Homeನ್ಯಾಯ ಪಥಪೌರತ್ವ ಕಾಯ್ದೆ ಹೋರಾಟ: ಜಾಮಿಯಾದಲ್ಲಿ ವಿಕೃತಿ ಮೆರೆದ ದೆಹಲಿ ಪೊಲೀಸರು..

ಪೌರತ್ವ ಕಾಯ್ದೆ ಹೋರಾಟ: ಜಾಮಿಯಾದಲ್ಲಿ ವಿಕೃತಿ ಮೆರೆದ ದೆಹಲಿ ಪೊಲೀಸರು..

ರಾಂಚಿಯ ಅನುಗ್ಯಾ ಎಂಬ ಮಗಳ ಮಾತುಗಳು ದೇಶವನ್ನು ಆಳುವವರು ಮತ್ತು ಅವರೊಂದಿಗೆ ಶರೀಕಾಗಿರುವವರ ಆತ್ಮಸಾಕ್ಷಿಗಳನ್ನು ಇರಿಯಬೇಕಿದೆ... ಆದರೆ ಆತ್ಮಸಾಕ್ಷಿಗಳು ಜೀವಂತವಾಗಿವೆಯೇ?

- Advertisement -
- Advertisement -

ಪೌರತ್ವದಲ್ಲಿ ಭೇದಭಾವ ಎಣಿಸುವ ದುರುದ್ದೇಶದ ಹೊಸ ಕಾಯಿದೆಯನ್ನು ಪ್ರತಿಭಟಿಸಿ ದೇಶದ ಉದ್ದಗಲಕ್ಕೂ ವಿದ್ಯಾರ್ಥಿ ಶಕ್ತಿ ಸಿಡಿದೆದ್ದಿದೆ. ದೆಹಲಿ ಪೊಲೀಸರು ಮೊನ್ನೆ ಭಾನುವಾರ ಕೇಂದ್ರೀಯ ವಿಶ್ವವಿದ್ಯಾಲಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದ ಆವರಣಕ್ಕೆ ನುಗ್ಗಿ ನಡೆಸಿರುವ ಬರ್ಬರ ದೌರ್ಜನ್ಯ ಈ ಕಿಚ್ಚನ್ನು ಮತ್ತಷ್ಟು ಕೆರಳಿಸಿದೆ. ದಶಕಗಳಿಂದ ಮಲಗಿದ್ದ ದೇಶದ ವಿದ್ಯಾರ್ಥಿಶಕ್ತಿಯನ್ನು ಕೇಂದ್ರ ಸರ್ಕಾರ ಕೆಣಕಿರುವುದು ವಿವೇಕದ ನಡೆ ಅಲ್ಲ.

ಭಿನ್ನಮತ ಮತ್ತು ಪ್ರತಿಭಟನೆ ಜನತಂತ್ರದ ಜೀವಾಳ. ಇಂತಹ ದನಿಗಳೊಂದಿಗೆ ಸಜ್ಜನಿಕೆಯ ಸಂವಾದಕ್ಕೆ ಇಳಿಯುವ ಭಾಷೆಯನ್ನು ಕೇಂದ್ರ ಸರ್ಕಾರ ಕಲಿಯುವ ಸೂಚನೆಗಳಿಲ್ಲ. ತಾವು ಹಿಡಿದಿರುವ ಹಾದಿ ತಪ್ಪೆಂದು ತಿಳಿಯುವವರು ಮಾತ್ರವೇ ಅದನ್ನು ತಿದ್ದಿಕೊಳ್ಳಬಲ್ಲರು. ಸರಿಯೆಂದು ಸಮರ್ಥಿಸಿಕೊಳ್ಳುವವರಿಂದ ತಿದ್ದಿಕೊಳ್ಳುವ ನಿರೀಕ್ಷೆಯನ್ನು ಇಟ್ಟುಕೊಳ್ಳುವುದು ಸಾಧ್ಯವಿಲ್ಲ.

ಜಾಮಿಯಾದಲ್ಲಿ ಭಾನುವಾರ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಸಿಡಿಸಿ, ಮನಸೋ ಇಚ್ಛೆ ಥಳಿಸಲಾಗಿದೆ. ಲೈಬ್ರರಿಯಲ್ಲಿ ಓದಿಕೊಳ್ಳುತ್ತಿದ್ದ ಮತ್ತು ಮಸೀದಿಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದವರನ್ನೂ ಬಿಟ್ಟಿಲ್ಲ. ಈ ಅತಿರೇಕ ನಡೆಯಬಾರದಿತ್ತು ಅಥವಾ ಪೊಲೀಸರು ಸಂಯಮದಿಂದ ವರ್ತಿಸಬೇಕಿತ್ತು ಎಂಬ ಒಂದು ಮಾತು ಕೂಡ ಸರ್ಕಾರದ ಕಡೆಯಿಂದ ಬಂದಿಲ್ಲ. ಬದಲಿಗೆ ಪ್ರಧಾನಿಯವರೇ ಮುಂದೆ ನಿಂತು ಅಲ್ಪಸಂಖ್ಯಾತರ ವಿರುದ್ಧ ಇಷಾರೆ ಮಾಡಿದ್ದಾರೆ. ಬೆಂಕಿ ಹಚ್ಚುತ್ತಿರುವವರು ಯಾರೆಂದು ಅವರ ಉಡುಪುಗಳಿಂದ ಗುರುತು ಹಿಡಿಯಬಹುದು ಎಂಬುದಾಗಿ ಝಾರ್ಖಂಡದ ಬಹಿರಂಗ ಭಾಷಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಭಿನ್ನಾಭಿಪ್ರಾಯ ಹೊಂದಿರುವವರು ಮತ್ತು ಪ್ರತಿಭಟಿಸುವವರನ್ನು ಮುಸಲ್ಮಾನರು ಇಲ್ಲವೇ ಪಾಕಿಸ್ತಾನಿ ಸಮರ್ಥಕರು ಎಂದು ಹೆಸರಿಟ್ಟು ದೇಶದ್ರೋಹಿಗಳೆಂದು ಕರೆಯುವ ಹುನ್ನಾರ ನಿರಂತರ ಮುಂದುವರೆದಿದೆ. ಈ ಧೋರಣೆ ಸರ್ವಾಧಿಕಾರಿ ದೇಶಗಳಿಗೆ ಹೊಂದಬಹುದು. ಆದರೆ ಭಾರತದಂತಹ ಜನತಾಂತ್ರಿಕ ವ್ಯವಸ್ಥೆಯಲ್ಲಿ ಶೋಭಿಸುವುದಿಲ್ಲ. ಅತ್ಯಂತ ದುರದೃಷ್ಟಕರ ವಿದ್ಯಮಾನವಿದು. ಒಂದು ಕೋಮನ್ನು ಧರ್ಮದ ಕಾರಣಕ್ಕಾಗಿಯೇ ಕಟಕಟೆಯಲ್ಲಿ ನಿಲ್ಲಿಸಿ ಕಲ್ಲು ಹೊಡೆಯುವಂತೆ ನೀಡುವ ಸತತ ಪ್ರಚೋದನೆ.

ಜಾಮಿಯಾದಲ್ಲಿ ಕೇವಲ ಮುಸಲ್ಮಾನ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿಲ್ಲ. 1920ರಲ್ಲಿ ಸ್ಥಾಪಿತವಾದ ಜಾಮಿಯಾ 1988ರಲ್ಲಿ ಅಲ್ಪಸಂಖ್ಯಾತ ಕೇಂದ್ರೀಯ ವಿಶ್ವವಿದ್ಯಾಲಯ ಎನಿಸಿಕೊಂಡಿತು. 2011ರಲ್ಲಿ ಜಾರಿಗೆ ತರಲಾದ ಮೀಸಲು ವ್ಯವಸ್ಥೆಯ ಪ್ರಕಾರ ಶೇ.50ರಷ್ಟು ಸೀಟುಗಳು ಮುಸ್ಲಿಮ್ ವಿದ್ಯಾರ್ಥಿಗಳಿಗೆ ಸಲ್ಲುತ್ತವೆ. ಈ ಪೈಕಿ ಶೇ.30ರಷ್ಟು ಸೀಟುಗಳನ್ನು ಸಾಮಾನ್ಯ ಮುಸ್ಲಿಮರಿಗೆ, ಶೇ.10ರಷ್ಟು ಸೀಟುಗಳನ್ನು ಮುಸ್ಲಿಂ ಮಹಿಳೆಯರಿಗೆ, ಶೇ.10ರಷ್ಟು ಸೀಟುಗಳನ್ನು ಮುಸ್ಲಿಮರಲ್ಲಿನ ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಲಾಗಿದೆ. ಉಳಿದ ಶೇ.50ರಷ್ಟು ಸೀಟುಗಳು ಮುಸ್ಲಿಮೇತರರಿಗೆ ಸಲ್ಲುತ್ತವೆ. ಮುಸ್ಲಿಂ ಸೀಟುಗಳು ಖಾಲಿ ಉಳಿದರೆ ಅವುಗಳನ್ನು ಸಾಮಾನ್ಯ ವರ್ಗಗಳ ಕೋಟಾಕ್ಕೆ ವರ್ಗಾಯಿಸಲಾಗುತ್ತದೆ. ಮುಸಲ್ಮಾನ ಜನಸಂಖ್ಯೆಯೇ ದಟ್ಟವಾಗಿರುವ ಕಿರಿದಾದ ಓಣಿಗಳ ಇಕ್ಕಟ್ಟಿನ ಜನವಸತಿಯ ನಟ್ಟನಡುವೆ ಇದೆ ಜಾಮಿಯಾ. ಭಯೋತ್ಪಾದಕರಿದ್ದಾರೆಂಬ ಆರೋಪ ಹೊತ್ತ ‘ಬಟ್ಲಾ ಹೌಸ್’ ಎನ್ಕೌಂಟರ್ ನಡೆದದ್ದು ಇದೇ ಪ್ರದೇಶದಲ್ಲಿ. ಮುಸ್ಲಿಮರ ವಿರುದ್ಧ ಪೂರ್ವಗ್ರಹಕ್ಕೆ ಇಷ್ಟು ಸಾಲದೇ? ಇದಕ್ಕೆ ಕಲಶವಿಟ್ಟಂತೆ ಪ್ರಧಾನಿಯವರ ಹೇಳಿಕೆ ಹೊರಬೀಳುತ್ತದೆ. ಪೊಲೀಸರು ಇದೇ ಸಮಾಜದಿಂದ ಬಂದವರು. ಸಮಾಜದಲ್ಲಿ ಬಿತ್ತಿ ಬೆಳೆಯಲಾಗುವ ಕೋಮುವಾದೀ ಸೋಂಕು ಅವರನ್ನು ತಟ್ಟದೆ ಬಿಟ್ಟೀತೇ?

ಪ್ರಧಾನಿಯವರು ಮತ್ತು ಗೃಹಮಂತ್ರಿಗಳು ನಿಮಗೇನು ಅನ್ಯಾಯ ಮಾಡಿದ್ದಾರೆ… ಅವರನ್ನು ಯಾಕೆ ವಿರೋಧಿಸುತ್ತೀರಿ ಎಂದು ಹೆಸರು ಹೇಳಿ ವಿದ್ಯಾರ್ಥಿಗಳ ಬುರುಡೆ ಬಿಚ್ಚಿದ್ದಾರೆ. ದೆಹಲಿ ಪೊಲೀಸ್ ಬಲದಲ್ಲಿ ಮುಸ್ಲಿಮ್ ಪ್ರಾತಿನಿಧ್ಯ ದೇಶದಲ್ಲೇ ತೀರಾ ಕನಿಷ್ಠ. 75 ಸಾವಿರದಷ್ಟು ದೆಹಲಿ ಪೊಲೀಸ್ ಬಲದಲ್ಲಿ ಮುಸ್ಲಿಮ್ ಪ್ರಾತಿನಿಧ್ಯ ಕೇವಲ ಶೇ.2. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಎಂಟು ವರ್ಷಗಳ ಹಿಂದೆ ಹೊರಹಾಕಿದ್ದ ಅಂಕಿಅಂಶವಿದು.

ಜಾಮಿಯಾ ಆಡಳಿತದ ಅನುಮತಿಯಿಲ್ಲದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಅನ್ನು ನುಗ್ಗಿರುವ ಪೊಲೀಸರು ಪುಂಡರಂತೆ ವರ್ತಿಸಿದ್ದಾರೆ. ವಿದ್ಯಾರ್ಥಿಗಳ ಮೂಳೆ ಮುರಿದಿದ್ದಾರೆ. ಅವರ ಮೋಟರ್ ಸೈಕಲ್ಲುಗಳನ್ನು ನುಗ್ಗಾಗಿಸಿದ್ದಾರೆ, ಲೈಟುಗಳು, ಕನ್ನಡಿಗಳು, ಸಿಸಿಟೀವಿ ಕ್ಯಾಮೆರಾಗಳನ್ನು ಒಡೆದು ಹಾಕಲಾಗಿದೆ. ವಿದ್ಯಾರ್ಥಿಗಳಿಗೆ ಕೆಟ್ಟ ಹೆಸರು ತರಲು ದೆಹಲಿ ಪೊಲೀಸರೇ ಬಸ್ಸುಗಳೊಳಗೆ ಪೆಟ್ರೋಲ್ ಸುರಿಯುತ್ತಿರುವ ವಿಡಿಯೋಗಳು ಮೇಲೆ ತೇಲಿವೆ. (ಬೆಂಕಿ ಆರಿಸುವ ವಿಡಿಯೋಗಳೂ ಇವೆ). ಹೈದರಾಬಾದಿನ ‘ಎನ್ಕೌಂಟರ್ ನ್ಯಾಯದಾನ’ದ ನಂತರ ಕಂಡುಬಂದಿರುವ ಅತ್ಯಂತ ಕಳವಳಕಾರಿ ಪ್ರವೃತ್ತಿಯಿದು.

ವಕೀಲರು ಮತ್ತು ಪೊಲೀಸರ ನಡುವೆ ಇತ್ತೀಚೆಗೆ ಮಹಾ ಘರ್ಷಣೆಗೆ ಸಾಕ್ಷಿಯಾಗಿತ್ತು ದೆಹಲಿ. ವಕೀಲರಿಂದ ಎಗ್ಗಾಮುಗ್ಗಾ ಬಡಿಸಿಕೊಂಡು ಅಸಹಾಯಕರಾಗಿ ಕಂಡುಬಂದಿದ್ದ ಪೊಲೀಸರು ಸಾರ್ವಜನಿಕ ಸಹಾನುಭೂತಿ ಗಳಿಸಿದ್ದರು. ಹಿರಿಯ ಐ.ಪಿ.ಎಸ್. ಅಧಿಕಾರಿಯೊಬ್ಬರನ್ನು ಘೇರಾವೋ ಮಾಡಿ ಎಳೆದಾಡಲಾಗಿತ್ತು. ಆದರೂ ಪೊಲೀಸರು ಸುಮ್ಮನಿದ್ದರು.  ಪೊಲೀಸರ ಹೆಂಡತಿ ಮಕ್ಕಳು, ತಂದೆ ತಾಯಿಯರು ದೆಹಲಿ ಪೊಲೀಸ್ ಮುಖ್ಯಾಲಯದ ಮುಂದೆ ರಕ್ಷಣೆ ಕೋರಿ ಪ್ರತಿಭಟನೆ ನಡೆಸಿದ್ದರು. ಇಂತಹ ಪೊಲೀಸರು ಅಸಹಾಯಕ ವಿದ್ಯಾರ್ಥಿಗಳ ಮೇಲೆ ಹರಿಯಬಿಟ್ಟ ಹಿಂಸಾಚಾರ, ತೋರಿದ ವಿಕೃತ ಕ್ರೌರ್ಯ ಖಂಡನೀಯ.

ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿಲ್ಲ ಎಂದು  ಪೊಲೀಸರು ಹೇಳಿದ್ದಾರೆ. ಆದರೆ ಗುಂಡೇಟುಗಳಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಪ್ರಕರಣಗಳು ವರದಿಯಾಗಿವೆ. ಪೊಲೀಸರ ಜೊತೆಗೆ ನೀಲಿ ಜೀನ್ಸ್ ಮತ್ತು ರಂಗುರಂಗಿನ ಟೀ ಶರ್ಟ್ ತೊಟ್ಟು, ಹೆಲ್ಮೆಟ್ ಧರಿಸಿ, ಎದೆ ಮತ್ತು ಬೆನ್ನಿಗೆ ಕವಚ ಧರಿಸಿ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸುತ್ತಿರುವ ವ್ಯಕ್ತಿಗಳು ವಿಡಿಯೋಗಳಲ್ಲಿ ಕಾಣಬಂದಿದ್ದಾರೆ. ಅವರು ಯಾರು, ಮಫ್ತಿಯಲ್ಲಿರುವ ಪೊಲೀಸರೇ, ಇಲ್ಲದೆ ಹೋದರೆ ಖಾಸಗಿಯವರೇ, ಖಾಸಗಿಯವರಾದರೆ ಅವರ ಕೈಗೆ ಪೊಲೀಸರ ಲಾಠಿಗಳು ಮತ್ತು ಹೆಲ್ಮೆಟ್‍ಗಳು, ಎದೆಕವಚಗಳು ಬಂದದ್ದು ಹೇಗೆ, ಪೊಲೀಸರು ಅವರನ್ನು ತಮ್ಮೊಂದಿಗೆ ಸೇರಿಸಿಕೊಂಡದ್ದು ಯಾಕೆ ಎಂಬ ಪ್ರಶ್ನೆಗಳು ಏಳುತ್ತವೆ. ಈ ಗಂಭೀರ ವಿದ್ಯಮಾನ ಕುರಿತು ದೆಹಲಿ ಪೊಲೀಸರು ಸಮಜಾಯಿಷಿ ನೀಡಬೇಕಿದೆ.

ಈ ಪ್ರತಿಭಟನೆಯ ವಿಡಿಯೋಗಳನ್ನು ತಿದ್ದಿ ತೀಡಿ ಹಿಂದುತ್ವದ ವಿರುದ್ಧ ಕೂಗಿರುವ ಘೋಷಣೆಗಳನ್ನು ಹಿಂದೂಗಳ ವಿರುದ್ಧ ಕೂಗಿದ ಘೋಷಣೆಗಳು ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಜೆ.ಎನ್.ಯು. ವಿದ್ಯಾರ್ಥಿಗಳ ವಿರುದ್ಧ ಬಳಸಲಾಗಿದ್ದ ಹಳೆಯ ತಂತ್ರವಿದು. ವಿಡಿಯೋಗಳನ್ನು ಪರೀಕ್ಷಿಸಿರುವ ವಿಧಿವಿಜ್ಞಾನ ಪ್ರಯೋಗಶಾಲೆಯು ಕತ್ತರಿಸಿ ಅಂಟಿಸಿದ ವಿಡಿಯೋ ಎಂದು ವರದಿ ನೀಡಿದೆ. ಅಂದಹಾಗೆ ಜಾಮಿಯಾ ಪ್ರತಿಭಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಜಾತ್ಯತೀತ ತತ್ವಗಳ ಚೌಕಟ್ಟನ್ನು ಧಿಕ್ಕರಿಸಿ ಕಟ್ಟರ್ ಧಾರ್ಮಿಕ ಘೋಷಣೆಗಳನ್ನು ಕೂಗಿರುವುದು ವರದಿಯಾಗಿದೆ. ಇದು ಸಲ್ಲದ ನಡೆ. ಹಿನ್ನಡೆಯೇ ವಿನಾ ಮುನ್ನಡೆ ಅಲ್ಲ.

ಪೊಲೀಸ್ ಅತಿರೇಕಗಳಲ್ಲಿ ನರಳಿರುವ ಜಾಮಿಯಾ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ರಕ್ತ ಹೆಪ್ಪುಗಟ್ಟಿಸುವ ಚಳಿಯಲ್ಲಿ ಬೀದಿ ಪಾಲಾಗಿದ್ದಾರೆ. ದೆಹಲಿಯ ಸಜ್ಜನ ಸಮಾಜ ಅವರ ನೆರವಿಗೆ ಮುಂದೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಅನೇಕರು ತಮ್ಮ ಮನೆಯ ಬಾಗಿಲುಗಳನ್ನು ಈ ವಿದ್ಯಾರ್ಥಿಗಳಿಗೆ ತೆರೆದಿರುವುದಾಗಿ ಸಾರಿದ್ದಾರೆ. ದೆಹಲಿಯ ಗುರುದ್ವಾರಗಳು ವಿದ್ಯಾರ್ಥಿಗಳನ್ನು ತೆರೆದ ತೋಳುಗಳಿಂದ ಬರಮಾಡಿಕೊಂಡು ಆಶ್ರಯ ನೀಡಿವೆ. ಪೊಲೀಸ್ ದೌರ್ಜನ್ಯ ಮತ್ತು ಪೌರತ್ವ ಕಾಯಿದೆ ತಿದ್ದುಪಡಿಯಲ್ಲಿ ಮುಸ್ಲಿಮರನ್ನು ಅನ್ಯರನ್ನಾಗಿ ಕಾಣುತ್ತಿರುವ ಕಾರಸ್ಥಾನ ಕುರಿತು ಜಾಮಿಯಾದಲ್ಲಿ ಓದುತ್ತಿರುವ ರಾಂಚಿಯ ಅನುಗ್ಯಾ ಎಂಬ ವಿದ್ಯಾರ್ಥಿನಿ ರೋದಿಸುತ್ತಾ ಎತ್ತಿರುವ ಪ್ರಶ್ನೆಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಆ ಮಗಳ ಮಾತುಗಳು ಈ ದೇಶವನ್ನು ಆಳುವವರು ಮತ್ತು ಅವರೊಂದಿಗೆ ಶರೀಕಾಗಿರುವವರ ಆತ್ಮಸಾಕ್ಷಿಗಳನ್ನು ಇರಿಯುತ್ತವೆ.
ಆದರೆ ಆತ್ಮಸಾಕ್ಷಿಗಳು ಜೀವಂತ ಉಳಿದಿವೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...