Homeಮುಖಪುಟದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ 48 ವರ್ಷದ ಪರ್ವೇಜ್ ಹತ್ಯೆಯ ಪ್ರಕರಣದಲ್ಲಿ, ದೆಹಲಿ ಪೊಲೀಸ್ ಅಪರಾಧ ಶಾಖೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) 16 ಸದಸ್ಯರ ವಿರುದ್ಧ ತಮ್ಮ ಚಾರ್ಜ್‌ಶೀಟ್ ಸಲ್ಲಿಸಿದ್ದು, ಮುಖ್ಯವಾಗಿ ಹತ್ತು ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸಿದೆ. ಇವರು ಅಪರಾಧಕ್ಕೆ ಪ್ರತ್ಯಕ್ಷದರ್ಶಿಯಾಗಿದ್ದಾರೆ ಎನ್ನಲಾಗಿದೆ.

16 ಆರೋಪಿಗಳ ವಿರುದ್ಧ ಸೆಕ್ಷನ್ 302 (ಕೊಲೆ), 147 (ಗಲಭೆ), 148 (ಗಲಭೆ, ಶಸ್ತ್ರಸಜ್ಜಿತ ಆಯುಧದಿಂದ ಮಾರಣಾಂತಿಕ ಹಲ್ಲೆ), 149 (ಕಾನೂನುಬಾಹಿರ ಸಭೆ), 188 (ಸಾರ್ವಜನಿಕ ಸೇವಕರಿಂದ ಸರಿಯಾಗಿ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ) 201 (ಕಣ್ಮರೆ, ಅಪರಾಧದ ಪುರಾವೆಗಳು, ಸುಳ್ಳು ಮಾಹಿತಿ ನೀಡುವುದು), ಭಾರತೀಯ ದಂಡ ಸಂಹಿತೆಯ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 27 ನ್ನು ಚಾರ್ಜ್ ಶೀಟ್ ನಲ್ಲಿ ಹಾಕಲಾಗಿದೆ.

ಪರ್ವೇಜ್ ಆಲಂ ಹತ್ಯೆ: ಫೆಬ್ರವರಿ 25 ರಂದು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.

ಈ ಪ್ರಕರಣವು ಪರ್ವೇಜ್ ಅವರ ಸಾವಿನ ಬಗ್ಗೆ, ಅವರ ಮಗ ಸಾಹಿಲ್, ಈಶಾನ್ಯ ದೆಹಲಿಯ ಉತ್ತರ ಘೋಂಡಾ ಪ್ರದೇಶದಲ್ಲಿ ಫೆಬ್ರವರಿ 25 ರಂದು ಸಂಜೆ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದಿರುವುದಕ್ಕೆ ದೂರುದಾರ ಮತ್ತು ಪ್ರತ್ಯಕ್ಷದರ್ಶಿ. ಸಾಹಿಲ್ ತನ್ನ ತಂದೆಯ ಹಿಂದೆ ಇದ್ದನು, ಸಂಜೆ ಪ್ರಾರ್ಥನೆಗಾಗಿ ಸ್ಥಳೀಯ ಮಸೀದಿಗೆ ಹೋಗುವಾಗ, ಕೆಲವು ದೂರ ನಡೆದ ನಂತರ ಸುಶೀಲ್ ಕುಮಾರ್ ಅವರಿಗೆ ಗುಂಡು ಹಾರಿಸಿದ್ದನು.

ಗುಂಪನ್ನು ಮುನ್ನಡೆಸಿದ ಮತ್ತು ಸಾಹಿಲ್ ತಂದೆಯ ಮೇಲೆ ಗುಂಡು ಹಾರಿಸಿದ ಪ್ರಮುಖ ಆರೋಪಿ ಕುಮಾರ್. ಪರ್ವೇಜ್ ಒಂದೂವರೆ ಗಂಟೆಯ ನಂತರ ರಾತ್ರಿ 8:30 ರ ಹೊತ್ತಿಗೆ ಜಿಟಿಬಿ ಆಸ್ಪತ್ರೆಯಲ್ಲಿ ನಿಧನರಾದರು, ಆದರೆ ಈಶಾನ್ಯ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಗಲಭೆಗಳು ಮುಂದುವರೆದವು.

ಈ ಪ್ರಕರಣವನ್ನು ಮೂಲತಃ ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮಾರ್ಚ್ 4 ರಂದು ಅಪರಾಧ ಶಾಖೆ ಎಸ್‌ಐಟಿಗೆ ವರ್ಗಾಯಿಸಿತು. ಏಪ್ರಿಲ್ 9 ರಂದು 22 ಮಂದಿ ಆರೋಪಿಗಳನ್ನು ದಿನವಿಡೀ ವಿಚಾರಣೆ ನಡೆಸಲಾಯಿತು ಮತ್ತು ಸಾಹಿಲ್ ಅವರ ದೂರಿನ ಆಧಾರದ ಮೇಲೆ 16 ಜನ ಪುರುಷ ಆರೋಪಿಗಳನ್ನು ಬಂಧಿಸಲಾಯಿತು. ಬಂಧಿಸಲ್ಪಟ್ಟ ಎಲ್ಲ 16 ಮಂದಿ ಆರ್‌ಎಸ್‌ಎಸ್ ಮೂಲದವರು ಎಂದು ಕ್ವಿಂಟ್ ದೃಢಪಡಿಸಿದೆ. ಬಂಧಿತರ ಸಂಬಂಧಿಕರೊಂದಿಗೆ ಮಾತನಾಡುವುದರ ಮೂಲಕ ಮಾತ್ರವಲ್ಲದೆ ಆರ್‌ಎಸ್‌ಎಸ್ ಕಾರ್ಯಕರ್ತರ ಮೂರು ಪುಟಗಳ ಹೇಳಿಕೆಯೂ ಅದನ್ನು ದೃಢಪಡಿಸಿದೆ. ಹೇಳಿಕೆಯನ್ನು ಇಲ್ಲಿ ಓದಬಹುದು.

16 ಆರೋಪಿಗಳ ವಿರುದ್ಧ ಸಾಕ್ಷ್ಯ

ಆರಂಭಿಕ ಎಫ್‌ಐಆರ್ ಐಪಿಸಿಯ ಸೆಕ್ಷನ್ 302 (ಕೊಲೆ)ನ್ನು ಆರೋಪಿಗಳ ವಿರುದ್ಧದ ಆರೋಪವಾಗಿ ಮಾತ್ರ ಹೊಂದಿದ್ದರೆ, ತನಿಖೆಯ ಸಂದರ್ಭದಲ್ಲಿ ಇತರ ಸೆಕ್ಷನ್ ಗಳನ್ನು ಸೇರಿಸಲಾಗಿದೆ.

“ಏಪ್ರಿಲ್ 9 ರಂದು, ಕ್ರೈಂ ಬ್ರಾಂಚ್, ದ್ವಾರಕಾ ಕಚೇರಿ ಸಾಕ್ಷಿಗಳ ಹೇಳಿಕೆಗಳು, ಎಲೆಕ್ಟ್ರಾನಿಕ್ ಸಾಕ್ಷ್ಯಗಳು, ಸಂದರ್ಭಗಳು ಇತ್ಯಾದಿಗಳ ಆಧಾರದ ಮೇಲೆ 16 ಜನರನ್ನು ಬಂಧಿಸಲಾಯಿತು” ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ. “ಉತ್ತಮ ಪ್ರಯತ್ನಗಳ” ಹೊರತಾಗಿಯೂ ಪೊಲೀಸರು ಇನ್ನೂ ಅಪರಾಧ ಸಂದರ್ಭದಲ್ಲಿ ಬಳಸಿದ ಆಯುಧವನ್ನು ಮರುಪಡೆಯಬೇಕಾಗಿದೆ.

ಮೂರು ಅನಾಮಧೇಯ ಸಾಕ್ಷಿಗಳು, ಮತ್ತು ಕಾಲ್ ಡಿಟೇಲ್ ರೆಕಾರ್ಡ್ಸ್ (ಸಿಡಿಆರ್) ಸೇರಿದಂತೆ ಹೇಳಿಕೆ ಸಾಕ್ಷಿಗಳು ಮತ್ತು ಪೊಲೀಸರ ಸಾಕ್ಷ್ಯಗಳಿಂದ ಬಹುಪಾಲು ಆರೋಪಿಗಳ ಪಾತ್ರಕ್ಕೆ ಸಾಕ್ಷಿಯಿದೆ ಎಂದು ಚಾರ್ಜ್ ಶೀಟ್ ನಿಂದ ತಿಳಿದುಬರುತ್ತದೆ.

ಸಾಹಿಲ್ ಅವರ ಹೇಳಿಕೆಯನ್ನು ಹೊರತುಪಡಿಸಿ, ಪೊಲೀಸರು ಇತರ ಹತ್ತು ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅದರಲ್ಲಿ ಮೂವರು ಸಾರ್ವಜನಿಕ ಸಾಕ್ಷಿಗಳು. ಅವರ ಗುರುತುಗಳನ್ನು ಬಹಿರಂಗಪಡಿಸಲಾಗಿಲ್ಲ.

ಅವರ ಹೇಳಿಕೆಯು ಹೀಗಿದೆ: “(ಫೆಬ್ರವರಿ 25 ರಂದು) ಸಂಜೆ 7 ರ ಸುಮಾರಿಗೆ, ನಾನು ಕೆಲವು ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟಾಗ, ಗಲಭೆಕೋರರು ಬೀದಿ ಸಂಖ್ಯೆ 6 ರ ಸುತ್ತಲೂ ನಿಂತಿರುವುದನ್ನು ನೋಡಿದೆ. ಅವರ ಕೈಯಲ್ಲಿ ಕೋಲುಗಳು, ಕಬ್ಬಿಣದ ಸರಳುಗಳು ಮತ್ತು ಆಯುಧಗಳು ಇದ್ದವು. ಸುಶೀಲ್ ಕುಮಾರ್ ಕಡೆಗೆ ಸಾಗುತ್ತಿದ್ದರು. ಅವರ ಕೈಯಲ್ಲಿ ಶಾಟ್‌ಗನ್‌ನಂತೆ ಕಾಣುವಂತಹದ್ದು ಇತ್ತು.

ಅವರೊಂದಿಗೆ ಜೈಬೀರ್ ಸಿಂಗ್, ಪವನ್ ಕುಮಾರ್, ಅಮಿತ್, ಉತ್ತಮ್ ಚಂದ್ ಮಿಶ್ರಾ, ಹರಿ ಓಂ ಮಿಶ್ರಾ ಮತ್ತು ಸಂದೀಪ್ ಚಾವ್ಲಾ ಮತ್ತು ಇತರರು ಇದ್ದರು. ರಸ್ತೆ ಸಂಖ್ಯೆ 9 ಉತ್ತರ ಘೋಂಡಾ ಪವನ್ ಎಲೆಕ್ಟ್ರಾನಿಕ್ಸ್ ಅಂಗಡಿಯ ಬಳಿ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಸುಶೀಲ್ ಗುಂಡು ಹಾರಿಸಿದ್ದಾನೆ.

ಚಾರ್ಜ್ ಶೀಟ್‌ನಲ್ಲಿನ ಏಳು ಮಂದಿಯನ್ನು ಹೆಸರಿನಿಂದ ಮತ್ತು ಉಳಿದವರನ್ನು ಮುಖದಿಂದ, ಒಟ್ಟು ಎಲ್ಲಾ ಹದಿನಾರು ಆರೋಪಿಗಳನ್ನು ಸಹ ಗುರುತಿಸಿದ್ದಾರೆ.

ಸ್ಥಳೀಯರಾದ ರಿಜ್ವಾನ್, 16 ಆರೋಪಿಗಳಲ್ಲಿ ಎಂಟು ಮಂದಿಯನ್ನು ಹೆಸರಿಸಿದ್ದಾರೆ. ಆದಾಗ್ಯೂ, ಅವರು ಗಲಭೆಯನ್ನು ಮಾತ್ರ ನೋಡಿದ್ದಾರೆ ಎಂದು ಅವರು ಹೇಳುತ್ತಾರೆ. ನಂತರವೇ ಜನರ ಗುಂಪು ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...