Homeಮುಖಪುಟಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

ಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

- Advertisement -
- Advertisement -

ಬುಲ್ಲಿ ಬಾಯ್ ಆಪ್ ಪ್ರಕರಣದಲ್ಲಿ ಬಂಧಿಸಲಾಗಿರುವ ಆ್ಯಪ್‌ನ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಜಾಮೀನು ಅರ್ಜಿಗೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ತನಿಖೆ ಈಗ ಒಂದು ಹಂತದಲ್ಲಿದ್ದು, ಈ ವೇಳೆ ಜಾಮೀನು ನೀಡಬಾರದು ಎಂದು ಹೇಳಿದ್ದಾರೆ.

ಆರೋಪಿಯ ಟ್ವಿಟರ್ ಹ್ಯಾಂಡಲ್‌ಗಳಲ್ಲಿನ ವಿಷಯಗಳು ಅವಹೇಳನಕಾರಿಯಾಗಿದೆ. ಆರೋಪಿಗಳು ನಿರ್ದಿಷ್ಟ ಸಮುದಾಯದ ಮಹಿಳೆಯರನ್ನು ಗುರಿಯಾಗಿಸಲು “ಸುಲ್ಲಿ” ಮತ್ತು “ಬುಲ್ಲಿ ” ನಂತಹ ಪದಗಳನ್ನು ಬಳಸುತ್ತಿದ್ದಾರೆ. ಈ ಬುಲ್ಲಿ ಬಾಯ್ ವೆಬ್‌ಸೈಟ್ ಅನ್ನು ಈ ಆರೋಪಿ ರಚಿಸಿದ್ದಾರೆ. ತನಿಖಾ ಅಧಿಕಾರಿ ಇನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ದೆಹಲಿ ಪೊಲೀಸರ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಡ್ವೊಕೇಟ್ ಇರ್ಫಾನ್ ಅಹ್ಮದ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಗಿಟ್‌ಹಬ್‌ನಲ್ಲಿ ಬುಲ್ಲಿ ಬಾಯಿ ಅಪ್ಲಿಕೇಶನ್‌ನ ಮುಖ್ಯ ಸಂಚುಕೋರ, ಸೃಷ್ಟಿಕರ್ತ ಮತ್ತು ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಎಂದು ಹೇಳಲಾದ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ನೀರಜ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕ (IFSO) ಅಸ್ಸಾಂನ ಜೋರ್ಹತ್‌ನಲ್ಲಿ ಜನವರಿ 5ರಂದು ಬಂಧಿಸಿದೆ.

ಇದನ್ನೂ ಓದಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ಆರೋಪಿ ನೀರಜ್ ಬಿಷ್ಣೋಯ್ ಪರ ವಾದ ಮಂಡಿಸಿದ ವಕೀಲ ಎಲ್. ಓಜಾ, “ನೀರಜ್ ಬಿಷ್ಣೋಯ್ ಅವರನ್ನು ಶಂಕಿತ ಆರೋಪಿಯಾಗಿ ಬಂಧಿಸಲಾಗಿದೆ. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ. ಆದರೆ ಐಟಿ ಕಾಯ್ದೆಯ ಸೆಕ್ಷನ್‌ಗಳನ್ನು ಅವರ ಮೇಲೆ ಹಾಕಲಾಗಿದೆ. ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಅವರು ಯಾವುದೇ ಅವಹೇಳನಕಾರಿ ಭಾಷೆಯನ್ನು ಬಳಸಿಲ್ಲ. ಎಫ್‌ಐಆರ್‌ನಲ್ಲಿ ಕೋಮು ಸೌಹಾರ್ದತೆಯ ಕುರಿತಾದ ಸೆಕ್ಷನ್ 153 ಎ ಅನ್ನು ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ವಿಚಾರಣೆಯನ್ನು ಜನವರಿ 27 ಕ್ಕೆ ಮುಂದೂಡಿದ್ದಾರೆ. ಅರೋಪಿ ಪರ ವಕೀಲರ ಆರೋಪಕ್ಕೆ ವಿವರವಾದ ಉತ್ತರವನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.

ಇದೇ ಪ್ರಕರಣದಲ್ಲಿ  21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಆ್ಯಪ್‌ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದನ್ನೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆ್ಯಪ್‌ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...