನು ಬಾಹಿರವಾಗಿ ವಶಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಆಲ್‌ ಇಂಡಿಯಾ ಲೀಗಲ್‌ ಫ್ರಟರ್ನಿಟಿ ಫಾರ್‌ ಫಾರ್ಮರ್ಸ್‌ ವೇದಿಕೆ ಹೇಳಿಕೆ ನೀಡಿದೆ.

ರೈತರ ಪರವಾಗಿ ಯಾರೇ ದನಿ ಎತ್ತಿದರೂ ಅವರ ವಿರುದ್ಧ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ. ಇದಕ್ಕೆ ಅಂತಾರಾಷ್ಟ್ರೀಯ ವ್ಯಕ್ತಿಗಳು ಹೊರತಾಗಿಲ್ಲ. ಈ ಬೆಳವಣಿಗೆ ದೇಶದ ಪ್ರಜಾಸತ್ತಾತ್ಮಕ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ವೇದಿಕೆಯ ವಕೀಲರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಮತ್ತು ಕೇಂದ್ರ ಸರ್ಕಾರ ತಮ್ಮ ಈ ಕಾನೂನು ಬಾಹಿರ ನಡೆಗಳಿಂದ ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತಿವೆ. ಹಾಗಾಗಿ ವಕೀಲ ಬಂಧುಗಳು ಬಹಿರಂಗವಾಗಿ ರೈತರ ಬೆಂಬಲಕ್ಕೆ ನಿಂತಿದ್ದಾರೆ. ಫೆ. 8ರಂದು ಮಧ್ಯಾಹ್ನ 2 ಗಂಟೆಗೆ ದೆಹಲಿಯ ಪೊಲೀಸ್‌ ಕೇಂದ್ರ ಕಚೇರಿಯ ಎದುರು ಧರಣಿ ನಡೆಸಲು ತೀರ್ಮಾನಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಧರಣಿಯಲ್ಲಿ ದೇಶದ ಎಲ್ಲ ವಕೀಲ ಸಂಘಟನೆಗಳು ಪಾಲ್ಗೊಳ್ಳಬೇಕು ಮತ್ತು ಭಾರತದ ರೈತರೊಂದಿಗೆ ನಿಂತು ಒಗ್ಗಟ್ಟು ಪ್ರದರ್ಶಿಸಬೇಕು. ಅಷ್ಟೇ ಅಲ್ಲ, ರೈತರ ಹೋರಾಟದ ವಿಷಯದಲ್ಲಿ ಸತ್ಯ ಪಕ್ಷಪಾತಿಗಳಾಗಿ ಮಾಡಿದ ಮುಕ್ತ ಹಾಗೂ ನಿರ್ಭೀತ ಪತ್ರಕರ್ತರಿಗೂ ಬೆಂಬಲ ಸೂಚಿಸಬೇಕು ಎಂದು ಕರೆ ನೀಡಿದೆ.

ಆಲ್‌ ಇಂಡಿಯಾ ಲೀಗಲ್‌ ಫ್ರಟರ್ನಿಟಿ ಫಾರ್ಮರ್ಸ್‌ನ ಸದಸ್ಯರ ಸಂಪರ್ಕ ಸಂಖ್ಯೆಗಳು ಹೀಗಿವೆ: 98158140429, 9815518528, 7015610207


ಇದನ್ನೂ ಓದಿ: ರೈತ ಹೋರಾಟ: ನಾಳೆಯ ‘ಚಕ್ಕಾ ಜಾಮ್’ ರಸ್ತೆ ತಡೆ ಪ್ರತಿಭಟನೆ ಹೇಗಿರಲಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...