Homeಮುಖಪುಟಕೊಲೆ ಆರೋಪಿ ಬಾಕ್ಸರ್ ಸುಶೀಲ್ ಕುಮಾರ್ ಜೊತೆ ದೆಹಲಿ ಪೊಲೀಸರ ಸೆಲ್ಫಿ!: ವಿಚಾರಣೆಗೆ ಆದೇಶ

ಕೊಲೆ ಆರೋಪಿ ಬಾಕ್ಸರ್ ಸುಶೀಲ್ ಕುಮಾರ್ ಜೊತೆ ದೆಹಲಿ ಪೊಲೀಸರ ಸೆಲ್ಫಿ!: ವಿಚಾರಣೆಗೆ ಆದೇಶ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಬಾಕ್ಸರ್ ಸುಶೀಲ್‍ ಕುಮಾರ್ ಜೊತೆಗೆ ದೆಹಲಿ ಪೊಲೀಸರು ಫೋಟೋ-ಸೆಲ್ಫಿ ಸೆಷನ್‍ ನಡೆಸಿದ ಫೋಟೊಗಳು ವೈರಲ್‍ ಆದ ಬಳಿಕ ವಿಚಾರಣೆಗೆ ಆದೇಶ ನೀಡಲಾಗಿದೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಸುಶೀಲ್‍ ಕುಮಾರ್ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಆತನ ಜೊತೆಗೆ ಕರ್ತ್ಯವಲ್ಲಿದ್ದ ಪೊಲೀಸರು ಸೆಲ್ಫಿ ತೆಗೆದುಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಸೆಲೆಬ್ರಿಟಿ ಬಾಕ್ಸರ್ ಜೊತೆ ಫೋಟೊ-ಸೆಲ್ಫಿ ಹುಚ್ಚಿಗೆ ಬಿದ್ದ ಕರ್ತವ್ಯದಲ್ಲಿದ್ದ ಪೊಲೀಸರು, ತೆಗೆದುಕೊಂಡ ಫೋಟೊಗಳನ್ನು ತಮ್ಮ ವ್ಯಾಟ್ಸಾಪ್‍ ಗುಂಪುಗಳಲ್ಲಿ ಹಂಚಿಕೊಂಡು ಸಂಭ್ರಮಿಸಿದರು. ಇದು ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತು. ‘ಸುಶೀಲ್‍ ಅವರನ್ನು ಗಣ್ಯ ಅತಿಥಿ ಎಂಬಂತೆ’ ಹೈಲೈಟ್‍ ಮಾಡಿದ ಈ ಘಟನೆಯನ್ನು ನೂರಾರು ಜನರು ಟೀಕಿಸಿದ ನಂತರ, ಈಗ ಪೊಲೀಸ್‍ ಮುಖ್ಯಸ್ಥರು ವಿಚಾರಣೆಗೆ ಆದೇಶಿಸಿದ್ದಾರೆ.

ದೆಹಲಿ ಪೊಲೀಸರ ವಿಶೇಷ ಘಟಕ ಮತ್ತು 3ನೇ ಬೆಟಾಲಿಯನ್‍ನ ಪೊಲೀಸರು ಸುಶೀಲ್‍ ಕುಮಾರ್ ಅವರನ್ನು ಶುಕ್ರವಾರ ಬೆಳಿಗ್ಗೆ ಮಂಡೋಲಿ ಜೈಲಿನಿಂದ ತಿಹಾರ್ ಜೈಲಿಗೆ ಕರೆದೊಯ್ಯುತ್ತಿದ್ದಾಗ ಅವರೊಂದಿಗೆ ಫೋಟೊಗಳನ್ನು ತೆಗೆದುಕೊಂಡು ಸಂಭ್ರಮಿಸಿದ್ದಾರೆ. ಸೆಲ್ಫಿ ಸೆಷನ್‍ ನಡೆಸಿದ್ದಾರೆ. ನ್ಯಾಯಾಲಯವು ಸುಶೀಲ್‍ ನ್ಯಾಯಾಂಗ ಬಂಧನವನ್ನು ಜುಲೈ 9 ರವರೆಗೆ ವಿಸ್ತರಿಸಿದೆ.

ಚಂತ್ರಾಸಾಲ್‍ ಕ್ರೀಡಾಂಗಣದೊಳಗೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಕುಸ್ತಿಪಟು ಸಾಗರ್ ಧನಕರ್ ಕೊಲೆಗೆ ಸಂಬಂಧಿಸಿದಂತೆ ಸುಶೀಲ್‍ ಅವರನ್ನು ಬಂಧಿಸಲಾಗಿದೆ.

ಡಿಜಿ (ತಿಹಾರ್ ಜೈಲ್‍) ಸಂದೀಪ್ ಗೋಯೆಲ್, “ಸುಶೀಲ್ ಅವರನ್ನು ಮಂಡೋಲಿ ಜೈಲಿನಿಂದ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಸುಶೀಲ್‌ಗೆ ಸಂಭವನೀಯ ಭದ್ರತಾ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, 3ನೇ ಬೆಟಾಲಿಯನ್‌ನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು” ಎಂದಿದ್ದಾರೆ.

ಮಂಡೋಲಿ ಜೈಲಿಗೆ ತಲುಪಿದ ನಂತರ ಪೊಲೀಸರು ಆರೋಪಿಗಳ ಜೊತೆ ಚಿತ್ರಗಳನ್ನು ಕ್ಲಿಕ್ ಮಾಡಲು ಪ್ರಾರಂಭಿಸಿದರು. 3ನೇ ಬೆಟಾಲಿಯನ್‌ನ ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ಅಪಾಯವಿರುವ ಕೈದಿಗಳ ಚಿತ್ರಗಳನ್ನು ತಮ್ಮ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲು ತಿಳಿಸಲಾಗಿತ್ತು. ಆದರೆ, ಶುಕ್ರವಾರ, ತಮ್ಮ ಹಿರಿಯ ಅಧಿಕಾರಿಗಳೊಂದಿಗೆ ಫೋಟೋಗಳನ್ನು ಹಂಚಿಕೊಂಡರು.. ಜೊತೆಗೆ ತಮ್ಮ ಅಧಿಕೃತ ವಾಟ್ಸಾಪ್ ಗುಂಪುಗಳಲ್ಲಿ ಮತ್ತು ಅವರ ಸಂಬಂಧಿಕರೊಂದಿಗೆ ಚಿತ್ರಗಳನ್ನು ಹಂಚಿಕೊಳ್ಳಲು ಪ್ರಾರಂಭಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...