Homeಚಳವಳಿರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

ರೈತರ ಹತ್ಯಾಕಾಂಡ: ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ

’ಪೊಲೀಸರು ನಮ್ಮ ಖಾಸಗಿ ಭಾಗಗಳಿಗೆ ಪದೇ ಪದೇ ಹೊಡೆದು ಹಲ್ಲೆ ನಡೆಸಿದ್ದಾರೆ’ ಎಂದು ಹಲ್ಲೆಗೊಳಗಾದ ವಿದ್ಯಾರ್ಥಿನಿಯರು ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್‌ ಖೇರಿ ಹತ್ಯಾಕಾಂಡವನ್ನು ವಿರೋಧಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಶನ್ (AISA) ವಿದ್ಯಾರ್ಥಿಗಳು ಭಾನುವಾರ (ಅಕ್ಟೋಬರ್ 10) ಗೃಹ ಸಚಿವ ಅಮಿತ್ ಶಾ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸ್ ಸಿಬ್ಬಂದಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ಮಂಗಳವಾರ ಗೃಹ ಸಚಿವ ಅಮಿತ್ ಶಾ ನಿವಾಸದ ಬಳಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾಗ ಇಬ್ಬರು ಮಹಿಳಾ ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸರ ಮಹಿಳಾ ಕಾನ್‌ಸ್ಟೇಬಲ್‌ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ತಮ್ಮ ದೇಹದ ಖಾಸಗಿ ಭಾಗಗಳಿಗೆ ಪದೇ ಪದೇ ಒದೆಯುತ್ತಿದ್ದರು ಎಂದು ಆರೋಪಿಸಿದ್ದಾರೆ.

ವಿದ್ಯಾರ್ಥಿನಿಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಲ್ಲೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. “15 ರಿಂದ 17 ವಿದ್ಯಾರ್ಥಿಗಳನ್ನು ಹೊಂದಿದ್ದ ಪ್ರತಿಭಟನೆಯು ಮಧ್ಯಾಹ್ನ 1 ಗಂಟೆಗೆ ಆರಂಭವಾಯಿತು. ವಿದ್ಯಾರ್ಥಿಗಳು “ನಿರಾಯುಧರಾಗಿ, ಶಾಂತಿಯುತವಾಗಿ ಪ್ಲೆಕಾರ್ಡ್‌ಗಳು ಮತ್ತು ಪೋಸ್ಟರ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು” ಎಂದಿದ್ದಾರೆ.

ಇದನ್ನೂ ಓದಿ: ರೈತ ಹುತಾತ್ಮ ದಿನ ಆಚರಣೆ: ಬೆಂಗಳೂರಿನಲ್ಲಿ ಅನ್ನದಾತರ ಮಕ್ಕಳಿಂದ ಶ್ರದ್ಧಾಂಜಲಿ

ಪ್ರತಿಭಟನಾ ಸ್ಥಳದಲ್ಲಿ ಆರಂಭದಲ್ಲಿ ಮಹಿಳಾ ಪೊಲೀಸ್ ಅಧಿಕಾರಿಗಳು ಇರಲಿಲ್ಲ. ಪ್ರತಿಭಟನೆ ನಡೆಸುತ್ತಿದ್ದ ಯುವಕರನ್ನು ಕ್ರೂರವಾಗಿ ನಡೆಸಿಕೊಂಡು ಬಳಿಕ ಬಸ್‌ನಲ್ಲಿ ಬಂಧಿಸಲಾಯಿತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಯುವಕರ ಮೇಲೆ ಪೊಲೀಸರು ನಡೆಸುತ್ತಿದ್ದ ಹಲ್ಲೆಯನ್ನು ರೆಕಾರ್ಡ್ ಮಾಡುತ್ತಿದ್ದ ವೇಳೆ ಪೊಲೀಸರು ತಮ್ಮ ಪೋನ್‌ಗಳನ್ನು ಕಸಿದುಕೊಂಡಿದ್ದಾರೆ. ಬಳಿಕ ಮಹಿಳಾ ಪೊಲೀಸರು ಬಂದು ತಮ್ಮನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

AISA ತನ್ನ ಟ್ವಿಟರ್‌ ಖಾತೆಯಲ್ಲಿ ಹಲ್ಲೆ ಕುರಿತು ಹಲವು ವಿಡಿಯೊ, ಫೋಟೋಗಳನ್ನು ಹಂಚಿಕೊಂಡಿದೆ. ಅದರಲ್ಲಿ ಹಲ್ಲೆಗೊಳಗಾದ ವಿದ್ಯಾರ್ಥಿನಿಯರು ಅಳುತ್ತಾ, ತಮ್ಮ ಖಾಸಗಿ ಭಾಗಗಳಿಗೆ ಪೊಲೀಸರು ಪದೇ ಪದೇ ಒದೆಯುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

Image

ಎಐಎಸ್‌ಎ ತನ್ನ ಹೇಳಿಕೆಯಲ್ಲಿ, “ಮಹಿಳಾ ಪ್ರತಿಭಟನಾಕಾರರ ಮೇಲೆ ಹಲ್ಲೆ ಮಾಡುವಂತೆ ಸ್ಥಳದಲ್ಲಿದ್ದ ಸಿಬ್ಬಂದಿಗೆ ಸ್ಪಷ್ಟವಾಗಿ ಸೂಚಿಸಿದ ಎಸಿಪಿ ಚಾಣಕ್ಯಪುರಿ ಪ್ರಜ್ಞಾ ಆನಂದ್ ಅವರನ್ನು ವಜಾಗೊಳಿಸಬೇಕು. ಲೈಂಗಿಕ ದೌರ್ಜನ್ಯ ನಡೆಸಿದ ಎಲ್ಲ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದೆ.

ಎಸಿಪಿ ಚಾಣಕ್ಯಪುರಿ ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು, ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ ಎಂದು ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಗೃಹ ಸಚಿವರ ನಿವಾಸದ ಹೊರಗೆ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ 12 ಪ್ರತಿಭಟನಾಕಾರರನ್ನು ಬಂಧಿಸಲಾಯಿತು ಮತ್ತು ನಂತರ ಬಿಡುಗಡೆ ಮಾಡಲಾಯಿತು” ಎಂದು ಮಾಹಿತಿ  ನೀಡಿದ್ದಾರೆ.

ಘಟನೆಯನ್ನು ಖಂಡಿಸಿರುವ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ, “ಅಕ್ಟೋಬರ್ 10 ರಂದು ದೆಹಲಿಯಲ್ಲಿರುವ ಗೃಹ ಸಚಿವ ಅಮಿತ್ ಶಾ ನಿವಾಸದ ಹೊರಗೆ ಲಖಿಂಪುರ್ ಖೇರಿ ಹತ್ಯಾಕಾಂಡದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ದೆಹಲಿ ಪೊಲೀಸರು ನಡೆಸಿರು ಭೀಕರ ಲೈಂಗಿಕ ದೌರ್ಜನ್ಯವನ್ನು SKM ತೀವ್ರವಾಗಿ ಖಂಡಿಸುತ್ತದೆ” ಎಂದಿದೆ.

“ಎಸಿಪಿ ಚಾಣಕ್ಯಪುರಿಯನ್ನು ವಜಾಗೊಳಿಸಬೇಕು. ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕು ಎಂಬ ವಿದ್ಯಾರ್ಥಿಗಳ ಬೇಡಿಕೆಗೆ ಎಸ್‌ಕೆಎಂ ಬೆಂಬಲಿಸುತ್ತದೆ” ಎಂದು ಹೇಳಿದೆ.

ಘಟನೆಯನ್ನು ಖಂಡಿಸಿ, ಎಐಎಸ್ಎ ಅಶೋಕ ರಸ್ತೆಯಲ್ಲಿರುವ ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹೊರಗೆ ಬುಧವಾರ ಪ್ರತಿಭಟನೆಗೆ ಕರೆ ನೀಡಿದೆ.


ಇದನ್ನೂ ಓದಿ: ಹುಕ್ಕೇರಿ: ಶಿಕ್ಷಕಿಯಿಂದ ಅಸ್ಪೃಶ್ಯತೆ ಆಚರಣೆ; ಶಾಲಾ ಆವರಣದಲ್ಲಿ ಪೋಷಕರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...