Homeಮುಖಪುಟದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ 48 ವರ್ಷದ ಪರ್ವೇಜ್ ಹತ್ಯೆಯ ಪ್ರಕರಣದಲ್ಲಿ, ದೆಹಲಿ ಪೊಲೀಸ್ ಅಪರಾಧ ಶಾಖೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) 16 ಸದಸ್ಯರ ವಿರುದ್ಧ ತಮ್ಮ ಚಾರ್ಜ್‌ಶೀಟ್ ಸಲ್ಲಿಸಿದ್ದು, ಮುಖ್ಯವಾಗಿ ಹತ್ತು ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸಿದೆ. ಇವರು ಅಪರಾಧಕ್ಕೆ ಪ್ರತ್ಯಕ್ಷದರ್ಶಿಯಾಗಿದ್ದಾರೆ ಎನ್ನಲಾಗಿದೆ.

16 ಆರೋಪಿಗಳ ವಿರುದ್ಧ ಸೆಕ್ಷನ್ 302 (ಕೊಲೆ), 147 (ಗಲಭೆ), 148 (ಗಲಭೆ, ಶಸ್ತ್ರಸಜ್ಜಿತ ಆಯುಧದಿಂದ ಮಾರಣಾಂತಿಕ ಹಲ್ಲೆ), 149 (ಕಾನೂನುಬಾಹಿರ ಸಭೆ), 188 (ಸಾರ್ವಜನಿಕ ಸೇವಕರಿಂದ ಸರಿಯಾಗಿ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ) 201 (ಕಣ್ಮರೆ, ಅಪರಾಧದ ಪುರಾವೆಗಳು, ಸುಳ್ಳು ಮಾಹಿತಿ ನೀಡುವುದು), ಭಾರತೀಯ ದಂಡ ಸಂಹಿತೆಯ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 27 ನ್ನು ಚಾರ್ಜ್ ಶೀಟ್ ನಲ್ಲಿ ಹಾಕಲಾಗಿದೆ.

ಪರ್ವೇಜ್ ಆಲಂ ಹತ್ಯೆ: ಫೆಬ್ರವರಿ 25 ರಂದು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.

ಈ ಪ್ರಕರಣವು ಪರ್ವೇಜ್ ಅವರ ಸಾವಿನ ಬಗ್ಗೆ, ಅವರ ಮಗ ಸಾಹಿಲ್, ಈಶಾನ್ಯ ದೆಹಲಿಯ ಉತ್ತರ ಘೋಂಡಾ ಪ್ರದೇಶದಲ್ಲಿ ಫೆಬ್ರವರಿ 25 ರಂದು ಸಂಜೆ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದಿರುವುದಕ್ಕೆ ದೂರುದಾರ ಮತ್ತು ಪ್ರತ್ಯಕ್ಷದರ್ಶಿ. ಸಾಹಿಲ್ ತನ್ನ ತಂದೆಯ ಹಿಂದೆ ಇದ್ದನು, ಸಂಜೆ ಪ್ರಾರ್ಥನೆಗಾಗಿ ಸ್ಥಳೀಯ ಮಸೀದಿಗೆ ಹೋಗುವಾಗ, ಕೆಲವು ದೂರ ನಡೆದ ನಂತರ ಸುಶೀಲ್ ಕುಮಾರ್ ಅವರಿಗೆ ಗುಂಡು ಹಾರಿಸಿದ್ದನು.

ಗುಂಪನ್ನು ಮುನ್ನಡೆಸಿದ ಮತ್ತು ಸಾಹಿಲ್ ತಂದೆಯ ಮೇಲೆ ಗುಂಡು ಹಾರಿಸಿದ ಪ್ರಮುಖ ಆರೋಪಿ ಕುಮಾರ್. ಪರ್ವೇಜ್ ಒಂದೂವರೆ ಗಂಟೆಯ ನಂತರ ರಾತ್ರಿ 8:30 ರ ಹೊತ್ತಿಗೆ ಜಿಟಿಬಿ ಆಸ್ಪತ್ರೆಯಲ್ಲಿ ನಿಧನರಾದರು, ಆದರೆ ಈಶಾನ್ಯ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಗಲಭೆಗಳು ಮುಂದುವರೆದವು.

ಈ ಪ್ರಕರಣವನ್ನು ಮೂಲತಃ ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮಾರ್ಚ್ 4 ರಂದು ಅಪರಾಧ ಶಾಖೆ ಎಸ್‌ಐಟಿಗೆ ವರ್ಗಾಯಿಸಿತು. ಏಪ್ರಿಲ್ 9 ರಂದು 22 ಮಂದಿ ಆರೋಪಿಗಳನ್ನು ದಿನವಿಡೀ ವಿಚಾರಣೆ ನಡೆಸಲಾಯಿತು ಮತ್ತು ಸಾಹಿಲ್ ಅವರ ದೂರಿನ ಆಧಾರದ ಮೇಲೆ 16 ಜನ ಪುರುಷ ಆರೋಪಿಗಳನ್ನು ಬಂಧಿಸಲಾಯಿತು. ಬಂಧಿಸಲ್ಪಟ್ಟ ಎಲ್ಲ 16 ಮಂದಿ ಆರ್‌ಎಸ್‌ಎಸ್ ಮೂಲದವರು ಎಂದು ಕ್ವಿಂಟ್ ದೃಢಪಡಿಸಿದೆ. ಬಂಧಿತರ ಸಂಬಂಧಿಕರೊಂದಿಗೆ ಮಾತನಾಡುವುದರ ಮೂಲಕ ಮಾತ್ರವಲ್ಲದೆ ಆರ್‌ಎಸ್‌ಎಸ್ ಕಾರ್ಯಕರ್ತರ ಮೂರು ಪುಟಗಳ ಹೇಳಿಕೆಯೂ ಅದನ್ನು ದೃಢಪಡಿಸಿದೆ. ಹೇಳಿಕೆಯನ್ನು ಇಲ್ಲಿ ಓದಬಹುದು.

16 ಆರೋಪಿಗಳ ವಿರುದ್ಧ ಸಾಕ್ಷ್ಯ

ಆರಂಭಿಕ ಎಫ್‌ಐಆರ್ ಐಪಿಸಿಯ ಸೆಕ್ಷನ್ 302 (ಕೊಲೆ)ನ್ನು ಆರೋಪಿಗಳ ವಿರುದ್ಧದ ಆರೋಪವಾಗಿ ಮಾತ್ರ ಹೊಂದಿದ್ದರೆ, ತನಿಖೆಯ ಸಂದರ್ಭದಲ್ಲಿ ಇತರ ಸೆಕ್ಷನ್ ಗಳನ್ನು ಸೇರಿಸಲಾಗಿದೆ.

“ಏಪ್ರಿಲ್ 9 ರಂದು, ಕ್ರೈಂ ಬ್ರಾಂಚ್, ದ್ವಾರಕಾ ಕಚೇರಿ ಸಾಕ್ಷಿಗಳ ಹೇಳಿಕೆಗಳು, ಎಲೆಕ್ಟ್ರಾನಿಕ್ ಸಾಕ್ಷ್ಯಗಳು, ಸಂದರ್ಭಗಳು ಇತ್ಯಾದಿಗಳ ಆಧಾರದ ಮೇಲೆ 16 ಜನರನ್ನು ಬಂಧಿಸಲಾಯಿತು” ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ. “ಉತ್ತಮ ಪ್ರಯತ್ನಗಳ” ಹೊರತಾಗಿಯೂ ಪೊಲೀಸರು ಇನ್ನೂ ಅಪರಾಧ ಸಂದರ್ಭದಲ್ಲಿ ಬಳಸಿದ ಆಯುಧವನ್ನು ಮರುಪಡೆಯಬೇಕಾಗಿದೆ.

ಮೂರು ಅನಾಮಧೇಯ ಸಾಕ್ಷಿಗಳು, ಮತ್ತು ಕಾಲ್ ಡಿಟೇಲ್ ರೆಕಾರ್ಡ್ಸ್ (ಸಿಡಿಆರ್) ಸೇರಿದಂತೆ ಹೇಳಿಕೆ ಸಾಕ್ಷಿಗಳು ಮತ್ತು ಪೊಲೀಸರ ಸಾಕ್ಷ್ಯಗಳಿಂದ ಬಹುಪಾಲು ಆರೋಪಿಗಳ ಪಾತ್ರಕ್ಕೆ ಸಾಕ್ಷಿಯಿದೆ ಎಂದು ಚಾರ್ಜ್ ಶೀಟ್ ನಿಂದ ತಿಳಿದುಬರುತ್ತದೆ.

ಸಾಹಿಲ್ ಅವರ ಹೇಳಿಕೆಯನ್ನು ಹೊರತುಪಡಿಸಿ, ಪೊಲೀಸರು ಇತರ ಹತ್ತು ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅದರಲ್ಲಿ ಮೂವರು ಸಾರ್ವಜನಿಕ ಸಾಕ್ಷಿಗಳು. ಅವರ ಗುರುತುಗಳನ್ನು ಬಹಿರಂಗಪಡಿಸಲಾಗಿಲ್ಲ.

ಅವರ ಹೇಳಿಕೆಯು ಹೀಗಿದೆ: “(ಫೆಬ್ರವರಿ 25 ರಂದು) ಸಂಜೆ 7 ರ ಸುಮಾರಿಗೆ, ನಾನು ಕೆಲವು ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟಾಗ, ಗಲಭೆಕೋರರು ಬೀದಿ ಸಂಖ್ಯೆ 6 ರ ಸುತ್ತಲೂ ನಿಂತಿರುವುದನ್ನು ನೋಡಿದೆ. ಅವರ ಕೈಯಲ್ಲಿ ಕೋಲುಗಳು, ಕಬ್ಬಿಣದ ಸರಳುಗಳು ಮತ್ತು ಆಯುಧಗಳು ಇದ್ದವು. ಸುಶೀಲ್ ಕುಮಾರ್ ಕಡೆಗೆ ಸಾಗುತ್ತಿದ್ದರು. ಅವರ ಕೈಯಲ್ಲಿ ಶಾಟ್‌ಗನ್‌ನಂತೆ ಕಾಣುವಂತಹದ್ದು ಇತ್ತು.

ಅವರೊಂದಿಗೆ ಜೈಬೀರ್ ಸಿಂಗ್, ಪವನ್ ಕುಮಾರ್, ಅಮಿತ್, ಉತ್ತಮ್ ಚಂದ್ ಮಿಶ್ರಾ, ಹರಿ ಓಂ ಮಿಶ್ರಾ ಮತ್ತು ಸಂದೀಪ್ ಚಾವ್ಲಾ ಮತ್ತು ಇತರರು ಇದ್ದರು. ರಸ್ತೆ ಸಂಖ್ಯೆ 9 ಉತ್ತರ ಘೋಂಡಾ ಪವನ್ ಎಲೆಕ್ಟ್ರಾನಿಕ್ಸ್ ಅಂಗಡಿಯ ಬಳಿ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಸುಶೀಲ್ ಗುಂಡು ಹಾರಿಸಿದ್ದಾನೆ.

ಚಾರ್ಜ್ ಶೀಟ್‌ನಲ್ಲಿನ ಏಳು ಮಂದಿಯನ್ನು ಹೆಸರಿನಿಂದ ಮತ್ತು ಉಳಿದವರನ್ನು ಮುಖದಿಂದ, ಒಟ್ಟು ಎಲ್ಲಾ ಹದಿನಾರು ಆರೋಪಿಗಳನ್ನು ಸಹ ಗುರುತಿಸಿದ್ದಾರೆ.

ಸ್ಥಳೀಯರಾದ ರಿಜ್ವಾನ್, 16 ಆರೋಪಿಗಳಲ್ಲಿ ಎಂಟು ಮಂದಿಯನ್ನು ಹೆಸರಿಸಿದ್ದಾರೆ. ಆದಾಗ್ಯೂ, ಅವರು ಗಲಭೆಯನ್ನು ಮಾತ್ರ ನೋಡಿದ್ದಾರೆ ಎಂದು ಅವರು ಹೇಳುತ್ತಾರೆ. ನಂತರವೇ ಜನರ ಗುಂಪು ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...