Homeಮುಖಪುಟನ್ಯೂಸ್‌ ಕ್ಲಿಕ್‌ ವಿರುದ್ಧದ ಯುಎಪಿಎ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ

ನ್ಯೂಸ್‌ ಕ್ಲಿಕ್‌ ವಿರುದ್ಧದ ಯುಎಪಿಎ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ

- Advertisement -
- Advertisement -

ನ್ಯೂಸ್‌ ಕ್ಲಿಕ್‌ಗೆ ಸಂಬಂಧಿಸಿದ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಕೋಶವು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ಚೀನಾ ಪರ ಪ್ರಚಾರಕ್ಕಾಗಿ ನ್ಯೂಸ್ ಪೋರ್ಟಲ್ ಭಾರೀ ಹಣವನ್ನು ಪಡೆದಿದೆ ಎಂಬ ಆರೋಪದ ನಂತರ ದೆಹಲಿ ಪೊಲೀಸರ ವಿಶೇಷ ಘಟಕವು ನ್ಯೂಸ್‌ಕ್ಲಿಕ್ ವಿರುದ್ಧ  ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ-1967ರ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ನ್ಯೂಸ್‌ಕ್ಲಿಕ್ ವಿರುದ್ಧ ಆರೋಪ ಪಟ್ಟಿಯನ್ನು ಸಲ್ಲಿಕೆ ಮಾಡಿದೆ.

ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಾ ಹರ್ದೀಪ್ ಕೌರ್ ಅವರ ಮುಂದೆ ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿದೆ. ನ್ಯೂಸ್ ಪೋರ್ಟಲ್ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.

ನ್ಯೂಸ್‌ಕ್ಲಿಕ್ ವಿರುದ್ಧ ಚೀನಾ ಪರ ಪ್ರಚಾರ ನಡೆಸಲು ಹಣ ಪಡೆದಿದೆ ಎಂಬ ಆರೋಪ ಮಾಡಲಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರ ವಿಶೇಷ ಕೋಶವು ಕಳೆದ ವರ್ಷ ಯುಎಪಿಎಯ ವಿವಿಧ ಸೆಕ್ಷನ್ ಹಾಗೂ ಭಾರತೀಯ ದಂಡ ಸಂಹಿತೆಯ 120B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಮತ್ತು ನಾಗರಿಕರ ನಡುವೆ ವೈಷಮ್ಯವನ್ನು ಬಿತ್ತಲು ಪೋರ್ಟಲ್‌ ಮುಂದಾಗಿದೆ ಎಂದು ಆರೋಪಿಸಲಾಗಿತ್ತು.

ಪ್ರಕರಣ ಸಂಬಂಧ ನ್ಯೂಸ್‌ಕ್ಲಿಕ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು 2023ರ ಅಕ್ಟೋಬರ್ 3ರಂದು ಬಂಧಿಸಲಾಗಿತ್ತು. ನ್ಯೂಸ್‌ಕ್ಲಿಕ್ ಕಚೇರಿ ಮತ್ತು ಸಂಸ್ಥೆಗೆ ಸಂಬಂಧಿಸಿದ ಪತ್ರಕರ್ತರ ನಿವಾಸಗಳಿಂದ 300ಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಎಲೆಕ್ಟ್ರಾನಿಕ್ ಸಾಧನಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ (ಫೊರೆನ್ಸಿಕ್ ಸೈನ್ಸ್ ಲ್ಯಾಬ್)ಗೆ ಕಳುಹಿಸಲಾಗಿತ್ತು.

ನ್ಯೂಸ್‌ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಹೆಚ್‌ಆರ್‌(HR) ಅಮಿತ್ ಚಕ್ರವರ್ತಿ ಅವರು ಯುಎಪಿಎಯಡಿ ಬಂಧನ ಮತ್ತು ಬಂಧನಕ್ಕೆ ತಡೆ ನಿರಾಕರಿಸಿರುವ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.

ಅ.4ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ದೆಹಲಿ ಪೊಲೀಸರು ಸಲ್ಲಿಸಿದ ಮಾಹಿತಿ ಪ್ರಕಾರ, ನೆವಿಲ್ಲೆ ರಾಯ್ ಸಿಂಗಮ್, ಪ್ರಬೀರ್ ಪುರ್ಕಾಯಸ್ಥ ಮತ್ತು ಅಮಿತ್ ಚಕ್ರವರ್ತಿ ಪರಸ್ಪರ ನೇರ ಸಂಪರ್ಕದಲ್ಲಿದ್ದರು ಮತ್ತು ಕಾಶ್ಮೀರವಿಲ್ಲದೆ ಭಾರತದ ನಕ್ಷೆಯನ್ನು ಹೇಗೆ ರಚಿಸುವುದು ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶವೆಂದು ತೋರಿಸುವುದು ಹೇಗೆ ಎಂದು ಇವರು ಚರ್ಚಿಸುತ್ತಿರುವುದು ಕಂಡುಬಂದಿದೆ. ಈ ಉದ್ದೇಶವನ್ನು ಸಾಧಿಸಲು ಆರೋಪಿಗಳು ವಿದೇಶಿ ನಿಧಿಯ ಹೆಸರಿನಲ್ಲಿ ಪಿಪಿಕೆ ನ್ಯೂಸ್‌ಕ್ಲಿಕ್, ಜಿಸ್ಪಾನ್ ಇಂಡಿಯಾ, ಜೆಜೆ ಎಂಟರ್‌ಪ್ರೈಸಸ್, ವರ್ಚುನೆಟ್ ಸಿಸ್ಟಮ್ ಹೆಸರಿನ ಕಂಪನಿಗಳಲ್ಲಿ 115 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನು ಓದಿ: ಕಾಂಬೋಡಿಯಾದಲ್ಲಿ ಸಿಲುಕಿಕೊಂಡಿರುವ 5,000 ಭಾರತೀಯರು: ಸೈಬರ್ ವಂಚನೆಗೆ ಬಲವಂತ

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...