Homeಮುಖಪುಟನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

- Advertisement -
- Advertisement -

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ “ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ”ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದು, ಆಡಳಿತರೂಢ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ರಾಹುಲ್ ಗಾಂಧಿಗೆ ಈ ಪುಸ್ತಕದ ಕುರಿತು ಮಾತನಾಡಲು ಸ್ಪೀಕರ್ ಅವಕಾಶ ನೀಡುತಿಲ್ಲ. ಸ್ಪೀಕರ್ ನಡೆ ಖಂಡಿಸಿ ಪ್ರತಿಪಕ್ಷಗಳ ಸದಸ್ಯರು ಕಳೆದ 10 ದಿನಗಳಿಂದ ಲೋಕಸಭೆಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಈ ಸಂಬಂಧ 8 ಮಂದಿ ಪ್ರತಿಪಕ್ಷ ಸಂಸದರನ್ನು ಸ್ಪೀಕರ್ ಈಗಾಗಲೇ ಅಮಾನತುಗೊಳಿಸಿದ್ದಾರೆ. ಸ್ಪೀಕರ್ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಕೂಡ ಮಂಡಿಸಿವೆ.

ವಿವಿಧ ಸಾಮಾಜಿಕ ಜಾಲತಾಣಗಳು ಮತ್ತು ಆನ್‌ಲೈನ್ ಸುದ್ದಿ ವೇದಿಕೆಗಳಲ್ಲಿ ನರವಾಣೆ ಅವರ ಪುಸ್ತಕದ ವಿಷಯಗಳು ಹರಿದಾಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸ್ವಯಂಪ್ರೇರಿತವಾಗಿ ಕ್ರಮ ಕೈಗೊಂಡಿದ್ದಾರೆ. ದೆಹಲಿ ಪೊಲೀಸರ ವಿಶೇಷ ಘಟಕವು ಪ್ರಕರಣದ ತನಿಖೆ ನಡೆಸಲಿದೆ ಎಂದು ವರದಿಯಾಗಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ನರವಾಣೆ ಅವರ ಪುಸ್ತಕದ ಮುದ್ರಣ ಪೂರ್ವ ಪ್ರತಿ ಸಾರ್ವಜನಿಕವಾಗಿ ಹರಿದಾಡುತ್ತಿರುವುದನ್ನು ಪೊಲೀಸರು ಗಮನಿಸಿದ್ದಾರೆ. ವಿವಿಧ ಸಾಮಾಜಿಕ ಜಾಲತಾಣಗಳು ಮತ್ತು ಆನ್‌ಲೈನ್ ಸುದ್ದಿ ವೇದಿಕೆಗಳಲ್ಲಿ ಈ ಪುಸ್ತಕದ ವಿಷಯಗಳು ಪ್ರಸಾರವಾಗುತ್ತಿರುವುದನ್ನು ಪತ್ತೆಹಚ್ಚಿದ ಪೊಲೀಸರು, ಈ ಮಾಹಿತಿಯನ್ನು ಅಧಿಕೃತವಾಗಿ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಪುಸ್ತಕದ ಪ್ರಕಟಣೆಗೆ ಅಗತ್ಯವಾದ ಅನುಮತಿಯನ್ನು ಸಂಬಂಧಿತ ಅಧಿಕಾರಿಗಳಿಂದ ಇನ್ನೂ ಪಡೆಯಬೇಕಾಗಿದೆ ಎಂದು ವರದಿ ಹೇಳಿದೆ.

ಪೊಲೀಸರ ಪರಿಶೀಲನೆಯ ಸಮಯದಲ್ಲಿ, ಅದೇ ಶೀರ್ಷಿಕೆಯನ್ನು ಹೊಂದಿರುವ ಪುಸ್ತಕದ ಪಿಡಿಎಫ್‌ ಪ್ರತಿ ಕೆಲವು ವೆಬ್‌ಸೈಟ್‌ಗಳಲ್ಲಿ ಲಭ್ಯವಿರುವುದು ಕಂಡುಬಂದಿದೆ. ಈ ಪ್ರತಿಯನ್ನು ಮೇಲ್ನೋಟಕ್ಕೆ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಪ್ರಕಾಶನ ಸಂಸ್ಥೆಯು ಸಿದ್ಧಪಡಿಸಿದಂತೆ ಕಾಣಿಸುತ್ತಿದೆ. ಅಷ್ಟೇ ಅಲ್ಲದೆ, ಕೆಲವು ಆನ್‌ಲೈನ್ ಮಾರುಕಟ್ಟೆ ವೇದಿಕೆಗಳು ಈ ಪುಸ್ತಕದ ಅಂತಿಮ ಮುಖಪುಟವನ್ನು ಪ್ರದರ್ಶಿಸುತ್ತಿದ್ದು, ಆ ಪುಸ್ತಕವು ಈಗಾಗಲೇ ಖರೀದಿಗೆ ಲಭ್ಯವಿದೆ ಎನ್ನುವಂತೆ ಬಿಂಬಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಇನ್ನೂ ಅನುಮೋದನೆಗೊಳ್ಳದ ಈ ಪುಸ್ತಕದ ಸೋರಿಕೆ ಅಥವಾ ನಿಯಮಗಳ ಉಲ್ಲಂಘನೆಯ ಕುರಿತು ಸಮಗ್ರ ತನಿಖೆ ನಡೆಸಲು ದೆಹಲಿ ಪೊಲೀಸರ ವಿಶೇಷ ಘಟಕದಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಪ್ರಕಟಣೆಗೂ ಮುನ್ನವೇ ಪುಸ್ತಕದ ಪ್ರತಿಗಳು ಹೇಗೆ ಹೊರಬಂದವು ಎಂಬ ಬಗ್ಗೆ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಸಂಸತ್ತಿನ ಆವರಣದಲ್ಲಿ ಇನ್ನೂ ಪ್ರಕಟವಾಗದ ಈ ಪುಸ್ತಕದ ಭೌತಿಕ ಪ್ರತಿಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ ಬೆನ್ನಲ್ಲೇ ಈ ಎಫ್‌ಐಆರ್ ದಾಖಲಾಗಿದೆ.

ಫೆಬ್ರವರಿ 2ರಿಂದಲೂ ರಾಹುಲ್ ಗಾಂಧಿಯವರು ನರವಾಣೆ ಅವರ ಪುಸ್ತಕದ ಆಯ್ದ ಭಾಗಗಳನ್ನು ಲೋಕಸಭೆಯಲ್ಲಿ ಉಲ್ಲೇಖಿಸಲು ಪ್ರಯತ್ನಿಸುತ್ತಿದ್ದಾರೆ. 2020ರಲ್ಲಿ ಚೀನಾದೊಂದಿಗಿನ ಗಡಿ ಸಂಘರ್ಷವನ್ನು ನಿಭಾಯಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂಬ ತಮ್ಮ ವಾದವನ್ನು ಪುಷ್ಟೀಕರಿಸಲು ಅವರು ಈ ಪುಸ್ತಕವನ್ನು ಬಳಸಿಕೊಳ್ಳಲು ಮುಂದಾಗಿದ್ದಾರೆ.

ತಾವು ಕೇವಲ ಈ ಪುಸ್ತಕದ ಆಯ್ದ ಭಾಗಗಳನ್ನು ಪ್ರಕಟಿಸಿದ್ದ ನಿಯತಕಾಲಿಕೆಯ ಲೇಖನವನ್ನಷ್ಟೇ ಉಲ್ಲೇಖಿಸಲು ಉದ್ದೇಶಿಸಿರುವುದಾಗಿ ಅವರು ತಿಳಿಸಿದ್ದಾರೆ. ಆದರೆ, ಅಪ್ರಕಟಿತ ದಾಖಲೆಗಳನ್ನು ಸಂಸತ್ತಿನಲ್ಲಿ ಉಲ್ಲೇಖಿಸುವುದನ್ನು ತಡೆಯುವ ಸಂಸದೀಯ ನಿಯಮಗಳನ್ನು ಮುಂದಿಟ್ಟು, ಸ್ಪೀಕರ್ ಮತ್ತು ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನಿರಾಕರಿಸುತ್ತಿದ್ದಾರೆ.

ಸತತ ಮೂರನೇ ದಿನವೂ ಮಾತನಾಡಲು ಅವಕಾಶ ನಿರಾಕರಿಸಿದ ಬಳಿಕ, ಕಳೆದ ಬುಧವಾರ ರಕ್ಷಣಾ ಸಚಿವಾಲಯದ ಅನುಮೋದನೆಗೆ ಬಾಕಿ ಇರುವ ಪುಸ್ತಕದ ಮುದ್ರಿತ ಪ್ರತಿಯನ್ನು ಸಂಸತ್ತಿನ ಆವರಣಕ್ಕೆ ತಂದು ಮಾಧ್ಯಮಗಳ ಕ್ಯಾಮರಾಗಳ ಮುಂದೆ ರಾಹುಲ್ ಗಾಂಧಿ ಪ್ರದರ್ಶಿಸಿದ್ದರು.

ಈ ಬೆಳವಣಿಗೆಯ ನಂತರ ಲೋಕಸಭೆಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, “ಈ ಪುಸ್ತಕ ಇದುವರೆಗೆ ಪ್ರಕಟವೇ ಆಗಿಲ್ಲ ಎಂಬ ಬಗ್ಗೆ ನನಗೆ ವಿಶ್ವಾಸವಿದೆ” ಎಂದು ಹೇಳುವ ಮೂಲಕ ರಾಹುಲ್ ಗಾಂಧಿಯವರ ನಡೆಯನ್ನು ವಿರೋಧಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಹುಲ್ ಗಾಂಧಿ, “ನೋಡಿ, ಸರ್ಕಾರ ಇಲ್ಲ ಎಂದು ಹೇಳುತ್ತಿರುವ ಪುಸ್ತಕ ಇಲ್ಲಿದೆ” ಎಂದಿದ್ದರು. ಅಲ್ಲದೆ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋದಲ್ಲಿ ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸದನಕ್ಕೆ ಹಾಜರಾದರೆ ತಾವು ಖುದ್ದಾಗಿ ಈ ಪುಸ್ತಕವನ್ನು ಅವರಿಗೆ ಹಸ್ತಾಂತರಿಸುವುದಾಗಿ ತಿಳಿಸಿದ್ದರು.

ಚೀನಾದೊಂದಿಗಿನ ಸಂಘರ್ಷದ ವೇಳೆ “ಸರ್ಕಾರ ನಮ್ಮನ್ನು ಕೈಬಿಟ್ಟಿತ್ತು, ಏಕಾಂಗಿಯಾಗಿ ಮಾಡಿತ್ತು” ಎಂದು ನರವಾಣೆ ಅವರು ಪುಸ್ತಕದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಇದೇ ಆ ಸತ್ಯ, ಪುಸ್ತಕವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸದಂತೆ ನಮ್ಮನ್ನು ತಡೆಯುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಆದರೆ, ಸರ್ಕಾರ ರಾಹುಲ್ ಗಾಂಧಿಯವರ ಎಲ್ಲಾ ಆರೋಪಗಳನ್ನು ತಿರಸ್ಕರಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು, ಅಪ್ರಕಟಿತ ಪುಸ್ತಕದ ವಿಷಯಗಳನ್ನು ಉಲ್ಲೇಖಿಸುವುದು ಸಂಸತ್ತಿನ ನಿಯಮಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದಾರೆ. ಅಲ್ಲದೆ, ಇಂತಹ ಕ್ರಮವು ದೇಶದ ಹಿತಾಸಕ್ತಿಗೆ ಧಕ್ಕೆ ತರುತ್ತದೆ ಮತ್ತು ರಾಷ್ಟ್ರೀಯ ಭದ್ರತೆಗೆ ಹಾನಿಯುಂಟುಮಾಡಬಹುದು ಎಂದಿದ್ದಾರೆ.

ಒಂದು ವೇಳೆ ಪುಸ್ತಕದಲ್ಲಿ ಉಲ್ಲೇಖಿಸಲಾದ ಅಂಶಗಳು ನಿಜವಾಗಿದ್ದರೆ, ಲೇಖಕರು (ಜನರಲ್ ನರವಾಣೆ) ಈವರೆಗೆ ನ್ಯಾಯಾಲಯದ ಮೊರೆ ಏಕೆ ಹೋಗಿಲ್ಲ? ಎಂದು ರಕ್ಷಣಾ ಸಚಿವರು ಪ್ರಶ್ನಿಸಿದ್ದಾರೆ.

ಸ್ಥಳೀಯವಾಗಿ ರಾಹುಲ್ ಗಾಂಧಿಯವರು ಪುಸ್ತಕದ ಮುದ್ರಿತ ಪ್ರತಿಯನ್ನು ಪ್ರದರ್ಶಿಸಿದ್ದರೂ ಸಹ, ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಈವರೆಗೆ ಸಾರ್ವಜನಿಕವಾಗಿ ಖರೀದಿಗೆ ಲಭ್ಯವಾಗಿಲ್ಲ. ಪ್ರಕಾಶನ ಸಂಸ್ಥೆಯಾದ ಪೆಂಗ್ವಿನ್ ರಾಂಡಮ್ ಹೌಸ್ ಈ ಪುಸ್ತಕವನ್ನು ಏಪ್ರಿಲ್ 2024ರಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು ಮತ್ತು 2023ರ ಅಂತ್ಯದ ವೇಳೆಗೆ ಮುಂಗಡ ಕಾಯ್ದಿರಿಸುವಿಕೆಯನ್ನು ಆರಂಭಿಸಿತ್ತು. ಆದರೆ ಪ್ರಸ್ತುತ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಜಾಲತಾಣಗಳಲ್ಲಿ ಕೂಡ ಈ ಪುಸ್ತಕ ‘ಲಭ್ಯವಿಲ್ಲ’ ಎಂದು ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...