Homeನ್ಯಾಯ ಪಥಪೌರತ್ವ ಕಾಯ್ದೆ ಹೋರಾಟ: ಜಾಮಿಯಾದಲ್ಲಿ ವಿಕೃತಿ ಮೆರೆದ ದೆಹಲಿ ಪೊಲೀಸರು..

ಪೌರತ್ವ ಕಾಯ್ದೆ ಹೋರಾಟ: ಜಾಮಿಯಾದಲ್ಲಿ ವಿಕೃತಿ ಮೆರೆದ ದೆಹಲಿ ಪೊಲೀಸರು..

ರಾಂಚಿಯ ಅನುಗ್ಯಾ ಎಂಬ ಮಗಳ ಮಾತುಗಳು ದೇಶವನ್ನು ಆಳುವವರು ಮತ್ತು ಅವರೊಂದಿಗೆ ಶರೀಕಾಗಿರುವವರ ಆತ್ಮಸಾಕ್ಷಿಗಳನ್ನು ಇರಿಯಬೇಕಿದೆ... ಆದರೆ ಆತ್ಮಸಾಕ್ಷಿಗಳು ಜೀವಂತವಾಗಿವೆಯೇ?

- Advertisement -
- Advertisement -

ಪೌರತ್ವದಲ್ಲಿ ಭೇದಭಾವ ಎಣಿಸುವ ದುರುದ್ದೇಶದ ಹೊಸ ಕಾಯಿದೆಯನ್ನು ಪ್ರತಿಭಟಿಸಿ ದೇಶದ ಉದ್ದಗಲಕ್ಕೂ ವಿದ್ಯಾರ್ಥಿ ಶಕ್ತಿ ಸಿಡಿದೆದ್ದಿದೆ. ದೆಹಲಿ ಪೊಲೀಸರು ಮೊನ್ನೆ ಭಾನುವಾರ ಕೇಂದ್ರೀಯ ವಿಶ್ವವಿದ್ಯಾಲಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಆವರಣಕ್ಕೆ ನುಗ್ಗಿ ನಡೆಸಿರುವ ಬರ್ಬರ ದೌರ್ಜನ್ಯ ಈ ಕಿಚ್ಚನ್ನು ಮತ್ತಷ್ಟು ಕೆರಳಿಸಿದೆ. ದಶಕಗಳಿಂದ ಮಲಗಿದ್ದ ದೇಶದ ವಿದ್ಯಾರ್ಥಿಶಕ್ತಿಯನ್ನು ಕೇಂದ್ರ ಸರ್ಕಾರ ಕೆಣಕಿರುವುದು ವಿವೇಕದ ನಡೆ ಅಲ್ಲ.

ಭಿನ್ನಮತ ಮತ್ತು ಪ್ರತಿಭಟನೆ ಜನತಂತ್ರದ ಜೀವಾಳ. ಇಂತಹ ದನಿಗಳೊಂದಿಗೆ ಸಜ್ಜನಿಕೆಯ ಸಂವಾದಕ್ಕೆ ಇಳಿಯುವ ಭಾಷೆಯನ್ನು ಕೇಂದ್ರ ಸರ್ಕಾರ ಕಲಿಯುವ ಸೂಚನೆಗಳಿಲ್ಲ. ತಾವು ಹಿಡಿದಿರುವ ಹಾದಿ ತಪ್ಪೆಂದು ತಿಳಿಯುವವರು ಮಾತ್ರವೇ ಅದನ್ನು ತಿದ್ದಿಕೊಳ್ಳಬಲ್ಲರು. ಸರಿಯೆಂದು ಸಮರ್ಥಿಸಿಕೊಳ್ಳುವವರಿಂದ ತಿದ್ದಿಕೊಳ್ಳುವ ನಿರೀಕ್ಷೆಯನ್ನು ಇಟ್ಟುಕೊಳ್ಳುವುದು ಸಾಧ್ಯವಿಲ್ಲ.

ಜಾಮಿಯಾದಲ್ಲಿ ಭಾನುವಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಸಿಡಿಸಿ, ಮನಸೋ ಇಚ್ಛೆ ಥಳಿಸಲಾಗಿದೆ. ಲೈಬ್ರರಿಯಲ್ಲಿ ಓದಿಕೊಳ್ಳುತ್ತಿದ್ದ ಮತ್ತು ಮಸೀದಿಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದವರನ್ನೂ ಬಿಟ್ಟಿಲ್ಲ. ಈ ಅತಿರೇಕ ನಡೆಯಬಾರದಿತ್ತು ಅಥವಾ ಪೊಲೀಸರು ಸಂಯಮದಿಂದ ವರ್ತಿಸಬೇಕಿತ್ತು ಎಂಬ ಒಂದು ಮಾತು ಕೂಡ ಸರ್ಕಾರದ ಕಡೆಯಿಂದ ಬಂದಿಲ್ಲ. ಬದಲಿಗೆ ಪ್ರಧಾನಿಯವರೇ ಮುಂದೆ ನಿಂತು ಅಲ್ಪಸಂಖ್ಯಾತರ ವಿರುದ್ಧ ಇಷಾರೆ ಮಾಡಿದ್ದಾರೆ. ಬೆಂಕಿ ಹಚ್ಚುತ್ತಿರುವವರು ಯಾರೆಂದು ಅವರ ಉಡುಪುಗಳಿಂದ ಗುರುತು ಹಿಡಿಯಬಹುದು ಎಂಬುದಾಗಿ ಝಾರ್ಖಂಡದ ಬಹಿರಂಗ ಭಾಷಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಭಿನ್ನಾಭಿಪ್ರಾಯ ಹೊಂದಿರುವವರು ಮತ್ತು ಪ್ರತಿಭಟಿಸುವವರನ್ನು ಮುಸಲ್ಮಾನರು ಇಲ್ಲವೇ ಪಾಕಿಸ್ತಾನಿ ಸಮರ್ಥಕರು ಎಂದು ಹೆಸರಿಟ್ಟು ದೇಶದ್ರೋಹಿಗಳೆಂದು ಕರೆಯುವ ಹುನ್ನಾರ ನಿರಂತರ ಮುಂದುವರೆದಿದೆ. ಈ ಧೋರಣೆ ಸರ್ವಾಧಿಕಾರಿ ದೇಶಗಳಿಗೆ ಹೊಂದಬಹುದು. ಆದರೆ ಭಾರತದಂತಹ ಜನತಾಂತ್ರಿಕ ವ್ಯವಸ್ಥೆಯಲ್ಲಿ ಶೋಭಿಸುವುದಿಲ್ಲ. ಅತ್ಯಂತ ದುರದೃಷ್ಟಕರ ವಿದ್ಯಮಾನವಿದು. ಒಂದು ಕೋಮನ್ನು ಧರ್ಮದ ಕಾರಣಕ್ಕಾಗಿಯೇ ಕಟಕಟೆಯಲ್ಲಿ ನಿಲ್ಲಿಸಿ ಕಲ್ಲು ಹೊಡೆಯುವಂತೆ ನೀಡುವ ಸತತ ಪ್ರಚೋದನೆ.

ಜಾಮಿಯಾದಲ್ಲಿ ಕೇವಲ ಮುಸಲ್ಮಾನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿಲ್ಲ. 1920ರಲ್ಲಿ ಸ್ಥಾಪಿತವಾದ ಜಾಮಿಯಾ 1988ರಲ್ಲಿ ಅಲ್ಪಸಂಖ್ಯಾತ ಕೇಂದ್ರೀಯ ವಿಶ್ವವಿದ್ಯಾಲಯ ಎನಿಸಿಕೊಂಡಿತು. 2011ರಲ್ಲಿ ಜಾರಿಗೆ ತರಲಾದ ಮೀಸಲು ವ್ಯವಸ್ಥೆಯ ಪ್ರಕಾರ ಶೇ.50ರಷ್ಟು ಸೀಟುಗಳು ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಲ್ಲುತ್ತವೆ. ಈ ಪೈಕಿ ಶೇ.30ರಷ್ಟು ಸೀಟುಗಳನ್ನು ಸಾಮಾನ್ಯ ಮುಸ್ಲಿಮರಿಗೆ, ಶೇ.10ರಷ್ಟು ಸೀಟುಗಳನ್ನು ಮುಸ್ಲಿಂ ಮಹಿಳೆಯರಿಗೆ, ಶೇ.10ರಷ್ಟು ಸೀಟುಗಳನ್ನು ಮುಸ್ಲಿಮರಲ್ಲಿನ ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಲಾಗಿದೆ. ಉಳಿದ ಶೇ.50ರಷ್ಟು ಸೀಟುಗಳು ಮುಸ್ಲಿಮೇತರರಿಗೆ ಸಲ್ಲುತ್ತವೆ. ಮುಸ್ಲಿಂ ಸೀಟುಗಳು ಖಾಲಿ ಉಳಿದರೆ ಅವುಗಳನ್ನು ಸಾಮಾನ್ಯ ವರ್ಗಗಳ ಕೋಟಾಕ್ಕೆ ವರ್ಗಾಯಿಸಲಾಗುತ್ತದೆ. ಮುಸಲ್ಮಾನ ಜನಸಂಖ್ಯೆಯೇ ದಟ್ಟವಾಗಿರುವ ಕಿರಿದಾದ ಓಣಿಗಳ ಇಕ್ಕಟ್ಟಿನ ಜನವಸತಿಯ ನಟ್ಟನಡುವೆ ಇದೆ ಜಾಮಿಯಾ. ಭಯೋತ್ಪಾದಕರಿದ್ದಾರೆಂಬ ಆರೋಪ ಹೊತ್ತ ‘ಬಟ್ಲಾ ಹೌಸ್’ ಎನ್ಕೌಂಟರ್ ನಡೆದದ್ದು ಇದೇ ಪ್ರದೇಶದಲ್ಲಿ. ಮುಸ್ಲಿಮರ ವಿರುದ್ಧ ಪೂರ್ವಗ್ರಹಕ್ಕೆ ಇಷ್ಟು ಸಾಲದೇ? ಇದಕ್ಕೆ ಕಲಶವಿಟ್ಟಂತೆ ಪ್ರಧಾನಿಯವರ ಹೇಳಿಕೆ ಹೊರಬೀಳುತ್ತದೆ. ಪೊಲೀಸರು ಇದೇ ಸಮಾಜದಿಂದ ಬಂದವರು. ಸಮಾಜದಲ್ಲಿ ಬಿತ್ತಿ ಬೆಳೆಯಲಾಗುವ ಕೋಮುವಾದೀ ಸೋಂಕು ಅವರನ್ನು ತಟ್ಟದೆ ಬಿಟ್ಟೀತೇ?

ಪ್ರಧಾನಿಯವರು ಮತ್ತು ಗೃಹಮಂತ್ರಿಗಳು ನಿಮಗೇನು ಅನ್ಯಾಯ ಮಾಡಿದ್ದಾರೆ… ಅವರನ್ನು ಯಾಕೆ ವಿರೋಧಿಸುತ್ತೀರಿ ಎಂದು ಹೆಸರು ಹೇಳಿ ವಿದ್ಯಾರ್ಥಿಗಳ ಬುರುಡೆ ಬಿಚ್ಚಿದ್ದಾರೆ. ದೆಹಲಿ ಪೊಲೀಸ್ ಬಲದಲ್ಲಿ ಮುಸ್ಲಿಮ್ ಪ್ರಾತಿನಿಧ್ಯ ದೇಶದಲ್ಲೇ ತೀರಾ ಕನಿಷ್ಠ. 75 ಸಾವಿರದಷ್ಟು ದೆಹಲಿ ಪೊಲೀಸ್ ಬಲದಲ್ಲಿ ಮುಸ್ಲಿಮ್ ಪ್ರಾತಿನಿಧ್ಯ ಕೇವಲ ಶೇ.2. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಎಂಟು ವರ್ಷಗಳ ಹಿಂದೆ ಹೊರಹಾಕಿದ್ದ ಅಂಕಿಅಂಶವಿದು.

ಜಾಮಿಯಾ ಆಡಳಿತದ ಅನುಮತಿಯಿಲ್ಲದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ನುಗ್ಗಿರುವ ಪೊಲೀಸರು ಪುಂಡರಂತೆ ವರ್ತಿಸಿದ್ದಾರೆ. ವಿದ್ಯಾರ್ಥಿಗಳ ಮೂಳೆ ಮುರಿದಿದ್ದಾರೆ. ಅವರ ಮೋಟರ್ ಸೈಕಲ್ಲುಗಳನ್ನು ನುಗ್ಗಾಗಿಸಿದ್ದಾರೆ, ಲೈಟುಗಳು, ಕನ್ನಡಿಗಳು, ಸಿಸಿಟೀವಿ ಕ್ಯಾಮೆರಾಗಳನ್ನು ಒಡೆದು ಹಾಕಲಾಗಿದೆ. ವಿದ್ಯಾರ್ಥಿಗಳಿಗೆ ಕೆಟ್ಟ ಹೆಸರು ತರಲು ದೆಹಲಿ ಪೊಲೀಸರೇ ಬಸ್ಸುಗಳೊಳಗೆ ಪೆಟ್ರೋಲ್ ಸುರಿಯುತ್ತಿರುವ ವಿಡಿಯೋಗಳು ಮೇಲೆ ತೇಲಿವೆ. (ಬೆಂಕಿ ಆರಿಸುವ ವಿಡಿಯೋಗಳೂ ಇವೆ). ಹೈದರಾಬಾದಿನ ‘ಎನ್ಕೌಂಟರ್ ನ್ಯಾಯದಾನ’ದ ನಂತರ ಕಂಡುಬಂದಿರುವ ಅತ್ಯಂತ ಕಳವಳಕಾರಿ ಪ್ರವೃತ್ತಿಯಿದು.

ವಕೀಲರು ಮತ್ತು ಪೊಲೀಸರ ನಡುವೆ ಇತ್ತೀಚೆಗೆ ಮಹಾ ಘರ್ಷಣೆಗೆ ಸಾಕ್ಷಿಯಾಗಿತ್ತು ದೆಹಲಿ. ವಕೀಲರಿಂದ ಎಗ್ಗಾಮುಗ್ಗಾ ಬಡಿಸಿಕೊಂಡು ಅಸಹಾಯಕರಾಗಿ ಕಂಡುಬಂದಿದ್ದ ಪೊಲೀಸರು ಸಾರ್ವಜನಿಕ ಸಹಾನುಭೂತಿ ಗಳಿಸಿದ್ದರು. ಹಿರಿಯ ಐ.ಪಿ.ಎಸ್. ಅಧಿಕಾರಿಯೊಬ್ಬರನ್ನು ಘೇರಾವೋ ಮಾಡಿ ಎಳೆದಾಡಲಾಗಿತ್ತು. ಆದರೂ ಪೊಲೀಸರು ಸುಮ್ಮನಿದ್ದರು.  ಪೊಲೀಸರ ಹೆಂಡತಿ ಮಕ್ಕಳು, ತಂದೆ ತಾಯಿಯರು ದೆಹಲಿ ಪೊಲೀಸ್ ಮುಖ್ಯಾಲಯದ ಮುಂದೆ ರಕ್ಷಣೆ ಕೋರಿ ಪ್ರತಿಭಟನೆ ನಡೆಸಿದ್ದರು. ಇಂತಹ ಪೊಲೀಸರು ಅಸಹಾಯಕ ವಿದ್ಯಾರ್ಥಿಗಳ ಮೇಲೆ ಹರಿಯಬಿಟ್ಟ ಹಿಂಸಾಚಾರ, ತೋರಿದ ವಿಕೃತ ಕ್ರೌರ್ಯ ಖಂಡನೀಯ.

ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿಲ್ಲ ಎಂದು  ಪೊಲೀಸರು ಹೇಳಿದ್ದಾರೆ. ಆದರೆ ಗುಂಡೇಟುಗಳಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಪ್ರಕರಣಗಳು ವರದಿಯಾಗಿವೆ. ಪೊಲೀಸರ ಜೊತೆಗೆ ನೀಲಿ ಜೀನ್ಸ್ ಮತ್ತು ರಂಗುರಂಗಿನ ಟೀ ಶರ್ಟ್ ತೊಟ್ಟು, ಹೆಲ್ಮೆಟ್ ಧರಿಸಿ, ಎದೆ ಮತ್ತು ಬೆನ್ನಿಗೆ ಕವಚ ಧರಿಸಿ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುತ್ತಿರುವ ವ್ಯಕ್ತಿಗಳು ವಿಡಿಯೋಗಳಲ್ಲಿ ಕಾಣಬಂದಿದ್ದಾರೆ. ಅವರು ಯಾರು, ಮಫ್ತಿಯಲ್ಲಿರುವ ಪೊಲೀಸರೇ, ಇಲ್ಲದೆ ಹೋದರೆ ಖಾಸಗಿಯವರೇ, ಖಾಸಗಿಯವರಾದರೆ ಅವರ ಕೈಗೆ ಪೊಲೀಸರ ಲಾಠಿಗಳು ಮತ್ತು ಹೆಲ್ಮೆಟ್‍ಗಳು, ಎದೆಕವಚಗಳು ಬಂದದ್ದು ಹೇಗೆ, ಪೊಲೀಸರು ಅವರನ್ನು ತಮ್ಮೊಂದಿಗೆ ಸೇರಿಸಿಕೊಂಡದ್ದು ಯಾಕೆ ಎಂಬ ಪ್ರಶ್ನೆಗಳು ಏಳುತ್ತವೆ. ಈ ಗಂಭೀರ ವಿದ್ಯಮಾನ ಕುರಿತು ದೆಹಲಿ ಪೊಲೀಸರು ಸಮಜಾಯಿಷಿ ನೀಡಬೇಕಿದೆ.

ಈ ಪ್ರತಿಭಟನೆಯ ವಿಡಿಯೋಗಳನ್ನು ತಿದ್ದಿ ತೀಡಿ ಹಿಂದುತ್ವದ ವಿರುದ್ಧ ಕೂಗಿರುವ ಘೋಷಣೆಗಳನ್ನು ಹಿಂದೂಗಳ ವಿರುದ್ಧ ಕೂಗಿದ ಘೋಷಣೆಗಳು ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಜೆ.ಎನ್.ಯು. ವಿದ್ಯಾರ್ಥಿಗಳ ವಿರುದ್ಧ ಬಳಸಲಾಗಿದ್ದ ಹಳೆಯ ತಂತ್ರವಿದು. ವಿಡಿಯೋಗಳನ್ನು ಪರೀಕ್ಷಿಸಿರುವ ವಿಧಿವಿಜ್ಞಾನ ಪ್ರಯೋಗಶಾಲೆಯು ಕತ್ತರಿಸಿ ಅಂಟಿಸಿದ ವಿಡಿಯೋ ಎಂದು ವರದಿ ನೀಡಿದೆ. ಅಂದಹಾಗೆ ಜಾಮಿಯಾ ಪ್ರತಿಭಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಜಾತ್ಯತೀತ ತತ್ವಗಳ ಚೌಕಟ್ಟನ್ನು ಧಿಕ್ಕರಿಸಿ ಕಟ್ಟರ್ ಧಾರ್ಮಿಕ ಘೋಷಣೆಗಳನ್ನು ಕೂಗಿರುವುದು ವರದಿಯಾಗಿದೆ. ಇದು ಸಲ್ಲದ ನಡೆ. ಹಿನ್ನಡೆಯೇ ವಿನಾ ಮುನ್ನಡೆ ಅಲ್ಲ.

ಪೊಲೀಸ್ ಅತಿರೇಕಗಳಲ್ಲಿ ನರಳಿರುವ ಜಾಮಿಯಾ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ರಕ್ತ ಹೆಪ್ಪುಗಟ್ಟಿಸುವ ಚಳಿಯಲ್ಲಿ ಬೀದಿ ಪಾಲಾಗಿದ್ದಾರೆ. ದೆಹಲಿಯ ಸಜ್ಜನ ಸಮಾಜ ಅವರ ನೆರವಿಗೆ ಮುಂದೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಅನೇಕರು ತಮ್ಮ ಮನೆಯ ಬಾಗಿಲುಗಳನ್ನು ಈ ವಿದ್ಯಾರ್ಥಿಗಳಿಗೆ ತೆರೆದಿರುವುದಾಗಿ ಸಾರಿದ್ದಾರೆ. ದೆಹಲಿಯ ಗುರುದ್ವಾರಗಳು ವಿದ್ಯಾರ್ಥಿಗಳನ್ನು ತೆರೆದ ತೋಳುಗಳಿಂದ ಬರಮಾಡಿಕೊಂಡು ಆಶ್ರಯ ನೀಡಿವೆ. ಪೊಲೀಸ್ ದೌರ್ಜನ್ಯ ಮತ್ತು ಪೌರತ್ವ ಕಾಯಿದೆ ತಿದ್ದುಪಡಿಯಲ್ಲಿ ಮುಸ್ಲಿಮರನ್ನು ಅನ್ಯರನ್ನಾಗಿ ಕಾಣುತ್ತಿರುವ ಕಾರಸ್ಥಾನ ಕುರಿತು ಜಾಮಿಯಾದಲ್ಲಿ ಓದುತ್ತಿರುವ ರಾಂಚಿಯ ಅನುಗ್ಯಾ ಎಂಬ ವಿದ್ಯಾರ್ಥಿನಿ ರೋದಿಸುತ್ತಾ ಎತ್ತಿರುವ ಪ್ರಶ್ನೆಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಆ ಮಗಳ ಮಾತುಗಳು ಈ ದೇಶವನ್ನು ಆಳುವವರು ಮತ್ತು ಅವರೊಂದಿಗೆ ಶರೀಕಾಗಿರುವವರ ಆತ್ಮಸಾಕ್ಷಿಗಳನ್ನು ಇರಿಯುತ್ತವೆ.
ಆದರೆ ಆತ್ಮಸಾಕ್ಷಿಗಳು ಜೀವಂತ ಉಳಿದಿವೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....