Homeಮುಖಪುಟ‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

- Advertisement -
- Advertisement -

ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಪೊಲೀಸರು ‘ದಿ ವೈರ್‌’ ಸುದ್ದಿಜಾಲತಾಣದ ಸಂಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂ.ಕೆ.ವೇಣು, ಸಿದ್ಧಾರ್ಥ್ ಭಾಟಿಯಾ, ಉಪಸಂಪಾದಕರಾದ ಜಾಹ್ನವಿ ಸೇನ್, ಉತ್ಪನ್ನ ಮತ್ತು ಉದ್ಯಮ ಮುಖ್ಯಸ್ಥ ಮಿಥುನ್ ಕಿಡಂಬಿ ಅವರ ಮನೆಗಳ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ. ದೆಹಲಿ ಮತ್ತು ಮುಂಬೈನಲ್ಲಿ ಮುತ್ತಿಗೆಹಾಕಲಾಗಿದೆ ಎಂದು ‘ದಿ ವೈರ್‌’ ತಿಳಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ನೀಡಿರುವ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದ್ದು, ಈ ಸಂಬಂಧ ಸೆಕ್ಷನ್ 91ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ವೈರ್ ಸಂಸ್ಥೆಯ ಐವರೂ ಪೊಲೀಸರಿಗೆ ಸಹಕರಿಸಿದ್ದಾರೆ. ಪೋಲಿಸರು ಕೇಳಿದ ಎಲ್ಲ ತಾಂತ್ರಿಕ ಸಾಧನಗಳನ್ನು ನೀಡಲಾಗಿದೆ. ವಶಪಡಿಸಿಕೊಂಡ ಫೋನ್‌ಗಳು, ಕಂಪ್ಯೂಟರ್‌ಗಳು ಮತ್ತು ಐಪ್ಯಾಡ್‌ಗಳನ್ನು ತಟಸ್ಥ ಸ್ಥಳದಲ್ಲಿ ಇರಿಸಲು ಬೇಡಿಕೆ ಇರಿಸಿದ್ದೇವೆ. ಡಿವೈಸ್‌ಗಳು ಮತ್ತು ಅವುಗಳಲ್ಲಿನ ಡೇಟಾದ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ವಹಿಸಿದ್ದೇವೆ ಎಂದು ‘ದಿ ವೈರ್‌’ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲ ಸಹಕಾರದ ಹೊರತಾಗಿಯೂ ದೆಹಲಿಯ ಭಗತ್ ಸಿಂಗ್ ಮಾರ್ಕೆಟ್‌ನಲ್ಲಿರುವ ‘ದಿ ವೈರ್‌’ನ ಕಚೇರಿಯನ್ನೂ ಶೋಧಿಸಲಾಗಿದೆ. ನಮ್ಮ ವಕೀಲರೊಬ್ಬರನ್ನು ಆ ಸ್ಥಳದಲ್ಲಿದ್ದ ಅಧಿಕಾರಿಗಳು ಹೊರಗೆ ತಳ್ಳಿದ್ದಾರೆ. ನಮ್ಮ ಅಕೌಂಟ್ ಸಿಬ್ಬಂದಿ ಬಳಸುವ ಎರಡು ಕಂಪ್ಯೂಟರ್‌ಗಳಿಂದ ಹಾರ್ಡ್ ಡಿಸ್ಕ್‌ಗಳನ್ನೂ ಕ್ರೈಂ ಬ್ರಾಂಚ್‌ನವರು ವಶಕ್ಕೆ ಪಡೆದಿದ್ದಾರೆ ಎಂದಿದೆ.

ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ವಂಚನೆ, ಫೋರ್ಜರಿ, ಮಾನನಷ್ಟ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಸಂಪಾದಕರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಎರಡು ದಿನಗಳ ನಂತರ ಈ ದಾಳಿಗಳು ನಡೆದವು.

‍“ಪೊಲೀಸರು ಅಕ್ಟೋಬರ್‌ 31ರ ಸಂಜೆ 4.40ರ ಸುಮಾರಿಗೆ ಬಂದು 6 ಗಂಟೆಗೆ ವಾಪಾಸಾದರು” ಎಂದು ವೇಣು ಅವರು ‘ಸ್ಕ್ರಾಲ್‌’ಗೆ ತಿಳಿಸಿದ್ದಾರೆ. “ಅಮಿತ್ ಮಾಳವಿಯಾ ಸಲ್ಲಿಸಿದ ದೂರಿನ ಕಾರಣಕ್ಕಾಗಿ ದೆಹಲಿ ಪೊಲೀಸ್ ಅಪರಾಧ ವಿಭಾಗದ ಪರವಾಗಿ ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದರು. ಅವರು ನನ್ನ ಐಫೋನ್ ಮತ್ತು ಐಪ್ಯಾಡ್ ಅನ್ನು ವಶಕ್ಕೆ ಪಡೆದಿದ್ದಾರೆ” ಎಂದು ವಿವರಿಸಿದ್ದಾರೆ.

ನಾವು ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದಿರುವ ವರದರಾಜನ್, “ಅವರು ಕೇಳಿದ ಡಿವೈಸ್‌ಗಳು ಮತ್ತು ಪಾಸ್‌ವರ್ಡ್‌ಗಳನ್ನು ನಾವು ನೀಡಿದ್ದೇವೆ. ಅವರು ನಾಲ್ಕು ಸಾಧನಗಳನ್ನು ತೆಗೆದುಕೊಂಡಿದ್ದಾರೆ. ಒಂದು ಮ್ಯಾಕ್‌ಬುಕ್, ಎರಡು ಐಫೋನ್‌ಗಳು ಮತ್ತು ಒಂದು ಐಪ್ಯಾಡ್ ಅವರ ವಶಕ್ಕೆ ನೀಡಲಾಗಿದೆ” ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ.

ಡಿಜಿಟಲ್ ಸುದ್ದಿ ವೇದಿಕೆಗಳ ಸಂಸ್ಥೆ ಖಂಡನೆ

11 ಡಿಜಿಟಲ್ ನ್ಯೂಸ್‌ ಸಂಸ್ಥೆಗಳ ಸಂಘಟನೆಯಾದ ‘ಡಿಜಿಪಬ್‌ ನ್ಯೂಸ್‌ ಇಂಡಿಯಾ ಫೌಂಡೇಷನ್‌’ ದಾಳಿಯನ್ನು ಖಂಡಿಸಿದೆ. ಆಡಳಿತಾರೂಢ ಬಿಜೆಪಿಯ ವಕ್ತಾರರು ಸಲ್ಲಿಸಿದ ದೂರಿನ ಆಧಾರದ ಮೇಲೆ ತಕ್ಷಣದ ಮತ್ತು ಅನಿಯಂತ್ರಿತ ದಾಳಿ ನಡೆಸಿರುವುದು ದುರುದ್ದೇಶಪೂರಿತವಾಗಿದೆ ಎಂದಿದೆ.

ಭಾರತದಲ್ಲಿ ಪತ್ರಿಕೋದ್ಯಮದ ವಿರುದ್ಧ ಭೀತಿಯನ್ನು ಸೃಷ್ಟಿಸುವುದು ಈ ದಾಳಿಯ ಉದ್ದೇಶವಾಗಿದೆ ಎಂದು ಡಿಜಿಪಬ್ ಹೇಳಿಕೆಯಲ್ಲಿ ತಿಳಿಸಿದೆ.

“ಇದಲ್ಲದೆ ದಿ ವೈರ್ ಹೊಂದಿರುವ ಗೌಪ್ಯ, ಸೂಕ್ಷ್ಮ ಡೇಟಾವನ್ನು ವಶಪಡಿಸಿಕೊಳ್ಳುವ ಮತ್ತು ನಕಲು ಮಾಡುವ ಅಪಾಯವೂ ದಾಳಿಯಲ್ಲಿ ಇರುವುದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದೆ.

ವೈರ್‌ v/s ಮೆಟಾ ಮತ್ತು ಮಾಳವಿಯಾ

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ವಿವಾದ ಭುಗಿಲೆದ್ದಿತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ಇದನ್ನೂ ಓದಿರಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು. ಈ ವರದಿಯ ಬಳಿಕ ‘ದಿ ವೈರ್‌’ ಮತ್ತು ‘ಮೆಟಾ’ ನಡುವೆ ವಾಗ್ವಾದ ನಡೆದಿತ್ತು.

ಮತ್ತೊಂದು ವರದಿ ಬರೆದ ವೈರ್‌‌, “ವೈರ್‌ನ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್‌ ‌ಹಾಗೂ ಪತ್ರಕರ್ತೆ ಜಾಹ್ನವಿ ಸೇನ್‌ ಅವರ ಖಾತೆಗಳನ್ನು ಮೆಟಾ ಸಂಸ್ಥೆಯು ‘ವಾಚ್‌ಲಿಸ್ಟ್’ನಲ್ಲಿ ಇಟ್ಟಿದೆ” ಎಂದು ಆರೋಪಿಸಿತು. ವಾಗ್ವಾದ ನಡೆದು ಅಂತಿಮವಾಗಿ ‘ದಿ ವೈರ್‌’- ತನ್ನ ವರದಿಗಳನ್ನು ಮರುಪರಿಶೀಲಿಸುವುದಾಗಿ ತಿಳಿಸಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು. ಇದಾದ ಬಳಿಕ ಮಾಳವಿಯ ದೂರು ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರಿ ಪೊಲೀಸ್ ಒಂದು ರಾಜಕೀಯ ಪಕ್ಷದ ವಕ್ತಾರ ದೂರು ನೀಡಿದಾಕ್ಷಣ ಪತ್ರಕಾ ಸಂಸ್ಥೆ ಮೇಲೆ ದಾಳಿ ಮಾಡತ್ತೆ ಅಂದರೆ ಪೊಲೀಸರು ಸಂವಿಧಾನದ ಪ್ರಕಾರ ಕೆಲಸಮಾಡುತ್ತಾ ಇದ್ದಾರೊ ಅಥವಾ ಆ ಪಕ್ಷದ ಗುಲಾಮಗಿರಿ ಮಾಡುತ್ತಾ ಇದ್ದಾರಾ ಅದು ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಸವಲತ್ತು ಪಡೆದು? ಇವರೆಲ್ಲಾ ಸಗಣಿ ತಿನ್ನೋಕೆಯೇ ಲಾಯಕ್ಕೂ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...