Homeಚಳವಳಿಟ್ರಾಕ್ಟರ್‌ ರ್‍ಯಾಲಿ ಮಾರ್ಗದ ಬಗ್ಗೆ ರೈತರು ನಮಗೆ ತಿಳಿಸಿಲ್ಲ ಎಂದ ದೆಹಲಿ ಪೊಲೀಸರು!

ಟ್ರಾಕ್ಟರ್‌ ರ್‍ಯಾಲಿ ಮಾರ್ಗದ ಬಗ್ಗೆ ರೈತರು ನಮಗೆ ತಿಳಿಸಿಲ್ಲ ಎಂದ ದೆಹಲಿ ಪೊಲೀಸರು!

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಗಣರಾಜ್ಯೋತ್ಸವದಂದು ನಡೆಸಲು ಉದ್ದೇಶಿಸಿರುವ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿಗೆ ದೆಹಲಿ ಪೊಲೀಸರಿಂದ ಲಿಖಿತ ಅನುಮತಿ ಕೋರಿದ್ದಾರೆ. ದೆಹಲಿಯಾದ್ಯಂತ ಸುತ್ತುವರೆದಿರುವ ರಿಂಗ್ ರಸ್ತೆಯಲ್ಲಿ ನಡೆಯಲಿರುವ ರ್‍ಯಾಲಿಯಲ್ಲಿ ಲಕ್ಷಾಂತರ ಹೆಚ್ಚು ಟ್ರಾಕ್ಟರುಗಳು ಭಾಗವಹಿಸಲಿವೆ ಎನ್ನಲಾಗಿದೆ.

ದೆಹಲಿಯ ರಾಜ್‌ಪಾತ್‌ನಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ಗೆ ತಮ್ಮ ರ್‍ಯಾಲಿಯು ಅಡ್ಡಿಯಾಗುವುದಿಲ್ಲ ಎಂದು ರೈತರು ಈಗಾಗಲೇ ಹೇಳಿದ್ದಾರೆ. ಇಂದು ನಡೆಯುವ ಸಭೆಯ ನಂತರ ಪೊಲೀಸರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರು ಹೇಳಿದ್ದೇನು?

ಉದ್ದೇಶಿತ ರ್‍ಯಾಲಿಗೆ ತಾವು ಪೊಲೀಸ್‌‌‌ ಅನುಮತಿ ಪಡೆದಿದ್ದೇವೆ ಎಂದು ಶನಿವಾರ ರೈತರು ಹೇಳಿಕೊಂಡಿದ್ದರು. ಆದರೆ ಇದನ್ನು ದೆಹಲಿ ಪೊಲೀಸರು ವಿರೋಧಿಸಿದ್ದು, “ರೈತರು ನಮಗೆ ರ್‍ಯಾಲಿ ನಡೆಯುವ ಮಾರ್ಗದ ಬಗ್ಗೆ ಲಿಖಿತವಾಗಿ ತಿಳಿಸಿಲ್ಲ. ಅದನ್ನು ಲಿಖಿತವಾಗಿ ಸ್ವೀಕರಿಸಿದ ನಂತರ ಈ ಬಗ್ಗೆ ತಿಳಿಸುತ್ತೇವೆ” ಎಂದು ದೆಹಲಿ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ ಹೇಳಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ರ್‍ಯಾಲಿಯು ರಾಷ್ಟ್ರಕ್ಕೆ ಮುಜುಗರ ಉಂಟು ಮಾಡುತ್ತದೆ ಎಂದು ಆರೋಪಿಸಿ ರ್‍ಯಾಲಿಯನ್ನು ನಿಲ್ಲಿಸುವಂತೆ ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟನ್ನು ಸಂಪರ್ಕಿಸಿತ್ತು. ನ್ಯಾಯಾಲಯವು, ಇದು “ಕಾನೂನು ಮತ್ತು ಸುವ್ಯವಸ್ಥೆ” ಯ ವಿಷಯವಾಗಿದ್ದು, ರ್‍ಯಾಲಿಯ ಬಗೆಗಿನ ನಿರ್ಧಾರ ದೆಹಲಿ ಪೊಲೀಸರಿಗೆ ಬಿಟ್ಟಿದ್ದು ಎಂದು ಹೇಳಿತ್ತು.

ಶಾಂತಿಯುತ ಪ್ರತಿಭಟನೆ ನಡೆಸುವುದು ರೈತರ ಸಾಂವಿಧಾನಿಕ ಹಕ್ಕು ಎಂದು ನ್ಯಾಯಾಲಯ ಹೇಳಿತ್ತು. “ಕಾನೂನಿನ ವಿರುದ್ಧ ಪ್ರತಿಭಟಿಸುವ ಮೂಲಭೂತ ಹಕ್ಕನ್ನು ನಾವು ಎತ್ತಿಹಿಡಿಯುತ್ತೇವೆ. ಅದನ್ನು ಇಲ್ಲವಾಗಿಸುವ ಪ್ರಶ್ನೆಯೇ ಇಲ್ಲ. ಆದರೆ ಪ್ರತಿಭಟನೆಯು ಯಾರ ಜೀವ ಅಥವಾ ಆಸ್ತಿಗೆ ಹಾನಿ ಮಾಡಬಾರದು” ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಡಿಸೆಂಬರ್‌ನಲ್ಲಿ ನಡೆದ ವಿಚಾರಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಈ ರೈತ ದೆಹಲಿಯ ರೈತ ಹೋರಾಟದಲ್ಲಿ ಮೃತಪಟ್ಟಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 294 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...