Homeನ್ಯಾಯ ಪಥಪೌರತ್ವ ಕಾಯ್ದೆ ಹೋರಾಟ: ಜಾಮಿಯಾದಲ್ಲಿ ವಿಕೃತಿ ಮೆರೆದ ದೆಹಲಿ ಪೊಲೀಸರು..

ಪೌರತ್ವ ಕಾಯ್ದೆ ಹೋರಾಟ: ಜಾಮಿಯಾದಲ್ಲಿ ವಿಕೃತಿ ಮೆರೆದ ದೆಹಲಿ ಪೊಲೀಸರು..

ರಾಂಚಿಯ ಅನುಗ್ಯಾ ಎಂಬ ಮಗಳ ಮಾತುಗಳು ದೇಶವನ್ನು ಆಳುವವರು ಮತ್ತು ಅವರೊಂದಿಗೆ ಶರೀಕಾಗಿರುವವರ ಆತ್ಮಸಾಕ್ಷಿಗಳನ್ನು ಇರಿಯಬೇಕಿದೆ... ಆದರೆ ಆತ್ಮಸಾಕ್ಷಿಗಳು ಜೀವಂತವಾಗಿವೆಯೇ?

- Advertisement -
- Advertisement -

ಪೌರತ್ವದಲ್ಲಿ ಭೇದಭಾವ ಎಣಿಸುವ ದುರುದ್ದೇಶದ ಹೊಸ ಕಾಯಿದೆಯನ್ನು ಪ್ರತಿಭಟಿಸಿ ದೇಶದ ಉದ್ದಗಲಕ್ಕೂ ವಿದ್ಯಾರ್ಥಿ ಶಕ್ತಿ ಸಿಡಿದೆದ್ದಿದೆ. ದೆಹಲಿ ಪೊಲೀಸರು ಮೊನ್ನೆ ಭಾನುವಾರ ಕೇಂದ್ರೀಯ ವಿಶ್ವವಿದ್ಯಾಲಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಆವರಣಕ್ಕೆ ನುಗ್ಗಿ ನಡೆಸಿರುವ ಬರ್ಬರ ದೌರ್ಜನ್ಯ ಈ ಕಿಚ್ಚನ್ನು ಮತ್ತಷ್ಟು ಕೆರಳಿಸಿದೆ. ದಶಕಗಳಿಂದ ಮಲಗಿದ್ದ ದೇಶದ ವಿದ್ಯಾರ್ಥಿಶಕ್ತಿಯನ್ನು ಕೇಂದ್ರ ಸರ್ಕಾರ ಕೆಣಕಿರುವುದು ವಿವೇಕದ ನಡೆ ಅಲ್ಲ.

ಭಿನ್ನಮತ ಮತ್ತು ಪ್ರತಿಭಟನೆ ಜನತಂತ್ರದ ಜೀವಾಳ. ಇಂತಹ ದನಿಗಳೊಂದಿಗೆ ಸಜ್ಜನಿಕೆಯ ಸಂವಾದಕ್ಕೆ ಇಳಿಯುವ ಭಾಷೆಯನ್ನು ಕೇಂದ್ರ ಸರ್ಕಾರ ಕಲಿಯುವ ಸೂಚನೆಗಳಿಲ್ಲ. ತಾವು ಹಿಡಿದಿರುವ ಹಾದಿ ತಪ್ಪೆಂದು ತಿಳಿಯುವವರು ಮಾತ್ರವೇ ಅದನ್ನು ತಿದ್ದಿಕೊಳ್ಳಬಲ್ಲರು. ಸರಿಯೆಂದು ಸಮರ್ಥಿಸಿಕೊಳ್ಳುವವರಿಂದ ತಿದ್ದಿಕೊಳ್ಳುವ ನಿರೀಕ್ಷೆಯನ್ನು ಇಟ್ಟುಕೊಳ್ಳುವುದು ಸಾಧ್ಯವಿಲ್ಲ.

ಜಾಮಿಯಾದಲ್ಲಿ ಭಾನುವಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಸಿಡಿಸಿ, ಮನಸೋ ಇಚ್ಛೆ ಥಳಿಸಲಾಗಿದೆ. ಲೈಬ್ರರಿಯಲ್ಲಿ ಓದಿಕೊಳ್ಳುತ್ತಿದ್ದ ಮತ್ತು ಮಸೀದಿಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದವರನ್ನೂ ಬಿಟ್ಟಿಲ್ಲ. ಈ ಅತಿರೇಕ ನಡೆಯಬಾರದಿತ್ತು ಅಥವಾ ಪೊಲೀಸರು ಸಂಯಮದಿಂದ ವರ್ತಿಸಬೇಕಿತ್ತು ಎಂಬ ಒಂದು ಮಾತು ಕೂಡ ಸರ್ಕಾರದ ಕಡೆಯಿಂದ ಬಂದಿಲ್ಲ. ಬದಲಿಗೆ ಪ್ರಧಾನಿಯವರೇ ಮುಂದೆ ನಿಂತು ಅಲ್ಪಸಂಖ್ಯಾತರ ವಿರುದ್ಧ ಇಷಾರೆ ಮಾಡಿದ್ದಾರೆ. ಬೆಂಕಿ ಹಚ್ಚುತ್ತಿರುವವರು ಯಾರೆಂದು ಅವರ ಉಡುಪುಗಳಿಂದ ಗುರುತು ಹಿಡಿಯಬಹುದು ಎಂಬುದಾಗಿ ಝಾರ್ಖಂಡದ ಬಹಿರಂಗ ಭಾಷಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಭಿನ್ನಾಭಿಪ್ರಾಯ ಹೊಂದಿರುವವರು ಮತ್ತು ಪ್ರತಿಭಟಿಸುವವರನ್ನು ಮುಸಲ್ಮಾನರು ಇಲ್ಲವೇ ಪಾಕಿಸ್ತಾನಿ ಸಮರ್ಥಕರು ಎಂದು ಹೆಸರಿಟ್ಟು ದೇಶದ್ರೋಹಿಗಳೆಂದು ಕರೆಯುವ ಹುನ್ನಾರ ನಿರಂತರ ಮುಂದುವರೆದಿದೆ. ಈ ಧೋರಣೆ ಸರ್ವಾಧಿಕಾರಿ ದೇಶಗಳಿಗೆ ಹೊಂದಬಹುದು. ಆದರೆ ಭಾರತದಂತಹ ಜನತಾಂತ್ರಿಕ ವ್ಯವಸ್ಥೆಯಲ್ಲಿ ಶೋಭಿಸುವುದಿಲ್ಲ. ಅತ್ಯಂತ ದುರದೃಷ್ಟಕರ ವಿದ್ಯಮಾನವಿದು. ಒಂದು ಕೋಮನ್ನು ಧರ್ಮದ ಕಾರಣಕ್ಕಾಗಿಯೇ ಕಟಕಟೆಯಲ್ಲಿ ನಿಲ್ಲಿಸಿ ಕಲ್ಲು ಹೊಡೆಯುವಂತೆ ನೀಡುವ ಸತತ ಪ್ರಚೋದನೆ.

ಜಾಮಿಯಾದಲ್ಲಿ ಕೇವಲ ಮುಸಲ್ಮಾನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿಲ್ಲ. 1920ರಲ್ಲಿ ಸ್ಥಾಪಿತವಾದ ಜಾಮಿಯಾ 1988ರಲ್ಲಿ ಅಲ್ಪಸಂಖ್ಯಾತ ಕೇಂದ್ರೀಯ ವಿಶ್ವವಿದ್ಯಾಲಯ ಎನಿಸಿಕೊಂಡಿತು. 2011ರಲ್ಲಿ ಜಾರಿಗೆ ತರಲಾದ ಮೀಸಲು ವ್ಯವಸ್ಥೆಯ ಪ್ರಕಾರ ಶೇ.50ರಷ್ಟು ಸೀಟುಗಳು ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಲ್ಲುತ್ತವೆ. ಈ ಪೈಕಿ ಶೇ.30ರಷ್ಟು ಸೀಟುಗಳನ್ನು ಸಾಮಾನ್ಯ ಮುಸ್ಲಿಮರಿಗೆ, ಶೇ.10ರಷ್ಟು ಸೀಟುಗಳನ್ನು ಮುಸ್ಲಿಂ ಮಹಿಳೆಯರಿಗೆ, ಶೇ.10ರಷ್ಟು ಸೀಟುಗಳನ್ನು ಮುಸ್ಲಿಮರಲ್ಲಿನ ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಲಾಗಿದೆ. ಉಳಿದ ಶೇ.50ರಷ್ಟು ಸೀಟುಗಳು ಮುಸ್ಲಿಮೇತರರಿಗೆ ಸಲ್ಲುತ್ತವೆ. ಮುಸ್ಲಿಂ ಸೀಟುಗಳು ಖಾಲಿ ಉಳಿದರೆ ಅವುಗಳನ್ನು ಸಾಮಾನ್ಯ ವರ್ಗಗಳ ಕೋಟಾಕ್ಕೆ ವರ್ಗಾಯಿಸಲಾಗುತ್ತದೆ. ಮುಸಲ್ಮಾನ ಜನಸಂಖ್ಯೆಯೇ ದಟ್ಟವಾಗಿರುವ ಕಿರಿದಾದ ಓಣಿಗಳ ಇಕ್ಕಟ್ಟಿನ ಜನವಸತಿಯ ನಟ್ಟನಡುವೆ ಇದೆ ಜಾಮಿಯಾ. ಭಯೋತ್ಪಾದಕರಿದ್ದಾರೆಂಬ ಆರೋಪ ಹೊತ್ತ ‘ಬಟ್ಲಾ ಹೌಸ್’ ಎನ್ಕೌಂಟರ್ ನಡೆದದ್ದು ಇದೇ ಪ್ರದೇಶದಲ್ಲಿ. ಮುಸ್ಲಿಮರ ವಿರುದ್ಧ ಪೂರ್ವಗ್ರಹಕ್ಕೆ ಇಷ್ಟು ಸಾಲದೇ? ಇದಕ್ಕೆ ಕಲಶವಿಟ್ಟಂತೆ ಪ್ರಧಾನಿಯವರ ಹೇಳಿಕೆ ಹೊರಬೀಳುತ್ತದೆ. ಪೊಲೀಸರು ಇದೇ ಸಮಾಜದಿಂದ ಬಂದವರು. ಸಮಾಜದಲ್ಲಿ ಬಿತ್ತಿ ಬೆಳೆಯಲಾಗುವ ಕೋಮುವಾದೀ ಸೋಂಕು ಅವರನ್ನು ತಟ್ಟದೆ ಬಿಟ್ಟೀತೇ?

ಪ್ರಧಾನಿಯವರು ಮತ್ತು ಗೃಹಮಂತ್ರಿಗಳು ನಿಮಗೇನು ಅನ್ಯಾಯ ಮಾಡಿದ್ದಾರೆ… ಅವರನ್ನು ಯಾಕೆ ವಿರೋಧಿಸುತ್ತೀರಿ ಎಂದು ಹೆಸರು ಹೇಳಿ ವಿದ್ಯಾರ್ಥಿಗಳ ಬುರುಡೆ ಬಿಚ್ಚಿದ್ದಾರೆ. ದೆಹಲಿ ಪೊಲೀಸ್ ಬಲದಲ್ಲಿ ಮುಸ್ಲಿಮ್ ಪ್ರಾತಿನಿಧ್ಯ ದೇಶದಲ್ಲೇ ತೀರಾ ಕನಿಷ್ಠ. 75 ಸಾವಿರದಷ್ಟು ದೆಹಲಿ ಪೊಲೀಸ್ ಬಲದಲ್ಲಿ ಮುಸ್ಲಿಮ್ ಪ್ರಾತಿನಿಧ್ಯ ಕೇವಲ ಶೇ.2. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಎಂಟು ವರ್ಷಗಳ ಹಿಂದೆ ಹೊರಹಾಕಿದ್ದ ಅಂಕಿಅಂಶವಿದು.

ಜಾಮಿಯಾ ಆಡಳಿತದ ಅನುಮತಿಯಿಲ್ಲದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ನುಗ್ಗಿರುವ ಪೊಲೀಸರು ಪುಂಡರಂತೆ ವರ್ತಿಸಿದ್ದಾರೆ. ವಿದ್ಯಾರ್ಥಿಗಳ ಮೂಳೆ ಮುರಿದಿದ್ದಾರೆ. ಅವರ ಮೋಟರ್ ಸೈಕಲ್ಲುಗಳನ್ನು ನುಗ್ಗಾಗಿಸಿದ್ದಾರೆ, ಲೈಟುಗಳು, ಕನ್ನಡಿಗಳು, ಸಿಸಿಟೀವಿ ಕ್ಯಾಮೆರಾಗಳನ್ನು ಒಡೆದು ಹಾಕಲಾಗಿದೆ. ವಿದ್ಯಾರ್ಥಿಗಳಿಗೆ ಕೆಟ್ಟ ಹೆಸರು ತರಲು ದೆಹಲಿ ಪೊಲೀಸರೇ ಬಸ್ಸುಗಳೊಳಗೆ ಪೆಟ್ರೋಲ್ ಸುರಿಯುತ್ತಿರುವ ವಿಡಿಯೋಗಳು ಮೇಲೆ ತೇಲಿವೆ. (ಬೆಂಕಿ ಆರಿಸುವ ವಿಡಿಯೋಗಳೂ ಇವೆ). ಹೈದರಾಬಾದಿನ ‘ಎನ್ಕೌಂಟರ್ ನ್ಯಾಯದಾನ’ದ ನಂತರ ಕಂಡುಬಂದಿರುವ ಅತ್ಯಂತ ಕಳವಳಕಾರಿ ಪ್ರವೃತ್ತಿಯಿದು.

ವಕೀಲರು ಮತ್ತು ಪೊಲೀಸರ ನಡುವೆ ಇತ್ತೀಚೆಗೆ ಮಹಾ ಘರ್ಷಣೆಗೆ ಸಾಕ್ಷಿಯಾಗಿತ್ತು ದೆಹಲಿ. ವಕೀಲರಿಂದ ಎಗ್ಗಾಮುಗ್ಗಾ ಬಡಿಸಿಕೊಂಡು ಅಸಹಾಯಕರಾಗಿ ಕಂಡುಬಂದಿದ್ದ ಪೊಲೀಸರು ಸಾರ್ವಜನಿಕ ಸಹಾನುಭೂತಿ ಗಳಿಸಿದ್ದರು. ಹಿರಿಯ ಐ.ಪಿ.ಎಸ್. ಅಧಿಕಾರಿಯೊಬ್ಬರನ್ನು ಘೇರಾವೋ ಮಾಡಿ ಎಳೆದಾಡಲಾಗಿತ್ತು. ಆದರೂ ಪೊಲೀಸರು ಸುಮ್ಮನಿದ್ದರು.  ಪೊಲೀಸರ ಹೆಂಡತಿ ಮಕ್ಕಳು, ತಂದೆ ತಾಯಿಯರು ದೆಹಲಿ ಪೊಲೀಸ್ ಮುಖ್ಯಾಲಯದ ಮುಂದೆ ರಕ್ಷಣೆ ಕೋರಿ ಪ್ರತಿಭಟನೆ ನಡೆಸಿದ್ದರು. ಇಂತಹ ಪೊಲೀಸರು ಅಸಹಾಯಕ ವಿದ್ಯಾರ್ಥಿಗಳ ಮೇಲೆ ಹರಿಯಬಿಟ್ಟ ಹಿಂಸಾಚಾರ, ತೋರಿದ ವಿಕೃತ ಕ್ರೌರ್ಯ ಖಂಡನೀಯ.

ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿಲ್ಲ ಎಂದು  ಪೊಲೀಸರು ಹೇಳಿದ್ದಾರೆ. ಆದರೆ ಗುಂಡೇಟುಗಳಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಪ್ರಕರಣಗಳು ವರದಿಯಾಗಿವೆ. ಪೊಲೀಸರ ಜೊತೆಗೆ ನೀಲಿ ಜೀನ್ಸ್ ಮತ್ತು ರಂಗುರಂಗಿನ ಟೀ ಶರ್ಟ್ ತೊಟ್ಟು, ಹೆಲ್ಮೆಟ್ ಧರಿಸಿ, ಎದೆ ಮತ್ತು ಬೆನ್ನಿಗೆ ಕವಚ ಧರಿಸಿ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುತ್ತಿರುವ ವ್ಯಕ್ತಿಗಳು ವಿಡಿಯೋಗಳಲ್ಲಿ ಕಾಣಬಂದಿದ್ದಾರೆ. ಅವರು ಯಾರು, ಮಫ್ತಿಯಲ್ಲಿರುವ ಪೊಲೀಸರೇ, ಇಲ್ಲದೆ ಹೋದರೆ ಖಾಸಗಿಯವರೇ, ಖಾಸಗಿಯವರಾದರೆ ಅವರ ಕೈಗೆ ಪೊಲೀಸರ ಲಾಠಿಗಳು ಮತ್ತು ಹೆಲ್ಮೆಟ್‍ಗಳು, ಎದೆಕವಚಗಳು ಬಂದದ್ದು ಹೇಗೆ, ಪೊಲೀಸರು ಅವರನ್ನು ತಮ್ಮೊಂದಿಗೆ ಸೇರಿಸಿಕೊಂಡದ್ದು ಯಾಕೆ ಎಂಬ ಪ್ರಶ್ನೆಗಳು ಏಳುತ್ತವೆ. ಈ ಗಂಭೀರ ವಿದ್ಯಮಾನ ಕುರಿತು ದೆಹಲಿ ಪೊಲೀಸರು ಸಮಜಾಯಿಷಿ ನೀಡಬೇಕಿದೆ.

ಈ ಪ್ರತಿಭಟನೆಯ ವಿಡಿಯೋಗಳನ್ನು ತಿದ್ದಿ ತೀಡಿ ಹಿಂದುತ್ವದ ವಿರುದ್ಧ ಕೂಗಿರುವ ಘೋಷಣೆಗಳನ್ನು ಹಿಂದೂಗಳ ವಿರುದ್ಧ ಕೂಗಿದ ಘೋಷಣೆಗಳು ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಜೆ.ಎನ್.ಯು. ವಿದ್ಯಾರ್ಥಿಗಳ ವಿರುದ್ಧ ಬಳಸಲಾಗಿದ್ದ ಹಳೆಯ ತಂತ್ರವಿದು. ವಿಡಿಯೋಗಳನ್ನು ಪರೀಕ್ಷಿಸಿರುವ ವಿಧಿವಿಜ್ಞಾನ ಪ್ರಯೋಗಶಾಲೆಯು ಕತ್ತರಿಸಿ ಅಂಟಿಸಿದ ವಿಡಿಯೋ ಎಂದು ವರದಿ ನೀಡಿದೆ. ಅಂದಹಾಗೆ ಜಾಮಿಯಾ ಪ್ರತಿಭಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಜಾತ್ಯತೀತ ತತ್ವಗಳ ಚೌಕಟ್ಟನ್ನು ಧಿಕ್ಕರಿಸಿ ಕಟ್ಟರ್ ಧಾರ್ಮಿಕ ಘೋಷಣೆಗಳನ್ನು ಕೂಗಿರುವುದು ವರದಿಯಾಗಿದೆ. ಇದು ಸಲ್ಲದ ನಡೆ. ಹಿನ್ನಡೆಯೇ ವಿನಾ ಮುನ್ನಡೆ ಅಲ್ಲ.

ಪೊಲೀಸ್ ಅತಿರೇಕಗಳಲ್ಲಿ ನರಳಿರುವ ಜಾಮಿಯಾ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ರಕ್ತ ಹೆಪ್ಪುಗಟ್ಟಿಸುವ ಚಳಿಯಲ್ಲಿ ಬೀದಿ ಪಾಲಾಗಿದ್ದಾರೆ. ದೆಹಲಿಯ ಸಜ್ಜನ ಸಮಾಜ ಅವರ ನೆರವಿಗೆ ಮುಂದೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಅನೇಕರು ತಮ್ಮ ಮನೆಯ ಬಾಗಿಲುಗಳನ್ನು ಈ ವಿದ್ಯಾರ್ಥಿಗಳಿಗೆ ತೆರೆದಿರುವುದಾಗಿ ಸಾರಿದ್ದಾರೆ. ದೆಹಲಿಯ ಗುರುದ್ವಾರಗಳು ವಿದ್ಯಾರ್ಥಿಗಳನ್ನು ತೆರೆದ ತೋಳುಗಳಿಂದ ಬರಮಾಡಿಕೊಂಡು ಆಶ್ರಯ ನೀಡಿವೆ. ಪೊಲೀಸ್ ದೌರ್ಜನ್ಯ ಮತ್ತು ಪೌರತ್ವ ಕಾಯಿದೆ ತಿದ್ದುಪಡಿಯಲ್ಲಿ ಮುಸ್ಲಿಮರನ್ನು ಅನ್ಯರನ್ನಾಗಿ ಕಾಣುತ್ತಿರುವ ಕಾರಸ್ಥಾನ ಕುರಿತು ಜಾಮಿಯಾದಲ್ಲಿ ಓದುತ್ತಿರುವ ರಾಂಚಿಯ ಅನುಗ್ಯಾ ಎಂಬ ವಿದ್ಯಾರ್ಥಿನಿ ರೋದಿಸುತ್ತಾ ಎತ್ತಿರುವ ಪ್ರಶ್ನೆಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಆ ಮಗಳ ಮಾತುಗಳು ಈ ದೇಶವನ್ನು ಆಳುವವರು ಮತ್ತು ಅವರೊಂದಿಗೆ ಶರೀಕಾಗಿರುವವರ ಆತ್ಮಸಾಕ್ಷಿಗಳನ್ನು ಇರಿಯುತ್ತವೆ.
ಆದರೆ ಆತ್ಮಸಾಕ್ಷಿಗಳು ಜೀವಂತ ಉಳಿದಿವೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...