Homeಮುಖಪುಟ‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

‘ದಿ ವೈರ್‌’ ಮೇಲೆ ದೆಹಲಿ ಪೊಲೀಸರ ಕಾರ್ಯಾಚರಣೆ; ಡಿಜಿಪಬ್‌ ಖಂಡನೆ

- Advertisement -
- Advertisement -

ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಪೊಲೀಸರು ‘ದಿ ವೈರ್‌’ ಸುದ್ದಿಜಾಲತಾಣದ ಸಂಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂ.ಕೆ.ವೇಣು, ಸಿದ್ಧಾರ್ಥ್ ಭಾಟಿಯಾ, ಉಪಸಂಪಾದಕರಾದ ಜಾಹ್ನವಿ ಸೇನ್, ಉತ್ಪನ್ನ ಮತ್ತು ಉದ್ಯಮ ಮುಖ್ಯಸ್ಥ ಮಿಥುನ್ ಕಿಡಂಬಿ ಅವರ ಮನೆಗಳ ಮೇಲೆ ಕಾರ್ಯಾಚರಣೆ ನಡೆಸಿದ್ದಾರೆ. ದೆಹಲಿ ಮತ್ತು ಮುಂಬೈನಲ್ಲಿ ಮುತ್ತಿಗೆಹಾಕಲಾಗಿದೆ ಎಂದು ‘ದಿ ವೈರ್‌’ ತಿಳಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ನೀಡಿರುವ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದ್ದು, ಈ ಸಂಬಂಧ ಸೆಕ್ಷನ್ 91ರ ಅಡಿಯಲ್ಲಿ ನೋಟಿಸ್ ನೀಡಲಾಗಿದೆ.

ವೈರ್ ಸಂಸ್ಥೆಯ ಐವರೂ ಪೊಲೀಸರಿಗೆ ಸಹಕರಿಸಿದ್ದಾರೆ. ಪೋಲಿಸರು ಕೇಳಿದ ಎಲ್ಲ ತಾಂತ್ರಿಕ ಸಾಧನಗಳನ್ನು ನೀಡಲಾಗಿದೆ. ವಶಪಡಿಸಿಕೊಂಡ ಫೋನ್‌ಗಳು, ಕಂಪ್ಯೂಟರ್‌ಗಳು ಮತ್ತು ಐಪ್ಯಾಡ್‌ಗಳನ್ನು ತಟಸ್ಥ ಸ್ಥಳದಲ್ಲಿ ಇರಿಸಲು ಬೇಡಿಕೆ ಇರಿಸಿದ್ದೇವೆ. ಡಿವೈಸ್‌ಗಳು ಮತ್ತು ಅವುಗಳಲ್ಲಿನ ಡೇಟಾದ ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ವಹಿಸಿದ್ದೇವೆ ಎಂದು ‘ದಿ ವೈರ್‌’ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಎಲ್ಲ ಸಹಕಾರದ ಹೊರತಾಗಿಯೂ ದೆಹಲಿಯ ಭಗತ್ ಸಿಂಗ್ ಮಾರ್ಕೆಟ್‌ನಲ್ಲಿರುವ ‘ದಿ ವೈರ್‌’ನ ಕಚೇರಿಯನ್ನೂ ಶೋಧಿಸಲಾಗಿದೆ. ನಮ್ಮ ವಕೀಲರೊಬ್ಬರನ್ನು ಆ ಸ್ಥಳದಲ್ಲಿದ್ದ ಅಧಿಕಾರಿಗಳು ಹೊರಗೆ ತಳ್ಳಿದ್ದಾರೆ. ನಮ್ಮ ಅಕೌಂಟ್ ಸಿಬ್ಬಂದಿ ಬಳಸುವ ಎರಡು ಕಂಪ್ಯೂಟರ್‌ಗಳಿಂದ ಹಾರ್ಡ್ ಡಿಸ್ಕ್‌ಗಳನ್ನೂ ಕ್ರೈಂ ಬ್ರಾಂಚ್‌ನವರು ವಶಕ್ಕೆ ಪಡೆದಿದ್ದಾರೆ ಎಂದಿದೆ.

ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ವಂಚನೆ, ಫೋರ್ಜರಿ, ಮಾನನಷ್ಟ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಸಂಪಾದಕರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಎರಡು ದಿನಗಳ ನಂತರ ಈ ದಾಳಿಗಳು ನಡೆದವು.

‍“ಪೊಲೀಸರು ಅಕ್ಟೋಬರ್‌ 31ರ ಸಂಜೆ 4.40ರ ಸುಮಾರಿಗೆ ಬಂದು 6 ಗಂಟೆಗೆ ವಾಪಾಸಾದರು” ಎಂದು ವೇಣು ಅವರು ‘ಸ್ಕ್ರಾಲ್‌’ಗೆ ತಿಳಿಸಿದ್ದಾರೆ. “ಅಮಿತ್ ಮಾಳವಿಯಾ ಸಲ್ಲಿಸಿದ ದೂರಿನ ಕಾರಣಕ್ಕಾಗಿ ದೆಹಲಿ ಪೊಲೀಸ್ ಅಪರಾಧ ವಿಭಾಗದ ಪರವಾಗಿ ಇಲ್ಲಿಗೆ ಬಂದಿದ್ದೇವೆ ಎಂದು ಅವರು ಹೇಳಿದರು. ಅವರು ನನ್ನ ಐಫೋನ್ ಮತ್ತು ಐಪ್ಯಾಡ್ ಅನ್ನು ವಶಕ್ಕೆ ಪಡೆದಿದ್ದಾರೆ” ಎಂದು ವಿವರಿಸಿದ್ದಾರೆ.

ನಾವು ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ ಎಂದಿರುವ ವರದರಾಜನ್, “ಅವರು ಕೇಳಿದ ಡಿವೈಸ್‌ಗಳು ಮತ್ತು ಪಾಸ್‌ವರ್ಡ್‌ಗಳನ್ನು ನಾವು ನೀಡಿದ್ದೇವೆ. ಅವರು ನಾಲ್ಕು ಸಾಧನಗಳನ್ನು ತೆಗೆದುಕೊಂಡಿದ್ದಾರೆ. ಒಂದು ಮ್ಯಾಕ್‌ಬುಕ್, ಎರಡು ಐಫೋನ್‌ಗಳು ಮತ್ತು ಒಂದು ಐಪ್ಯಾಡ್ ಅವರ ವಶಕ್ಕೆ ನೀಡಲಾಗಿದೆ” ಎಂದು ಸ್ಕ್ರಾಲ್‌ಗೆ ತಿಳಿಸಿದ್ದಾರೆ.

ಡಿಜಿಟಲ್ ಸುದ್ದಿ ವೇದಿಕೆಗಳ ಸಂಸ್ಥೆ ಖಂಡನೆ

11 ಡಿಜಿಟಲ್ ನ್ಯೂಸ್‌ ಸಂಸ್ಥೆಗಳ ಸಂಘಟನೆಯಾದ ‘ಡಿಜಿಪಬ್‌ ನ್ಯೂಸ್‌ ಇಂಡಿಯಾ ಫೌಂಡೇಷನ್‌’ ದಾಳಿಯನ್ನು ಖಂಡಿಸಿದೆ. ಆಡಳಿತಾರೂಢ ಬಿಜೆಪಿಯ ವಕ್ತಾರರು ಸಲ್ಲಿಸಿದ ದೂರಿನ ಆಧಾರದ ಮೇಲೆ ತಕ್ಷಣದ ಮತ್ತು ಅನಿಯಂತ್ರಿತ ದಾಳಿ ನಡೆಸಿರುವುದು ದುರುದ್ದೇಶಪೂರಿತವಾಗಿದೆ ಎಂದಿದೆ.

ಭಾರತದಲ್ಲಿ ಪತ್ರಿಕೋದ್ಯಮದ ವಿರುದ್ಧ ಭೀತಿಯನ್ನು ಸೃಷ್ಟಿಸುವುದು ಈ ದಾಳಿಯ ಉದ್ದೇಶವಾಗಿದೆ ಎಂದು ಡಿಜಿಪಬ್ ಹೇಳಿಕೆಯಲ್ಲಿ ತಿಳಿಸಿದೆ.

“ಇದಲ್ಲದೆ ದಿ ವೈರ್ ಹೊಂದಿರುವ ಗೌಪ್ಯ, ಸೂಕ್ಷ್ಮ ಡೇಟಾವನ್ನು ವಶಪಡಿಸಿಕೊಳ್ಳುವ ಮತ್ತು ನಕಲು ಮಾಡುವ ಅಪಾಯವೂ ದಾಳಿಯಲ್ಲಿ ಇರುವುದನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದೆ.

ವೈರ್‌ v/s ಮೆಟಾ ಮತ್ತು ಮಾಳವಿಯಾ

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ವಿವಾದ ಭುಗಿಲೆದ್ದಿತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ಇದನ್ನೂ ಓದಿರಿ: ಗುಜರಾತ್‌: ‘ಮೊರ್ಬಿ ಸೇತುವೆ ನವೀಕರಣದ ವೇಳೆ ಹಳೆಯ ತಂತಿ ಬದಲಿಸಿರಲಿಲ್ಲ’

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು. ಈ ವರದಿಯ ಬಳಿಕ ‘ದಿ ವೈರ್‌’ ಮತ್ತು ‘ಮೆಟಾ’ ನಡುವೆ ವಾಗ್ವಾದ ನಡೆದಿತ್ತು.

ಮತ್ತೊಂದು ವರದಿ ಬರೆದ ವೈರ್‌‌, “ವೈರ್‌ನ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್‌ ‌ಹಾಗೂ ಪತ್ರಕರ್ತೆ ಜಾಹ್ನವಿ ಸೇನ್‌ ಅವರ ಖಾತೆಗಳನ್ನು ಮೆಟಾ ಸಂಸ್ಥೆಯು ‘ವಾಚ್‌ಲಿಸ್ಟ್’ನಲ್ಲಿ ಇಟ್ಟಿದೆ” ಎಂದು ಆರೋಪಿಸಿತು. ವಾಗ್ವಾದ ನಡೆದು ಅಂತಿಮವಾಗಿ ‘ದಿ ವೈರ್‌’- ತನ್ನ ವರದಿಗಳನ್ನು ಮರುಪರಿಶೀಲಿಸುವುದಾಗಿ ತಿಳಿಸಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು. ಇದಾದ ಬಳಿಕ ಮಾಳವಿಯ ದೂರು ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರಿ ಪೊಲೀಸ್ ಒಂದು ರಾಜಕೀಯ ಪಕ್ಷದ ವಕ್ತಾರ ದೂರು ನೀಡಿದಾಕ್ಷಣ ಪತ್ರಕಾ ಸಂಸ್ಥೆ ಮೇಲೆ ದಾಳಿ ಮಾಡತ್ತೆ ಅಂದರೆ ಪೊಲೀಸರು ಸಂವಿಧಾನದ ಪ್ರಕಾರ ಕೆಲಸಮಾಡುತ್ತಾ ಇದ್ದಾರೊ ಅಥವಾ ಆ ಪಕ್ಷದ ಗುಲಾಮಗಿರಿ ಮಾಡುತ್ತಾ ಇದ್ದಾರಾ ಅದು ಸಾರ್ವಜನಿಕರ ತೆರಿಗೆ ಹಣದಿಂದ ಸಂಬಳ ಸವಲತ್ತು ಪಡೆದು? ಇವರೆಲ್ಲಾ ಸಗಣಿ ತಿನ್ನೋಕೆಯೇ ಲಾಯಕ್ಕೂ.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....