Homeಮುಖಪುಟದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

ದೆಹಲಿ ಗಲಭೆ: 16 ಆರ್‌ಎಸ್‌ಎಸ್ ಆರೋಪಿಗಳ ವಿರುದ್ಧ ದೆಹಲಿ ಪೊಲೀಸ್ ಚಾರ್ಜ್‌ಶೀಟ್

- Advertisement -
- Advertisement -

ಈಶಾನ್ಯ ದೆಹಲಿ ಗಲಭೆಯಲ್ಲಿ 48 ವರ್ಷದ ಪರ್ವೇಜ್ ಹತ್ಯೆಯ ಪ್ರಕರಣದಲ್ಲಿ, ದೆಹಲಿ ಪೊಲೀಸ್ ಅಪರಾಧ ಶಾಖೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) 16 ಸದಸ್ಯರ ವಿರುದ್ಧ ತಮ್ಮ ಚಾರ್ಜ್‌ಶೀಟ್ ಸಲ್ಲಿಸಿದ್ದು, ಮುಖ್ಯವಾಗಿ ಹತ್ತು ಸಾಕ್ಷಿಗಳ ಸಾಕ್ಷ್ಯಗಳನ್ನು ಅವಲಂಬಿಸಿದೆ. ಇವರು ಅಪರಾಧಕ್ಕೆ ಪ್ರತ್ಯಕ್ಷದರ್ಶಿಯಾಗಿದ್ದಾರೆ ಎನ್ನಲಾಗಿದೆ.

16 ಆರೋಪಿಗಳ ವಿರುದ್ಧ ಸೆಕ್ಷನ್ 302 (ಕೊಲೆ), 147 (ಗಲಭೆ), 148 (ಗಲಭೆ, ಶಸ್ತ್ರಸಜ್ಜಿತ ಆಯುಧದಿಂದ ಮಾರಣಾಂತಿಕ ಹಲ್ಲೆ), 149 (ಕಾನೂನುಬಾಹಿರ ಸಭೆ), 188 (ಸಾರ್ವಜನಿಕ ಸೇವಕರಿಂದ ಸರಿಯಾಗಿ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ) 201 (ಕಣ್ಮರೆ, ಅಪರಾಧದ ಪುರಾವೆಗಳು, ಸುಳ್ಳು ಮಾಹಿತಿ ನೀಡುವುದು), ಭಾರತೀಯ ದಂಡ ಸಂಹಿತೆಯ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 27 ನ್ನು ಚಾರ್ಜ್ ಶೀಟ್ ನಲ್ಲಿ ಹಾಕಲಾಗಿದೆ.

ಪರ್ವೇಜ್ ಆಲಂ ಹತ್ಯೆ: ಫೆಬ್ರವರಿ 25 ರಂದು ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.

ಈ ಪ್ರಕರಣವು ಪರ್ವೇಜ್ ಅವರ ಸಾವಿನ ಬಗ್ಗೆ, ಅವರ ಮಗ ಸಾಹಿಲ್, ಈಶಾನ್ಯ ದೆಹಲಿಯ ಉತ್ತರ ಘೋಂಡಾ ಪ್ರದೇಶದಲ್ಲಿ ಫೆಬ್ರವರಿ 25 ರಂದು ಸಂಜೆ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದಿರುವುದಕ್ಕೆ ದೂರುದಾರ ಮತ್ತು ಪ್ರತ್ಯಕ್ಷದರ್ಶಿ. ಸಾಹಿಲ್ ತನ್ನ ತಂದೆಯ ಹಿಂದೆ ಇದ್ದನು, ಸಂಜೆ ಪ್ರಾರ್ಥನೆಗಾಗಿ ಸ್ಥಳೀಯ ಮಸೀದಿಗೆ ಹೋಗುವಾಗ, ಕೆಲವು ದೂರ ನಡೆದ ನಂತರ ಸುಶೀಲ್ ಕುಮಾರ್ ಅವರಿಗೆ ಗುಂಡು ಹಾರಿಸಿದ್ದನು.

ಗುಂಪನ್ನು ಮುನ್ನಡೆಸಿದ ಮತ್ತು ಸಾಹಿಲ್ ತಂದೆಯ ಮೇಲೆ ಗುಂಡು ಹಾರಿಸಿದ ಪ್ರಮುಖ ಆರೋಪಿ ಕುಮಾರ್. ಪರ್ವೇಜ್ ಒಂದೂವರೆ ಗಂಟೆಯ ನಂತರ ರಾತ್ರಿ 8:30 ರ ಹೊತ್ತಿಗೆ ಜಿಟಿಬಿ ಆಸ್ಪತ್ರೆಯಲ್ಲಿ ನಿಧನರಾದರು, ಆದರೆ ಈಶಾನ್ಯ ದೆಹಲಿಯ ವಿವಿಧ ಪ್ರದೇಶಗಳಲ್ಲಿ ಗಲಭೆಗಳು ಮುಂದುವರೆದವು.

ಈ ಪ್ರಕರಣವನ್ನು ಮೂಲತಃ ಜಾಫ್ರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಮಾರ್ಚ್ 4 ರಂದು ಅಪರಾಧ ಶಾಖೆ ಎಸ್‌ಐಟಿಗೆ ವರ್ಗಾಯಿಸಿತು. ಏಪ್ರಿಲ್ 9 ರಂದು 22 ಮಂದಿ ಆರೋಪಿಗಳನ್ನು ದಿನವಿಡೀ ವಿಚಾರಣೆ ನಡೆಸಲಾಯಿತು ಮತ್ತು ಸಾಹಿಲ್ ಅವರ ದೂರಿನ ಆಧಾರದ ಮೇಲೆ 16 ಜನ ಪುರುಷ ಆರೋಪಿಗಳನ್ನು ಬಂಧಿಸಲಾಯಿತು. ಬಂಧಿಸಲ್ಪಟ್ಟ ಎಲ್ಲ 16 ಮಂದಿ ಆರ್‌ಎಸ್‌ಎಸ್ ಮೂಲದವರು ಎಂದು ಕ್ವಿಂಟ್ ದೃಢಪಡಿಸಿದೆ. ಬಂಧಿತರ ಸಂಬಂಧಿಕರೊಂದಿಗೆ ಮಾತನಾಡುವುದರ ಮೂಲಕ ಮಾತ್ರವಲ್ಲದೆ ಆರ್‌ಎಸ್‌ಎಸ್ ಕಾರ್ಯಕರ್ತರ ಮೂರು ಪುಟಗಳ ಹೇಳಿಕೆಯೂ ಅದನ್ನು ದೃಢಪಡಿಸಿದೆ. ಹೇಳಿಕೆಯನ್ನು ಇಲ್ಲಿ ಓದಬಹುದು.

16 ಆರೋಪಿಗಳ ವಿರುದ್ಧ ಸಾಕ್ಷ್ಯ

ಆರಂಭಿಕ ಎಫ್‌ಐಆರ್ ಐಪಿಸಿಯ ಸೆಕ್ಷನ್ 302 (ಕೊಲೆ)ನ್ನು ಆರೋಪಿಗಳ ವಿರುದ್ಧದ ಆರೋಪವಾಗಿ ಮಾತ್ರ ಹೊಂದಿದ್ದರೆ, ತನಿಖೆಯ ಸಂದರ್ಭದಲ್ಲಿ ಇತರ ಸೆಕ್ಷನ್ ಗಳನ್ನು ಸೇರಿಸಲಾಗಿದೆ.

“ಏಪ್ರಿಲ್ 9 ರಂದು, ಕ್ರೈಂ ಬ್ರಾಂಚ್, ದ್ವಾರಕಾ ಕಚೇರಿ ಸಾಕ್ಷಿಗಳ ಹೇಳಿಕೆಗಳು, ಎಲೆಕ್ಟ್ರಾನಿಕ್ ಸಾಕ್ಷ್ಯಗಳು, ಸಂದರ್ಭಗಳು ಇತ್ಯಾದಿಗಳ ಆಧಾರದ ಮೇಲೆ 16 ಜನರನ್ನು ಬಂಧಿಸಲಾಯಿತು” ಎಂದು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ. “ಉತ್ತಮ ಪ್ರಯತ್ನಗಳ” ಹೊರತಾಗಿಯೂ ಪೊಲೀಸರು ಇನ್ನೂ ಅಪರಾಧ ಸಂದರ್ಭದಲ್ಲಿ ಬಳಸಿದ ಆಯುಧವನ್ನು ಮರುಪಡೆಯಬೇಕಾಗಿದೆ.

ಮೂರು ಅನಾಮಧೇಯ ಸಾಕ್ಷಿಗಳು, ಮತ್ತು ಕಾಲ್ ಡಿಟೇಲ್ ರೆಕಾರ್ಡ್ಸ್ (ಸಿಡಿಆರ್) ಸೇರಿದಂತೆ ಹೇಳಿಕೆ ಸಾಕ್ಷಿಗಳು ಮತ್ತು ಪೊಲೀಸರ ಸಾಕ್ಷ್ಯಗಳಿಂದ ಬಹುಪಾಲು ಆರೋಪಿಗಳ ಪಾತ್ರಕ್ಕೆ ಸಾಕ್ಷಿಯಿದೆ ಎಂದು ಚಾರ್ಜ್ ಶೀಟ್ ನಿಂದ ತಿಳಿದುಬರುತ್ತದೆ.

ಸಾಹಿಲ್ ಅವರ ಹೇಳಿಕೆಯನ್ನು ಹೊರತುಪಡಿಸಿ, ಪೊಲೀಸರು ಇತರ ಹತ್ತು ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅದರಲ್ಲಿ ಮೂವರು ಸಾರ್ವಜನಿಕ ಸಾಕ್ಷಿಗಳು. ಅವರ ಗುರುತುಗಳನ್ನು ಬಹಿರಂಗಪಡಿಸಲಾಗಿಲ್ಲ.

ಅವರ ಹೇಳಿಕೆಯು ಹೀಗಿದೆ: “(ಫೆಬ್ರವರಿ 25 ರಂದು) ಸಂಜೆ 7 ರ ಸುಮಾರಿಗೆ, ನಾನು ಕೆಲವು ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟಾಗ, ಗಲಭೆಕೋರರು ಬೀದಿ ಸಂಖ್ಯೆ 6 ರ ಸುತ್ತಲೂ ನಿಂತಿರುವುದನ್ನು ನೋಡಿದೆ. ಅವರ ಕೈಯಲ್ಲಿ ಕೋಲುಗಳು, ಕಬ್ಬಿಣದ ಸರಳುಗಳು ಮತ್ತು ಆಯುಧಗಳು ಇದ್ದವು. ಸುಶೀಲ್ ಕುಮಾರ್ ಕಡೆಗೆ ಸಾಗುತ್ತಿದ್ದರು. ಅವರ ಕೈಯಲ್ಲಿ ಶಾಟ್‌ಗನ್‌ನಂತೆ ಕಾಣುವಂತಹದ್ದು ಇತ್ತು.

ಅವರೊಂದಿಗೆ ಜೈಬೀರ್ ಸಿಂಗ್, ಪವನ್ ಕುಮಾರ್, ಅಮಿತ್, ಉತ್ತಮ್ ಚಂದ್ ಮಿಶ್ರಾ, ಹರಿ ಓಂ ಮಿಶ್ರಾ ಮತ್ತು ಸಂದೀಪ್ ಚಾವ್ಲಾ ಮತ್ತು ಇತರರು ಇದ್ದರು. ರಸ್ತೆ ಸಂಖ್ಯೆ 9 ಉತ್ತರ ಘೋಂಡಾ ಪವನ್ ಎಲೆಕ್ಟ್ರಾನಿಕ್ಸ್ ಅಂಗಡಿಯ ಬಳಿ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಸುಶೀಲ್ ಗುಂಡು ಹಾರಿಸಿದ್ದಾನೆ.

ಚಾರ್ಜ್ ಶೀಟ್‌ನಲ್ಲಿನ ಏಳು ಮಂದಿಯನ್ನು ಹೆಸರಿನಿಂದ ಮತ್ತು ಉಳಿದವರನ್ನು ಮುಖದಿಂದ, ಒಟ್ಟು ಎಲ್ಲಾ ಹದಿನಾರು ಆರೋಪಿಗಳನ್ನು ಸಹ ಗುರುತಿಸಿದ್ದಾರೆ.

ಸ್ಥಳೀಯರಾದ ರಿಜ್ವಾನ್, 16 ಆರೋಪಿಗಳಲ್ಲಿ ಎಂಟು ಮಂದಿಯನ್ನು ಹೆಸರಿಸಿದ್ದಾರೆ. ಆದಾಗ್ಯೂ, ಅವರು ಗಲಭೆಯನ್ನು ಮಾತ್ರ ನೋಡಿದ್ದಾರೆ ಎಂದು ಅವರು ಹೇಳುತ್ತಾರೆ. ನಂತರವೇ ಜನರ ಗುಂಪು ಹತ್ಯೆ ನಡೆದಿದೆ ಎಂದು ತಿಳಿದು ಬಂದಿದೆ.


ಇದನ್ನೂ ಓದಿ: ದೆಹಲಿ ಗಲಭೆ: ಕೊಲೆ ಆರೋಪದಲ್ಲಿ ಆರ್‌ಎಸ್‌ಎಸ್ ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...