Homeಮುಖಪುಟಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

ಬುಲ್ಲಿ ಬಾಯ್ ಆ್ಯಪ್‌ ಕ್ರಿಯೆಟರ್‌ ನೀರಜ್ ಬಿಷ್ಣೋಯ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

- Advertisement -
- Advertisement -

ಬುಲ್ಲಿ ಬಾಯ್ ಆಪ್ ಪ್ರಕರಣದಲ್ಲಿ ಬಂಧಿಸಲಾಗಿರುವ ಆ್ಯಪ್‌ನ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಜಾಮೀನು ಅರ್ಜಿಗೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ತನಿಖೆ ಈಗ ಒಂದು ಹಂತದಲ್ಲಿದ್ದು, ಈ ವೇಳೆ ಜಾಮೀನು ನೀಡಬಾರದು ಎಂದು ಹೇಳಿದ್ದಾರೆ.

ಆರೋಪಿಯ ಟ್ವಿಟರ್ ಹ್ಯಾಂಡಲ್‌ಗಳಲ್ಲಿನ ವಿಷಯಗಳು ಅವಹೇಳನಕಾರಿಯಾಗಿದೆ. ಆರೋಪಿಗಳು ನಿರ್ದಿಷ್ಟ ಸಮುದಾಯದ ಮಹಿಳೆಯರನ್ನು ಗುರಿಯಾಗಿಸಲು “ಸುಲ್ಲಿ” ಮತ್ತು “ಬುಲ್ಲಿ ” ನಂತಹ ಪದಗಳನ್ನು ಬಳಸುತ್ತಿದ್ದಾರೆ. ಈ ಬುಲ್ಲಿ ಬಾಯ್ ವೆಬ್‌ಸೈಟ್ ಅನ್ನು ಈ ಆರೋಪಿ ರಚಿಸಿದ್ದಾರೆ. ತನಿಖಾ ಅಧಿಕಾರಿ ಇನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ದೆಹಲಿ ಪೊಲೀಸರ ಪರ ವಾದ ಮಂಡಿಸಿದ ಪಬ್ಲಿಕ್ ಪ್ರಾಸಿಕ್ಯೂಟರ್ ಅಡ್ವೊಕೇಟ್ ಇರ್ಫಾನ್ ಅಹ್ಮದ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಗಿಟ್‌ಹಬ್‌ನಲ್ಲಿ ಬುಲ್ಲಿ ಬಾಯಿ ಅಪ್ಲಿಕೇಶನ್‌ನ ಮುಖ್ಯ ಸಂಚುಕೋರ, ಸೃಷ್ಟಿಕರ್ತ ಮತ್ತು ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಎಂದು ಹೇಳಲಾದ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ನೀರಜ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸ್ ವಿಶೇಷ ಘಟಕ (IFSO) ಅಸ್ಸಾಂನ ಜೋರ್ಹತ್‌ನಲ್ಲಿ ಜನವರಿ 5ರಂದು ಬಂಧಿಸಿದೆ.

ಇದನ್ನೂ ಓದಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ಆರೋಪಿ ನೀರಜ್ ಬಿಷ್ಣೋಯ್ ಪರ ವಾದ ಮಂಡಿಸಿದ ವಕೀಲ ಎಲ್. ಓಜಾ, “ನೀರಜ್ ಬಿಷ್ಣೋಯ್ ಅವರನ್ನು ಶಂಕಿತ ಆರೋಪಿಯಾಗಿ ಬಂಧಿಸಲಾಗಿದೆ. ಇದು ಜಾಮೀನು ನೀಡಬಹುದಾದ ಅಪರಾಧವಾಗಿದೆ. ಆದರೆ ಐಟಿ ಕಾಯ್ದೆಯ ಸೆಕ್ಷನ್‌ಗಳನ್ನು ಅವರ ಮೇಲೆ ಹಾಕಲಾಗಿದೆ. ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಅವರು ಯಾವುದೇ ಅವಹೇಳನಕಾರಿ ಭಾಷೆಯನ್ನು ಬಳಸಿಲ್ಲ. ಎಫ್‌ಐಆರ್‌ನಲ್ಲಿ ಕೋಮು ಸೌಹಾರ್ದತೆಯ ಕುರಿತಾದ ಸೆಕ್ಷನ್ 153 ಎ ಅನ್ನು ಹಾಕಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಪ್ರಕರಣವನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ವಿಚಾರಣೆಯನ್ನು ಜನವರಿ 27 ಕ್ಕೆ ಮುಂದೂಡಿದ್ದಾರೆ. ಅರೋಪಿ ಪರ ವಕೀಲರ ಆರೋಪಕ್ಕೆ ವಿವರವಾದ ಉತ್ತರವನ್ನು ಸಲ್ಲಿಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.

ಇದೇ ಪ್ರಕರಣದಲ್ಲಿ  21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಆ್ಯಪ್‌ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದನ್ನೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆ್ಯಪ್‌ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....