Homeಮುಖಪುಟ‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

- Advertisement -
- Advertisement -

ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಪೊಲೀಸರು ‘ದಿ ವೈರ್‌’ ಸುದ್ದಿಜಾಲತಾಣದ ಸಂಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂ.ಕೆ.ವೇಣು, ಸಿದ್ಧಾರ್ಥ್ ಭಾಟಿಯಾ, ಉಪಸಂಪಾದಕರಾದ ಜಾಹ್ನವಿ ಸೇನ್, ಉತ್ಪನ್ನ ಮತ್ತು ಉದ್ಯಮ ಮುಖ್ಯಸ್ಥ ಮಿಥುನ್ ಕಿಡಂಬಿ ಅವರ ಮನೆಗಳ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ. ದೆಹಲಿ ಮತ್ತು ಮುಂಬೈನಲ್ಲಿ ಮುತ್ತಿಗೆಹಾಕಲಾಗಿದೆ ಎಂದು ‘ದಿ ವೈರ್‌’ ತಿಳಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ನೀಡಿರುವ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದ್ದು, ಈ ಸಂಬಂಧ ಸೆಕ್ಷನ್ 91ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ವೈರ್ ಸಂಸ್ಥೆಯ ಐವರೂ ಪೊಲೀಸರಿಗೆ ಸಹಕರಿಸಿದ್ದಾರೆ. ಪೋಲಿಸರು ಕೇಳಿದ ಎಲ್ಲ ತಾಂತ್ರಿಕ ಸಾಧನಗಳನ್ನು ನೀಡಲಾಗಿದೆ. ವಶಪಡಿಸಿಕೊಂಡ ಫೋನ್‌ಗಳು, ಕಂಪ್ಯೂಟರ್‌ಗಳು ಮತ್ತು ಐಪ್ಯಾಡ್‌ಗಳನ್ನು ತಟಸ್ಥ ಸ್ಥಳದಲ್ಲಿ ಇರಿಸಲು ಬೇಡಿಕೆ ಇರಿಸಿದ್ದೇವೆ. ಡಿವೈಸ್‌ಗಳು ಮತ್ತು ಅವುಗಳಲ್ಲಿನ ಡೇಟಾದ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ವಹಿಸಿದ್ದೇವೆ ಎಂದು ‘ದಿ ವೈರ್‌’ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲ ಸಹಕಾರದ ಹೊರತಾಗಿಯೂ ದೆಹಲಿಯ ಭಗತ್ ಸಿಂಗ್ ಮಾರ್ಕೆಟ್‌ನಲ್ಲಿರುವ ‘ದಿ ವೈರ್‌’ನ ಕಚೇರಿಯನ್ನೂ ಶೋಧಿಸಲಾಗಿದೆ. ನಮ್ಮ ವಕೀಲರೊಬ್ಬರನ್ನು ಆ ಸ್ಥಳದಲ್ಲಿದ್ದ ಅಧಿಕಾರಿಗಳು ಹೊರಗೆ ತಳ್ಳಿದ್ದಾರೆ. ನಮ್ಮ ಅಕೌಂಟ್ ಸಿಬ್ಬಂದಿ ಬಳಸುವ ಎರಡು ಕಂಪ್ಯೂಟರ್‌ಗಳಿಂದ ಹಾರ್ಡ್ ಡಿಸ್ಕ್‌ಗಳನ್ನೂ ಕ್ರೈಂ ಬ್ರಾಂಚ್‌ನವರು ವಶಕ್ಕೆ ಪಡೆದಿದ್ದಾರೆ ಎಂದಿದೆ.

ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ವಂಚನೆ, ಫೋರ್ಜರಿ, ಮಾನನಷ್ಟ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಸಂಪಾದಕರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಎರಡು ದಿನಗಳ ನಂತರ ಈ ದಾಳಿಗಳು ನಡೆದವು.

‍“ಪೊಲೀಸರು ಅಕ್ಟೋಬರ್‌ 31ರ ಸಂಜೆ 4.40ರ ಸುಮಾರಿಗೆ ಬಂದು 6 ಗಂಟೆಗೆ ವಾಪಾಸಾದರು” ಎಂದು ವೇಣು ಅವರು ‘ಸ್ಕ್ರಾಲ್‌’ಗೆ ತಿಳಿಸಿದ್ದಾರೆ. “ಅಮಿತ್ ಮಾಳವಿಯಾ ಸಲ್ಲಿಸಿದ ದೂರಿನ ಕಾರಣಕ್ಕಾಗಿ ದೆಹಲಿ ಪೊಲೀಸ್ ಅಪರಾಧ ವಿಭಾಗದ ಪರವಾಗಿ ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದರು. ಅವರು ನನ್ನ ಐಫೋನ್ ಮತ್ತು ಐಪ್ಯಾಡ್ ಅನ್ನು ವಶಕ್ಕೆ ಪಡೆದಿದ್ದಾರೆ” ಎಂದು ವಿವರಿಸಿದ್ದಾರೆ.

ನಾವು ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದಿರುವ ವರದರಾಜನ್, “ಅವರು ಕೇಳಿದ ಡಿವೈಸ್‌ಗಳು ಮತ್ತು ಪಾಸ್‌ವರ್ಡ್‌ಗಳನ್ನು ನಾವು ನೀಡಿದ್ದೇವೆ. ಅವರು ನಾಲ್ಕು ಸಾಧನಗಳನ್ನು ತೆಗೆದುಕೊಂಡಿದ್ದಾರೆ. ಒಂದು ಮ್ಯಾಕ್‌ಬುಕ್, ಎರಡು ಐಫೋನ್‌ಗಳು ಮತ್ತು ಒಂದು ಐಪ್ಯಾಡ್ ಅವರ ವಶಕ್ಕೆ ನೀಡಲಾಗಿದೆ” ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ.

ಡಿಜಿಟಲ್ ಸುದ್ದಿ ವೇದಿಕೆಗಳ ಸಂಸ್ಥೆ ಖಂಡನೆ

11 ಡಿಜಿಟಲ್ ನ್ಯೂಸ್‌ ಸಂಸ್ಥೆಗಳ ಸಂಘಟನೆಯಾದ ‘ಡಿಜಿಪಬ್‌ ನ್ಯೂಸ್‌ ಇಂಡಿಯಾ ಫೌಂಡೇಷನ್‌’ ದಾಳಿಯನ್ನು ಖಂಡಿಸಿದೆ. ಆಡಳಿತಾರೂಢ ಬಿಜೆಪಿಯ ವಕ್ತಾರರು ಸಲ್ಲಿಸಿದ ದೂರಿನ ಆಧಾರದ ಮೇಲೆ ತಕ್ಷಣದ ಮತ್ತು ಅನಿಯಂತ್ರಿತ ದಾಳಿ ನಡೆಸಿರುವುದು ದುರುದ್ದೇಶಪೂರಿತವಾಗಿದೆ ಎಂದಿದೆ.

ಭಾರತದಲ್ಲಿ ಪತ್ರಿಕೋದ್ಯಮದ ವಿರುದ್ಧ ಭೀತಿಯನ್ನು ಸೃಷ್ಟಿಸುವುದು ಈ ದಾಳಿಯ ಉದ್ದೇಶವಾಗಿದೆ ಎಂದು ಡಿಜಿಪಬ್ ಹೇಳಿಕೆಯಲ್ಲಿ ತಿಳಿಸಿದೆ.

“ಇದಲ್ಲದೆ ದಿ ವೈರ್ ಹೊಂದಿರುವ ಗೌಪ್ಯ, ಸೂಕ್ಷ್ಮ ಡೇಟಾವನ್ನು ವಶಪಡಿಸಿಕೊಳ್ಳುವ ಮತ್ತು ನಕಲು ಮಾಡುವ ಅಪಾಯವೂ ದಾಳಿಯಲ್ಲಿ ಇರುವುದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದೆ.

ವೈರ್‌ v/s ಮೆಟಾ ಮತ್ತು ಮಾಳವಿಯಾ

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ವಿವಾದ ಭುಗಿಲೆದ್ದಿತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ಇದನ್ನೂ ಓದಿರಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು. ಈ ವರದಿಯ ಬಳಿಕ ‘ದಿ ವೈರ್‌’ ಮತ್ತು ‘ಮೆಟಾ’ ನಡುವೆ ವಾಗ್ವಾದ ನಡೆದಿತ್ತು.

ಮತ್ತೊಂದು ವರದಿ ಬರೆದ ವೈರ್‌‌, “ವೈರ್‌ನ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್‌ ‌ಹಾಗೂ ಪತ್ರಕರ್ತೆ ಜಾಹ್ನವಿ ಸೇನ್‌ ಅವರ ಖಾತೆಗಳನ್ನು ಮೆಟಾ ಸಂಸ್ಥೆಯು ‘ವಾಚ್‌ಲಿಸ್ಟ್’ನಲ್ಲಿ ಇಟ್ಟಿದೆ” ಎಂದು ಆರೋಪಿಸಿತು. ವಾಗ್ವಾದ ನಡೆದು ಅಂತಿಮವಾಗಿ ‘ದಿ ವೈರ್‌’- ತನ್ನ ವರದಿಗಳನ್ನು ಮರುಪರಿಶೀಲಿಸುವುದಾಗಿ ತಿಳಿಸಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು. ಇದಾದ ಬಳಿಕ ಮಾಳವಿಯ ದೂರು ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರಿ ಪೊಲೀಸ್ ಒಂದು ರಾಜಕೀಯ ಪಕ್ಷದ ವಕ್ತಾರ ದೂರು ನೀಡಿದಾಕ್ಷಣ ಪತ್ರಕಾ ಸಂಸ್ಥೆ ಮೇಲೆ ದಾಳಿ ಮಾಡತ್ತೆ ಅಂದರೆ ಪೊಲೀಸರು ಸಂವಿಧಾನದ ಪ್ರಕಾರ ಕೆಲಸಮಾಡುತ್ತಾ ಇದ್ದಾರೊ ಅಥವಾ ಆ ಪಕ್ಷದ ಗುಲಾಮಗಿರಿ ಮಾಡುತ್ತಾ ಇದ್ದಾರಾ ಅದು ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಸವಲತ್ತು ಪಡೆದು? ಇವರೆಲ್ಲಾ ಸಗಣಿ ತಿನ್ನೋಕೆಯೇ ಲಾಯಕ್ಕೂ.

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...