Homeರಾಷ್ಟ್ರೀಯದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ತಪರಾಕಿ ನಂತರ ಸುದರ್ಶನ್‌ ಟಿವಿ ಸಂಪಾದಕನ ದ್ವೇಷ ಭಾಷಣದ ವಿರುದ್ದ FIR

ದೆಹಲಿ ಪೊಲೀಸರಿಗೆ ಸುಪ್ರೀಂಕೋರ್ಟ್ ತಪರಾಕಿ ನಂತರ ಸುದರ್ಶನ್‌ ಟಿವಿ ಸಂಪಾದಕನ ದ್ವೇಷ ಭಾಷಣದ ವಿರುದ್ದ FIR

- Advertisement -
- Advertisement -

ಸುಪ್ರೀಂ ಕೋರ್ಟ್‌ನಿಂದ ವಾಗ್ದಂಡನೆಗೆ ಒಳಗಾದ ನಂತರ ‘ಧರಮ್ ಸಂಸದ್’ಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದ್ವೇಷ ಭಾಷಣದ ಪ್ರಕರಣವನ್ನು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೊಸದಾಗಿ ಅಫಿಡವಿಟ್ ಸಲ್ಲಿಸಿದ್ದು, ಇಂದು ಈ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ನಡೆದ ಹಿಂದೂ ಯುವ ವಾಹಿನಿಯ ಕಾರ್ಯಕ್ರಮವೊಂದರಲ್ಲಿ “ಹಿಂದೂ ರಾಷ್ಟ್ರ”ಕ್ಕಾಗಿ ಕರೆ ನೀಡಿದ ಭಾಷಣವು ‘‘ದ್ವೇಷ ಭಾಷಣವಲ್ಲ” ಎಂದು ದೆಹಲಿ ಪೊಲೀಸರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು. ಇದಕ್ಕೆ ಸುಪ್ರೀಂಕೋರ್ಟ್ ಆಕ್ಷೇಪ ವ್ಯಕ್ತಪಡಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಕಾರ್ಯಕ್ರಮದಲ್ಲಿ ಸುದರ್ಶನ ಸುದ್ದಿ ಟಿವಿ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ ಸಭೆಯಲ್ಲಿ ಸೇರಿದ್ದ ಜನರಿಗೆ ಪ್ರತಿಜ್ಞೆ ಹೇಳಿಕೊಡುತ್ತಾ, “ದೇಶವನ್ನು ಹಿಂದೂ ರಾಷ್ಟ್ರ ಮಾಡುವುದಕ್ಕಾಗಿ ನಾವು ಹೋರಾಡುತ್ತೇವೆ. ಅದಕ್ಕಾಗಿ ಸಾಯುತ್ತೇವೆ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ” ಎಂದು ಹೇಳಿ ಕೊಟ್ಟಿದ್ದರು.

ಇದನ್ನೂ ಓದಿ:ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ 

ಕಾರ್ಯಕ್ರಮವೂ ಕಳೆದ ವರ್ಷ ಡಿಸೆಂಬರ್ 19 ರಂದು ನಡೆದಿದ್ದು, ಬಲಪಂಥೀಯ ಗುಂಪು ಹಿಂದೂ ಯುವ ವಾಹಿನಿ ಆಯೋಜಿಸಿತ್ತು.

ದೆಹಲಿ ಪೊಲೀಸರು ಸಲ್ಲಿಸಿರುವ ಹೊಸ ಅಫಿಡವಿಟ್‌ನಲ್ಲಿ, ವಿಷಯಗಳನ್ನು ಪರಿಶೀಲಿಸಿದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

“ದೂರುಗಳಲ್ಲಿನ ಎಲ್ಲಾ ಲಿಂಕ್‌ಗಳು ಮತ್ತು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿರುವ ಇತರ ವಿಷಯಗಳನ್ನು ವಿಶ್ಲೇಷಿಸಲಾಗಿದೆ. ಘಟನೆಯ ವಿಡಿಯೊ ಯೂಟ್ಯೂಬ್‌ನಲ್ಲಿ ಕಂಡುಬಂದಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಶೀಲನೆಯ ನಂತರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A, 295A, 298 ಮತ್ತು 34 ರ ಅಡಿಯಲ್ಲಿ ಅಪರಾಧಗಳಿಗಾಗಿ ಓಖ್ಲಾ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆಯಲ್ಲಿ ಮೇ 4 ರಂದು ಎಫ್‌ಐಆರ್ ದಾಖಲಿಸಲಾಗಿದೆ. ಎಲ್ಲಾ ಆರೋಪಗಳು ಧಾರ್ಮಿಕ ದ್ವೇಷವನ್ನು ಉತ್ತೇಜಿಸಲು ಸಂಬಂಧಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಹಿಂದೂ ರಾಷ್ಟ್ರದ ಗುರಿ ತಯಾರಾಗಿದೆ, ಜನರು ಸಿದ್ಧರಾಗಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ 

ಪೊಲೀಸರು ತಮ್ಮ ಹಿಂದಿನ ಅಫಿಡವಿಟ್‌ನಲ್ಲಿ, ಕಾರ್ಯಕ್ರಮದಲ್ಲಿ ಹಿಂದೂರಾಷ್ಟ್ರಕ್ಕಾಗಿ ತೆಗೆದುಕೊಂಡ ಪ್ರತಿಜ್ಞೆಯು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ದ್ವೇಷದ ಭಾಷಣವಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದರು. ಮುಸ್ಲಿಮರ ಹತ್ಯಾಕಾಂಡದ ಬಹಿರಂಗ ಕರೆ ಎಂದು ಅರ್ಥೈಸಬಹುದಾದ ಯಾವುದೆ ಪದಗಳ ಬಳಕೆ ಅಲ್ಲಿ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದರು.

ಆಪಾದಿತ ದ್ವೇಷ ಭಾಷಣದ ವೀಡಿಯೊದಲ್ಲಿ, “ಜನಾಂಗೀಯ ಶುದ್ಧೀಕರಣ ಮಾಡುವ ಸಲುವಾಗಿ ಮುಸ್ಲಿಮರ ನರಮೇಧಕ್ಕೆ ಅಥವಾ ಇಡೀ ಸಮುದಾಯದ ಹತ್ಯೆಗೆ ನೀಡಿದ ಮುಕ್ತ ಕರೆ” ಎಂದು ಅರ್ಥೈಸಬಹುದಾದಂತಹ ಪದಗಳ ಬಳಕೆ ಮಾಡಿಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಅದರೆ ಏಪ್ರಿಲ್ 22 ರಂದು, ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ಛೀಮಾರಿ ಹಾಕಿ, “ಉತ್ತಮ ಅಫಿಡವಿಟ್” ಸಲ್ಲಿಸುವಂತೆ ಪೊಲೀಸರನ್ನು ಕೇಳಿತ್ತು.

ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಧರ್ಮ ಸಂಸದ್‌ಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ದ್ವೇಷ ಭಾಷಣಗಳ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಮಾಜಿ ಹೈಕೋರ್ಟ್ ನ್ಯಾಯಾಧೀಶೆ ಮತ್ತು ಹಿರಿಯ ವಕೀಲೆ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಈ ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ಇದು ಜಾತ್ಯತೀತ ರಾಷ್ಟ್ರ, ಹಿಂದೂ ರಾಷ್ಟ್ರ ಬೇಕು ಅನ್ನೋರು ದೇಶ ಬಿಟ್ಟು ಹೋಗಿ: ಬಾಲನ್‌

ಡಿಸೆಂಬರ್ 17 ಮತ್ತು 19 ರ ನಡುವೆ, ದೆಹಲಿಯಲ್ಲಿ ಹಿಂದೂ ಯುವ ವಾಹಿನಿಯಿಂದ ಮತ್ತು ಹರಿದ್ವಾರದಲ್ಲಿ ಯತಿ ನರಸಿಂಹಾನಂದ ಅವರಿಂದ ಆಯೋಜಿಸಲಾದ ಎರಡು ಕಾರ್ಯಕ್ರಮಗಳು ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಮುಕ್ತ ಕರೆಗಳನ್ನು ನೀಡಿದ್ದವು ಮತ್ತು ಅಲ್ಲಿ ದ್ವೇಷದ ಭಾಷಣಗಳನ್ನು ಮಾಡಲಾಗಿತ್ತು.

ದ್ವೇಷದ ಭಾಷಣ ಪ್ರಕರಣದ ವಿಚಾರಣೆ ಮೇ 9 ರಂದು ನಡೆಯಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...