Homeಮುಖಪುಟಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

ಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

- Advertisement -
- Advertisement -

ಬುಲ್ಲಿ ಬಾಯ್ ಆಪ್ ಪ್ರಕರಣದಲ್ಲಿ ಬಂಧಿಸಲಾಗಿರುವ ಆ್ಯಪ್‌ನ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಜಾಮೀನು ಅರ್ಜಿಗೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ತನಿಖೆ ಈಗ ಒಂದು ಹಂತದಲ್ಲಿದ್ದು, ಈ ವೇಳೆ ಜಾಮೀನು ನೀಡಬಾರದು ಎಂದು ಹೇಳಿದ್ದಾರೆ.

ಆರೋಪಿಯ ಟ್ವಿಟರ್ ಹ್ಯಾಂಡಲ್‌ಗಳಲ್ಲಿನ ವಿಷಯಗಳು ಅವಹೇಳನಕಾರಿಯಾಗಿದೆ. ಆರೋಪಿಗಳು ನಿರ್ದಿಷ್ಟ ಸಮುದಾಯದ ಮಹಿಳೆಯರನ್ನು ಗುರಿಯಾಗಿಸಲು “ಸುಲ್ಲಿ” ಮತ್ತು “ಬುಲ್ಲಿ ” ನಂತಹ ಪದಗಳನ್ನು ಬಳಸುತ್ತಿದ್ದಾರೆ. ಈ ಬುಲ್ಲಿ ಬಾಯ್ ವೆಬ್‌ಸೈಟ್ ಅನ್ನು ಈ ಆರೋಪಿ ರಚಿಸಿದ್ದಾರೆ. ತನಿಖಾ ಅಧಿಕಾರಿ ಇನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ದೆಹಲಿ ಪೊಲೀಸರ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಡ್ವೊಕೇಟ್ ಇರ್ಫಾನ್ ಅಹ್ಮದ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಗಿಟ್‌ಹಬ್‌ನಲ್ಲಿ ಬುಲ್ಲಿ ಬಾಯಿ ಅಪ್ಲಿಕೇಶನ್‌ನ ಮುಖ್ಯ ಸಂಚುಕೋರ, ಸೃಷ್ಟಿಕರ್ತ ಮತ್ತು ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಎಂದು ಹೇಳಲಾದ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ನೀರಜ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕ (IFSO) ಅಸ್ಸಾಂನ ಜೋರ್ಹತ್‌ನಲ್ಲಿ ಜನವರಿ 5ರಂದು ಬಂಧಿಸಿದೆ.

ಇದನ್ನೂ ಓದಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ಆರೋಪಿ ನೀರಜ್ ಬಿಷ್ಣೋಯ್ ಪರ ವಾದ ಮಂಡಿಸಿದ ವಕೀಲ ಎಲ್. ಓಜಾ, “ನೀರಜ್ ಬಿಷ್ಣೋಯ್ ಅವರನ್ನು ಶಂಕಿತ ಆರೋಪಿಯಾಗಿ ಬಂಧಿಸಲಾಗಿದೆ. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ. ಆದರೆ ಐಟಿ ಕಾಯ್ದೆಯ ಸೆಕ್ಷನ್‌ಗಳನ್ನು ಅವರ ಮೇಲೆ ಹಾಕಲಾಗಿದೆ. ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಅವರು ಯಾವುದೇ ಅವಹೇಳನಕಾರಿ ಭಾಷೆಯನ್ನು ಬಳಸಿಲ್ಲ. ಎಫ್‌ಐಆರ್‌ನಲ್ಲಿ ಕೋಮು ಸೌಹಾರ್ದತೆಯ ಕುರಿತಾದ ಸೆಕ್ಷನ್ 153 ಎ ಅನ್ನು ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ವಿಚಾರಣೆಯನ್ನು ಜನವರಿ 27 ಕ್ಕೆ ಮುಂದೂಡಿದ್ದಾರೆ. ಅರೋಪಿ ಪರ ವಕೀಲರ ಆರೋಪಕ್ಕೆ ವಿವರವಾದ ಉತ್ತರವನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.

ಇದೇ ಪ್ರಕರಣದಲ್ಲಿ  21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಆ್ಯಪ್‌ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದನ್ನೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆ್ಯಪ್‌ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...